Homeಕರ್ನಾಟಕ‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ

‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ

ನಗರದಿಂದ ಬಂದು ಭೂಮಿ ಕೊಳ್ಳುವವರು ಕೃಷಿಗಾಗಿ ಭೂಮಿ ಕೊಳ್ಳುವುದಿಲ್ಲ. ಬದಲಿಗೆ ಅಲ್ಲಿ ಬೇರೆ ಬೇರೆ ಉದ್ಯಮಗಳನ್ನು ತೆರೆಯುತ್ತಾರೆ. ಜೊತೆಗೆ ಕಪ್ಪಹಣ ಹೊಂದಿರುವವರು ಅದನ್ನು ಭೂಮಿ ಅಥವಾ ಬಂಗಾರದ ರೂಪದಲ್ಲಿಡಲು ಬಯಸುತ್ತಾರೆ. ಅಂಥವರಿಗೆ ಈ ಕಾನೂನು ವರದಾನವಾಗಿದೆ.

- Advertisement -
- Advertisement -

ಹಳ್ಳಿ ಬಿಟ್ಟು, ನಗರದಲ್ಲಿ ಸಾಫ್ಟ್ ವೇರ್ ಅಥವಾ ಟೆಕ್ಕಿಯಾಗಿ ಕೆಲಸ ಮಾಡಿದವರಿಗೆ, ಎಷ್ಟೋ ವರ್ಷಗಳಾದ ಮೇಲೆ ತನ್ನ ಹಳ್ಳಿಗೆ ಮರಳಿ ಭೂಮಿ ಕೊಂಡು ಅಲ್ಲಿಯೇ ಕೃಷಿ ಮಾಡಲು ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಅನುಕೂಲವಾಗಿದೆ ಎಂದು ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಹೇಳಿದ್ದಾರೆ.

ಬೆಂಗಳೂರು ವಿವಿಯ ಕಾನೂನು ಕಾಲೇಜು ಮತ್ತು ಕಾನೂನು ಅಧ್ಯಯನ ವಿಭಾಗದ ವತಿಯಿಂದ “ಕರ್ನಾಟಕ ಭೂಸುಧಾರಣೆ (ತಿದ್ದುಪಡಿ) ಆಧ್ಯಾದೇಶ-2020 ಕ್ಕೆ ಸಂಬಂಧಿಸಿದಂತೆ ಅದರ ಸಾಧಕ ಮತ್ತು ಬಾಧಕಗಳ” ಕುರಿತ ವೆಬಿನಾರ್‌ನಲ್ಲಿ ತಮ್ಮ ಸರ್ಕಾರದ ತಿದ್ದುಪಡಿಯನ್ನು ಸಮರ್ಥಿಸಿಕೊಂಡಿದ್ದಾರೆ.

ಉಳುವವನೇ ಭೂಮಿಯ ಒಡೆಯ ಎನ್ನುವ ಕಾಯ್ದೆ ಕಾಲಕ್ಕೆ ತಕ್ಕಂತೆ ಬದಲಾಗಬೇಕಾಗುತ್ತದೆ. ಈಗ ಆಗಿರುವುದೂ ಕೂಡ ಅದೇ. ಈ ತಿದ್ದುಪಡಿಯ ಅನ್ವಯ ಭೂಮಿ ಹೊಂದುವ ಹಕ್ಕನ್ನು 40 ಯೂನಿಟ್‌ವರೆಗೆ ಹೆಚ್ಚಿಸಲಾಗಿದೆ. ಯಾರು ಬೇಕಾದರೂ ಭೂಮಿ ಕೊಳ್ಳಬಹುದು. ರೈತ ಯಾರಿಗೆ ಬೇಕಾದರೂ ಭೂಮಿಯನ್ನು ಮಾರಬಹುದು. ಭೂಬೆಲೆಯ ಮೇಲೆ ಯಾವುದೇ ನಿಯಂತ್ರಣವಿರುವುದಿಲ್ಲ. ಇದರಿಂದ ರೈತನಿಗೆ ಲಾಭವೇ ಹೆಚ್ಚು ಎಂದು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಕೋಆಪರೇಟೀಕರಣದತ್ತ ಹೊರಳಬೇಕಿದ್ದ ಕೃಷಿ ಕಾರ್ಪೋರೇಟೀಕರಣದತ್ತ: ಈ ವಿನಾಶದ ಪರಿಣಾಮಗಳೇನು?


ನಗರದಿಂದ ವಾಪಾಸಾದವರು ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಭೂಮಿ ಖರೀದಿಸಿ ಅಲ್ಲಿಯೇ ನೆಲೆನಿಂತರು. ಯಾಕೆಂದರೆ ಅಲ್ಲಿ ಇದಕ್ಕೆ ಅವಕಾಶವಿದೆ. ಹಾಗಾಗಿಯೇ ಈ ತಿದ್ದುಪಡಿಯು ಹೆಚ್ಚು ಮಹತ್ವಪೂರ್ಣವಾದದ್ದು. ಅಷ್ಟಕ್ಕೂ ಈಗ ಇದನ್ನು ಟೀಕಿಸುತ್ತಿರುವ ಕಾಂಗ್ರೆಸ್‌ ಸರ್ಕಾರ 2015ರಲ್ಲಿ ಮಾಡಿದ ತಿದ್ದುಪಡಿಯ ಮುಂದುವರೆದ ಭಾಗವೇ ಈ ಕಾಯ್ದೆಯಾಗಿದೆ ಎಂದಿದ್ದಾರೆ.

ಭೂಮಿಯನ್ನು ಮಾರುವ ಮತ್ತು ಕೊಳ್ಳುವವರ ರಕ್ಷಣೆಗಾಗಿ ಈ ಕಾಯ್ದೆ ತರಲಾಗಿದೆ. ಭೂಮಿ ಮಾರಾಟ ಪ್ರಕ್ರಿಯೆಯಲ್ಲಿ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಿ ರೈತರಿಗೆ ಹೆಚ್ಚಿನ ಬೆಲೆಗೆ ಭೂಮಿಯನ್ನು ಮಾರಲು ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದರು.

ನಂತರ ಮಾತನಾಡಿದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್‌ ಮುಖಂಡ ಎಚ್.ಕೆ ಪಾಟೀಲ್ “ಮಾಧುಸ್ವಾಮಿಯವರು ಕೇವಲ ನಮ್ಮ ಟೀಕೆಗಳಿಗೆ ಉತ್ತರಿಸಿದರೇ ವಿನಃ ರೈತರ ಕಷ್ಟ ಕಾರ್ಪಣ್ಯಗಳ ಕುರಿತು ಚರ್ಚಿಸಿಲ್ಲ. 1974 ರಲ್ಲಿ ಬಂದ ಉಳುವವನೇ ಭೂಮಿಯ ಒಡೆಯ ಎಂಬ ಮಹತ್ವದ ಮತ್ತು ಸಾಮಾಜಿಕ ನ್ಯಾಯದ ಕಾನೂನನ್ನು ಬಿಜೆಪಿ ಸರ್ಕಾರ ಮಣ್ಣುಪಾಲು ಮಾಡುತ್ತಿದೆ” ಎಂದು ಆರೋಪಿಸಿದರು.

ಈಗಾಗಲೇ ಬರಗಾಲ, ಬೆಲೆನಿಗದಿ, ಮಧ್ಯವರ್ತಿಗಳ ಹಾವಳಿ, ಬಿತ್ತನೆ ಬೀಜ, ರಸಗೊಬ್ಬರಗಳ ರಾಜಕೀಯ, ಆರ್ಥಿಕ ಕುಸಿತ, ಕೊರೊನಾ ಮುಂತಾದ ಸಮಸ್ಯೆಗಳಲ್ಲಿ ಬಳಲುತ್ತಿರುವ ರೈತರಿಗೆ ಈ ತಿದ್ದುಪಡಿಯು ಗಾಯದ ಮೇಲೆ ಎಳೆದ ಬರೆಯಾಗಿದೆ ಎಂದು ಅಭಿಪ್ರಾಯಪಟ್ಟರು.


ಇದನ್ನೂ ಓದಿ: ಭೂ ಸುಧಾರಣಾ ಕಾನೂನಿನ ತಿದ್ದುಪಡಿ ಮತ್ತು ಅದರ ಪರಿಣಾಮಗಳು – ಡಾ.ಎ.ಆರ್ ವಾಸವಿ


ಉಳುವವನೇ ಭೂಮಿಯ ಒಡೆಯ ಎನ್ನುವ ಊರುಗೋಲನ್ನೇ ಕಿತ್ತು ಕಾರ್ಪೋರೇಟ್ ಕುಳಗಳ ಕೈಗೆ ಕೊಡಲಾಗುತ್ತಿದೆ. ನಗರದ ಶ್ರೀಮಂತರು, ಟೆಕ್ಕಿಗಳು ಬಂದು ಒಕ್ಕಲುತನ ಮಾಡುವುದಕ್ಕೆ ಅವಕಾಶ ಎಂಬ ಸಮರ್ಥನೆ ಮಾಡಿಕೊಳ್ಳಬೇಡಿ. ಬದಲಾಗಿ ಸಂಕಷ್ಟದಲ್ಲಿ ಸಿಲುಕಿರುವ ರೈತರಿಗೆ ಏನಾದರೂ ಪರಹಾರ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಸರ್ಕಾರವನ್ನು ಒತ್ತಾಯಿಸಿದರು.

ನಗರದಿಂದ ಬಂದು ಭೂಮಿ ಕೊಳ್ಳುವವರು ಕೃಷಿಗಾಗಿ ಭೂಮಿ ಕೊಳ್ಳುವುದಿಲ್ಲ. ಬದಲಿಗೆ ಅಲ್ಲಿ ಬೇರೆ ಬೇರೆ ಉದ್ಯಮಗಳನ್ನು ತೆರೆಯುತ್ತಾರೆ. ಜೊತೆಗೆ ಕಪ್ಪಹಣ ಹೊಂದಿರುವವರು ಅದನ್ನು ಭೂಮಿ ಅಥವಾ ಬಂಗಾರದ ರೂಪದಲ್ಲಿಡಲು ಬಯಸುತ್ತಾರೆ. ಅಂಥವರಿಗೆ ಈ ಕಾನೂನು ವರದಾನವಾಗಿದೆ ಎಂದು ಆರೋಪಿಸಿದರು.

ಹಿರಿಯ ವಕೀಲರಾದ ಪ್ರೊ. ರವಿವರ್ಮಕುಮಾರ್ ಮಾತನಾಡಿ, ಈ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ ತರುವಂತಹ ಅಗತ್ಯವಿತ್ತೇ? ಸದನ ಸೇರಲು ಸಾಧ್ಯವಾಗದಿದ್ದಾಗ, ಕೊರೊನಾ ತುರ್ತು ಸಂದರ್ಭದಲ್ಲಿ ಈ ಸುಗ್ರೀವಾಜ್ಞೆಯನ್ನು ತರಲಾಗಿದೆ. ಆದರೆ ಈಗ ಇರುವ ತುರ್ತು ಕೊರೊನಾ ರೋಗವೇ ಹೊರತು ಈ ಭೂಸುಧಾರಣಾ ಕಾಯ್ದೆಯಲ್ಲ ಎಂದರು.

ಸಚಿವ ಮಾಧುಸ್ವಾಮಿ ಹೇಳಿದಂತೆ ಈಗಾಗಲೇ ಸುಮಾರು 80 ಸಾವಿರ ಮೊಕದ್ದಮೆಗಳು ಈ ಭೂ ವಿವಾದಕ್ಕೆ ಸಂಬಂಧಿಸಿದಂತೆ ಇವೆ. ಅದರಲ್ಲಿ ಸುಮಾರು 50 ಸಾವಿರ ಪ್ರಕರಣಗಳು ಭೂಮಿ ತೆಗೆದುಕೊಂಡವರ ಪರವಾಗಿ ಆಗಿದೆ. 15 ಸಾವಿರ ಪ್ರಕರಣಗಳು ಸರ್ಕಾರದ ಪರ ಆಗಿವೆ. ಉಳಿದ 15 ಸಾವಿರ ಪ್ರಕರಣಗಳು ಹಾಗೆಯೇ ಉಳಿದಿವೆ ಎಂದರು.


ಇದನ್ನೂ ಓದಿ: ಸುತ್ತಿಗೆಯಿಂದ ಕ್ರೂರವಾಗಿ ಥಳಿಸಿದ ಗೋರಕ್ಷಕರು: ಕೈಕಟ್ಟಿ ನೋಡುತ್ತಿದ್ದ ಪೊಲೀಸರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...