Homeಕರ್ನಾಟಕಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದ ಆರೆಸ್ಸೆಸ್‌ ನಾಯಕನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸಚಿವರು, ಸಂಸದರು, ಶಾಸಕರು ಮತ್ತು ನಾಯಕರು...

ಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದ ಆರೆಸ್ಸೆಸ್‌ ನಾಯಕನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸಚಿವರು, ಸಂಸದರು, ಶಾಸಕರು ಮತ್ತು ನಾಯಕರು ಅತಿಥಿಗಳು! ಹೋಗಲ್ಲ ಎಂದ ಸಿಎಂ!

ಸಚಿವ ಪ್ರಿಯಾಂಕ್ ಖರ್ಗೆ ಕೂಡಾ ಕಾರ್ಯಕ್ರಮಕ್ಕೆ ಹೋಗಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ

- Advertisement -
- Advertisement -

ಭಾರತ ಸಂವಿಧಾನದ ವಿರೋಧಿ, ಆರೆಸ್ಸೆಸ್ ನಾಯಕ ಕೆ.ಎನ್. ಗೋವಿಂದಾಚಾರ್ಯ ಅವರ ‘ಭಾರತ ವಿಕಾಸ ಸಂಘಂ’ ಆಯೋಜಿಸುವ 9 ದಿನಗಳ ‘7ನೇ ಭಾರತೀಯ ಸಂಸ್ಕೃತಿ ಉತ್ಸವ’ ಕಾರ್ಯಕ್ರಮದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಸಚಿವರು, ಶಾಸಕರು ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ. 2016ರಲ್ಲಿ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಗೋಂವಿದಾಚಾರ್ಯ ‘ಭಾರತೀಯತೆಯನ್ನು ಪ್ರತಿಬಿಂಬಿಸಲು ನಾವು ಸಂವಿಧಾನವನ್ನು ಪುನಃ ಬರೆಯುತ್ತೇವೆ’ ಎಂದು ಹೇಳಿದ್ದರು.

ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಆರೆಸ್ಸೆಸ್‌ ನಾಯಕ ದತ್ತಾತ್ರೆಯ ಹೊಸಬಾಳೆ, ವೀರೇಂದ್ರ ಹೆಗಡೆ, ಯಡಿಯೂರಪ್ಪ, ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ವಿಶ್ವೇಶ್ವರ ಕಾಗೇರಿ, ಯತ್ನಾಲ್, ಸುಧಾ ಮೂರ್ತಿ, ವಿಜಯೇಂದ್ರ, ಬಾಬಾ ರಾಮದೇವ್ ಸೇರಿದಂತೆ ಹಲವಾರು ಬಿಜೆಪಿ ಮತ್ತು ಸಂಘಪರಿವಾರದ ನಾಯಕರು ಇದರಲ್ಲಿ ಭಾಗವಹಿಸಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆಶ್ಚರ್ಯವೆಂದರೆ, ಇದೇ ಆರೆಸ್ಸೆಸ್‌ ಪರ ವ್ಯಕ್ತಿಗಳು ನಡೆಸುವ ಕಾರ್ಯಕ್ರಮದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರದ ಹಲವಾರು ಸಚಿವರು, ಶಾಸಕರು ಹಾಗೂ ಪಕ್ಷದ ಸಂಸದರು ಮತ್ತು ನಾಯಕರು ಭಾಗವಹಿಸಲಿದ್ದಾರೆ ಎಂದು ಆಮಂತ್ರಣ ಪತ್ರಿಕೆಯಲ್ಲಿ ಹೇಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರು ಇದ್ದರೂ, ಈ ಬಗ್ಗೆ ಇಬ್ಬರೂ ಈಗಾಗಲೆ ಸ್ಪಷ್ಟೀಕರಣ ಕೊಟ್ಟಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

ಅದಾಗ್ಯೂ, ರಾಜ್ಯ ಸರ್ಕಾರ ಸಚಿವರುಗಳಾದ ಡಾ. ಶರಣ್ ಪ್ರಕಾಶ್ ಪಾಟೀಲ್, ಶರಣಬಸಪ್ಪ ಪಾಟೀಲ್ ದಾಸನಪುರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಆಮಂತ್ರಣ ಪತ್ರಿಕೆ ಹೇಳಿದೆ. ಜೊತೆಗೆ ಸಚಿವರುಗಳು ಕೂಡಾ ಈ ಬಗ್ಗೆ ಯಾವುದೇ ಸ್ಪಷ್ಟಿಕರಣವಾಗಲಿ, ನಿರಾಕರಣೆಯಾಗಲಿ ಮಾಡಿಲ್ಲ.

ಇಷ್ಟೆ ಅಲ್ಲದೆ, ಕಲಬುರಗಿಯ ಕಾಂಗ್ರೆಸ್ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯನಾಗಿದ್ದು, ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆ ಅವರ ಸಹೋದರಿಯ ಪತಿಯಾಗಿದ್ದಾರೆ. ಜೊತೆಗೆ, ಆಮಂತ್ರಣ ಪತ್ರಿಕೆಯಲ್ಲಿ ಬಳ್ಳಾರಿಯ ಕಾಂಗ್ರಸ್ ಸಂಸದ ಇ.ತುಕಾರಾಮ, ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಅವರ ಮಗ ಜೇವರ್ಗಿಯ ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಮತ್ತು ಕಾಂಗ್ರೆಸ್ ನಾಯಕ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಅವರ ಹೆಸರು ಆಮಂತ್ರಣ ಪತ್ರಿಕೆಯಲ್ಲಿ ಕಾಣಿಸಿಕೊಂಡಿದೆ.

ಇಷ್ಟೆ ಅಲ್ಲದೆ, ಆಮಂತ್ರಣ ಪತ್ರಿಕೆಯಲ್ಲಿ ಹಿರಿಯ ಸಾಹಿತಿ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಇತ್ತಿಚೆಗೆ ಆಯ್ಕೆಯಾದ ಗೊ.ರು. ಚೆನ್ನಬಸಪ್ಪ ಅವರ ಹೆಸರು ಕೂಡಾ ಕಾಣಿಸಿಕೊಂಡಿದೆ. ಕಾಂಗ್ರೆಸ್ ಸರ್ಕಾರವಿರುವ ತೆಲಂಗಾಣದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಆಗಿದ್ದ, ಪ್ರಸ್ತುತ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿರುವ ವಿಶ್ವನಾಥ್ ಚನ್ನಪ್ಪ ಸಜ್ಜನರ್ ಕೂಡಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಜೊತೆಗೆ ಬೀದರ್‌ನ ಶಾಹಿನ್ ಸಂಸ್ಥೆ ಮುಖ್ಯಸ್ಥ ಅಬ್ದುಲ್ ಖಾದಿರ್, ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಹಾಗೂ ಇಸ್ರೋ ಮುಖ್ಯಸ್ಥ ಎಸ್‌. ಸೋಮನಾಥ್ ಕೂಡಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಆರೆಸ್ಸೆಸ್‌ ಪರ ಸಂಘಟನೆಯಾದ ಭಾರತ ವಿಕಾಸ್ ಸಂಘಂ ಈ ಕಾರ್ಯಕ್ರಮವನ್ನು ಕಲಬುರ್ಗಿಯಲ್ಲಿ ಆಯೋಜಿಸಿದ್ದು 2025ರ ಜನವರಿ 29ರಿಂದ ಪ್ರಾರಂಭವಾಗಿ ಫೆಬ್ರವರಿ 6ರ ವರೆಗೆ ನಡೆಯಲಿದೆ. ಕಾರ್ಯಕ್ರಮಕ್ಕೆ ಶ್ರೀ ಕೊಟ್ಟಾಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಮತ್ತು ವಿಕಾಸ್ ಅಕಾಡೆಮಿ ಸಹಯೋಗ ನೀಡಲಿದೆ. ಕಾರ್ಯಕ್ರಮ ಆಯೋಜಿಸುವ ಹೆಚ್ಚಿನ ಎಲ್ಲಾ ಸಂಘಟಕರು ಆರೆಸ್ಸೆಸ್‌ನ ನಾಯಕರುಗಳಾಗಿದ್ದಾರೆ.

ಅಡ್ವಾನಿ ಜೊತೆಗೆ ಸೇರಿ ಬಾಬರಿ ಮಸೀದಿ ಧ್ವಂಸ ನಡೆಸಲು ನೀಲ ನಕ್ಷೆ ರಚಿಸಿದವರಲ್ಲಿ ಕೆ.ಎನ್‌. ಗೋವಿಂದಾಚಾರ್ಯ ಅವರು ಕೂಡಾ ಒಬ್ಬರಾಗಿದ್ದಾರೆ. 2016ರಲ್ಲಿ ದಿ ವೈರ್‌ಗೆ ನೀಡಿದ್ದ ಸಂದರ್ಶದನಲ್ಲಿ ಅವರು ಭಾರತ ಸಂವಿಧಾನದಲ್ಲಿ ಭಾರತೀಯತೆ ಇಲ್ಲ, ಹಾಗಾಗಿ ನಾವು ಹೊಸದಾಗಿ ಸಂವಿಧಾನ ಬರೆಯಲಿದ್ದೇವೆ ಎಂದು ಹೇಳಿದ್ದರು. ಸಂವಿಧಾನವನ್ನು ಪುನಃ ಬರೆಯುತ್ತೇವೆ

ಭಾರತ ವಿಕಾಸ ಸಂಘಂನ ಸ್ಥಾಪಕರಾಗಿರುವ ಗೋಂವಿದಾಚಾರ್ಯ, ಸನಾತನ ಹಿಂದೂ ಪ್ರತಿಷ್ಠಾನ, ರಾಷ್ಟ್ರೀಯ ಸ್ವಾಭಿಮಾನ್ ಆಂದೋಲನ ಸೇರಿದಂತೆ ಔಪಚಾರಿಕವಾಗಿ ಆರೆಸ್ಸೆಸ್‌ನ ಪ್ರಚಾರಕ ಕೂಡಾ ಆಗಿದ್ದಾರೆ. ಬಾಬರಿ ಮಸೀದಿ ಒಡೆಯುವ ಕೃತ್ಯ ಎಸಗಿದ ರಾಮ ಜನ್ಮ ಭೂಮಿ ಆಂದೋಲನ, ಭಾರತೀಯ ಸಂಸ್ಕೃತಿ ಉತ್ಸವ, ಸ್ವದೇಶಿ ಜಾಗರಣ ಮಂಚ್ ಮುಂತಾದ ಹಲವಾರು ಕಾರ್ಯಕ್ರಮಗನ್ನು ಮಾಡುತ್ತಲೆ ಬಂದಿದ್ದಾರೆ. ಅಲ್ಲದೆ, ಶಾಶ್ವತ ದೇವಾಲಯ, ಸನಾತನ ಭಾವ ಜಾಗೃತಿ, ITIHASA ಮತ್ತು ಶಾಶ್ವತ ಭಾರತಂನಂತಹ ಹಲವಾರು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ತೆಲಂಗಾಣ| ಮರ್ಯಾದೆಗೇಡು ಹತ್ಯೆ; ಅಂತರ್ಜಾತಿ ವಿವಾವಾಗಿದ್ದ ಮಹಿಳಾ ಪೇದೆಯನ್ನು ಹತ್ಯೆಗೈದ ಸಹೋದರ

ತೆಲಂಗಾಣ| ಮರ್ಯಾದೆಗೇಡು ಹತ್ಯೆ; ಅಂತರ್ಜಾತಿ ವಿವಾವಾಗಿದ್ದ ಮಹಿಳಾ ಪೇದೆಯನ್ನು ಹತ್ಯೆಗೈದ ಸಹೋದರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...