Homeಮುಖಪುಟಫ್ಯಾಸಿಸ್ಟ್‌‌ಗಳ ವಿರುದ್ಧ ಹೋರಾಡಲು ಒಟ್ಟಾಗಿ ಕೆಲಸ ಮಾಡುತ್ತೇವೆ: ಮಲ್ಲಿಕಾರ್ಜುನ ಖರ್ಗೆ

ಫ್ಯಾಸಿಸ್ಟ್‌‌ಗಳ ವಿರುದ್ಧ ಹೋರಾಡಲು ಒಟ್ಟಾಗಿ ಕೆಲಸ ಮಾಡುತ್ತೇವೆ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಹೋರಾಡಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಹೇಳಿದ್ದಾರೆ.

ಬಹುನಿರೀಕ್ಷಿತ ಕಾಂಗ್ರೆಸ್‌‌ ಅಧ್ಯಕ್ಷೀಯ ಚುನಾವಣೆಯಲ್ಲಿ ಕರ್ನಾಟಕದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ‌ ಅವರು ಭಾರಿ ಬಹುಮತಗಳಿಂದ ಆಯ್ಕೆಯಾಗಿದ್ದಾರೆ. ಈ ಮೂಲಕ ಸುಮಾರು 2 ದಶಕಗಳ ನಂತರ ಕಾಂಗ್ರೆಸ್‌ನ ಅಧ್ಯಕ್ಷೀಯ ಸ್ಥಾನವನ್ನು ಅಲಂಕರಿಸಿದ ಮೊದಲ ಗಾಂಧಿಯೇತರ ನಾಯಕರಾಗಿ ಹೊರಹೊಮ್ಮಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಫಲಿತಾಂಶ ಪ್ರಕಟವಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ ಅವರು,“ಚುನಾವಣೆಯಲ್ಲಿ ತಮ್ಮ ಎದುರಾಳಿಯಾಗಿದ್ದ ಶಶಿ ತರೂರ್ ಅವರೊಂದಿಗೆ ಒಟ್ಟಾಗಿ ಕೆಲಸ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾರ್ಮಿಕನ ಪುತ್ರರಾದ ಖರ್ಗೆ ಕಾಂಗ್ರೆಸ್‌ ಅಧ್ಯಕ್ಷ ಹುದ್ದೆಯವರೆಗೆ ಬೆಳೆದ ಯಶೋಗಾಥೆ

ಪ್ರಸ್ತುತ ಪಕ್ಷದ ಭಾರತ್ ಜೋಡೋ ಯಾತ್ರೆಯನ್ನು ಮುನ್ನಡೆಸುತ್ತಿರುವ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಮಲ್ಲಿಕಾರ್ಜುನ ಖರ್ಗೆ ಕೃತಜ್ಞತೆ ಸಲ್ಲಿಸಿದ್ದಾರೆ.

“ರಾಹುಲ್ ನನಗೆ ಕರೆ ಮಾಡಿ ನನಗೆ ಶುಭ ಹಾರೈಸಿದ್ದು, ಅವರು ಪಕ್ಷದ ಸೈನಿಕನಾಗಿ, ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು…ನಾನು ಸೋನಿಯಾ ಗಾಂಧಿ ಅವರಿಗೆ ಧನ್ಯವಾದ ಹೇಳುತ್ತೇನೆ. ಅವರ ನಾಯಕತ್ವದಲ್ಲಿ ನಾವು ಎರಡು ಬಾರಿ ಕೇಂದ್ರದಲ್ಲಿ ಅಧಿಕಾರ ಹಿಡಿದಿದ್ದೇವೆ. ಜೊತೆಗೆ ನಾವು ರಾಜ್ಯಗಳಲ್ಲಿಯೂ ಸಹ ಬಲಶಾಲಿಯಾಗಿದ್ದೆವು. ಪಕ್ಷದಲ್ಲಿ ಅವರ ಕೊಡುಗೆ ನೆನಪಿನಲ್ಲಿ ಉಳಿಯುವಂತಹದು” ಎಂದು ಖರ್ಗೆ ಹೇಳಿದ್ದಾರೆ.

ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ 7897 ಮತಗಳನ್ನು ಪಡದಿದ್ದು, ಅವರ ಪ್ರತಿಸ್ಪರ್ಧಿ ಶಶಿ ತರೂರ್‌ 1072 ಮತಗಳನ್ನು ಪಡೆದಿದ್ದಾರೆ. 416 ಮತಗಳು ತಿರಸ್ಕೃತಗೊಂಡಿದ್ದು, ಒಟ್ಟು 9385 ಮತಗಳು ಚಲಾವಣೆಯಾಗಿದ್ದವು.

ಇದನ್ನೂ ಓದಿ: 8ನೇ ತರಗತಿಯಲ್ಲಿ ಇದ್ದಾಗಿಂದ ನಾನು ಲೀಡರ್ರೇ ಆಗಿದ್ದೆ: ಮಲ್ಲಿಕಾರ್ಜುನ ಖರ್ಗೆಯವರ ಹಳೆಯ ಸಂದರ್ಶನ

24 ವರ್ಷಗಳ ನಂತರ ನಡೆದ ಪಕ್ಷದ ಮೊದಲ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಮಲ್ಲಿಕಾರ್ಜುನ ಖರ್ಗೆ ಅವರು ಹೊಸ ಕಾಂಗ್ರೆಸ್ ಅಧ್ಯಕ್ಷರಾಗಲಿದ್ದು, ದೀಪಾವಳಿ ನಂತರ ಪಕ್ಷದ ಅಧ್ಯಕ್ಷರಾಗಿ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಗೆ ಆರಂಭವಾದ ಮತ ಎಣಿಕೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಮುಕ್ತಾಯವಾಯಿತು.

2014 ಮತ್ತು 2019 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಪಕ್ಷದ ಸತತ ಎರಡು ಸೋಲಿನ ಜವಾಬ್ದಾರಿಯನ್ನು ಹೊತ್ತುಕೊಂಡು ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ನಂತರ, ಸೋನಿಯಾ ಗಾಂಧಿ ಅವರು ಪಕ್ಷವನ್ನು ತಾತ್ಕಾಲಿಕವಾಗಿ ಮುನ್ನಡೆಸಲು ಒಪ್ಪಿಕೊಂಡ ಮೂರು ವರ್ಷಗಳ ನಂತರ ಈ ಚುನಾವಣೆ ನಡೆದಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷರಾಗಿ ಖರ್ಗೆ: ಈ ಐದು ಅಂಶಗಳಿಗೆ ಪ್ರಾಮುಖ್ಯತೆ ಸಿಗುವ ಸಾಧ್ಯತೆ!

ಮಲ್ಲಿಕಾರ್ಜುನ ಖರ್ಗೆ ಯಾರು?

1942 ಜುಲೈ 21 ರಂದು ಕರ್ನಾಟಕ-ಮಹಾರಾಷ್ಟ್ರ ಗಡಿಯ ಬೀದರ್ ಜಿಲ್ಲೆಯ ವರವಟ್ಟಿ ಎಂಬ ಕುಗ್ರಾಮದಲ್ಲಿ ಅಸ್ಪೃಶ್ಯ ಮಹಾರ್ ಕುಟುಂಬದಲ್ಲಿ ಜನಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಹುಟ್ಟುತ್ತಲೇ ಗಲಭೆಯೊಂದರಲ್ಲಿ ತಮ್ಮ ತಾಯಿಯನ್ನು ಕಳೆದುಕೊಂಡಿದ್ದರು. ಕೂಲಿ ಮಾಡಿ ಕಾಲೇಜು ಮುಗಿಸಿದ ಖರ್ಗೆ ಅವರು ಕಾರ್ಖಾನೆಯಲ್ಲಿ ಕಾರ್ಮಿಕರ ಸಂಘಟನೆ ಕಟ್ಟಿದ ಸಾಮಾಜಿಕ ರಂಗಕ್ಕೆ ಪ್ರವೇಶ ಮಾಡಿದರು.

RPI ಪಕ್ಷದಿಂದ ಸ್ಥಳೀಯ ಸಂಸ್ಥೆ ಚುನಾವಣೆಗಳು ರಾಜಕೀಯದಲ್ಲಿ ಸಕ್ರಿಯವಾಗಿ, ನಂತರ ಕಾಂಗ್ರೆಸ್ ಸೇರಿದ ಅವರು ಒಂಬತ್ತು ಬಾರಿ ಶಾಸಕರು, ಎರಡು ಸಲ ಸಂಸದರಾಗಿ ಆಯ್ಕೆಯಾಗಿದ್ದಾರೆ. ಒಂದು ಬಾರಿ ಕೇಂದ್ರ ಸಚಿವರಾಗಿ, ಇದೀಗ ದೇಶದ ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್‌‌ನ ಅತ್ಯುನ್ನತ ನಾಯಕರಾಗಿ ಆಯ್ಕೆಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...