Homeಮುಖಪುಟನಾವು ಟ್ರಂಪ್ ಹುಚ್ಚ ಎನ್ನುವುದಿಲ್ಲ; ರಾಹುಲ್ ಗಾಂಧಿ ಬಗ್ಗೆ ಮಾತನಾಡಲು ಒಬಾಮ ಯಾರು?- ಶಿವಸೇನೆ ಪ್ರಶ್ನೆ

ನಾವು ಟ್ರಂಪ್ ಹುಚ್ಚ ಎನ್ನುವುದಿಲ್ಲ; ರಾಹುಲ್ ಗಾಂಧಿ ಬಗ್ಗೆ ಮಾತನಾಡಲು ಒಬಾಮ ಯಾರು?- ಶಿವಸೇನೆ ಪ್ರಶ್ನೆ

ತನ್ನ ಪುಸ್ತಕದಲ್ಲಿ ರಾಹುಲ್ ಗಾಂಧಿ ಟೀಕಿಸಿದ್ದ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ವಿರುದ್ಧ ಮಹಾರಾಷ್ಟ್ರದ ಕಾಂಗ್ರೆಸ್ ಮಿತ್ರಪಕ್ಷ ಶಿವಸೇನೆ ಕಿಡಿಕಾರಿದೆ.

- Advertisement -
- Advertisement -

ತನ್ನ ಪುಸ್ತಕದಲ್ಲಿ ರಾಹುಲ್ ಗಾಂಧಿ ಟೀಕಿಸಿದ್ದ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ವಿರುದ್ಧ ಮಹಾರಾಷ್ಟ್ರದ ಕಾಂಗ್ರೆಸ್ ಮಿತ್ರಪಕ್ಷ ಶಿವಸೇನೆ ಕಿಡಿಕಾರಿದೆ. ’ವಿದೇಶಿ ರಾಜಕಾರಣಿಗಳು ಭಾರತೀಯ ನಾಯಕರ ಬಗ್ಗೆ ಅಭಿಪ್ರಾಯಗಳನ್ನು ನೀಡಬಾರದು. ನಾವು ಟ್ರಂಪ್ ಅವರನ್ನು ಹುಚ್ಚ ಎಂದು ಹೇಳುವುಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ, “ರಾಹುಲ್ ಗಾಂಧಿ ಅಸ್ಥಿರ ಮತ್ತು ಅಪಕ್ವ ಗುಣ ಹೊಂದಿದ್ದು, ಶಿಕ್ಷಕನನ್ನು ಮೆಚ್ಚಿಸಲು ಉತ್ಸುಕನಾಗಿರುವ ಆದರೆ ಯಾವುದೇ ವಿಷಯದಲ್ಲಿ ಕರಗತ ಹೊಂದದ ಹಾಗೂ ಉತ್ಸಾಹವಿಲ್ಲದ ವಿದ್ಯಾರ್ಥಿಯಂತೆ ಕಾಣುತ್ತಾರೆ” ಎಂದು, ತಮ್ಮ ಆತ್ಮಚರಿತ್ರೆಯಲ್ಲಿ ಬರೆದಿದ್ದಾರೆಂದು ನಿನ್ನೆ ವರದಿಯಾಗಿತ್ತು.

ಇದನ್ನೂ ಓದಿ: ರಾಹುಲ್ ಗಾಂಧಿಯದ್ದು ಅಸ್ಥಿರ ಮತ್ತು ಅಪಕ್ವ ಗುಣ: ಆತ್ಮಚರಿತ್ರೆಯಲ್ಲಿ ಒಬಾಮ

ಒಬಾಮ ಅವರ ಬರಹಕ್ಕೆ ತೀವ್ರ ವಾಗ್ದಾಳಿ ನಡೆಸಿರುವ ಶಿವಸೇನೆಯ ರಾಜ್ಯಸಭಾ ಸದಸ್ಯ ಸಂಜಯ್ ರಾವತ್, “ವಿದೇಶಿ ರಾಜಕಾರಣಿಗಳು ಭಾರತೀಯ ರಾಜಕೀಯ ನಾಯಕರ ಬಗ್ಗೆ ಇಂತಹ ಅಭಿಪ್ರಾಯಗಳನ್ನು ನೀಡಬಾರದು, ಇದರ ನಂತರ ಆಂತರಿಕ ರಾಜಕೀಯ ಚಚೆಗಳು ತುಂಬಾ ಅಸಹ್ಯಕರವಾಗುತ್ತದೆ. ನಾವು ಟ್ರಂಪ್ ಹುಚ್ಚ ಎಂದು ಹೇಳುವುದಿಲ್ಲ. ಈ ರಾಷ್ಟ್ರದ ಬಗ್ಗೆ ಒಬಾಮಾಗೆ ಎಷ್ಟು ಗೊತ್ತು” ಎಂದು ಹೇಳಿದ್ದಾರೆ.

ಬರಾಕ್ ಒಬಾಮ ಅವರ ಆತ್ಮಚರಿತ್ರೆ ‘ಎ ಪ್ರಾಮಿಸ್ಡ್ ಲ್ಯಾಂಡ್’ ಕುರಿತು ನ್ಯೂಯಾರ್ಕ್ ಟೈಮ್ಸ್‌ನಲ್ಲಿ ಮಾಡಿದ ವಿಮರ್ಶೆಯಲ್ಲಿ ಈ ಕುರಿತು ಉಲ್ಲೇಖಿಸಲಾಗಿದೆ. ಪುಸ್ತಕದಲ್ಲಿ ಸೋನಿಯಾ ಗಾಂಧಿ, ಮನಮೋಹನ್ ಸಿಂಗ್ ಮತ್ತು ವ್ಲಾಡಿಮಿರ್ ಪುಟಿನ್ ಸೇರಿದಂತೆ ಹಲವಾರು ಅಮೆರಿಕ ಮತ್ತು ವಿಶ್ವ ನಾಯಕರ ಕುರಿತು ಅನಿಸಿಕೆಗಳಿವೆ ಎನ್ನಲಾಗಿದೆ.


ಇದನ್ನೂ ಓದಿ: ಟ್ರಂಪ್ ನಿರ್ಗಮನದ ದಿನ ಎಣಿಸಲೆಂದೇ ಒಂದು ವೆಬ್‌ಸೈಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....