Homeಕರ್ನಾಟಕಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದ ಆರೆಸ್ಸೆಸ್‌ ನಾಯಕನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸಚಿವರು, ಸಂಸದರು, ಶಾಸಕರು ಮತ್ತು ನಾಯಕರು...

ಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದ ಆರೆಸ್ಸೆಸ್‌ ನಾಯಕನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸಚಿವರು, ಸಂಸದರು, ಶಾಸಕರು ಮತ್ತು ನಾಯಕರು ಅತಿಥಿಗಳು! ಹೋಗಲ್ಲ ಎಂದ ಸಿಎಂ!

ಸಚಿವ ಪ್ರಿಯಾಂಕ್ ಖರ್ಗೆ ಕೂಡಾ ಕಾರ್ಯಕ್ರಮಕ್ಕೆ ಹೋಗಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ

- Advertisement -
- Advertisement -

ಭಾರತ ಸಂವಿಧಾನದ ವಿರೋಧಿ, ಆರೆಸ್ಸೆಸ್ ನಾಯಕ ಕೆ.ಎನ್. ಗೋವಿಂದಾಚಾರ್ಯ ಅವರ ‘ಭಾರತ ವಿಕಾಸ ಸಂಘಂ’ ಆಯೋಜಿಸುವ 9 ದಿನಗಳ ‘7ನೇ ಭಾರತೀಯ ಸಂಸ್ಕೃತಿ ಉತ್ಸವ’ ಕಾರ್ಯಕ್ರಮದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಸಚಿವರು, ಶಾಸಕರು ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ. 2016ರಲ್ಲಿ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಗೋಂವಿದಾಚಾರ್ಯ ‘ಭಾರತೀಯತೆಯನ್ನು ಪ್ರತಿಬಿಂಬಿಸಲು ನಾವು ಸಂವಿಧಾನವನ್ನು ಪುನಃ ಬರೆಯುತ್ತೇವೆ’ ಎಂದು ಹೇಳಿದ್ದರು.

ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಆರೆಸ್ಸೆಸ್‌ ನಾಯಕ ದತ್ತಾತ್ರೆಯ ಹೊಸಬಾಳೆ, ವೀರೇಂದ್ರ ಹೆಗಡೆ, ಯಡಿಯೂರಪ್ಪ, ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ವಿಶ್ವೇಶ್ವರ ಕಾಗೇರಿ, ಯತ್ನಾಲ್, ಸುಧಾ ಮೂರ್ತಿ, ವಿಜಯೇಂದ್ರ, ಬಾಬಾ ರಾಮದೇವ್ ಸೇರಿದಂತೆ ಹಲವಾರು ಬಿಜೆಪಿ ಮತ್ತು ಸಂಘಪರಿವಾರದ ನಾಯಕರು ಇದರಲ್ಲಿ ಭಾಗವಹಿಸಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆಶ್ಚರ್ಯವೆಂದರೆ, ಇದೇ ಆರೆಸ್ಸೆಸ್‌ ಪರ ವ್ಯಕ್ತಿಗಳು ನಡೆಸುವ ಕಾರ್ಯಕ್ರಮದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರದ ಹಲವಾರು ಸಚಿವರು, ಶಾಸಕರು ಹಾಗೂ ಪಕ್ಷದ ಸಂಸದರು ಮತ್ತು ನಾಯಕರು ಭಾಗವಹಿಸಲಿದ್ದಾರೆ ಎಂದು ಆಮಂತ್ರಣ ಪತ್ರಿಕೆಯಲ್ಲಿ ಹೇಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರು ಇದ್ದರೂ, ಈ ಬಗ್ಗೆ ಇಬ್ಬರೂ ಈಗಾಗಲೆ ಸ್ಪಷ್ಟೀಕರಣ ಕೊಟ್ಟಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

ಅದಾಗ್ಯೂ, ರಾಜ್ಯ ಸರ್ಕಾರ ಸಚಿವರುಗಳಾದ ಡಾ. ಶರಣ್ ಪ್ರಕಾಶ್ ಪಾಟೀಲ್, ಶರಣಬಸಪ್ಪ ಪಾಟೀಲ್ ದಾಸನಪುರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಆಮಂತ್ರಣ ಪತ್ರಿಕೆ ಹೇಳಿದೆ. ಜೊತೆಗೆ ಸಚಿವರುಗಳು ಕೂಡಾ ಈ ಬಗ್ಗೆ ಯಾವುದೇ ಸ್ಪಷ್ಟಿಕರಣವಾಗಲಿ, ನಿರಾಕರಣೆಯಾಗಲಿ ಮಾಡಿಲ್ಲ.

ಇಷ್ಟೆ ಅಲ್ಲದೆ, ಕಲಬುರಗಿಯ ಕಾಂಗ್ರೆಸ್ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯನಾಗಿದ್ದು, ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆ ಅವರ ಸಹೋದರಿಯ ಪತಿಯಾಗಿದ್ದಾರೆ. ಜೊತೆಗೆ, ಆಮಂತ್ರಣ ಪತ್ರಿಕೆಯಲ್ಲಿ ಬಳ್ಳಾರಿಯ ಕಾಂಗ್ರಸ್ ಸಂಸದ ಇ.ತುಕಾರಾಮ, ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಅವರ ಮಗ ಜೇವರ್ಗಿಯ ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಮತ್ತು ಕಾಂಗ್ರೆಸ್ ನಾಯಕ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಅವರ ಹೆಸರು ಆಮಂತ್ರಣ ಪತ್ರಿಕೆಯಲ್ಲಿ ಕಾಣಿಸಿಕೊಂಡಿದೆ.

ಇಷ್ಟೆ ಅಲ್ಲದೆ, ಆಮಂತ್ರಣ ಪತ್ರಿಕೆಯಲ್ಲಿ ಹಿರಿಯ ಸಾಹಿತಿ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಇತ್ತಿಚೆಗೆ ಆಯ್ಕೆಯಾದ ಗೊ.ರು. ಚೆನ್ನಬಸಪ್ಪ ಅವರ ಹೆಸರು ಕೂಡಾ ಕಾಣಿಸಿಕೊಂಡಿದೆ. ಕಾಂಗ್ರೆಸ್ ಸರ್ಕಾರವಿರುವ ತೆಲಂಗಾಣದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಆಗಿದ್ದ, ಪ್ರಸ್ತುತ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿರುವ ವಿಶ್ವನಾಥ್ ಚನ್ನಪ್ಪ ಸಜ್ಜನರ್ ಕೂಡಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಜೊತೆಗೆ ಬೀದರ್‌ನ ಶಾಹಿನ್ ಸಂಸ್ಥೆ ಮುಖ್ಯಸ್ಥ ಅಬ್ದುಲ್ ಖಾದಿರ್, ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಹಾಗೂ ಇಸ್ರೋ ಮುಖ್ಯಸ್ಥ ಎಸ್‌. ಸೋಮನಾಥ್ ಕೂಡಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಆರೆಸ್ಸೆಸ್‌ ಪರ ಸಂಘಟನೆಯಾದ ಭಾರತ ವಿಕಾಸ್ ಸಂಘಂ ಈ ಕಾರ್ಯಕ್ರಮವನ್ನು ಕಲಬುರ್ಗಿಯಲ್ಲಿ ಆಯೋಜಿಸಿದ್ದು 2025ರ ಜನವರಿ 29ರಿಂದ ಪ್ರಾರಂಭವಾಗಿ ಫೆಬ್ರವರಿ 6ರ ವರೆಗೆ ನಡೆಯಲಿದೆ. ಕಾರ್ಯಕ್ರಮಕ್ಕೆ ಶ್ರೀ ಕೊಟ್ಟಾಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಮತ್ತು ವಿಕಾಸ್ ಅಕಾಡೆಮಿ ಸಹಯೋಗ ನೀಡಲಿದೆ. ಕಾರ್ಯಕ್ರಮ ಆಯೋಜಿಸುವ ಹೆಚ್ಚಿನ ಎಲ್ಲಾ ಸಂಘಟಕರು ಆರೆಸ್ಸೆಸ್‌ನ ನಾಯಕರುಗಳಾಗಿದ್ದಾರೆ.

ಅಡ್ವಾನಿ ಜೊತೆಗೆ ಸೇರಿ ಬಾಬರಿ ಮಸೀದಿ ಧ್ವಂಸ ನಡೆಸಲು ನೀಲ ನಕ್ಷೆ ರಚಿಸಿದವರಲ್ಲಿ ಕೆ.ಎನ್‌. ಗೋವಿಂದಾಚಾರ್ಯ ಅವರು ಕೂಡಾ ಒಬ್ಬರಾಗಿದ್ದಾರೆ. 2016ರಲ್ಲಿ ದಿ ವೈರ್‌ಗೆ ನೀಡಿದ್ದ ಸಂದರ್ಶದನಲ್ಲಿ ಅವರು ಭಾರತ ಸಂವಿಧಾನದಲ್ಲಿ ಭಾರತೀಯತೆ ಇಲ್ಲ, ಹಾಗಾಗಿ ನಾವು ಹೊಸದಾಗಿ ಸಂವಿಧಾನ ಬರೆಯಲಿದ್ದೇವೆ ಎಂದು ಹೇಳಿದ್ದರು. ಸಂವಿಧಾನವನ್ನು ಪುನಃ ಬರೆಯುತ್ತೇವೆ

ಭಾರತ ವಿಕಾಸ ಸಂಘಂನ ಸ್ಥಾಪಕರಾಗಿರುವ ಗೋಂವಿದಾಚಾರ್ಯ, ಸನಾತನ ಹಿಂದೂ ಪ್ರತಿಷ್ಠಾನ, ರಾಷ್ಟ್ರೀಯ ಸ್ವಾಭಿಮಾನ್ ಆಂದೋಲನ ಸೇರಿದಂತೆ ಔಪಚಾರಿಕವಾಗಿ ಆರೆಸ್ಸೆಸ್‌ನ ಪ್ರಚಾರಕ ಕೂಡಾ ಆಗಿದ್ದಾರೆ. ಬಾಬರಿ ಮಸೀದಿ ಒಡೆಯುವ ಕೃತ್ಯ ಎಸಗಿದ ರಾಮ ಜನ್ಮ ಭೂಮಿ ಆಂದೋಲನ, ಭಾರತೀಯ ಸಂಸ್ಕೃತಿ ಉತ್ಸವ, ಸ್ವದೇಶಿ ಜಾಗರಣ ಮಂಚ್ ಮುಂತಾದ ಹಲವಾರು ಕಾರ್ಯಕ್ರಮಗನ್ನು ಮಾಡುತ್ತಲೆ ಬಂದಿದ್ದಾರೆ. ಅಲ್ಲದೆ, ಶಾಶ್ವತ ದೇವಾಲಯ, ಸನಾತನ ಭಾವ ಜಾಗೃತಿ, ITIHASA ಮತ್ತು ಶಾಶ್ವತ ಭಾರತಂನಂತಹ ಹಲವಾರು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ತೆಲಂಗಾಣ| ಮರ್ಯಾದೆಗೇಡು ಹತ್ಯೆ; ಅಂತರ್ಜಾತಿ ವಿವಾವಾಗಿದ್ದ ಮಹಿಳಾ ಪೇದೆಯನ್ನು ಹತ್ಯೆಗೈದ ಸಹೋದರ

ತೆಲಂಗಾಣ| ಮರ್ಯಾದೆಗೇಡು ಹತ್ಯೆ; ಅಂತರ್ಜಾತಿ ವಿವಾವಾಗಿದ್ದ ಮಹಿಳಾ ಪೇದೆಯನ್ನು ಹತ್ಯೆಗೈದ ಸಹೋದರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...