ದೆಹಲಿ ಚುನಾವಣೆಯ ಮತ ಎಣಿಕೆಯ ಮುನ್ನ, 70 ಸದಸ್ಯರ ವಿಧಾನಸಭೆಯಲ್ಲಿ “55 ಸ್ಥಾನಗಳನ್ನು” ಗೆದ್ದು ನಾವು ಅಧಿಕಾರಕ್ಕೆ ಬರಲಿದ್ದೇವೆ ಎಂಬ ವಿಶ್ವಾಸವನ್ನು ಬಿಜೆಪಿಯ ದೆಹಲಿ ಮುಖ್ಯಸ್ಥ ಮನೋಜ್ ತಿವಾರಿ ವ್ಯಕ್ತಪಡಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಾರ್ಟಿ ಗೆಲ್ಲುತ್ತದೆ ಎಂಬ ಎಕ್ಸಿಟ್ ಪೋಲ್ಗಳನ್ನು ತಿರಸ್ಕರಿಸಿದ ಮನೋಜ್ ತಿವಾರಿ, ಮೊನ್ನೆ “ನಾವು 48 ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ” ಎಂದಿದ್ದರು. ಇಂದು 55 ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.
“ನಾವು 55 ಸ್ಥಾನಗಳನ್ನು ಗೆದ್ದರೆ ಅಚ್ಚರಿಪಡಬೇಡಿ, ಎಲ್ಲರೂ ಜನಾದೇಶವನ್ನು ಒಪ್ಪಿಕೊಳ್ಳಬೇಕು ಮತ್ತು ಫಲಿತಾಂಶ ಏನೇ ಇರಲಿ ಎಲೆಕ್ಟ್ರಾನಿಕ್ ಮತದಾನ ಯಂತ್ರಗಳನ್ನು ಯಾರೂ ದೂಷಿಸಬಾರದು” ಎಂದು ಅವರು ಹೇಳಿದ್ದಾರೆ. ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಎಂದೂ ಸಹ ಹೇಳಿದ್ದಾರೆ.
ಆದರೆ ಮತ ಎಣಿಕೆಯ ಆರಂಭಿಕ ಟ್ರೆಂಡ್ಗಳಲ್ಲಿ ಆಮ್ ಆದ್ಮಿ ಪಕ್ಷವು ಈಗಾಗಲೇ 52 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವುದರಿಂದ ಮನೋಜ್ ತಿವಾರಿಯವರಿಗೆ ತೀವ್ರ ನಿರಾಸೆಯಾಗುವುದು ಖಚಿತವಾಗಿದೆ.