Homeಕರ್ನಾಟಕದ.ಕ, ಉಡುಪಿ ಜಿಲ್ಲೆಗಳಲ್ಲಿ 'ಕೋಮುದ್ವೇಷ ನಿಗ್ರಹ ಘಟಕ' ಆರಂಭ: ಗೃಹ ಸಚಿವ ಪರಮೇಶ್ವರ್

ದ.ಕ, ಉಡುಪಿ ಜಿಲ್ಲೆಗಳಲ್ಲಿ ‘ಕೋಮುದ್ವೇಷ ನಿಗ್ರಹ ಘಟಕ’ ಆರಂಭ: ಗೃಹ ಸಚಿವ ಪರಮೇಶ್ವರ್

- Advertisement -
- Advertisement -

ಕೋಮು ಸಂಘರ್ಷ ತಡೆಯಲು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ‘ಕೋಮುದ್ವೇಷ ನಿಗ್ರಹ ಘಟಕ’ (Anti Communal Force) ಆರಂಭಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಮಂಗಳೂರು ನಗರದ ಹೊರವಲಯಗಳಲ್ಲಿ ಒಂದು ವಾರದೊಳಗೆ ಕೇರಳ ಮೂಲದ ಅಶ್ರಫ್ ಮತ್ತು ರೌಡಿ ಸುಹಾಸ್ ಶೆಟ್ಟಿ ಕೊಲೆ ನಡೆದಿರುವ ಹಿನ್ನೆಲೆ, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಗೃಹ ಸಚಿವ ಪರಮೇಶ್ವರ್ ಮತ್ತು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಸಭೆ ನಡೆಸಿದರು.

ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗೃಹ ಸಚಿವರು, “ಅಶ್ರಫ್ ಮತ್ತು ಸುಹಾಸ್ ಶೆಟ್ಟಿ ಕೊಲೆ ಬಳಿಕ ಜಿಲ್ಲೆಯಲ್ಲಿ ಕೋಮು ಸಂಘರ್ಷ ಮತ್ತೆ ಮರುಕಳಿಸಿದೆ ಎಂಬ ಭಾವನೆ ಜನರಲ್ಲಿ ಬಂದಿರಬಹುದು. ಜನ ಸಮುದಾಯ ಇದನ್ನು ಇಷ್ಟಪಡುವುದಿಲ್ಲ. ಸರ್ಕಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜನರು ಶಾಂತಿಯಿಂದ ಬದುಕಬೇಕು, ಮಕ್ಕಳು ಇಲ್ಲಿಯೇ ವ್ಯಾಸಂಗ ಮಾಡುವಂತೆ ಆಗಬೇಕು, ಇಲ್ಲಿ ಬಂಡವಾಳ ಹೂಡಿಕೆ ಆಗಬೇಕು ಮತ್ತು ಉದ್ಯೋಗ ಸೃಷ್ಟಿಯಾಗಬೇಕು ಎಂದು ಬಯಸುತ್ತದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳುತ್ತದೆ ಎಂದರು.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕಳೆದ ಎರಡು ವರ್ಷಗಳಲ್ಲಿ ನಮ್ಮ ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ. ಆದರೂ, ಕಳೆದ ಒಂದು ವಾರದೊಳಗೆ ಎರಡು ಹತ್ಯೆಗಳು ನಡೆದಿವೆ. ಇದು ಇಲ್ಲಿನ ಕೋಮು ಸೌಹಾರ್ದಕ್ಕೆ ಸವಾಲಾಗಿ ನಿಂತಿದೆ ಎಂದು ಹೇಳಿದರು.

ಸುಹಾಸ್ ಶೆಟ್ಟಿ ಪ್ರಕರಣದಲ್ಲಿ ಪೊಲೀಸರು ಇದುವರೆಗೆ 8 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಅಶ್ರಫ್ ಹತ್ಯೆ ಪ್ರಕರಣದಲ್ಲಿ ಸುಮಾರು 21 ಜನರನ್ನು ಬಂಧಿಸಲಾಗಿದೆ. ನಾವು ಯಾವುದೇ ಕಾರಣಕ್ಕೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಶಾಂತಿ ಕದಡಲು ಅವಕಾಶ ನೀಡುವುದಿಲ್ಲ ಎಂದರು.

ಯಾವುದೇ ಕೋಮು ಶಕ್ತಿಗಳು, ಅವರು ಯಾವುದೇ ಸಮುದಾಯದವರು ಆದರೂ ಕಾನೂನು ಉಲ್ಲಂಘನೆ ಮಾಡಲು ಬಿಡುವುದಿಲ್ಲ. ಅವರನ್ನು ಹತ್ತಿಕ್ಕುತ್ತೇವೆ, ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳುತ್ತೇವೆ. ಕೋಮು ಸಂಘರ್ಷದ ಹಿಂದೆ ಅನೇಕ ಶಕ್ತಿಗಳು ಇರುವುದು ಗೊತ್ತಾಗಿದೆ. ಅವರ ಹುಟ್ಟಡಗಿಸುತ್ತೇವೆ ಎಂದು ಹೇಳಿದರು.

ಸರ್ಕಾರ ಈಗ ಒಂದು ತೀರ್ಮಾನಕ್ಕೆ ಬಂದಿದೆ. ಇನ್ನು ಮುಂದೆ ಈ ರೀತಿಯ ಘಟನೆಗಳು ಮರುಕಳಿಸಬಾರದು. ಈ ನಿಟ್ಟಿನಲ್ಲಿ ನಕ್ಸಲ್ ನಿಗ್ರಹ ದಳದಂತೆ ಹೊಸದಾಗಿ ‘ಕೋಮುದ್ವೇಷ ನಿಗ್ರಹ ಘಟಕ’ವನ್ನು ಪ್ರತ್ಯೇಕವಾಗಿ ರಚಿಸುತ್ತೇವೆ. ಅದಕ್ಕೆ ಐಜಿಪಿ ದರ್ಜೆಯ ಅಧಿಕಾರಿಯನ್ನು ಮುಖ್ಯಸ್ಥರನ್ನಾಗಿ ನೇಮಿಸುತ್ತೇವೆ. ಈ ಘಟಕ ಪೊಲೀಸರ ಸಹಕಾರದ ಜೊತೆ ಪ್ರತ್ಯೇಕವಾಗಿ ಕೆಲಸ ಮಾಡಲಿದೆ ಎಂದು ತಿಳಿಸಿದರು.

ಕೋಮುದ್ವೇಷದ ಚಟುವಟಿಕೆಗಳ ಮೇಲೆ ನಿಗಾ ಇಟ್ಟು, ಅದರ ಹಿಂದೆ ಇರುವವರ ಮೇಲೆ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳಲು ಈ ಟಾಸ್ಕ್‌ ಫೋರ್ಸ್‌ಗೆ ಕಾನೂನು ವ್ಯಾಪ್ತಿಯಲ್ಲಿ ಅಧಿಕಾರ ಕೊಡುತ್ತೇವೆ. ಈ ಮೂಲಕ ಎರಡು ಜಿಲ್ಲೆಗಳಲ್ಲಿ ಶಾಂತಿ ಸ್ಥಾಪನೆ ಮಾಡುತ್ತೇವೆ. ಯಾರು ಕೋಮು ಪ್ರಚೋದನಕಾರಿ ಭಾಷಣ ಮಾಡುತ್ತಾರೋ ಅಥವಾ ಹೇಳಿಕೆ ಕೊಡುತ್ತಾರೋ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದು ಗೃಹ ಸಚಿವರು ಹೇಳಿದರು.

ಮಂಗಳೂರು | ರೌಡಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; 8 ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...