Homeಕರ್ನಾಟಕಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದ ಆರೆಸ್ಸೆಸ್‌ ನಾಯಕನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸಚಿವರು, ಸಂಸದರು, ಶಾಸಕರು ಮತ್ತು ನಾಯಕರು...

ಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದ ಆರೆಸ್ಸೆಸ್‌ ನಾಯಕನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸಚಿವರು, ಸಂಸದರು, ಶಾಸಕರು ಮತ್ತು ನಾಯಕರು ಅತಿಥಿಗಳು! ಹೋಗಲ್ಲ ಎಂದ ಸಿಎಂ!

ಸಚಿವ ಪ್ರಿಯಾಂಕ್ ಖರ್ಗೆ ಕೂಡಾ ಕಾರ್ಯಕ್ರಮಕ್ಕೆ ಹೋಗಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ

- Advertisement -
- Advertisement -

ಭಾರತ ಸಂವಿಧಾನದ ವಿರೋಧಿ, ಆರೆಸ್ಸೆಸ್ ನಾಯಕ ಕೆ.ಎನ್. ಗೋವಿಂದಾಚಾರ್ಯ ಅವರ ‘ಭಾರತ ವಿಕಾಸ ಸಂಘಂ’ ಆಯೋಜಿಸುವ 9 ದಿನಗಳ ‘7ನೇ ಭಾರತೀಯ ಸಂಸ್ಕೃತಿ ಉತ್ಸವ’ ಕಾರ್ಯಕ್ರಮದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಸಚಿವರು, ಶಾಸಕರು ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ. 2016ರಲ್ಲಿ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಗೋಂವಿದಾಚಾರ್ಯ ‘ಭಾರತೀಯತೆಯನ್ನು ಪ್ರತಿಬಿಂಬಿಸಲು ನಾವು ಸಂವಿಧಾನವನ್ನು ಪುನಃ ಬರೆಯುತ್ತೇವೆ’ ಎಂದು ಹೇಳಿದ್ದರು.

ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಆರೆಸ್ಸೆಸ್‌ ನಾಯಕ ದತ್ತಾತ್ರೆಯ ಹೊಸಬಾಳೆ, ವೀರೇಂದ್ರ ಹೆಗಡೆ, ಯಡಿಯೂರಪ್ಪ, ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ವಿಶ್ವೇಶ್ವರ ಕಾಗೇರಿ, ಯತ್ನಾಲ್, ಸುಧಾ ಮೂರ್ತಿ, ವಿಜಯೇಂದ್ರ, ಬಾಬಾ ರಾಮದೇವ್ ಸೇರಿದಂತೆ ಹಲವಾರು ಬಿಜೆಪಿ ಮತ್ತು ಸಂಘಪರಿವಾರದ ನಾಯಕರು ಇದರಲ್ಲಿ ಭಾಗವಹಿಸಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆಶ್ಚರ್ಯವೆಂದರೆ, ಇದೇ ಆರೆಸ್ಸೆಸ್‌ ಪರ ವ್ಯಕ್ತಿಗಳು ನಡೆಸುವ ಕಾರ್ಯಕ್ರಮದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರದ ಹಲವಾರು ಸಚಿವರು, ಶಾಸಕರು ಹಾಗೂ ಪಕ್ಷದ ಸಂಸದರು ಮತ್ತು ನಾಯಕರು ಭಾಗವಹಿಸಲಿದ್ದಾರೆ ಎಂದು ಆಮಂತ್ರಣ ಪತ್ರಿಕೆಯಲ್ಲಿ ಹೇಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರು ಇದ್ದರೂ, ಈ ಬಗ್ಗೆ ಇಬ್ಬರೂ ಈಗಾಗಲೆ ಸ್ಪಷ್ಟೀಕರಣ ಕೊಟ್ಟಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

ಅದಾಗ್ಯೂ, ರಾಜ್ಯ ಸರ್ಕಾರ ಸಚಿವರುಗಳಾದ ಡಾ. ಶರಣ್ ಪ್ರಕಾಶ್ ಪಾಟೀಲ್, ಶರಣಬಸಪ್ಪ ಪಾಟೀಲ್ ದಾಸನಪುರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಆಮಂತ್ರಣ ಪತ್ರಿಕೆ ಹೇಳಿದೆ. ಜೊತೆಗೆ ಸಚಿವರುಗಳು ಕೂಡಾ ಈ ಬಗ್ಗೆ ಯಾವುದೇ ಸ್ಪಷ್ಟಿಕರಣವಾಗಲಿ, ನಿರಾಕರಣೆಯಾಗಲಿ ಮಾಡಿಲ್ಲ.

ಇಷ್ಟೆ ಅಲ್ಲದೆ, ಕಲಬುರಗಿಯ ಕಾಂಗ್ರೆಸ್ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯನಾಗಿದ್ದು, ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆ ಅವರ ಸಹೋದರಿಯ ಪತಿಯಾಗಿದ್ದಾರೆ. ಜೊತೆಗೆ, ಆಮಂತ್ರಣ ಪತ್ರಿಕೆಯಲ್ಲಿ ಬಳ್ಳಾರಿಯ ಕಾಂಗ್ರಸ್ ಸಂಸದ ಇ.ತುಕಾರಾಮ, ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಅವರ ಮಗ ಜೇವರ್ಗಿಯ ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಮತ್ತು ಕಾಂಗ್ರೆಸ್ ನಾಯಕ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಅವರ ಹೆಸರು ಆಮಂತ್ರಣ ಪತ್ರಿಕೆಯಲ್ಲಿ ಕಾಣಿಸಿಕೊಂಡಿದೆ.

ಇಷ್ಟೆ ಅಲ್ಲದೆ, ಆಮಂತ್ರಣ ಪತ್ರಿಕೆಯಲ್ಲಿ ಹಿರಿಯ ಸಾಹಿತಿ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಇತ್ತಿಚೆಗೆ ಆಯ್ಕೆಯಾದ ಗೊ.ರು. ಚೆನ್ನಬಸಪ್ಪ ಅವರ ಹೆಸರು ಕೂಡಾ ಕಾಣಿಸಿಕೊಂಡಿದೆ. ಕಾಂಗ್ರೆಸ್ ಸರ್ಕಾರವಿರುವ ತೆಲಂಗಾಣದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಆಗಿದ್ದ, ಪ್ರಸ್ತುತ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿರುವ ವಿಶ್ವನಾಥ್ ಚನ್ನಪ್ಪ ಸಜ್ಜನರ್ ಕೂಡಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಜೊತೆಗೆ ಬೀದರ್‌ನ ಶಾಹಿನ್ ಸಂಸ್ಥೆ ಮುಖ್ಯಸ್ಥ ಅಬ್ದುಲ್ ಖಾದಿರ್, ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಹಾಗೂ ಇಸ್ರೋ ಮುಖ್ಯಸ್ಥ ಎಸ್‌. ಸೋಮನಾಥ್ ಕೂಡಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಆರೆಸ್ಸೆಸ್‌ ಪರ ಸಂಘಟನೆಯಾದ ಭಾರತ ವಿಕಾಸ್ ಸಂಘಂ ಈ ಕಾರ್ಯಕ್ರಮವನ್ನು ಕಲಬುರ್ಗಿಯಲ್ಲಿ ಆಯೋಜಿಸಿದ್ದು 2025ರ ಜನವರಿ 29ರಿಂದ ಪ್ರಾರಂಭವಾಗಿ ಫೆಬ್ರವರಿ 6ರ ವರೆಗೆ ನಡೆಯಲಿದೆ. ಕಾರ್ಯಕ್ರಮಕ್ಕೆ ಶ್ರೀ ಕೊಟ್ಟಾಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಮತ್ತು ವಿಕಾಸ್ ಅಕಾಡೆಮಿ ಸಹಯೋಗ ನೀಡಲಿದೆ. ಕಾರ್ಯಕ್ರಮ ಆಯೋಜಿಸುವ ಹೆಚ್ಚಿನ ಎಲ್ಲಾ ಸಂಘಟಕರು ಆರೆಸ್ಸೆಸ್‌ನ ನಾಯಕರುಗಳಾಗಿದ್ದಾರೆ.

ಅಡ್ವಾನಿ ಜೊತೆಗೆ ಸೇರಿ ಬಾಬರಿ ಮಸೀದಿ ಧ್ವಂಸ ನಡೆಸಲು ನೀಲ ನಕ್ಷೆ ರಚಿಸಿದವರಲ್ಲಿ ಕೆ.ಎನ್‌. ಗೋವಿಂದಾಚಾರ್ಯ ಅವರು ಕೂಡಾ ಒಬ್ಬರಾಗಿದ್ದಾರೆ. 2016ರಲ್ಲಿ ದಿ ವೈರ್‌ಗೆ ನೀಡಿದ್ದ ಸಂದರ್ಶದನಲ್ಲಿ ಅವರು ಭಾರತ ಸಂವಿಧಾನದಲ್ಲಿ ಭಾರತೀಯತೆ ಇಲ್ಲ, ಹಾಗಾಗಿ ನಾವು ಹೊಸದಾಗಿ ಸಂವಿಧಾನ ಬರೆಯಲಿದ್ದೇವೆ ಎಂದು ಹೇಳಿದ್ದರು. ಸಂವಿಧಾನವನ್ನು ಪುನಃ ಬರೆಯುತ್ತೇವೆ

ಭಾರತ ವಿಕಾಸ ಸಂಘಂನ ಸ್ಥಾಪಕರಾಗಿರುವ ಗೋಂವಿದಾಚಾರ್ಯ, ಸನಾತನ ಹಿಂದೂ ಪ್ರತಿಷ್ಠಾನ, ರಾಷ್ಟ್ರೀಯ ಸ್ವಾಭಿಮಾನ್ ಆಂದೋಲನ ಸೇರಿದಂತೆ ಔಪಚಾರಿಕವಾಗಿ ಆರೆಸ್ಸೆಸ್‌ನ ಪ್ರಚಾರಕ ಕೂಡಾ ಆಗಿದ್ದಾರೆ. ಬಾಬರಿ ಮಸೀದಿ ಒಡೆಯುವ ಕೃತ್ಯ ಎಸಗಿದ ರಾಮ ಜನ್ಮ ಭೂಮಿ ಆಂದೋಲನ, ಭಾರತೀಯ ಸಂಸ್ಕೃತಿ ಉತ್ಸವ, ಸ್ವದೇಶಿ ಜಾಗರಣ ಮಂಚ್ ಮುಂತಾದ ಹಲವಾರು ಕಾರ್ಯಕ್ರಮಗನ್ನು ಮಾಡುತ್ತಲೆ ಬಂದಿದ್ದಾರೆ. ಅಲ್ಲದೆ, ಶಾಶ್ವತ ದೇವಾಲಯ, ಸನಾತನ ಭಾವ ಜಾಗೃತಿ, ITIHASA ಮತ್ತು ಶಾಶ್ವತ ಭಾರತಂನಂತಹ ಹಲವಾರು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ತೆಲಂಗಾಣ| ಮರ್ಯಾದೆಗೇಡು ಹತ್ಯೆ; ಅಂತರ್ಜಾತಿ ವಿವಾವಾಗಿದ್ದ ಮಹಿಳಾ ಪೇದೆಯನ್ನು ಹತ್ಯೆಗೈದ ಸಹೋದರ

ತೆಲಂಗಾಣ| ಮರ್ಯಾದೆಗೇಡು ಹತ್ಯೆ; ಅಂತರ್ಜಾತಿ ವಿವಾವಾಗಿದ್ದ ಮಹಿಳಾ ಪೇದೆಯನ್ನು ಹತ್ಯೆಗೈದ ಸಹೋದರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...