Homeಮುಖಪುಟಫ್ಯಾಸಿಸ್ಟ್‌‌ಗಳ ವಿರುದ್ಧ ಹೋರಾಡಲು ಒಟ್ಟಾಗಿ ಕೆಲಸ ಮಾಡುತ್ತೇವೆ: ಮಲ್ಲಿಕಾರ್ಜುನ ಖರ್ಗೆ

ಫ್ಯಾಸಿಸ್ಟ್‌‌ಗಳ ವಿರುದ್ಧ ಹೋರಾಡಲು ಒಟ್ಟಾಗಿ ಕೆಲಸ ಮಾಡುತ್ತೇವೆ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಹೋರಾಡಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಹೇಳಿದ್ದಾರೆ.

ಬಹುನಿರೀಕ್ಷಿತ ಕಾಂಗ್ರೆಸ್‌‌ ಅಧ್ಯಕ್ಷೀಯ ಚುನಾವಣೆಯಲ್ಲಿ ಕರ್ನಾಟಕದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ‌ ಅವರು ಭಾರಿ ಬಹುಮತಗಳಿಂದ ಆಯ್ಕೆಯಾಗಿದ್ದಾರೆ. ಈ ಮೂಲಕ ಸುಮಾರು 2 ದಶಕಗಳ ನಂತರ ಕಾಂಗ್ರೆಸ್‌ನ ಅಧ್ಯಕ್ಷೀಯ ಸ್ಥಾನವನ್ನು ಅಲಂಕರಿಸಿದ ಮೊದಲ ಗಾಂಧಿಯೇತರ ನಾಯಕರಾಗಿ ಹೊರಹೊಮ್ಮಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಫಲಿತಾಂಶ ಪ್ರಕಟವಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ ಅವರು,“ಚುನಾವಣೆಯಲ್ಲಿ ತಮ್ಮ ಎದುರಾಳಿಯಾಗಿದ್ದ ಶಶಿ ತರೂರ್ ಅವರೊಂದಿಗೆ ಒಟ್ಟಾಗಿ ಕೆಲಸ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾರ್ಮಿಕನ ಪುತ್ರರಾದ ಖರ್ಗೆ ಕಾಂಗ್ರೆಸ್‌ ಅಧ್ಯಕ್ಷ ಹುದ್ದೆಯವರೆಗೆ ಬೆಳೆದ ಯಶೋಗಾಥೆ

ಪ್ರಸ್ತುತ ಪಕ್ಷದ ಭಾರತ್ ಜೋಡೋ ಯಾತ್ರೆಯನ್ನು ಮುನ್ನಡೆಸುತ್ತಿರುವ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಮಲ್ಲಿಕಾರ್ಜುನ ಖರ್ಗೆ ಕೃತಜ್ಞತೆ ಸಲ್ಲಿಸಿದ್ದಾರೆ.

“ರಾಹುಲ್ ನನಗೆ ಕರೆ ಮಾಡಿ ನನಗೆ ಶುಭ ಹಾರೈಸಿದ್ದು, ಅವರು ಪಕ್ಷದ ಸೈನಿಕನಾಗಿ, ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು…ನಾನು ಸೋನಿಯಾ ಗಾಂಧಿ ಅವರಿಗೆ ಧನ್ಯವಾದ ಹೇಳುತ್ತೇನೆ. ಅವರ ನಾಯಕತ್ವದಲ್ಲಿ ನಾವು ಎರಡು ಬಾರಿ ಕೇಂದ್ರದಲ್ಲಿ ಅಧಿಕಾರ ಹಿಡಿದಿದ್ದೇವೆ. ಜೊತೆಗೆ ನಾವು ರಾಜ್ಯಗಳಲ್ಲಿಯೂ ಸಹ ಬಲಶಾಲಿಯಾಗಿದ್ದೆವು. ಪಕ್ಷದಲ್ಲಿ ಅವರ ಕೊಡುಗೆ ನೆನಪಿನಲ್ಲಿ ಉಳಿಯುವಂತಹದು” ಎಂದು ಖರ್ಗೆ ಹೇಳಿದ್ದಾರೆ.

ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ 7897 ಮತಗಳನ್ನು ಪಡದಿದ್ದು, ಅವರ ಪ್ರತಿಸ್ಪರ್ಧಿ ಶಶಿ ತರೂರ್‌ 1072 ಮತಗಳನ್ನು ಪಡೆದಿದ್ದಾರೆ. 416 ಮತಗಳು ತಿರಸ್ಕೃತಗೊಂಡಿದ್ದು, ಒಟ್ಟು 9385 ಮತಗಳು ಚಲಾವಣೆಯಾಗಿದ್ದವು.

ಇದನ್ನೂ ಓದಿ: 8ನೇ ತರಗತಿಯಲ್ಲಿ ಇದ್ದಾಗಿಂದ ನಾನು ಲೀಡರ್ರೇ ಆಗಿದ್ದೆ: ಮಲ್ಲಿಕಾರ್ಜುನ ಖರ್ಗೆಯವರ ಹಳೆಯ ಸಂದರ್ಶನ

24 ವರ್ಷಗಳ ನಂತರ ನಡೆದ ಪಕ್ಷದ ಮೊದಲ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಮಲ್ಲಿಕಾರ್ಜುನ ಖರ್ಗೆ ಅವರು ಹೊಸ ಕಾಂಗ್ರೆಸ್ ಅಧ್ಯಕ್ಷರಾಗಲಿದ್ದು, ದೀಪಾವಳಿ ನಂತರ ಪಕ್ಷದ ಅಧ್ಯಕ್ಷರಾಗಿ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಗೆ ಆರಂಭವಾದ ಮತ ಎಣಿಕೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಮುಕ್ತಾಯವಾಯಿತು.

2014 ಮತ್ತು 2019 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಪಕ್ಷದ ಸತತ ಎರಡು ಸೋಲಿನ ಜವಾಬ್ದಾರಿಯನ್ನು ಹೊತ್ತುಕೊಂಡು ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ನಂತರ, ಸೋನಿಯಾ ಗಾಂಧಿ ಅವರು ಪಕ್ಷವನ್ನು ತಾತ್ಕಾಲಿಕವಾಗಿ ಮುನ್ನಡೆಸಲು ಒಪ್ಪಿಕೊಂಡ ಮೂರು ವರ್ಷಗಳ ನಂತರ ಈ ಚುನಾವಣೆ ನಡೆದಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷರಾಗಿ ಖರ್ಗೆ: ಈ ಐದು ಅಂಶಗಳಿಗೆ ಪ್ರಾಮುಖ್ಯತೆ ಸಿಗುವ ಸಾಧ್ಯತೆ!

ಮಲ್ಲಿಕಾರ್ಜುನ ಖರ್ಗೆ ಯಾರು?

1942 ಜುಲೈ 21 ರಂದು ಕರ್ನಾಟಕ-ಮಹಾರಾಷ್ಟ್ರ ಗಡಿಯ ಬೀದರ್ ಜಿಲ್ಲೆಯ ವರವಟ್ಟಿ ಎಂಬ ಕುಗ್ರಾಮದಲ್ಲಿ ಅಸ್ಪೃಶ್ಯ ಮಹಾರ್ ಕುಟುಂಬದಲ್ಲಿ ಜನಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಹುಟ್ಟುತ್ತಲೇ ಗಲಭೆಯೊಂದರಲ್ಲಿ ತಮ್ಮ ತಾಯಿಯನ್ನು ಕಳೆದುಕೊಂಡಿದ್ದರು. ಕೂಲಿ ಮಾಡಿ ಕಾಲೇಜು ಮುಗಿಸಿದ ಖರ್ಗೆ ಅವರು ಕಾರ್ಖಾನೆಯಲ್ಲಿ ಕಾರ್ಮಿಕರ ಸಂಘಟನೆ ಕಟ್ಟಿದ ಸಾಮಾಜಿಕ ರಂಗಕ್ಕೆ ಪ್ರವೇಶ ಮಾಡಿದರು.

RPI ಪಕ್ಷದಿಂದ ಸ್ಥಳೀಯ ಸಂಸ್ಥೆ ಚುನಾವಣೆಗಳು ರಾಜಕೀಯದಲ್ಲಿ ಸಕ್ರಿಯವಾಗಿ, ನಂತರ ಕಾಂಗ್ರೆಸ್ ಸೇರಿದ ಅವರು ಒಂಬತ್ತು ಬಾರಿ ಶಾಸಕರು, ಎರಡು ಸಲ ಸಂಸದರಾಗಿ ಆಯ್ಕೆಯಾಗಿದ್ದಾರೆ. ಒಂದು ಬಾರಿ ಕೇಂದ್ರ ಸಚಿವರಾಗಿ, ಇದೀಗ ದೇಶದ ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್‌‌ನ ಅತ್ಯುನ್ನತ ನಾಯಕರಾಗಿ ಆಯ್ಕೆಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...