Homeಕರ್ನಾಟಕ‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ

‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ

ನಗರದಿಂದ ಬಂದು ಭೂಮಿ ಕೊಳ್ಳುವವರು ಕೃಷಿಗಾಗಿ ಭೂಮಿ ಕೊಳ್ಳುವುದಿಲ್ಲ. ಬದಲಿಗೆ ಅಲ್ಲಿ ಬೇರೆ ಬೇರೆ ಉದ್ಯಮಗಳನ್ನು ತೆರೆಯುತ್ತಾರೆ. ಜೊತೆಗೆ ಕಪ್ಪಹಣ ಹೊಂದಿರುವವರು ಅದನ್ನು ಭೂಮಿ ಅಥವಾ ಬಂಗಾರದ ರೂಪದಲ್ಲಿಡಲು ಬಯಸುತ್ತಾರೆ. ಅಂಥವರಿಗೆ ಈ ಕಾನೂನು ವರದಾನವಾಗಿದೆ.

- Advertisement -
- Advertisement -

ಹಳ್ಳಿ ಬಿಟ್ಟು, ನಗರದಲ್ಲಿ ಸಾಫ್ಟ್ ವೇರ್ ಅಥವಾ ಟೆಕ್ಕಿಯಾಗಿ ಕೆಲಸ ಮಾಡಿದವರಿಗೆ, ಎಷ್ಟೋ ವರ್ಷಗಳಾದ ಮೇಲೆ ತನ್ನ ಹಳ್ಳಿಗೆ ಮರಳಿ ಭೂಮಿ ಕೊಂಡು ಅಲ್ಲಿಯೇ ಕೃಷಿ ಮಾಡಲು ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಅನುಕೂಲವಾಗಿದೆ ಎಂದು ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಹೇಳಿದ್ದಾರೆ.

ಬೆಂಗಳೂರು ವಿವಿಯ ಕಾನೂನು ಕಾಲೇಜು ಮತ್ತು ಕಾನೂನು ಅಧ್ಯಯನ ವಿಭಾಗದ ವತಿಯಿಂದ “ಕರ್ನಾಟಕ ಭೂಸುಧಾರಣೆ (ತಿದ್ದುಪಡಿ) ಆಧ್ಯಾದೇಶ-2020 ಕ್ಕೆ ಸಂಬಂಧಿಸಿದಂತೆ ಅದರ ಸಾಧಕ ಮತ್ತು ಬಾಧಕಗಳ” ಕುರಿತ ವೆಬಿನಾರ್‌ನಲ್ಲಿ ತಮ್ಮ ಸರ್ಕಾರದ ತಿದ್ದುಪಡಿಯನ್ನು ಸಮರ್ಥಿಸಿಕೊಂಡಿದ್ದಾರೆ.

ಉಳುವವನೇ ಭೂಮಿಯ ಒಡೆಯ ಎನ್ನುವ ಕಾಯ್ದೆ ಕಾಲಕ್ಕೆ ತಕ್ಕಂತೆ ಬದಲಾಗಬೇಕಾಗುತ್ತದೆ. ಈಗ ಆಗಿರುವುದೂ ಕೂಡ ಅದೇ. ಈ ತಿದ್ದುಪಡಿಯ ಅನ್ವಯ ಭೂಮಿ ಹೊಂದುವ ಹಕ್ಕನ್ನು 40 ಯೂನಿಟ್‌ವರೆಗೆ ಹೆಚ್ಚಿಸಲಾಗಿದೆ. ಯಾರು ಬೇಕಾದರೂ ಭೂಮಿ ಕೊಳ್ಳಬಹುದು. ರೈತ ಯಾರಿಗೆ ಬೇಕಾದರೂ ಭೂಮಿಯನ್ನು ಮಾರಬಹುದು. ಭೂಬೆಲೆಯ ಮೇಲೆ ಯಾವುದೇ ನಿಯಂತ್ರಣವಿರುವುದಿಲ್ಲ. ಇದರಿಂದ ರೈತನಿಗೆ ಲಾಭವೇ ಹೆಚ್ಚು ಎಂದು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಕೋಆಪರೇಟೀಕರಣದತ್ತ ಹೊರಳಬೇಕಿದ್ದ ಕೃಷಿ ಕಾರ್ಪೋರೇಟೀಕರಣದತ್ತ: ಈ ವಿನಾಶದ ಪರಿಣಾಮಗಳೇನು?


ನಗರದಿಂದ ವಾಪಾಸಾದವರು ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಭೂಮಿ ಖರೀದಿಸಿ ಅಲ್ಲಿಯೇ ನೆಲೆನಿಂತರು. ಯಾಕೆಂದರೆ ಅಲ್ಲಿ ಇದಕ್ಕೆ ಅವಕಾಶವಿದೆ. ಹಾಗಾಗಿಯೇ ಈ ತಿದ್ದುಪಡಿಯು ಹೆಚ್ಚು ಮಹತ್ವಪೂರ್ಣವಾದದ್ದು. ಅಷ್ಟಕ್ಕೂ ಈಗ ಇದನ್ನು ಟೀಕಿಸುತ್ತಿರುವ ಕಾಂಗ್ರೆಸ್‌ ಸರ್ಕಾರ 2015ರಲ್ಲಿ ಮಾಡಿದ ತಿದ್ದುಪಡಿಯ ಮುಂದುವರೆದ ಭಾಗವೇ ಈ ಕಾಯ್ದೆಯಾಗಿದೆ ಎಂದಿದ್ದಾರೆ.

ಭೂಮಿಯನ್ನು ಮಾರುವ ಮತ್ತು ಕೊಳ್ಳುವವರ ರಕ್ಷಣೆಗಾಗಿ ಈ ಕಾಯ್ದೆ ತರಲಾಗಿದೆ. ಭೂಮಿ ಮಾರಾಟ ಪ್ರಕ್ರಿಯೆಯಲ್ಲಿ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಿ ರೈತರಿಗೆ ಹೆಚ್ಚಿನ ಬೆಲೆಗೆ ಭೂಮಿಯನ್ನು ಮಾರಲು ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದರು.

ನಂತರ ಮಾತನಾಡಿದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್‌ ಮುಖಂಡ ಎಚ್.ಕೆ ಪಾಟೀಲ್ “ಮಾಧುಸ್ವಾಮಿಯವರು ಕೇವಲ ನಮ್ಮ ಟೀಕೆಗಳಿಗೆ ಉತ್ತರಿಸಿದರೇ ವಿನಃ ರೈತರ ಕಷ್ಟ ಕಾರ್ಪಣ್ಯಗಳ ಕುರಿತು ಚರ್ಚಿಸಿಲ್ಲ. 1974 ರಲ್ಲಿ ಬಂದ ಉಳುವವನೇ ಭೂಮಿಯ ಒಡೆಯ ಎಂಬ ಮಹತ್ವದ ಮತ್ತು ಸಾಮಾಜಿಕ ನ್ಯಾಯದ ಕಾನೂನನ್ನು ಬಿಜೆಪಿ ಸರ್ಕಾರ ಮಣ್ಣುಪಾಲು ಮಾಡುತ್ತಿದೆ” ಎಂದು ಆರೋಪಿಸಿದರು.

ಈಗಾಗಲೇ ಬರಗಾಲ, ಬೆಲೆನಿಗದಿ, ಮಧ್ಯವರ್ತಿಗಳ ಹಾವಳಿ, ಬಿತ್ತನೆ ಬೀಜ, ರಸಗೊಬ್ಬರಗಳ ರಾಜಕೀಯ, ಆರ್ಥಿಕ ಕುಸಿತ, ಕೊರೊನಾ ಮುಂತಾದ ಸಮಸ್ಯೆಗಳಲ್ಲಿ ಬಳಲುತ್ತಿರುವ ರೈತರಿಗೆ ಈ ತಿದ್ದುಪಡಿಯು ಗಾಯದ ಮೇಲೆ ಎಳೆದ ಬರೆಯಾಗಿದೆ ಎಂದು ಅಭಿಪ್ರಾಯಪಟ್ಟರು.


ಇದನ್ನೂ ಓದಿ: ಭೂ ಸುಧಾರಣಾ ಕಾನೂನಿನ ತಿದ್ದುಪಡಿ ಮತ್ತು ಅದರ ಪರಿಣಾಮಗಳು – ಡಾ.ಎ.ಆರ್ ವಾಸವಿ


ಉಳುವವನೇ ಭೂಮಿಯ ಒಡೆಯ ಎನ್ನುವ ಊರುಗೋಲನ್ನೇ ಕಿತ್ತು ಕಾರ್ಪೋರೇಟ್ ಕುಳಗಳ ಕೈಗೆ ಕೊಡಲಾಗುತ್ತಿದೆ. ನಗರದ ಶ್ರೀಮಂತರು, ಟೆಕ್ಕಿಗಳು ಬಂದು ಒಕ್ಕಲುತನ ಮಾಡುವುದಕ್ಕೆ ಅವಕಾಶ ಎಂಬ ಸಮರ್ಥನೆ ಮಾಡಿಕೊಳ್ಳಬೇಡಿ. ಬದಲಾಗಿ ಸಂಕಷ್ಟದಲ್ಲಿ ಸಿಲುಕಿರುವ ರೈತರಿಗೆ ಏನಾದರೂ ಪರಹಾರ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಸರ್ಕಾರವನ್ನು ಒತ್ತಾಯಿಸಿದರು.

ನಗರದಿಂದ ಬಂದು ಭೂಮಿ ಕೊಳ್ಳುವವರು ಕೃಷಿಗಾಗಿ ಭೂಮಿ ಕೊಳ್ಳುವುದಿಲ್ಲ. ಬದಲಿಗೆ ಅಲ್ಲಿ ಬೇರೆ ಬೇರೆ ಉದ್ಯಮಗಳನ್ನು ತೆರೆಯುತ್ತಾರೆ. ಜೊತೆಗೆ ಕಪ್ಪಹಣ ಹೊಂದಿರುವವರು ಅದನ್ನು ಭೂಮಿ ಅಥವಾ ಬಂಗಾರದ ರೂಪದಲ್ಲಿಡಲು ಬಯಸುತ್ತಾರೆ. ಅಂಥವರಿಗೆ ಈ ಕಾನೂನು ವರದಾನವಾಗಿದೆ ಎಂದು ಆರೋಪಿಸಿದರು.

ಹಿರಿಯ ವಕೀಲರಾದ ಪ್ರೊ. ರವಿವರ್ಮಕುಮಾರ್ ಮಾತನಾಡಿ, ಈ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ ತರುವಂತಹ ಅಗತ್ಯವಿತ್ತೇ? ಸದನ ಸೇರಲು ಸಾಧ್ಯವಾಗದಿದ್ದಾಗ, ಕೊರೊನಾ ತುರ್ತು ಸಂದರ್ಭದಲ್ಲಿ ಈ ಸುಗ್ರೀವಾಜ್ಞೆಯನ್ನು ತರಲಾಗಿದೆ. ಆದರೆ ಈಗ ಇರುವ ತುರ್ತು ಕೊರೊನಾ ರೋಗವೇ ಹೊರತು ಈ ಭೂಸುಧಾರಣಾ ಕಾಯ್ದೆಯಲ್ಲ ಎಂದರು.

ಸಚಿವ ಮಾಧುಸ್ವಾಮಿ ಹೇಳಿದಂತೆ ಈಗಾಗಲೇ ಸುಮಾರು 80 ಸಾವಿರ ಮೊಕದ್ದಮೆಗಳು ಈ ಭೂ ವಿವಾದಕ್ಕೆ ಸಂಬಂಧಿಸಿದಂತೆ ಇವೆ. ಅದರಲ್ಲಿ ಸುಮಾರು 50 ಸಾವಿರ ಪ್ರಕರಣಗಳು ಭೂಮಿ ತೆಗೆದುಕೊಂಡವರ ಪರವಾಗಿ ಆಗಿದೆ. 15 ಸಾವಿರ ಪ್ರಕರಣಗಳು ಸರ್ಕಾರದ ಪರ ಆಗಿವೆ. ಉಳಿದ 15 ಸಾವಿರ ಪ್ರಕರಣಗಳು ಹಾಗೆಯೇ ಉಳಿದಿವೆ ಎಂದರು.


ಇದನ್ನೂ ಓದಿ: ಸುತ್ತಿಗೆಯಿಂದ ಕ್ರೂರವಾಗಿ ಥಳಿಸಿದ ಗೋರಕ್ಷಕರು: ಕೈಕಟ್ಟಿ ನೋಡುತ್ತಿದ್ದ ಪೊಲೀಸರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...