Homeಮುಖಪುಟಮೋದಿ ಮೇಲಿನ ಟೀಕೆ ಸಹಿಸುತ್ತೇವೆ, ಭಾರತದ ಮೇಲಿನ ಟೀಕೆಯನ್ನಲ್ಲ: ಸ್ಮೃತಿ ಇರಾನಿ

ಮೋದಿ ಮೇಲಿನ ಟೀಕೆ ಸಹಿಸುತ್ತೇವೆ, ಭಾರತದ ಮೇಲಿನ ಟೀಕೆಯನ್ನಲ್ಲ: ಸ್ಮೃತಿ ಇರಾನಿ

- Advertisement -
- Advertisement -

ಭಾರತೀಯ ಉದ್ಯಮಿ ಗೌತಮ್ ಅದಾನಿ ಅವರು ಇತ್ತೀಚಿಗೆ ಷೇರು ಮಾರುಕಟ್ಟೆಯಲ್ಲಿ ಎದುರಿಸಿದ ತೊಂದರೆಗಳು ‘ಭಾರತದಲ್ಲಿ ಪ್ರಜಾಪ್ರಭುತ್ವದ ಪುನರುಜ್ಜೀವನ’ವನ್ನು ಉತ್ತೇಜಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ‘ಪ್ರಶ್ನೆಗಳಿಗೆ ಉತ್ತರಿಸಬೇಕಾಗಿದೆ’ ಎಂದು ಬಿಲಿಯನೇರ್ ಹೂಡಿಕೆದಾರ ಜಾರ್ಜ್ ಸೊರೊಸ್ ಹೇಳಿದ್ದಾರೆ. ಇದಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಪ್ರತಿಕ್ರಿಯಿಸಿದ್ದು, “ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳಲ್ಲಿ ಮಧ್ಯಪ್ರವೇಶಿಸಲು ಪ್ರಯತ್ನಿಸುವ ವಿದೇಶಿ ಶಕ್ತಿಗಳ ವಿರುದ್ದ ಭಾರತೀಯರು ಒಗ್ಗಟ್ಟಾಗಿ ಪ್ರತಿಕ್ರಿಯಿಸಬೇಕು” ಎಂದು ಕರೆ ನೀಡಿದ್ದಾರೆ.

ಭಾರತದ ಮೇಲಿನ ಹೂಡಿಕೆದಾರರ ವಿಶ್ವಾಸಕ್ಕೆ ಹಿಂಡೆನ್‌ಬರ್ಗ್ ರಿಸರ್ಚ್‌ನ ದಾಳಿಯಿಂದ ಧಕ್ಕೆಯುಂಟಾಗಿದೆ. ಇದು ದೇಶದ ನಿಯಂತ್ರಣ ಚೌಕಟ್ಟಿನ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ. ಅದಾನಿ ಜೊತೆಗಿನ ಪ್ರಧಾನಿ ನರೇಂದ್ರ ಮೋದಿಯವರ ಸಂಬಂಧಗಳ ಬಗ್ಗೆ ಪ್ರಶ್ನೆಗಳೂ ಮೂಡಿವೆ ಎಂದು ಸೊರೊಸ್ ಹೇಳಿದರು.

“ಮೋದಿ ಅವರು ಈ ವಿಷಯದ ಬಗ್ಗೆ ಮೌನವಾಗಿದ್ದಾರೆ, ಆದರೆ ಅವರು ವಿದೇಶಿ ಹೂಡಿಕೆದಾರರ ಪ್ರಶ್ನೆಗಳಿಗೆ ಮತ್ತು ಸಂಸತ್ತಿನಲ್ಲಿ ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಬೇಕಾಗುತ್ತದೆ” ಎಂದು ಸೊರೊಸ್ ಅವರು ಮ್ಯೂನಿಚ್ ಭದ್ರತಾ ಸಮ್ಮೇಳನಕ್ಕೂ ಮುನ್ನ ಹೇಳಿದ್ದಾರೆ. “ಈ ವಿದ್ಯಮಾನ ಒಕ್ಕೂಟ ಸರ್ಕಾರದ ಮೇಲೆ ಮೋದಿಯವರ ಹಿಡಿತವನ್ನು ದುರ್ಬಲಗೊಳಿಸುತ್ತದೆ. ಭಾರತದಲ್ಲಿ ಪ್ರಜಾಸತ್ತಾತ್ಮಕ ಪುನರುಜ್ಜೀವನ ಆಗಬೇಕೆಂದು ನಾನು ನಿರೀಕ್ಷಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ: ಭಾರತದ ಬಿಬಿಸಿ ಕಚೇರಿಗಳ ಮೇಲೆ ಐಟಿ ದಾಳಿ: ಅದಾನಿ ವಿರುದ್ಧ ಈ ಕ್ರಮ ಯಾಕೆ ಇಲ್ಲ? ಎಂದ ಮೊಯಿತ್ರಾ

ಹೂಡಿಕೆದಾರ ಜಾರ್ಜ್ ಸೊರೊಸ್ ಮೇಲೆ ತೀವ್ರ ವಾಗ್ದಾಳಿ ನಡೆಸಿದ ಇರಾನಿ, “ಅವರು ಭಾರತಕ್ಕೆ ಸಂಬಂಧಿಸಿದಂತೆ ಕೆಟ್ಟ ಉದ್ದೇಶ ಹೊಂದಿರುವ ‘ಆರ್ಥಿಕ ಯುದ್ಧ ಅಪರಾಧಿ” ಎಂದು ಟೀಕಿಸಿದ್ದಾರೆ.

“ಪ್ರಧಾನಿ ಮೋದಿ ಅವರು ಟೀಕೆಗಳನ್ನು ಸ್ವೀಕರಿಸಬಹುದು, ಆದರೆ ಭಾರತದ ಮೇಲಿನ ಹೇಳಿಕೆಗಳನ್ನು ಸಹಿಸುವುದಿಲ್ಲ” ಎಂದು ಸ್ಮೃತಿ ಇರಾನಿ ಒತ್ತಿ ಹೇಳಿದ್ದಾರೆ. ಈ ವೇಳೆ, ಪ್ರಧಾನಿಯ ಮೇಲಿನ ದಾಳಿಗೆ ಆ ಕೋಟ್ಯಾಧಿಪತಿಯನ್ನು ಬೆಂಬಲಿಸುವ ರಾಜಕೀಯ ಸಂಘಟನೆಗಳಿಗೂ ಕೇಂದ್ರ ಸಚಿವರು ಎಚ್ಚರಿಕೆ ನೀಡಿದ್ದಾರೆ.

“ಬ್ಯಾಂಕ್ ಆಫ್ ಇಂಗ್ಲೆಂಡ್‌ನ್ನು ಮುರಿದವರು ಮತ್ತು ರಾಷ್ಟ್ರದಿಂದ ಆರ್ಥಿಕ ಯುದ್ಧ ಅಪರಾಧಿ ಎಂದು ಹೆಸರಿಸಲ್ಪಟ್ಟ ವ್ಯಕ್ತಿ ಈಗ ಭಾರತೀಯ ಪ್ರಜಾಪ್ರಭುತ್ವವನ್ನು ಮುರಿಯುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಅಂತಾರಾಷ್ಟ್ರೀಯ ವಾಣಿಜ್ಯೋದ್ಯಮಿ ಜಾರ್ಜ್ ಸೊರೊಸ್ ಅವರು ಪ್ರಜಾಪ್ರಭುತ್ವ ಪ್ರಕ್ರಿಯೆಗಳಲ್ಲಿ ಮಧ್ಯಪ್ರವೇಶಿಸುವ ತನ್ನ ದುರುದ್ದೇಶವನ್ನು ಘೋಷಿಸಿದ್ದಾರೆ” ಎಂದು ಕಿಡಿಕಾರಿದರು.

ದೇಶದ ಪ್ರಜಾಪ್ರಭುತ್ವವನ್ನು ಕೆಟ್ಟದಾಗಿ ತೋರಿಸಲು ಪ್ರಯತ್ನಿಸಿದ ಮತ್ತು ಭಾರತದ ಆರ್ಥಿಕತೆಗೆ ಆಕ್ರಮಣವನ್ನು ತಂದ ವ್ಯಕ್ತಿಯ ಉದ್ದೇಶವನ್ನು ಖಂಡಿಸಬೇಕು ಎಂದು ದೇಶದ ಜನರಲ್ಲಿ ಇರಾನಿ ಮನವಿ ಮಾಡಿದ್ದಾರೆ.

“ಅದಾನಿ ಹಗರಣವು ಭಾರತದಲ್ಲಿ ಪ್ರಜಾಸತ್ತಾತ್ಮಕ ಪುನರುಜ್ಜೀವನವನ್ನು ಉಂಟುಮಾಡುತ್ತದೆಯೇ ಎಂಬುದು ಸಂಪೂರ್ಣವಾಗಿ ಕಾಂಗ್ರೆಸ್, ವಿರೋಧ ಪಕ್ಷಗಳು ಮತ್ತು ನಮ್ಮ ಚುನಾವಣಾ ಪ್ರಕ್ರಿಯೆಯ ಮೇಲೆ ಅವಲಂಬಿತವಾಗಿದೆ. ಇದಕ್ಕೂ ಜಾರ್ಜ್ ಸೊರೊಸ್‌ಗೂ ಯಾವುದೇ ಸಂಬಂಧವಿಲ್ಲ. ನಮ್ಮ ನೆಹರೂವಿಯನ್ ಪರಂಪರೆಯಲ್ಲಿ ಸೊರೊಸ್‌ನಂತಹ ಜನರು ನಮ್ಮ ಚುನಾವಣಾ ಫಲಿತಾಂಶಗಳನ್ನು ನಿರ್ಧರಿಸಲು ಸಾಧ್ಯವಿಲ್ಲ” ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...