Homeಕರ್ನಾಟಕದೇವನಹಳ್ಳಿ ಚಲೋ! ಕಾರ್ಯಕ್ರಮ ಮಾಡಿ ಮನೆಗೆ ಹೋಗುವುದಿಲ್ಲ, ಸರಕಾರ ನ್ಯಾಯ ಕೊಡುವವರೆಗೂ ಇಲ್ಲೇ ಇರುತ್ತೇವೆ: ಕಾರಳ್ಳಿ...

ದೇವನಹಳ್ಳಿ ಚಲೋ! ಕಾರ್ಯಕ್ರಮ ಮಾಡಿ ಮನೆಗೆ ಹೋಗುವುದಿಲ್ಲ, ಸರಕಾರ ನ್ಯಾಯ ಕೊಡುವವರೆಗೂ ಇಲ್ಲೇ ಇರುತ್ತೇವೆ: ಕಾರಳ್ಳಿ ಶ್ರೀನಿವಾಸ್

- Advertisement -
- Advertisement -

ದೇವನಹಳ್ಳಿಯು ಟಿಪ್ಪು ಸುಲ್ತಾನ್ ಹಾಗೂ ಕೆಂಪೇಗೌಡರ ಜನ್ಮಸ್ಥಳ. ಈ ಇಬ್ಬರೂ ರೈತರ ಬದುಕಿಗಾಗಿ, ಈ ನೆಲಕ್ಕಾಗಿ ತಮ್ಮ ಜೀವನ ಮುಡುಪಾಗಿಟ್ಟವರು. ಇಂತಹ ಸ್ಥಳದ ಫಲವತ್ತಾದ ಭೂಮಿಯನ್ನು ಸರ್ಕಾರ ಕಬಳಿಸುವುದನ್ನು ವಿರೋಧಿಸಿ, ಕಳೆದ ಮೂರೂವರೆ ವರ್ಷದಿಂದ ಅನೇಕ ರೀತಿಯ ಹೋರಾಟವನ್ನು ನಾವು ಮಾಡಿದ್ದೇವೆ ಎಂದು ಕಾರಳ್ಳಿ ಶ್ರೀನಿವಾಸ್ ಹೇಳಿದರು.

ಅವರು ಇಂದು ದೇವನಹಳ್ಳಿ ಚಲೋ ಕಾರ್ಯಕ್ರಮದಲ್ಲಿ ಮಾತನಾಡಿ, ಇಲ್ಲಿನ ಈ ಚಳವಳಿಯನ್ನು ಹೋರಾಟಗಾರರು ಕಟ್ಟಿದ್ದಲ್ಲ, ಇದು ಇಲ್ಲಿನ ಸಂತ್ರಸ್ತ ರೈತರು ಕಟ್ಟಿದ ಹೋರಾಟವಾಗಿದೆ. ಈ ಹೋರಾಟವನ್ನು ಎಲ್ಲ ಜಾತಿಯ ಜನರು ಸೇರಿ ಕಟ್ಟಿದ್ದಾರೆ. ಇದೊಂದು ರಾಜ್ಯದಲ್ಲಿ ಮಾದರಿ ಹೋರಾಟವಾಗಿದೆ ಎಂದರು.

ಇಡೀ ದೇಶದಲ್ಲಿ ನಮಗೆ ಹೋರಾಟದ ಅನೇಕ ಮಾದರಿಗಳಿವೆ. ಇದು ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರು ಕಟ್ಟಿದ ಮತ್ತೊಂದು ಮಾದರಿ ಹೋರಾಟ. ಈ ಹೋರಾಟಕ್ಕೆ ದೇಶದ ಅನೇಕ ನಾಯಕರು, ಸಾಹಿತಿಗಳು, ಕಲಾವಿದರು ನಮಗೆ ಬೆಂಬಲ ನೀಡಿದ್ದಾರೆ ಎಂದು ಸಭೆಯಲ್ಲಿ ಸ್ಮರಿಸಿದರು.

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಾವು ಅನೇಕರು ಬಂಧನಕ್ಕೊಳಗಾಗಿದ್ದು ಮಾತ್ರವಲ್ಲದೆ ಪೊಲೀಸರಿಂದ ಲಾಠಿ ಬೂಟಿನ ಒದೆತ ತಿಂದಿದ್ದೇವೆ. ಅ ಸಂದರ್ಭದಲ್ಲಿ ನಾವು ಅನೇಕರು ಕೈಮುರಿದುಕೊಂಡು, ಕಣ್ಣುಕಳೆದುಕೊಂಡಾಗ ಆಗಿನ ಕಾಂಗ್ರೆಸ್ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಫ್ರೀಡಂಪಾರ್ಕಿನಲ್ಲಿ ನಮಗೆ ಬೆಂಬಲ ನೀಡಿ ಮಾತನಾಡಿದ್ದರು ಎಂದು ಹೇಳಿದರು.

ಈಗ ಸರ್ಕಾರ ಬದಲಾಗಿದೆ. ಈ ಕಾಂಗ್ರೆಸ್‌ ಸರಕಾರದ ಅನೇಕ ಮಂತ್ರಿಗಳು ಬಿಜೆಪಿ ಸರಕಾರವಿದ್ದಾಗ ನಾವು ನಡೆಸುತ್ತಿದ್ದ ಧರಣಿ ಸ್ಥಳಕ್ಕೆ ಅನೇಕ ಬಾರಿ ಬಂದಿದ್ದಾರೆ. ಪ್ರತಿ ಸಲ ನಾನು ರೈತರಪರ, ಭೂಮಿ ಸ್ವಾಧೀನ ಮಾಡಿಕೊಳ್ಳುವುದಕ್ಕೆ ಬಿಡುವುದಿಲ್ಲ ಎಂದು ಇಂದಿಗೂ ಹೇಳುತ್ತಿರುವ ಎಂಬಿ ಪಾಟೀಲ್ ಅವರು ಈಗ ರೈತರನ್ನು ಕಂಡರೆ ಸಿಡಿಮಿಡಿಗೊಳ್ಳುತ್ತಿದ್ದಾರೆ. ಇದು ವಿಪರ್ಯಾಸ ಎಂದು ಅವರು ತಿಳಿಸಿದರು.

ಬಿಜೆಪಿ ನೇರವಾಗಿ ನಮಗೆ ಚೂರಿ ಹಾಕಿದರೆ, ಕಾಂಗ್ರೆಸ್ ಹಿಂದಿನಿಂದ ಚೂರಿ ಹಾಕುತ್ತಿದೆ. ಸರ್ಕಾರ ಬದಲಾದರೂ ಅವರ ನೀತಿಗಳ ಮಾತ್ರ ಬದಲಾಗಿಲ್ಲ. ಇದೇ ಸರ್ಕಾರ ಈಗ 10 ಹಳ್ಳಿಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಿದೆ. ಹಲವು ಸುತ್ತಿನ ಸಭೆಗಳಲ್ಲಿ ಮುಂದಿನ ಸಭೆಗಳಲ್ಲಿ ತೀರ್ಮಾನ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದರು. ಪ್ರತಿನಿತ್ಯ ಸಮಾಜವಾದ, ದಲಿತರಪರ, ರೈತರ ಪರವಾದ ಮಾತುಗಳನ್ನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ನಾವು ಇದನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

13 ಹಳ್ಳಿಗಳ ಜನಗಳ ಕೈಯಲ್ಲಿದ್ದ ಹೋರಾಟವನ್ನು ಇಡೀ ರಾಜ್ಯದ ಜನಗಳ ಹೆಗಲಿಗೆ ಹಾಕುತ್ತಿದ್ದೇವೆ. ಈ ಹೋರಾಟ ಸೋತರೆ ಈ ನಾಡಿನ ದಲಿತ, ಮಹಿಳಾ, ಕಾರ್ಮಿಕ ಹಾಗೂ ದುಡಿಯುವ ಜನರ ಸೋಲು. ಆದರೆ ನಮಗೆ ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ. ಈ ದೇಶದ ಜನಚಳವಳಿಗೆ ಸೋಲು ಇಲ್ಲ. ಆಳುವ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟಗಾರರು ಹೋರಾಟ ಮಾಡುತ್ತಲೇ ಬಂದಿದ್ದಾರೆ. ಇಲ್ಲಿಗೆ ಆಗಮಿಸಿರುವ ರಾಜ್ಯದ ಜನರು ಹೋರಾಟವನ್ನು ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡಿದರು.

ನಾವು ಇಲ್ಲಿ ಕಾರ್ಯಕ್ರಮ ಮಾಡಿ ಮನೆಗೆ ಹೋಗುವುದಿಲ್ಲ, ಸರ್ಕಾರ ನಮಗೆ ನ್ಯಾಯ ಕೊಡುವ ತೀರ್ಮಾನಕ್ಕೆ ಬರುವವರೆಗೂ ಇಲ್ಲೇ ಇರುತ್ತೇವೆ. ನಾವು ಊರಲ್ಲಿ ಇರಬೇಕು ಅಥವಾ ಜೈಲಿನಲ್ಲಿ ಇರಬೇಕು. ನಿರ್ಧಾರ ಸರ್ಕಾರಕ್ಕೆ ಬಿಟ್ಟದ್ದು ಎಂದರು.

Emergency @50 | ಪ್ರಜಾಪ್ರಭುತ್ವ ಇತಿಹಾಸದ ಅತ್ಯಂತ ಕರಾಳ ಅಧ್ಯಾಯ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...