Homeಮುಖಪುಟ"ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ" ದೆಹಲಿ...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ (ಏ.3) ದೆಹಲಿಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಸಮಾಲೋಚನಾ ಸಭೆಯೊಂದು ವಿಕೋಪಕ್ಕೆ ತಿರುಗಿದ್ದು, ಟ್ರಾನ್ಸ್‌ಜೆಂಡರ್ ಸಮುದಾಯದ ಒಳಗಡೆಯೇ ಜಾತಿ ತಾರತಮ್ಯ ಎಷ್ಟು ಆಳವಾಗಿ ಬೇರೂರಿದೆ ಎಂಬುವುದು ಬಯಲಾಗಿದೆ.

ದಲಿತ ಮತ್ತು ಟ್ರಾನ್ಸ್‌ಜೆಂಡರ್ ಹಕ್ಕುಗಳ ಹಿರಿಯ ಹೋರಾಟಗಾರ್ತಿ ಗ್ರೇಸ್ ಬಾನು ಅವರು ಏಪ್ರಿಲ್ 3ರಂದು ದೆಹಲಿಯ ‘ದಿ ಲಲಿತ್’ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ತೀವ್ರವಾದ ಮೌಖಿಕ ದಾಳಿ ಮತ್ತು ದೈಹಿಕ ದೌರ್ಜನ್ಯದ ಬೆದರಿಕೆಯನ್ನು ಎದುರಿಸಿದ್ದಾರೆ. ಅವರು ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ ಖಾತೆಯಲ್ಲಿ ಈ ಭೀಕರ ಅನುಭವದ ಬಗ್ಗೆ ವಿವರವಾದ ಹೇಳಿಕೆಯನ್ನು ಹಂಚಿಕೊಂಡಿದ್ದಾರೆ.

ಆರಂಭದಲ್ಲಿ, ಈ ಸಮಾಲೋಚನಾ ಸಭೆಯ ಕಾರ್ಯಸೂಚಿಯ ಪ್ರಕಾರ ಪ್ರಖ್ಯಾತ ಟ್ರಾನ್ಸ್‌ಜೆಂಡರ್ ಹಕ್ಕುಗಳ ಹೋರಾಟಗಾರ್ತಿ, ಬಾಲಿವುಡ್ ನಟಿ, ಭರತನಾಟ್ಯ ನೃತ್ಯಗಾರ್ತಿ ಹಾಗೂ ಕಿನ್ನರ್ ಅಖಾಡದ ಆಚಾರ್ಯ ಮಹಾಮಂಡಲೇಶ್ವರ ಆಗಿರುವ ಲಕ್ಷ್ಮಿ ನಾರಾಯಣ ತ್ರಿಪಾಠಿ (ಎನ್‌ಎನ್‌ಟಿ) ಅವರನ್ನು ಮುಖ್ಯ ಭಾಷಣಕಾರರನ್ನಾಗಿ ನಿಗದಿಪಡಿಸಲಾಗಿತ್ತು.

“ಆಕೆ (ಲಕ್ಷ್ಮಿ ನಾರಾಯಣ ತ್ರಿಪಾಠಿ) ಅನುಸರಿಸುವ ಬ್ರಾಹ್ಮಣ್ಯದ ಹಿಂದುತ್ವ ಸಿದ್ಧಾಂತದ ಕಾರಣದಿಂದಾಗಿ, ಮತ್ತೊಬ್ಬ ಅಂಬೇಡ್ಕರ್ ವಾದಿ ಹೋರಾಟಗಾರ್ತಿ ಮತ್ತು ನಾನು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿರಾಕರಿಸಿದ್ದೆವು. ನಮ್ಮ ಆಕ್ಷೇಪಣೆಗಳನ್ನು ಪರಿಗಣಿಸಿ, ಆಯೋಜಕರಾದ ಹಮ್‌ಸಫರ್ ಟ್ರಸ್ಟ್, ಕೆಎಸ್‌ಎಫ್ ಮತ್ತು ನಾಜ್ ಸಂಸ್ಥೆಗಳು ಪರಿಷ್ಕೃತ ಕಾರ್ಯಸೂಚಿಯನ್ನು ಬಿಡುಗಡೆ ಮಾಡಿದವು, ಆ ನಂತರವಷ್ಟೇ ನಾನು ಕಾರ್ಯಕ್ರಮಕ್ಕೆ ಹಾಜರಾದೆ. ಸಮಾಲೋಚನೆಯ ವೇಳೆ, ಲಕ್ಷ್ಮಿ ನಾರಾಯಣ ತ್ರಿಪಾಠಿ ಅವರು ‘ಜೈ ಶ್ರೀ ಮಹಾಕಾಲ್’ ಮತ್ತು ‘ನಾನು ಬ್ರಾಹ್ಮಣಳು ಎಂದು ಹೆಮ್ಮೆಪಡುತ್ತೇನೆ’ ಎಂದು ಹೇಳುವ ಮೂಲಕ ಭಾಷಣ ಪ್ರಾರಂಭಿಸಿದರು; ಇದಕ್ಕೆ ನಾನು ಯಾವುದೇ ಆಕ್ಷೇಪ ವ್ಯಕ್ತಪಡಿಸಲಿಲ್ಲ. ಅಷ್ಟೇ ಅಲ್ಲದೆ, ಅವರು ಮಾತನಾಡುವಾಗ ಅಥವಾ ಆನಂತರವೂ ನಾನು ಯಾವುದೇ ಅಡ್ಡಿಪಡಿಸಲಿಲ್ಲ ಅಥವಾ ಪ್ರತಿಕ್ರಿಯಿಸಲಿಲ್ಲ. ವಾಸ್ತವವಾಗಿ, ಅವರು ಅಲ್ಲಿ ನೆರೆದಿದ್ದ ಕೆಲವು ಯುವ ಟ್ರಾನ್ಸ್‌ಜೆಂಡರ್‌ಗಳನ್ನು ಅವರು ತಮ್ಮ ಮಕ್ಕಳೆಂದೇ ಕರೆದರು” ಎಂದು ಬಾನು ತಿಳಿಸಿದ್ದಾರೆ.

ಬಾನು ಅವರ ಹೇಳಿಕೆಯ ಪ್ರಕಾರ, ಅವರು ಸಭೆಯನ್ನು “ಜೈ ಭೀಮ್!” ಎಂದು ಸ್ವಾಗತಿಸಿ, “ನಾವೆಲ್ಲರೂ ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ರಮಾಬಾಯಿ ಅವರ ಮೊಮ್ಮಕ್ಕಳು” ಎಂದು ಹೇಳಿದ ನಂತರ ಸಂಘರ್ಷ ಭುಗಿಲೆದ್ದಿದೆ. ಬಾನು ಕೇಂದ್ರದ ತಿದ್ದುಪಡಿ ಕಾಯ್ದೆಯನ್ನು “ಹಿಂದುತ್ವ ಬ್ರಾಹ್ಮಣಶಾಹಿ ಪಿತೃಪ್ರಧಾನ ಕಾಯ್ದೆ” ಎಂದು ಟೀಕಿಸಿದ್ದರು ಎನ್ನಲಾಗಿದೆ.

“ನಾನು ಮಾತನಾಡಿದ ಸಮಿತಿ ಚರ್ಚೆಯು ಊಟದ ಸಮಯಕ್ಕೆ ಹತ್ತಿರವಾಗುತ್ತಿದ್ದಂತೆ ಮುಕ್ತಾಯವಾಯಿತು. ತದನಂತರ, ಲಕ್ಷ್ಮಿ ನಾರಾಯಣ ತ್ರಿಪಾಠಿ ಪ್ರತಿಕ್ರಿಯಿಸಲು ಮುಂದಾದರು. ಸಂಘಟಕರು ಸ್ವಲ್ಪ ಕಾಯುವಂತೆ ಸೂಚಿಸಿದರೂ ಸಹ, ಮೈಕ್ ಕೈಗೆತ್ತಿಕೊಂಡ ತ್ರಿಪಾಠಿ ಅವರು, ಆಕ್ರಮಣಕಾರಿ ಮತ್ತು ಜಾತಿ ನಿಂದನೆಯ ಧಾಟಿಯಲ್ಲಿ ನನ್ನ ಹೆಸರನ್ನು ನೇರವಾಗಿ ಪ್ರಸ್ತಾಪಿಸಿ ಕೂಗಾಡಿದರು. ತಾನು ಬ್ರಾಹ್ಮಣಳು ಎಂಬುದನ್ನು ಪ್ರತಿಪಾದಿಸಿದ ಅವರು, ತಾನೂ ಕೂಡ ಯಾವುದೇ ದಲಿತರಷ್ಟೇ ತುಳಿತಕ್ಕೆ ಒಳಗಾದ ಸಂತ್ರಸ್ತೆ ಎಂದು ವಾದಿಸಿದರು,” ಎಂದು ಬಾನು ವಿವರಿಸಿದ್ದಾರೆ. ಬಾನು ಅವರ ಪ್ರಕಾರ, ಲಕ್ಷ್ಮಿ ಅವರು ಮೈಕ್ ಕಸಿದುಕೊಂಡು, ಜಾತಿವಾದಿ ಧಾಟಿಯಲ್ಲಿ ಬಾನು ಮೇಲೆ ಕಿರುಚಾಡಿದ್ದಾರೆ ಮತ್ತು ತಮ್ಮ ಬ್ರಾಹ್ಮಣ ಅಸ್ಮಿತೆಯನ್ನು ಎತ್ತಿಹಿಡಿದಿದ್ದಾರೆ.

en.themooknayak.com ವರದಿ ಪ್ರಕಾರ, ಭಾರತದ ಮೊದಲ ಟ್ರಾನ್ಸ್‌ಜೆಂಡರ್ ಪುರುಷ ಬಾಡಿಬಿಲ್ಡರ್, ವಕೀಲ ಮತ್ತು ಹೋರಾಟಗಾರ ಆರ್ಯನ್ ಪಾಶಾ ಅವರು ಹಿಂದಿಯಲ್ಲಿ ಬಾನು ಅವರ ಮೇಲೆ ಕಿರುಚಾಡಿದಾಗ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಂಡಿತು: “ನೀನು ನಿಜವಾಗಿಯೂ ಅಂಬೇಡ್ಕರ್ ಮಗಳೇ ಎಂದು ತಿಳಿಯಲು ನಾವು ನಿನ್ನ ಡಿಎನ್ಎ ಪರೀಕ್ಷೆ ಮಾಡುತ್ತೇವೆ!” ಎಂದು ಅವರು ಕೂಗಿದರು. ಬಾನು ಅವರಿಗೆ ಹಿಂದಿ ಅರ್ಥವಾಗುವುದಿಲ್ಲ ಎಂಬುದು ತಿಳಿದಿದ್ದರೂ, ಪಾಶಾ ಅವರು ಮೈಕ್ ಹಿಡಿದು ಅವರ ಬಳಿ ನಡೆದು ಬಂದು, ದೈಹಿಕವಾಗಿ ಹೆದರಿಸುವ ಉದ್ದೇಶದಿಂದ ಅತ್ಯಂತ ಹತ್ತಿರದಲ್ಲಿ ಬೆದರಿಸುವಂತೆ ನಿಂತರು ಎಂದು ಆರೋಪಿಸಲಾಗಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೋಯಲ್ ಘೋಷ್ ಎಂಬವರು ಪಾಶಾ ಅವರ ವರ್ತನೆಯನ್ನು ಪ್ರಶ್ನಿಸಿದಾಗ, ಅವರು ಘೋಷ್ ಅವರ ಕಾಲರ್ ಹಿಡಿದು ಎಳೆದಾಡಿದರು ಎಂದು ಆರೋಪಿಸಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಸಹ-ಪ್ಯಾನಲಿಸ್ಟ್‌ಗಳು ಮಧ್ಯಪ್ರವೇಶಿಸಿ ಅವರನ್ನು ತಡೆಯಬೇಕಾಯಿತು ಎಂದು ವರದಿ ಉಲ್ಲೇಖಿಸಿದೆ.

ಈ ಇಡೀ ಘಟನೆಯುದ್ದಕ್ಕೂ ಬಾನು ಅವರು ಶಾಂತತೆಯನ್ನು ಕಾಪಾಡಿಕೊಂಡರು. ಆಯೋಜಕರಾದ ಹಮ್‌ಸಫರ್ ಟ್ರಸ್ಟ್, ಕೆಎಸ್‌ಎಫ್ ಮತ್ತು ನಾಜ್ ಫೌಂಡೇಶನ್ ನಂತರ ವೈಯಕ್ತಿಕವಾಗಿ ಬಾನು ಅವರ ಕ್ಷಮೆಯಾಚಿಸಿದರಾದರೂ, ಸಾರ್ವಜನಿಕವಾಗಿ ತಟಸ್ಥ ನಿಲುವನ್ನು ತಳೆದರು ಎಂದಿದೆ.

themooknayak.com ಈ ಗಂಭೀರ ಆರೋಪಗಳ ಕುರಿತು ಪ್ರತಿಕ್ರಿಯೆ ಮತ್ತು ವಿವರಣೆ ಕೋರಿ ಲಕ್ಷ್ಮಿ ನಾರಾಯಣ ತ್ರಿಪಾಠಿ ಅವರನ್ನು ಸಂಪರ್ಕಿಸಿತು, ಆದರೆ ಯಾವುದೇ ಪ್ರತಿಕ್ರಿಯೆಗೆ ಅವರು ಲಭ್ಯವಾಗಿಲ್ಲ. ಆಯೋಜಕ ತಂಡದ ಸದಸ್ಯರೊಬ್ಬರು ಸಹ ಈ ಘಟನೆಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ ಎನ್ನಲಾಗಿದೆ.

ಸಾಫ್ಟ್‌ವೇರ್ ಇಂಜಿನಿಯರ್ ಮತ್ತು ಇಂಜಿನಿಯರಿಂಗ್ ಕಾಲೇಜಿಗೆ ಪ್ರವೇಶ ಪಡೆದ ಭಾರತದ ಮೊದಲ ಟ್ರಾನ್ಸ್‌ಜೆಂಡರ್ ಆಗಿರುವ ಗ್ರೇಸ್ ಬಾನು ಅವರು, ಪ್ರಮುಖ ದಲಿತ-ಟ್ರಾನ್ಸ್‌ಜೆಂಡರ್ ಹಕ್ಕುಗಳ ಹೋರಾಟಗಾರ್ತಿ ಹಾಗೂ ‘ಟ್ರಾನ್ಸ್ ರೈಟ್ಸ್ ನೌ ಕಲೆಕ್ಟಿವ್’ (Trans Rights Now Collective) ಸಂಸ್ಥೆಯ ಸಂಸ್ಥಾಪಕಿಯಾಗಿದ್ದಾರೆ. ದಲಿತ ಮತ್ತು ಬಹುಜನ ಟ್ರಾನ್ಸ್‌ಜೆಂಡರ್‌ಗಳಿಗೆ ಮೀಸಲಾತಿ ಸೇರಿದಂತೆ ಅಂತರ್-ವಿಭಾಗೀಯ ಹಕ್ಕುಗಳಿಗಾಗಿ ಅವರು ದೀರ್ಘಕಾಲದಿಂದ ಪ್ರತಿಪಾದಿಸುತ್ತಿದ್ದಾರೆ ಮತ್ತು 2026ರ ತಿದ್ದುಪಡಿ ಮಸೂದೆಯನ್ನು ವಿರೋಧಿಸುವಲ್ಲಿ ಮುಂಚೂಣಿಯಲ್ಲಿದ್ದಾರೆ.

ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳಿಗಾಗಿ ಹೋರಾಡುತ್ತಿರುವ ಅಂಚಿನಲ್ಲಿರುವ ಸಮುದಾಯಗಳ ಒಳಗೂ ಇರುವ ಜಾತಿ ತಾರತಮ್ಯದ ಕಹಿ ಸತ್ಯವನ್ನು ಈ ಆಘಾತಕಾರಿ ಘಟನೆ ಮತ್ತೊಮ್ಮೆ ಬಯಲು ಮಾಡಿದೆ. ಈ ಘಟನೆಯಿಂದ ತೀವ್ರವಾಗಿ ನೊಂದಿರುವ ಗ್ರೇಸ್ ಬಾನು ನಂತರ ಹೀಗೆ ಬರೆದಿದ್ದಾರೆ, “ನಾನು ಅತ್ಯಂತ ದುಃಖಿತ ಹೃದಯದಿಂದ ಇದನ್ನು ಬರೆಯುತ್ತಿದ್ದೇನೆ… ನನ್ನ ಕೊನೆಯ ಉಸಿರಿರುವವರೆಗೂ ನಾನು ಬಾಬಾಸಾಹೇಬ್ ಮತ್ತು ರಮಾಬಾಯಿಯವರ ಮೊಮ್ಮಗಳು ಎಂದು ಹೇಳುತ್ತಲೇ ಇರುತ್ತೇನೆ. ಜೈ ಭೀಮ್! ಜೈ ರಮಾಬಾಯಿ!”

ಇತ್ತೀಚಿನ ಮಾಹಿತಿಯ ಪ್ರಕಾರ, ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಇತ್ತೀಚೆಗಷ್ಟೇ ಸಂಸತ್ತಿನಲ್ಲಿ ಅಂಗೀಕಾರಗೊಂಡ ಈ ತಿದ್ದುಪಡಿಯು, ಒಬ್ಬ ವ್ಯಕ್ತಿಯು ತನ್ನ ಲಿಂಗವನ್ನು ತಾನೇ ನಿರ್ಧರಿಸಿಕೊಳ್ಳುವ (Self-determination) ಹಕ್ಕನ್ನು ಕಸಿದುಕೊಂಡಿದೆ.

Courtesy : en.themooknayak.com


 



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...