Homeಮುಖಪುಟದೇವಸ್ಥಾನದಲ್ಲಿ ಚುಂಬನ ದೃಶ್ಯವಿರುವ ವೆಬ್ ಸೀರೀಸ್ - #BoycottNetflix ಎಂದ ಭಕ್ತರು!

ದೇವಸ್ಥಾನದಲ್ಲಿ ಚುಂಬನ ದೃಶ್ಯವಿರುವ ವೆಬ್ ಸೀರೀಸ್ – #BoycottNetflix ಎಂದ ಭಕ್ತರು!

ದೇವಸ್ಥಾನದೊಳಗೆ ನಡೆದ ಆಸೀಫಾ ಎನ್ನುವ ಬಾಲಕಿಯ ಮೇಲಿನ ಅತ್ಯಾಚಾರವನ್ನು ಸಮರ್ಥಿಸಿಕೊಂಡವರೇ ಇಂದು ದೇವಸ್ಥಾನದಲ್ಲಿನ ಒಂದು ಮುತ್ತಿನ ದೃಶ್ಯಕ್ಕಾಗಿ ನೆಟ್‌ಫ್ಲಿಕ್ಸ್‌ ಅನ್ನು ಬಾಯ್ಕಾಟ್ ಮಾಡಿ ಎನ್ನುತ್ತಿದ್ದಾರೆ

- Advertisement -
- Advertisement -

ಟ್ವಿಟ್ಟರ್‌ನಲ್ಲಿ “ಬಾಯ್ಕಾಟ್ ನೆಟ್‌ಫ್ಲಿಕ್ಸ್”‌ ಟ್ರೆಂಡಿಂಗ್ ಆಗುತ್ತಿದ್ದು, ‘ಎ ಸೂಟಬಲ್ ಬಾಯ್’ ಎನ್ನುವ ವೆಬ್ ಸೀರೀಸ್‌ನ ದೃಶ್ಯವೊಂದರಲ್ಲಿ ದೇವಸ್ಥಾನದ ಆವರಣದಲ್ಲಿ ಯುವಕ-ಯುವತಿ ಚುಂಬಿಸುತ್ತಿರುವ ವೀಡಿಯೋವನ್ನು ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ.

ಈ ಚುಂಬನ ದೃಶ್ಯ ದೇವಸ್ಥಾನದಲ್ಲಿ ನಡೆಯುವಂತೆ ತೋರಿಸಿರುವುದಕ್ಕೆ ಸಿಡಿದೆದ್ದ ‘ಭಕ್ತರು’ ಈಗ ನೆಟ್‌ಫ್ಲಿಕ್ಸ್‌ ಅನ್ನೇ ನಿಷೇಧಿಸಬೇಕು ಎಂದು ಆಗ್ರಹಿಸಿದ್ದು, ಈ ವೆಬ್‌ ಸೀರೀಸ್‌ನಲ್ಲಿ ಮುಸ್ಲಿಂ ಯುವಕ ಹಿಂದೂ ಯುವತಿಗೆ ಚುಂಬಿಸುತ್ತಿರುವುದರಿಂದ ಇದು ‘ಲವ್ ಜಿಹಾದ್’ ಎನ್ನುವ ಆರೋಪವನ್ನೂ ಮಾಡುತ್ತಿದ್ದಾರೆ.

ಇಂದು ಟ್ವಿಟ್ಟರ್‌ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನದಲ್ಲಿರುವ #BoycottNetflix ಎನ್ನುವ ಹ್ಯಾಶ್‌ಟ್ಯಾಗ್ ಅನ್ನು ಬಳಸಿ ಸುಮಾರು 84 ಸಾವಿರಕ್ಕೂ ಹೆಚ್ಚು ಬಳಕೆದಾರರು ಟ್ವೀಟ್ ಮಾಡಿದ್ದಾರೆ. ಈ ವಿಷಯವನ್ನಿಟ್ಟುಕೊಂಡು ಪರ-ವಿರೋಧದ ಚರ್ಚೆಯನ್ನೂ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ದೇವಸ್ಥಾನದಲ್ಲಿ ಚುಂಬಿಸುವಂತಹ ಅಶ್ಲೀಲ ದೃಶ್ಯವನ್ನು ಈ ವೆಬ್‌ ಸೀರೀಸ್‌ನಲ್ಲಿಟ್ಟಿರುವುದು ಭಾರತದ ಸಂಸ್ಕೃತಿಗೆ ಧಕ್ಕೆಯುಂಟುಮಾಡಿದೆ. ಅದೂ ಅಲ್ಲದೇ ಇದು ಲವ್ ಜಿಹಾದ್‌ ಅನ್ನು ಬೆಂಬಲಿಸುತ್ತದೆ ಎಂದು ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಜೊತೆಯಲ್ಲಿಯೇ ಇನ್ನೂ ಅನೇಕರು ಈ ವೆಬ್ ಸೀರೀಸ್‌ ಅನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದು, ‘ದೇವಾಲಯಗಳಲ್ಲಿನ ಶಿಲ್ಪಗಳಲ್ಲಿಯೇ ಸಂಭೋಗದ ದೃಶ್ಯಗಳನ್ನು ಕೆತ್ತಿರುತ್ತಾರೆ. ಹಾಗಾಗದರೆ ಆ ದೇವಸ್ಥಾನಗಳನ್ನೂ ನಿಷೇಧಿಸಬೇಕು’ ಎಂದು ತಿರುಗೇಟು ನೀಡುತ್ತಿದ್ದಾರೆ.

ಹರಿಯಾಣ ಬಿಜೆಪಿಯ ಸಾಮಾಜಿಕ ಮಾಧ್ಯಮ ವಿಭಾಗದ ಅರುಣ್ ಯಾದವ್ ಟ್ವೀಟ್ ಮಾಡಿ, “#BoycottNetflix ಅನ್ನು ಟ್ರೆಂಡಿಂಗ್ ಮಾಡಿದ್ದಕ್ಕೆ ಧನ್ಯವಾದಗಳು. ಇದನ್ನು ಜಾಗತಿಕಗೊಳಿಸೋಣ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: “ದಿ ಕಪಿಲ್‌ ಶರ್ಮಾ ಶೋ” ಬಾಯ್ಕಾಟ್: ಸಿಡಿದೆದ್ದ ಅರ್ನಾಬ್ ಅಭಿಮಾನಿಗಳು?

ಇದನ್ನೂ ಓದಿ: ಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

ತಾರಾನಾಥ್ ಪೂಜಾರಿ ಎಂಬುವವರು ಕೆಲವು ವೆಬ್‌ಸೀರೀಸ್‌ಗಳ ಪೋಸ್ಟರ್‌ಗಳನ್ನು ಟ್ವೀಟ್ ಮಾಡಿ, “ಇವುಗಳ ಮುಖ್ಯ ಅಜೆಂಡಾ ಹಿಂದೂಗಳು ಮತ್ತು ಹಿಂದೂ ದೇವತೆಗಳನ್ನು ಅವಮಾನಿಸುವುದೇ ಆಗಿದೆ. ಅಪರಾದಿಗಳನ್ನು ಶಿಕ್ಷಿಸಬೇಕು” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮತ್ತೊಂದು ಧೋಕ್‍ಲಾಂ ಆಗಲಿದೆಯೇ ಲಡಾಖ್‍ನ ಗಾಲ್ವನ್ ಕಣಿವೆ?

ಶಿವಾನಿ ಪಾಂಡೆ ಎನ್ನುವವರು ಟ್ವೀಟ್ ಮಾಡಿ, “ಇಂತಹ ನಾಚಿಕೆಯ ದೃಶ್ಯವನ್ನು ತೋರಿಸಲು ನೆಟ್‌ಫ್ಲಿಕ್ಸ್‌ಗೆ ಎಷ್ಟು ಧೈರ್ಯ? ದೇವಸ್ಥಾನಗಳು ಇದಕ್ಕಾಗಿಯೇ ಇದೆಯೇನು? ನಾಚಿಕೆಗೇಡು! ಈ ದೃಶ್ಯವನ್ನು ಈ ಕೂಡಲೇ ಡಿಲೀಟ್ ಮಾಡಿ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಪ್ಯಾಲಿಸ್ಟೀನಿಯಲ್ಲಿ ನಡೆಯುತ್ತಿರುವುದೇನು? ನಿಮಗಿದು ತಿಳಿದಿರಬೇಕಾದ ವಿಷಯ

ಇನ್ನು ಈ ಅಭಿಯಾನವನ್ನು ವಿರೋಧಿಸಿ ಸಾವಿರಾರು ಜನ ಟ್ವೀಟ್ ಮಾಡಿದ್ದಾರೆ.

ಟ್ರೋಲ್ ಮಾಫಿಯಾ ಎನ್ನುವ ಖಾತೆಯಿಂದ, “ದೇವಸ್ಥಾನದೊಳಗೆ ನಡೆದ ಆಸೀಫಾ ಎನ್ನುವ ಬಾಲಕಿಯ ಮೇಲಿನ ಅತ್ಯಾಚಾರವನ್ನು ಸಮರ್ಥಿಸಿಕೊಂಡವರೇ ಇಂದು ದೇವಸ್ಥಾನದಲ್ಲಿನ ಒಂದು ಮುತ್ತಿನ ದೃಶ್ಯಕ್ಕಾಗಿ ನೆಟ್‌ಫ್ಲಿಕ್ಸ್‌ ಅನ್ನು ಬಾಯ್ಕಾಟ್ ಮಾಡಿ ಎನ್ನುತ್ತಿದ್ದಾರೆ” ಎಂದು ಬರೆಯಲಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಬಾಲಕಿಗೆ ಕಿರುಕುಳ ನೀಡಿ, ಟೆರೇಸ್‌ನಿಂದ ದೂಡಿದ ದುರ್ಷ್ಕಮಿಗಳು

ಮತ್ತೊಬ್ಬ ಟ್ವಿಟ್ಟರ್‌ ಬಳಕೆದಾರರು, “ಭಕ್ತರು ದೇವಸ್ಥಾನದೊಳಗಿನ ಮುತ್ತಿನ ದೃಶ್ಯಕ್ಕಾಗಿ #BoycottNetflix ಎಂದು ಟ್ರೆಂಡಿಂಗ್ ಮಾಡುತ್ತಿದ್ದಾರೆ. ಆದರೆ ದೇವಸ್ಥಾನದೊಳಗೆ ಇಂತಹವುಗಳಿದ್ದರೆ ಅವರಿಗೆ ತೊಂದರೆಯಿಲ್ಲ” ಎಂದು ಭಾರತೀಯ ದೇವಸ್ಥಾನದಲ್ಲಿರುವ ಸಂಭೊಗ ಶಿಲ್ಪವೊಂದನ್ನು ಹಂಚಿಕೊಂಡಿದ್ದಾರೆ.

ಹೀಗೆ ಸಾವಿರಾರು ಜನರು ಈ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ಬಾಯ್ಕಾಟ್ ಎನ್ನುವುದು ಮನೆಮಾತಾಗಿಬಿಟ್ಟಿದೆ. ತಮಗೆ ಮತ್ತು ತಮ್ಮ ಸಿದ್ದಾಂತಕ್ಕೆ ಹೊಂದದ ಯಾವುದನ್ನೇ ಆದರೂ ಅದನ್ನು ಬಾಯ್ಕಾಟ್ ಎಂದು ಟ್ರೆಂಡಿಂಗ್ ಮಾಡಿಬಿಡುತ್ತಾರೆ. ಆದರೆ ಕೆಲವು ಸಂದರ್ಭಗಳಲ್ಲಿ ಇಂತಹ ಕ್ರಮಗಳಿಂದ ಅವು ಬ್ಯಾನ್ ಆಗುವ ಬದಲು ಸಾಕಷ್ಟು ಪ್ರಚಾರ ಪೆಡೆಯುವುದರೊಟ್ಟಿಗೆ, ಸೂಪರ್-ಡೂಪರ್ ಹಿಟ್ ಆಗಿಬಿಡುತ್ತವೆ.


ಇದನ್ನೂ ಓದಿ: ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...