Homeಮುಖಪುಟದೇವಸ್ಥಾನದಲ್ಲಿ ಚುಂಬನ ದೃಶ್ಯವಿರುವ ವೆಬ್ ಸೀರೀಸ್ - #BoycottNetflix ಎಂದ ಭಕ್ತರು!

ದೇವಸ್ಥಾನದಲ್ಲಿ ಚುಂಬನ ದೃಶ್ಯವಿರುವ ವೆಬ್ ಸೀರೀಸ್ – #BoycottNetflix ಎಂದ ಭಕ್ತರು!

ದೇವಸ್ಥಾನದೊಳಗೆ ನಡೆದ ಆಸೀಫಾ ಎನ್ನುವ ಬಾಲಕಿಯ ಮೇಲಿನ ಅತ್ಯಾಚಾರವನ್ನು ಸಮರ್ಥಿಸಿಕೊಂಡವರೇ ಇಂದು ದೇವಸ್ಥಾನದಲ್ಲಿನ ಒಂದು ಮುತ್ತಿನ ದೃಶ್ಯಕ್ಕಾಗಿ ನೆಟ್‌ಫ್ಲಿಕ್ಸ್‌ ಅನ್ನು ಬಾಯ್ಕಾಟ್ ಮಾಡಿ ಎನ್ನುತ್ತಿದ್ದಾರೆ

- Advertisement -
- Advertisement -

ಟ್ವಿಟ್ಟರ್‌ನಲ್ಲಿ “ಬಾಯ್ಕಾಟ್ ನೆಟ್‌ಫ್ಲಿಕ್ಸ್”‌ ಟ್ರೆಂಡಿಂಗ್ ಆಗುತ್ತಿದ್ದು, ‘ಎ ಸೂಟಬಲ್ ಬಾಯ್’ ಎನ್ನುವ ವೆಬ್ ಸೀರೀಸ್‌ನ ದೃಶ್ಯವೊಂದರಲ್ಲಿ ದೇವಸ್ಥಾನದ ಆವರಣದಲ್ಲಿ ಯುವಕ-ಯುವತಿ ಚುಂಬಿಸುತ್ತಿರುವ ವೀಡಿಯೋವನ್ನು ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ.

ಈ ಚುಂಬನ ದೃಶ್ಯ ದೇವಸ್ಥಾನದಲ್ಲಿ ನಡೆಯುವಂತೆ ತೋರಿಸಿರುವುದಕ್ಕೆ ಸಿಡಿದೆದ್ದ ‘ಭಕ್ತರು’ ಈಗ ನೆಟ್‌ಫ್ಲಿಕ್ಸ್‌ ಅನ್ನೇ ನಿಷೇಧಿಸಬೇಕು ಎಂದು ಆಗ್ರಹಿಸಿದ್ದು, ಈ ವೆಬ್‌ ಸೀರೀಸ್‌ನಲ್ಲಿ ಮುಸ್ಲಿಂ ಯುವಕ ಹಿಂದೂ ಯುವತಿಗೆ ಚುಂಬಿಸುತ್ತಿರುವುದರಿಂದ ಇದು ‘ಲವ್ ಜಿಹಾದ್’ ಎನ್ನುವ ಆರೋಪವನ್ನೂ ಮಾಡುತ್ತಿದ್ದಾರೆ.

ಇಂದು ಟ್ವಿಟ್ಟರ್‌ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನದಲ್ಲಿರುವ #BoycottNetflix ಎನ್ನುವ ಹ್ಯಾಶ್‌ಟ್ಯಾಗ್ ಅನ್ನು ಬಳಸಿ ಸುಮಾರು 84 ಸಾವಿರಕ್ಕೂ ಹೆಚ್ಚು ಬಳಕೆದಾರರು ಟ್ವೀಟ್ ಮಾಡಿದ್ದಾರೆ. ಈ ವಿಷಯವನ್ನಿಟ್ಟುಕೊಂಡು ಪರ-ವಿರೋಧದ ಚರ್ಚೆಯನ್ನೂ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ದೇವಸ್ಥಾನದಲ್ಲಿ ಚುಂಬಿಸುವಂತಹ ಅಶ್ಲೀಲ ದೃಶ್ಯವನ್ನು ಈ ವೆಬ್‌ ಸೀರೀಸ್‌ನಲ್ಲಿಟ್ಟಿರುವುದು ಭಾರತದ ಸಂಸ್ಕೃತಿಗೆ ಧಕ್ಕೆಯುಂಟುಮಾಡಿದೆ. ಅದೂ ಅಲ್ಲದೇ ಇದು ಲವ್ ಜಿಹಾದ್‌ ಅನ್ನು ಬೆಂಬಲಿಸುತ್ತದೆ ಎಂದು ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಜೊತೆಯಲ್ಲಿಯೇ ಇನ್ನೂ ಅನೇಕರು ಈ ವೆಬ್ ಸೀರೀಸ್‌ ಅನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದು, ‘ದೇವಾಲಯಗಳಲ್ಲಿನ ಶಿಲ್ಪಗಳಲ್ಲಿಯೇ ಸಂಭೋಗದ ದೃಶ್ಯಗಳನ್ನು ಕೆತ್ತಿರುತ್ತಾರೆ. ಹಾಗಾಗದರೆ ಆ ದೇವಸ್ಥಾನಗಳನ್ನೂ ನಿಷೇಧಿಸಬೇಕು’ ಎಂದು ತಿರುಗೇಟು ನೀಡುತ್ತಿದ್ದಾರೆ.

ಹರಿಯಾಣ ಬಿಜೆಪಿಯ ಸಾಮಾಜಿಕ ಮಾಧ್ಯಮ ವಿಭಾಗದ ಅರುಣ್ ಯಾದವ್ ಟ್ವೀಟ್ ಮಾಡಿ, “#BoycottNetflix ಅನ್ನು ಟ್ರೆಂಡಿಂಗ್ ಮಾಡಿದ್ದಕ್ಕೆ ಧನ್ಯವಾದಗಳು. ಇದನ್ನು ಜಾಗತಿಕಗೊಳಿಸೋಣ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: “ದಿ ಕಪಿಲ್‌ ಶರ್ಮಾ ಶೋ” ಬಾಯ್ಕಾಟ್: ಸಿಡಿದೆದ್ದ ಅರ್ನಾಬ್ ಅಭಿಮಾನಿಗಳು?

ಇದನ್ನೂ ಓದಿ: ಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

ತಾರಾನಾಥ್ ಪೂಜಾರಿ ಎಂಬುವವರು ಕೆಲವು ವೆಬ್‌ಸೀರೀಸ್‌ಗಳ ಪೋಸ್ಟರ್‌ಗಳನ್ನು ಟ್ವೀಟ್ ಮಾಡಿ, “ಇವುಗಳ ಮುಖ್ಯ ಅಜೆಂಡಾ ಹಿಂದೂಗಳು ಮತ್ತು ಹಿಂದೂ ದೇವತೆಗಳನ್ನು ಅವಮಾನಿಸುವುದೇ ಆಗಿದೆ. ಅಪರಾದಿಗಳನ್ನು ಶಿಕ್ಷಿಸಬೇಕು” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮತ್ತೊಂದು ಧೋಕ್‍ಲಾಂ ಆಗಲಿದೆಯೇ ಲಡಾಖ್‍ನ ಗಾಲ್ವನ್ ಕಣಿವೆ?

ಶಿವಾನಿ ಪಾಂಡೆ ಎನ್ನುವವರು ಟ್ವೀಟ್ ಮಾಡಿ, “ಇಂತಹ ನಾಚಿಕೆಯ ದೃಶ್ಯವನ್ನು ತೋರಿಸಲು ನೆಟ್‌ಫ್ಲಿಕ್ಸ್‌ಗೆ ಎಷ್ಟು ಧೈರ್ಯ? ದೇವಸ್ಥಾನಗಳು ಇದಕ್ಕಾಗಿಯೇ ಇದೆಯೇನು? ನಾಚಿಕೆಗೇಡು! ಈ ದೃಶ್ಯವನ್ನು ಈ ಕೂಡಲೇ ಡಿಲೀಟ್ ಮಾಡಿ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಪ್ಯಾಲಿಸ್ಟೀನಿಯಲ್ಲಿ ನಡೆಯುತ್ತಿರುವುದೇನು? ನಿಮಗಿದು ತಿಳಿದಿರಬೇಕಾದ ವಿಷಯ

ಇನ್ನು ಈ ಅಭಿಯಾನವನ್ನು ವಿರೋಧಿಸಿ ಸಾವಿರಾರು ಜನ ಟ್ವೀಟ್ ಮಾಡಿದ್ದಾರೆ.

ಟ್ರೋಲ್ ಮಾಫಿಯಾ ಎನ್ನುವ ಖಾತೆಯಿಂದ, “ದೇವಸ್ಥಾನದೊಳಗೆ ನಡೆದ ಆಸೀಫಾ ಎನ್ನುವ ಬಾಲಕಿಯ ಮೇಲಿನ ಅತ್ಯಾಚಾರವನ್ನು ಸಮರ್ಥಿಸಿಕೊಂಡವರೇ ಇಂದು ದೇವಸ್ಥಾನದಲ್ಲಿನ ಒಂದು ಮುತ್ತಿನ ದೃಶ್ಯಕ್ಕಾಗಿ ನೆಟ್‌ಫ್ಲಿಕ್ಸ್‌ ಅನ್ನು ಬಾಯ್ಕಾಟ್ ಮಾಡಿ ಎನ್ನುತ್ತಿದ್ದಾರೆ” ಎಂದು ಬರೆಯಲಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಬಾಲಕಿಗೆ ಕಿರುಕುಳ ನೀಡಿ, ಟೆರೇಸ್‌ನಿಂದ ದೂಡಿದ ದುರ್ಷ್ಕಮಿಗಳು

ಮತ್ತೊಬ್ಬ ಟ್ವಿಟ್ಟರ್‌ ಬಳಕೆದಾರರು, “ಭಕ್ತರು ದೇವಸ್ಥಾನದೊಳಗಿನ ಮುತ್ತಿನ ದೃಶ್ಯಕ್ಕಾಗಿ #BoycottNetflix ಎಂದು ಟ್ರೆಂಡಿಂಗ್ ಮಾಡುತ್ತಿದ್ದಾರೆ. ಆದರೆ ದೇವಸ್ಥಾನದೊಳಗೆ ಇಂತಹವುಗಳಿದ್ದರೆ ಅವರಿಗೆ ತೊಂದರೆಯಿಲ್ಲ” ಎಂದು ಭಾರತೀಯ ದೇವಸ್ಥಾನದಲ್ಲಿರುವ ಸಂಭೊಗ ಶಿಲ್ಪವೊಂದನ್ನು ಹಂಚಿಕೊಂಡಿದ್ದಾರೆ.

ಹೀಗೆ ಸಾವಿರಾರು ಜನರು ಈ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ಬಾಯ್ಕಾಟ್ ಎನ್ನುವುದು ಮನೆಮಾತಾಗಿಬಿಟ್ಟಿದೆ. ತಮಗೆ ಮತ್ತು ತಮ್ಮ ಸಿದ್ದಾಂತಕ್ಕೆ ಹೊಂದದ ಯಾವುದನ್ನೇ ಆದರೂ ಅದನ್ನು ಬಾಯ್ಕಾಟ್ ಎಂದು ಟ್ರೆಂಡಿಂಗ್ ಮಾಡಿಬಿಡುತ್ತಾರೆ. ಆದರೆ ಕೆಲವು ಸಂದರ್ಭಗಳಲ್ಲಿ ಇಂತಹ ಕ್ರಮಗಳಿಂದ ಅವು ಬ್ಯಾನ್ ಆಗುವ ಬದಲು ಸಾಕಷ್ಟು ಪ್ರಚಾರ ಪೆಡೆಯುವುದರೊಟ್ಟಿಗೆ, ಸೂಪರ್-ಡೂಪರ್ ಹಿಟ್ ಆಗಿಬಿಡುತ್ತವೆ.


ಇದನ್ನೂ ಓದಿ: ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...