Homeಕರ್ನಾಟಕದೇವನಹಳ್ಳಿ ಚಲೋ! ಕಾರ್ಯಕ್ರಮ ಮಾಡಿ ಮನೆಗೆ ಹೋಗುವುದಿಲ್ಲ, ಸರಕಾರ ನ್ಯಾಯ ಕೊಡುವವರೆಗೂ ಇಲ್ಲೇ ಇರುತ್ತೇವೆ: ಕಾರಳ್ಳಿ...

ದೇವನಹಳ್ಳಿ ಚಲೋ! ಕಾರ್ಯಕ್ರಮ ಮಾಡಿ ಮನೆಗೆ ಹೋಗುವುದಿಲ್ಲ, ಸರಕಾರ ನ್ಯಾಯ ಕೊಡುವವರೆಗೂ ಇಲ್ಲೇ ಇರುತ್ತೇವೆ: ಕಾರಳ್ಳಿ ಶ್ರೀನಿವಾಸ್

- Advertisement -
- Advertisement -

ದೇವನಹಳ್ಳಿಯು ಟಿಪ್ಪು ಸುಲ್ತಾನ್ ಹಾಗೂ ಕೆಂಪೇಗೌಡರ ಜನ್ಮಸ್ಥಳ. ಈ ಇಬ್ಬರೂ ರೈತರ ಬದುಕಿಗಾಗಿ, ಈ ನೆಲಕ್ಕಾಗಿ ತಮ್ಮ ಜೀವನ ಮುಡುಪಾಗಿಟ್ಟವರು. ಇಂತಹ ಸ್ಥಳದ ಫಲವತ್ತಾದ ಭೂಮಿಯನ್ನು ಸರ್ಕಾರ ಕಬಳಿಸುವುದನ್ನು ವಿರೋಧಿಸಿ, ಕಳೆದ ಮೂರೂವರೆ ವರ್ಷದಿಂದ ಅನೇಕ ರೀತಿಯ ಹೋರಾಟವನ್ನು ನಾವು ಮಾಡಿದ್ದೇವೆ ಎಂದು ಕಾರಳ್ಳಿ ಶ್ರೀನಿವಾಸ್ ಹೇಳಿದರು.

ಅವರು ಇಂದು ದೇವನಹಳ್ಳಿ ಚಲೋ ಕಾರ್ಯಕ್ರಮದಲ್ಲಿ ಮಾತನಾಡಿ, ಇಲ್ಲಿನ ಈ ಚಳವಳಿಯನ್ನು ಹೋರಾಟಗಾರರು ಕಟ್ಟಿದ್ದಲ್ಲ, ಇದು ಇಲ್ಲಿನ ಸಂತ್ರಸ್ತ ರೈತರು ಕಟ್ಟಿದ ಹೋರಾಟವಾಗಿದೆ. ಈ ಹೋರಾಟವನ್ನು ಎಲ್ಲ ಜಾತಿಯ ಜನರು ಸೇರಿ ಕಟ್ಟಿದ್ದಾರೆ. ಇದೊಂದು ರಾಜ್ಯದಲ್ಲಿ ಮಾದರಿ ಹೋರಾಟವಾಗಿದೆ ಎಂದರು.

ಇಡೀ ದೇಶದಲ್ಲಿ ನಮಗೆ ಹೋರಾಟದ ಅನೇಕ ಮಾದರಿಗಳಿವೆ. ಇದು ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರು ಕಟ್ಟಿದ ಮತ್ತೊಂದು ಮಾದರಿ ಹೋರಾಟ. ಈ ಹೋರಾಟಕ್ಕೆ ದೇಶದ ಅನೇಕ ನಾಯಕರು, ಸಾಹಿತಿಗಳು, ಕಲಾವಿದರು ನಮಗೆ ಬೆಂಬಲ ನೀಡಿದ್ದಾರೆ ಎಂದು ಸಭೆಯಲ್ಲಿ ಸ್ಮರಿಸಿದರು.

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಾವು ಅನೇಕರು ಬಂಧನಕ್ಕೊಳಗಾಗಿದ್ದು ಮಾತ್ರವಲ್ಲದೆ ಪೊಲೀಸರಿಂದ ಲಾಠಿ ಬೂಟಿನ ಒದೆತ ತಿಂದಿದ್ದೇವೆ. ಅ ಸಂದರ್ಭದಲ್ಲಿ ನಾವು ಅನೇಕರು ಕೈಮುರಿದುಕೊಂಡು, ಕಣ್ಣುಕಳೆದುಕೊಂಡಾಗ ಆಗಿನ ಕಾಂಗ್ರೆಸ್ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಫ್ರೀಡಂಪಾರ್ಕಿನಲ್ಲಿ ನಮಗೆ ಬೆಂಬಲ ನೀಡಿ ಮಾತನಾಡಿದ್ದರು ಎಂದು ಹೇಳಿದರು.

ಈಗ ಸರ್ಕಾರ ಬದಲಾಗಿದೆ. ಈ ಕಾಂಗ್ರೆಸ್‌ ಸರಕಾರದ ಅನೇಕ ಮಂತ್ರಿಗಳು ಬಿಜೆಪಿ ಸರಕಾರವಿದ್ದಾಗ ನಾವು ನಡೆಸುತ್ತಿದ್ದ ಧರಣಿ ಸ್ಥಳಕ್ಕೆ ಅನೇಕ ಬಾರಿ ಬಂದಿದ್ದಾರೆ. ಪ್ರತಿ ಸಲ ನಾನು ರೈತರಪರ, ಭೂಮಿ ಸ್ವಾಧೀನ ಮಾಡಿಕೊಳ್ಳುವುದಕ್ಕೆ ಬಿಡುವುದಿಲ್ಲ ಎಂದು ಇಂದಿಗೂ ಹೇಳುತ್ತಿರುವ ಎಂಬಿ ಪಾಟೀಲ್ ಅವರು ಈಗ ರೈತರನ್ನು ಕಂಡರೆ ಸಿಡಿಮಿಡಿಗೊಳ್ಳುತ್ತಿದ್ದಾರೆ. ಇದು ವಿಪರ್ಯಾಸ ಎಂದು ಅವರು ತಿಳಿಸಿದರು.

ಬಿಜೆಪಿ ನೇರವಾಗಿ ನಮಗೆ ಚೂರಿ ಹಾಕಿದರೆ, ಕಾಂಗ್ರೆಸ್ ಹಿಂದಿನಿಂದ ಚೂರಿ ಹಾಕುತ್ತಿದೆ. ಸರ್ಕಾರ ಬದಲಾದರೂ ಅವರ ನೀತಿಗಳ ಮಾತ್ರ ಬದಲಾಗಿಲ್ಲ. ಇದೇ ಸರ್ಕಾರ ಈಗ 10 ಹಳ್ಳಿಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಿದೆ. ಹಲವು ಸುತ್ತಿನ ಸಭೆಗಳಲ್ಲಿ ಮುಂದಿನ ಸಭೆಗಳಲ್ಲಿ ತೀರ್ಮಾನ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದರು. ಪ್ರತಿನಿತ್ಯ ಸಮಾಜವಾದ, ದಲಿತರಪರ, ರೈತರ ಪರವಾದ ಮಾತುಗಳನ್ನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ನಾವು ಇದನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

13 ಹಳ್ಳಿಗಳ ಜನಗಳ ಕೈಯಲ್ಲಿದ್ದ ಹೋರಾಟವನ್ನು ಇಡೀ ರಾಜ್ಯದ ಜನಗಳ ಹೆಗಲಿಗೆ ಹಾಕುತ್ತಿದ್ದೇವೆ. ಈ ಹೋರಾಟ ಸೋತರೆ ಈ ನಾಡಿನ ದಲಿತ, ಮಹಿಳಾ, ಕಾರ್ಮಿಕ ಹಾಗೂ ದುಡಿಯುವ ಜನರ ಸೋಲು. ಆದರೆ ನಮಗೆ ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ. ಈ ದೇಶದ ಜನಚಳವಳಿಗೆ ಸೋಲು ಇಲ್ಲ. ಆಳುವ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟಗಾರರು ಹೋರಾಟ ಮಾಡುತ್ತಲೇ ಬಂದಿದ್ದಾರೆ. ಇಲ್ಲಿಗೆ ಆಗಮಿಸಿರುವ ರಾಜ್ಯದ ಜನರು ಹೋರಾಟವನ್ನು ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡಿದರು.

ನಾವು ಇಲ್ಲಿ ಕಾರ್ಯಕ್ರಮ ಮಾಡಿ ಮನೆಗೆ ಹೋಗುವುದಿಲ್ಲ, ಸರ್ಕಾರ ನಮಗೆ ನ್ಯಾಯ ಕೊಡುವ ತೀರ್ಮಾನಕ್ಕೆ ಬರುವವರೆಗೂ ಇಲ್ಲೇ ಇರುತ್ತೇವೆ. ನಾವು ಊರಲ್ಲಿ ಇರಬೇಕು ಅಥವಾ ಜೈಲಿನಲ್ಲಿ ಇರಬೇಕು. ನಿರ್ಧಾರ ಸರ್ಕಾರಕ್ಕೆ ಬಿಟ್ಟದ್ದು ಎಂದರು.

Emergency @50 | ಪ್ರಜಾಪ್ರಭುತ್ವ ಇತಿಹಾಸದ ಅತ್ಯಂತ ಕರಾಳ ಅಧ್ಯಾಯ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...