Homeಮುಖಪುಟನಮ್ಮ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾಗಲು ಬಿಡುವುದಿಲ್ಲ: ಮೂವರು ಮುಖ್ಯಮಂತ್ರಿಗಳ ಘೋಷಣೆ

ನಮ್ಮ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾಗಲು ಬಿಡುವುದಿಲ್ಲ: ಮೂವರು ಮುಖ್ಯಮಂತ್ರಿಗಳ ಘೋಷಣೆ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ ದೇಶದಲ್ಲಿ ಜಾರಿಯಾಗಬಹುದು ಆದರೆ ನಮ್ಮ ರಾಜ್ಯಗಳಲ್ಲಿ ಯಾವುದೇ ಕಾರಣಕ್ಕೂ ಈ “ಅಸಂವಿಧಾನಿಕ” ಕಾಯ್ದೆ ಜಾರಿಯಾಗಲು ಬಿಡುವುದಿಲ್ಲ ಎಂದು ಮೂರು ರಾಜ್ಯಗಳ ಸಿಎಂಗಳು ಘೋಷಿಸಿದ್ದಾರೆ.

ಪೌರತ್ವ ತಿದ್ದುಪಡಿ ಮಸೂದೆ ಬಗ್ಗೆ ಚರ್ಚೆ ಬಂದಾಗಲೇ ಪಶ್ಚಿಮ ಬಂಗಾಳದಲ್ಲಿ ಜಾರಿಗೆ ತರಲು ಅವಕಾಶ ನೀಡುವುದಿಲ್ಲ ಎಂದು ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದರು. ನನ್ನ ರಾಜ್ಯದಿಂದ ಒಬ್ಬರನ್ನು ಸಹ ದಾಖಲೆಗಳಿಲ್ಲದ ಕಾರಣಕ್ಕಾಗಿ ಹೊರದೂಡಲು ಬಿಡುವುದಿಲ್ಲ ಎಂದು ಸವಾಲು ಹಾಕಿದ್ದರು.

ಈಗ ಅದೇ ನಡೆಯನ್ನು ಕೇರಳ ಮತ್ತು ಪಂಜಾಬ್‌ನ ಮುಖ್ಯಮಂತ್ರಿಗಳು ಅನುಸರಿಸಲು ಮುಂದಾಗಿದ್ದಾರೆ. ದೇಶದ ತನ್ನ ಜಾತ್ಯತೀತ ರುಜುವಾತುಗಳನ್ನು ತೆಗೆದುಹಾಕಲು ಬಿಡುವುದಿಲ್ಲ ಎಂದು ಘೋಷಿಸಿದ್ದಾರೆ.

ಈ ಮಸೂದೆಯನ್ನು ಭಾರತದ ಜಾತ್ಯತೀತ ಮತ್ತು ಪ್ರಜಾಪ್ರಭುತ್ವದ ಸ್ವಭಾವದ ಮೇಲಿನ ದಾಳಿ ಎಂದು ಹೇಳಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಇಂತಹ “ಅಸಂವಿಧಾನಿಕ” ಕಾನೂನಿಗೆ ತಮ್ಮ ರಾಜ್ಯದಲ್ಲಿ ಸ್ಥಾನವಿಲ್ಲ ಎಂದಿದ್ದಾರೆ.

“ಭಾರತದ ಸಂವಿಧಾನವು ಎಲ್ಲಾ ಭಾರತೀಯರಿಗೆ ಅವರ ಧರ್ಮ, ಜಾತಿ, ಭಾಷೆ, ಸಂಸ್ಕೃತಿ ಲಿಂಗ ಅಥವಾ ವೃತ್ತಿಯನ್ನು ಲೆಕ್ಕಿಸದೆ ಪೌರತ್ವದ ಹಕ್ಕನ್ನು ಖಾತರಿಪಡಿಸುತ್ತದೆ. ಪೌರತ್ವ ತಿದ್ದುಪಡಿ ಮಸೂದೆಯಿಂದ ಈ ಹಕ್ಕನ್ನು ಅನೂರ್ಜಿತಗೊಳಿಸಲಾಗುತ್ತಿದೆ. ಪೌರತ್ವವನ್ನು ನಿರ್ಧರಿಸುವ ಕ್ರಮ ಧರ್ಮದ ಆಧಾರವು ಸಂವಿಧಾನವನ್ನು ತಿರಸ್ಕರಿಸುತ್ತದೆ “ಎಂದು ಅವರು ಹೇಳಿದ್ದಾರೆ.

ಪಂಜಾಬ್ ವಿಧಾನಸಭೆಯಲ್ಲಿ “ಅಸಂವಿಧಾನಿಕ” ಮಸೂದೆಯನ್ನು ರಾಜ್ಯದಲ್ಲಿ ಜಾರಿಗೆ ತರುವುದನ್ನು ನಿರ್ಬಂಧಿಸುತ್ತದೆ ಎಂದು ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಹೇಳಿದ್ದಾರೆ. “ಈ ಕಾನೂನು ಬಹಳ ವಿಭಜಕ ಸ್ವಭಾವದ್ದಾಗಿದೆ. ದೇಶದ ಜನರನ್ನು ಧಾರ್ಮಿಕ ದೃಷ್ಟಿಯಿಂದ ವಿಭಜಿಸಲು ಪ್ರಯತ್ನಿಸುವ ಯಾವುದೇ ಶಾಸನವು ಕಾನೂನುಬಾಹಿರ ಮತ್ತು ಅನೈತಿಕವಾಗಿದೆ” ಎಂದು ಅವರು ಹೇಳಿದರು.

ಪೌರತ್ವ ತಿದ್ದುಪಡಿ ಮಸೂದೆಯನ್ನು ಸಂಸತ್ತು ಬುಧವಾರ ಅಂಗೀಕರಿಸುವ ಮೊದಲೇ ಮಮತಾ ಬ್ಯಾನರ್ಜಿ ವಿರೋಧ ವ್ಯಕ್ತಪಡಿಸಿದ್ದರು. “ಈ ಮಸೂದೆಗೆ ಹೆದರಬೇಡಿ. ನಾವು ನಿಮ್ಮೊಂದಿಗಿದ್ದೇವೆ, ಮತ್ತು ನಾವು ಇಲ್ಲಿ ಇರುವವರೆಗೂ ಯಾರೂ ನಿಮ್ಮ ಮೇಲೆ ಏನನ್ನೂ ಹೇರಲು ಸಾಧ್ಯವಿಲ್ಲ” ಎಂದು ಅವರು ಖರಗ್‌ಪುರದಲ್ಲಿ ನಡೆದ ಸಭೆಯಲ್ಲಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಸೇನಾಧಿಕಾರಿಗಳು ಶಾಶ್ವತ ಆಯೋಗಕ್ಕೆ ಅರ್ಹರು: ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಮಂಗಳವಾರ, ಅನಿಯಂತ್ರಿತ ಮೌಲ್ಯಮಾಪನದಿಂದಾಗಿ ಶಾಶ್ವತ ಆಯೋಗವನ್ನು ನಿರಾಕರಿಸಲಾದ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮಹಿಳಾ ಕಿರು ಸೇವಾ ಆಯೋಗ (ಎಸ್‌ಎಸ್‌ಸಿ) ಅಧಿಕಾರಿಗಳು ಪೂರ್ಣ ಪಿಂಚಣಿ ಸೌಲಭ್ಯಗಳಿಗೆ ಅರ್ಹರು...

ಚುನಾವಣಾ ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ ‌’ಸೀಲ್’ ; ʼಸಿಬ್ಬಂದಿ ದೋಷʼ ಎಂದ ಆಯೋಗ!

ಕೇರಳ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಸೋಮವಾರ (ಮಾ.23) ಬಿಜೆಪಿ ರಾಜ್ಯ ಘಟಕದ ಸೀಲ್ ಹೊಂದಿರುವ ಚುನಾವಣಾ ಆಯೋಗದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ....

ಗಂಗಾ ದೋಣಿಯಲ್ಲಿ ಇಫ್ತಾರ್ ಕೂಟ: ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿ ನ್ಯಾಯಾಲಯ

ಗಂಗಾ ನದಿಯ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿಯ ನ್ಯಾಯಾಲಯವು, ಅವರ ಮೇಲಿನ ಅಪರಾಧಗಳು ಗಂಭೀರ ಮತ್ತು ಜಾಮೀನು ರಹಿತವಾಗಿವೆ ಎಂದು ಹೇಳಿದೆ....

100ಕ್ಕೂ ಹೆಚ್ಚು ಸೈನಿಕರಿದ್ದ ಕೊಲಂಬಿಯಾ ವಾಯುಪಡೆಯ ವಿಮಾನ ಪತನ : 66 ಮಂದಿ ಸಾವು

ದಕ್ಷಿಣ ಕೊಲಂಬಿಯಾದ ಪುತುಮಾಯೊ ಪ್ರಾಂತ್ಯದ ಪ್ಯೂರ್ಟೊ ಲೆಗುಯಿಜಾಮೊ ಎಂಬಲ್ಲಿ ಸೋಮವಾರ (ಮಾರ್ಚ್ 23) ಬೆಳಿಗ್ಗೆ ವಾಯುಪಡೆಯ ವಿಮಾನವೊಂದು ಪತನಗೊಂಡಿದ್ದು, ದುರಂತದಲ್ಲಿ ಈವರೆಗೆ ಕನಿಷ್ಠ 66 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ಯೂರ್ಟೊ...

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...