Homeಮುಖಪುಟದೇವಸ್ಥಾನದಲ್ಲಿ ಚುಂಬನ ದೃಶ್ಯವಿರುವ ವೆಬ್ ಸೀರೀಸ್ - #BoycottNetflix ಎಂದ ಭಕ್ತರು!

ದೇವಸ್ಥಾನದಲ್ಲಿ ಚುಂಬನ ದೃಶ್ಯವಿರುವ ವೆಬ್ ಸೀರೀಸ್ – #BoycottNetflix ಎಂದ ಭಕ್ತರು!

ದೇವಸ್ಥಾನದೊಳಗೆ ನಡೆದ ಆಸೀಫಾ ಎನ್ನುವ ಬಾಲಕಿಯ ಮೇಲಿನ ಅತ್ಯಾಚಾರವನ್ನು ಸಮರ್ಥಿಸಿಕೊಂಡವರೇ ಇಂದು ದೇವಸ್ಥಾನದಲ್ಲಿನ ಒಂದು ಮುತ್ತಿನ ದೃಶ್ಯಕ್ಕಾಗಿ ನೆಟ್‌ಫ್ಲಿಕ್ಸ್‌ ಅನ್ನು ಬಾಯ್ಕಾಟ್ ಮಾಡಿ ಎನ್ನುತ್ತಿದ್ದಾರೆ

- Advertisement -
- Advertisement -

ಟ್ವಿಟ್ಟರ್‌ನಲ್ಲಿ “ಬಾಯ್ಕಾಟ್ ನೆಟ್‌ಫ್ಲಿಕ್ಸ್”‌ ಟ್ರೆಂಡಿಂಗ್ ಆಗುತ್ತಿದ್ದು, ‘ಎ ಸೂಟಬಲ್ ಬಾಯ್’ ಎನ್ನುವ ವೆಬ್ ಸೀರೀಸ್‌ನ ದೃಶ್ಯವೊಂದರಲ್ಲಿ ದೇವಸ್ಥಾನದ ಆವರಣದಲ್ಲಿ ಯುವಕ-ಯುವತಿ ಚುಂಬಿಸುತ್ತಿರುವ ವೀಡಿಯೋವನ್ನು ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ.

ಈ ಚುಂಬನ ದೃಶ್ಯ ದೇವಸ್ಥಾನದಲ್ಲಿ ನಡೆಯುವಂತೆ ತೋರಿಸಿರುವುದಕ್ಕೆ ಸಿಡಿದೆದ್ದ ‘ಭಕ್ತರು’ ಈಗ ನೆಟ್‌ಫ್ಲಿಕ್ಸ್‌ ಅನ್ನೇ ನಿಷೇಧಿಸಬೇಕು ಎಂದು ಆಗ್ರಹಿಸಿದ್ದು, ಈ ವೆಬ್‌ ಸೀರೀಸ್‌ನಲ್ಲಿ ಮುಸ್ಲಿಂ ಯುವಕ ಹಿಂದೂ ಯುವತಿಗೆ ಚುಂಬಿಸುತ್ತಿರುವುದರಿಂದ ಇದು ‘ಲವ್ ಜಿಹಾದ್’ ಎನ್ನುವ ಆರೋಪವನ್ನೂ ಮಾಡುತ್ತಿದ್ದಾರೆ.

ಇಂದು ಟ್ವಿಟ್ಟರ್‌ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನದಲ್ಲಿರುವ #BoycottNetflix ಎನ್ನುವ ಹ್ಯಾಶ್‌ಟ್ಯಾಗ್ ಅನ್ನು ಬಳಸಿ ಸುಮಾರು 84 ಸಾವಿರಕ್ಕೂ ಹೆಚ್ಚು ಬಳಕೆದಾರರು ಟ್ವೀಟ್ ಮಾಡಿದ್ದಾರೆ. ಈ ವಿಷಯವನ್ನಿಟ್ಟುಕೊಂಡು ಪರ-ವಿರೋಧದ ಚರ್ಚೆಯನ್ನೂ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ದೇವಸ್ಥಾನದಲ್ಲಿ ಚುಂಬಿಸುವಂತಹ ಅಶ್ಲೀಲ ದೃಶ್ಯವನ್ನು ಈ ವೆಬ್‌ ಸೀರೀಸ್‌ನಲ್ಲಿಟ್ಟಿರುವುದು ಭಾರತದ ಸಂಸ್ಕೃತಿಗೆ ಧಕ್ಕೆಯುಂಟುಮಾಡಿದೆ. ಅದೂ ಅಲ್ಲದೇ ಇದು ಲವ್ ಜಿಹಾದ್‌ ಅನ್ನು ಬೆಂಬಲಿಸುತ್ತದೆ ಎಂದು ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಜೊತೆಯಲ್ಲಿಯೇ ಇನ್ನೂ ಅನೇಕರು ಈ ವೆಬ್ ಸೀರೀಸ್‌ ಅನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದು, ‘ದೇವಾಲಯಗಳಲ್ಲಿನ ಶಿಲ್ಪಗಳಲ್ಲಿಯೇ ಸಂಭೋಗದ ದೃಶ್ಯಗಳನ್ನು ಕೆತ್ತಿರುತ್ತಾರೆ. ಹಾಗಾಗದರೆ ಆ ದೇವಸ್ಥಾನಗಳನ್ನೂ ನಿಷೇಧಿಸಬೇಕು’ ಎಂದು ತಿರುಗೇಟು ನೀಡುತ್ತಿದ್ದಾರೆ.

ಹರಿಯಾಣ ಬಿಜೆಪಿಯ ಸಾಮಾಜಿಕ ಮಾಧ್ಯಮ ವಿಭಾಗದ ಅರುಣ್ ಯಾದವ್ ಟ್ವೀಟ್ ಮಾಡಿ, “#BoycottNetflix ಅನ್ನು ಟ್ರೆಂಡಿಂಗ್ ಮಾಡಿದ್ದಕ್ಕೆ ಧನ್ಯವಾದಗಳು. ಇದನ್ನು ಜಾಗತಿಕಗೊಳಿಸೋಣ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: “ದಿ ಕಪಿಲ್‌ ಶರ್ಮಾ ಶೋ” ಬಾಯ್ಕಾಟ್: ಸಿಡಿದೆದ್ದ ಅರ್ನಾಬ್ ಅಭಿಮಾನಿಗಳು?

ಇದನ್ನೂ ಓದಿ: ಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

ತಾರಾನಾಥ್ ಪೂಜಾರಿ ಎಂಬುವವರು ಕೆಲವು ವೆಬ್‌ಸೀರೀಸ್‌ಗಳ ಪೋಸ್ಟರ್‌ಗಳನ್ನು ಟ್ವೀಟ್ ಮಾಡಿ, “ಇವುಗಳ ಮುಖ್ಯ ಅಜೆಂಡಾ ಹಿಂದೂಗಳು ಮತ್ತು ಹಿಂದೂ ದೇವತೆಗಳನ್ನು ಅವಮಾನಿಸುವುದೇ ಆಗಿದೆ. ಅಪರಾದಿಗಳನ್ನು ಶಿಕ್ಷಿಸಬೇಕು” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮತ್ತೊಂದು ಧೋಕ್‍ಲಾಂ ಆಗಲಿದೆಯೇ ಲಡಾಖ್‍ನ ಗಾಲ್ವನ್ ಕಣಿವೆ?

ಶಿವಾನಿ ಪಾಂಡೆ ಎನ್ನುವವರು ಟ್ವೀಟ್ ಮಾಡಿ, “ಇಂತಹ ನಾಚಿಕೆಯ ದೃಶ್ಯವನ್ನು ತೋರಿಸಲು ನೆಟ್‌ಫ್ಲಿಕ್ಸ್‌ಗೆ ಎಷ್ಟು ಧೈರ್ಯ? ದೇವಸ್ಥಾನಗಳು ಇದಕ್ಕಾಗಿಯೇ ಇದೆಯೇನು? ನಾಚಿಕೆಗೇಡು! ಈ ದೃಶ್ಯವನ್ನು ಈ ಕೂಡಲೇ ಡಿಲೀಟ್ ಮಾಡಿ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಪ್ಯಾಲಿಸ್ಟೀನಿಯಲ್ಲಿ ನಡೆಯುತ್ತಿರುವುದೇನು? ನಿಮಗಿದು ತಿಳಿದಿರಬೇಕಾದ ವಿಷಯ

ಇನ್ನು ಈ ಅಭಿಯಾನವನ್ನು ವಿರೋಧಿಸಿ ಸಾವಿರಾರು ಜನ ಟ್ವೀಟ್ ಮಾಡಿದ್ದಾರೆ.

ಟ್ರೋಲ್ ಮಾಫಿಯಾ ಎನ್ನುವ ಖಾತೆಯಿಂದ, “ದೇವಸ್ಥಾನದೊಳಗೆ ನಡೆದ ಆಸೀಫಾ ಎನ್ನುವ ಬಾಲಕಿಯ ಮೇಲಿನ ಅತ್ಯಾಚಾರವನ್ನು ಸಮರ್ಥಿಸಿಕೊಂಡವರೇ ಇಂದು ದೇವಸ್ಥಾನದಲ್ಲಿನ ಒಂದು ಮುತ್ತಿನ ದೃಶ್ಯಕ್ಕಾಗಿ ನೆಟ್‌ಫ್ಲಿಕ್ಸ್‌ ಅನ್ನು ಬಾಯ್ಕಾಟ್ ಮಾಡಿ ಎನ್ನುತ್ತಿದ್ದಾರೆ” ಎಂದು ಬರೆಯಲಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಬಾಲಕಿಗೆ ಕಿರುಕುಳ ನೀಡಿ, ಟೆರೇಸ್‌ನಿಂದ ದೂಡಿದ ದುರ್ಷ್ಕಮಿಗಳು

ಮತ್ತೊಬ್ಬ ಟ್ವಿಟ್ಟರ್‌ ಬಳಕೆದಾರರು, “ಭಕ್ತರು ದೇವಸ್ಥಾನದೊಳಗಿನ ಮುತ್ತಿನ ದೃಶ್ಯಕ್ಕಾಗಿ #BoycottNetflix ಎಂದು ಟ್ರೆಂಡಿಂಗ್ ಮಾಡುತ್ತಿದ್ದಾರೆ. ಆದರೆ ದೇವಸ್ಥಾನದೊಳಗೆ ಇಂತಹವುಗಳಿದ್ದರೆ ಅವರಿಗೆ ತೊಂದರೆಯಿಲ್ಲ” ಎಂದು ಭಾರತೀಯ ದೇವಸ್ಥಾನದಲ್ಲಿರುವ ಸಂಭೊಗ ಶಿಲ್ಪವೊಂದನ್ನು ಹಂಚಿಕೊಂಡಿದ್ದಾರೆ.

ಹೀಗೆ ಸಾವಿರಾರು ಜನರು ಈ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ಬಾಯ್ಕಾಟ್ ಎನ್ನುವುದು ಮನೆಮಾತಾಗಿಬಿಟ್ಟಿದೆ. ತಮಗೆ ಮತ್ತು ತಮ್ಮ ಸಿದ್ದಾಂತಕ್ಕೆ ಹೊಂದದ ಯಾವುದನ್ನೇ ಆದರೂ ಅದನ್ನು ಬಾಯ್ಕಾಟ್ ಎಂದು ಟ್ರೆಂಡಿಂಗ್ ಮಾಡಿಬಿಡುತ್ತಾರೆ. ಆದರೆ ಕೆಲವು ಸಂದರ್ಭಗಳಲ್ಲಿ ಇಂತಹ ಕ್ರಮಗಳಿಂದ ಅವು ಬ್ಯಾನ್ ಆಗುವ ಬದಲು ಸಾಕಷ್ಟು ಪ್ರಚಾರ ಪೆಡೆಯುವುದರೊಟ್ಟಿಗೆ, ಸೂಪರ್-ಡೂಪರ್ ಹಿಟ್ ಆಗಿಬಿಡುತ್ತವೆ.


ಇದನ್ನೂ ಓದಿ: ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...