Homeಮುಖಪುಟಮೋದಿ ಮೇಲಿನ ಟೀಕೆ ಸಹಿಸುತ್ತೇವೆ, ಭಾರತದ ಮೇಲಿನ ಟೀಕೆಯನ್ನಲ್ಲ: ಸ್ಮೃತಿ ಇರಾನಿ

ಮೋದಿ ಮೇಲಿನ ಟೀಕೆ ಸಹಿಸುತ್ತೇವೆ, ಭಾರತದ ಮೇಲಿನ ಟೀಕೆಯನ್ನಲ್ಲ: ಸ್ಮೃತಿ ಇರಾನಿ

- Advertisement -
- Advertisement -

ಭಾರತೀಯ ಉದ್ಯಮಿ ಗೌತಮ್ ಅದಾನಿ ಅವರು ಇತ್ತೀಚಿಗೆ ಷೇರು ಮಾರುಕಟ್ಟೆಯಲ್ಲಿ ಎದುರಿಸಿದ ತೊಂದರೆಗಳು ‘ಭಾರತದಲ್ಲಿ ಪ್ರಜಾಪ್ರಭುತ್ವದ ಪುನರುಜ್ಜೀವನ’ವನ್ನು ಉತ್ತೇಜಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ‘ಪ್ರಶ್ನೆಗಳಿಗೆ ಉತ್ತರಿಸಬೇಕಾಗಿದೆ’ ಎಂದು ಬಿಲಿಯನೇರ್ ಹೂಡಿಕೆದಾರ ಜಾರ್ಜ್ ಸೊರೊಸ್ ಹೇಳಿದ್ದಾರೆ. ಇದಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಪ್ರತಿಕ್ರಿಯಿಸಿದ್ದು, “ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳಲ್ಲಿ ಮಧ್ಯಪ್ರವೇಶಿಸಲು ಪ್ರಯತ್ನಿಸುವ ವಿದೇಶಿ ಶಕ್ತಿಗಳ ವಿರುದ್ದ ಭಾರತೀಯರು ಒಗ್ಗಟ್ಟಾಗಿ ಪ್ರತಿಕ್ರಿಯಿಸಬೇಕು” ಎಂದು ಕರೆ ನೀಡಿದ್ದಾರೆ.

ಭಾರತದ ಮೇಲಿನ ಹೂಡಿಕೆದಾರರ ವಿಶ್ವಾಸಕ್ಕೆ ಹಿಂಡೆನ್‌ಬರ್ಗ್ ರಿಸರ್ಚ್‌ನ ದಾಳಿಯಿಂದ ಧಕ್ಕೆಯುಂಟಾಗಿದೆ. ಇದು ದೇಶದ ನಿಯಂತ್ರಣ ಚೌಕಟ್ಟಿನ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ. ಅದಾನಿ ಜೊತೆಗಿನ ಪ್ರಧಾನಿ ನರೇಂದ್ರ ಮೋದಿಯವರ ಸಂಬಂಧಗಳ ಬಗ್ಗೆ ಪ್ರಶ್ನೆಗಳೂ ಮೂಡಿವೆ ಎಂದು ಸೊರೊಸ್ ಹೇಳಿದರು.

“ಮೋದಿ ಅವರು ಈ ವಿಷಯದ ಬಗ್ಗೆ ಮೌನವಾಗಿದ್ದಾರೆ, ಆದರೆ ಅವರು ವಿದೇಶಿ ಹೂಡಿಕೆದಾರರ ಪ್ರಶ್ನೆಗಳಿಗೆ ಮತ್ತು ಸಂಸತ್ತಿನಲ್ಲಿ ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಬೇಕಾಗುತ್ತದೆ” ಎಂದು ಸೊರೊಸ್ ಅವರು ಮ್ಯೂನಿಚ್ ಭದ್ರತಾ ಸಮ್ಮೇಳನಕ್ಕೂ ಮುನ್ನ ಹೇಳಿದ್ದಾರೆ. “ಈ ವಿದ್ಯಮಾನ ಒಕ್ಕೂಟ ಸರ್ಕಾರದ ಮೇಲೆ ಮೋದಿಯವರ ಹಿಡಿತವನ್ನು ದುರ್ಬಲಗೊಳಿಸುತ್ತದೆ. ಭಾರತದಲ್ಲಿ ಪ್ರಜಾಸತ್ತಾತ್ಮಕ ಪುನರುಜ್ಜೀವನ ಆಗಬೇಕೆಂದು ನಾನು ನಿರೀಕ್ಷಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ: ಭಾರತದ ಬಿಬಿಸಿ ಕಚೇರಿಗಳ ಮೇಲೆ ಐಟಿ ದಾಳಿ: ಅದಾನಿ ವಿರುದ್ಧ ಈ ಕ್ರಮ ಯಾಕೆ ಇಲ್ಲ? ಎಂದ ಮೊಯಿತ್ರಾ

ಹೂಡಿಕೆದಾರ ಜಾರ್ಜ್ ಸೊರೊಸ್ ಮೇಲೆ ತೀವ್ರ ವಾಗ್ದಾಳಿ ನಡೆಸಿದ ಇರಾನಿ, “ಅವರು ಭಾರತಕ್ಕೆ ಸಂಬಂಧಿಸಿದಂತೆ ಕೆಟ್ಟ ಉದ್ದೇಶ ಹೊಂದಿರುವ ‘ಆರ್ಥಿಕ ಯುದ್ಧ ಅಪರಾಧಿ” ಎಂದು ಟೀಕಿಸಿದ್ದಾರೆ.

“ಪ್ರಧಾನಿ ಮೋದಿ ಅವರು ಟೀಕೆಗಳನ್ನು ಸ್ವೀಕರಿಸಬಹುದು, ಆದರೆ ಭಾರತದ ಮೇಲಿನ ಹೇಳಿಕೆಗಳನ್ನು ಸಹಿಸುವುದಿಲ್ಲ” ಎಂದು ಸ್ಮೃತಿ ಇರಾನಿ ಒತ್ತಿ ಹೇಳಿದ್ದಾರೆ. ಈ ವೇಳೆ, ಪ್ರಧಾನಿಯ ಮೇಲಿನ ದಾಳಿಗೆ ಆ ಕೋಟ್ಯಾಧಿಪತಿಯನ್ನು ಬೆಂಬಲಿಸುವ ರಾಜಕೀಯ ಸಂಘಟನೆಗಳಿಗೂ ಕೇಂದ್ರ ಸಚಿವರು ಎಚ್ಚರಿಕೆ ನೀಡಿದ್ದಾರೆ.

“ಬ್ಯಾಂಕ್ ಆಫ್ ಇಂಗ್ಲೆಂಡ್‌ನ್ನು ಮುರಿದವರು ಮತ್ತು ರಾಷ್ಟ್ರದಿಂದ ಆರ್ಥಿಕ ಯುದ್ಧ ಅಪರಾಧಿ ಎಂದು ಹೆಸರಿಸಲ್ಪಟ್ಟ ವ್ಯಕ್ತಿ ಈಗ ಭಾರತೀಯ ಪ್ರಜಾಪ್ರಭುತ್ವವನ್ನು ಮುರಿಯುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಅಂತಾರಾಷ್ಟ್ರೀಯ ವಾಣಿಜ್ಯೋದ್ಯಮಿ ಜಾರ್ಜ್ ಸೊರೊಸ್ ಅವರು ಪ್ರಜಾಪ್ರಭುತ್ವ ಪ್ರಕ್ರಿಯೆಗಳಲ್ಲಿ ಮಧ್ಯಪ್ರವೇಶಿಸುವ ತನ್ನ ದುರುದ್ದೇಶವನ್ನು ಘೋಷಿಸಿದ್ದಾರೆ” ಎಂದು ಕಿಡಿಕಾರಿದರು.

ದೇಶದ ಪ್ರಜಾಪ್ರಭುತ್ವವನ್ನು ಕೆಟ್ಟದಾಗಿ ತೋರಿಸಲು ಪ್ರಯತ್ನಿಸಿದ ಮತ್ತು ಭಾರತದ ಆರ್ಥಿಕತೆಗೆ ಆಕ್ರಮಣವನ್ನು ತಂದ ವ್ಯಕ್ತಿಯ ಉದ್ದೇಶವನ್ನು ಖಂಡಿಸಬೇಕು ಎಂದು ದೇಶದ ಜನರಲ್ಲಿ ಇರಾನಿ ಮನವಿ ಮಾಡಿದ್ದಾರೆ.

“ಅದಾನಿ ಹಗರಣವು ಭಾರತದಲ್ಲಿ ಪ್ರಜಾಸತ್ತಾತ್ಮಕ ಪುನರುಜ್ಜೀವನವನ್ನು ಉಂಟುಮಾಡುತ್ತದೆಯೇ ಎಂಬುದು ಸಂಪೂರ್ಣವಾಗಿ ಕಾಂಗ್ರೆಸ್, ವಿರೋಧ ಪಕ್ಷಗಳು ಮತ್ತು ನಮ್ಮ ಚುನಾವಣಾ ಪ್ರಕ್ರಿಯೆಯ ಮೇಲೆ ಅವಲಂಬಿತವಾಗಿದೆ. ಇದಕ್ಕೂ ಜಾರ್ಜ್ ಸೊರೊಸ್‌ಗೂ ಯಾವುದೇ ಸಂಬಂಧವಿಲ್ಲ. ನಮ್ಮ ನೆಹರೂವಿಯನ್ ಪರಂಪರೆಯಲ್ಲಿ ಸೊರೊಸ್‌ನಂತಹ ಜನರು ನಮ್ಮ ಚುನಾವಣಾ ಫಲಿತಾಂಶಗಳನ್ನು ನಿರ್ಧರಿಸಲು ಸಾಧ್ಯವಿಲ್ಲ” ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...