Homeಕರ್ನಾಟಕ‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ

‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ

ನಗರದಿಂದ ಬಂದು ಭೂಮಿ ಕೊಳ್ಳುವವರು ಕೃಷಿಗಾಗಿ ಭೂಮಿ ಕೊಳ್ಳುವುದಿಲ್ಲ. ಬದಲಿಗೆ ಅಲ್ಲಿ ಬೇರೆ ಬೇರೆ ಉದ್ಯಮಗಳನ್ನು ತೆರೆಯುತ್ತಾರೆ. ಜೊತೆಗೆ ಕಪ್ಪಹಣ ಹೊಂದಿರುವವರು ಅದನ್ನು ಭೂಮಿ ಅಥವಾ ಬಂಗಾರದ ರೂಪದಲ್ಲಿಡಲು ಬಯಸುತ್ತಾರೆ. ಅಂಥವರಿಗೆ ಈ ಕಾನೂನು ವರದಾನವಾಗಿದೆ.

- Advertisement -
- Advertisement -

ಹಳ್ಳಿ ಬಿಟ್ಟು, ನಗರದಲ್ಲಿ ಸಾಫ್ಟ್ ವೇರ್ ಅಥವಾ ಟೆಕ್ಕಿಯಾಗಿ ಕೆಲಸ ಮಾಡಿದವರಿಗೆ, ಎಷ್ಟೋ ವರ್ಷಗಳಾದ ಮೇಲೆ ತನ್ನ ಹಳ್ಳಿಗೆ ಮರಳಿ ಭೂಮಿ ಕೊಂಡು ಅಲ್ಲಿಯೇ ಕೃಷಿ ಮಾಡಲು ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಅನುಕೂಲವಾಗಿದೆ ಎಂದು ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಹೇಳಿದ್ದಾರೆ.

ಬೆಂಗಳೂರು ವಿವಿಯ ಕಾನೂನು ಕಾಲೇಜು ಮತ್ತು ಕಾನೂನು ಅಧ್ಯಯನ ವಿಭಾಗದ ವತಿಯಿಂದ “ಕರ್ನಾಟಕ ಭೂಸುಧಾರಣೆ (ತಿದ್ದುಪಡಿ) ಆಧ್ಯಾದೇಶ-2020 ಕ್ಕೆ ಸಂಬಂಧಿಸಿದಂತೆ ಅದರ ಸಾಧಕ ಮತ್ತು ಬಾಧಕಗಳ” ಕುರಿತ ವೆಬಿನಾರ್‌ನಲ್ಲಿ ತಮ್ಮ ಸರ್ಕಾರದ ತಿದ್ದುಪಡಿಯನ್ನು ಸಮರ್ಥಿಸಿಕೊಂಡಿದ್ದಾರೆ.

ಉಳುವವನೇ ಭೂಮಿಯ ಒಡೆಯ ಎನ್ನುವ ಕಾಯ್ದೆ ಕಾಲಕ್ಕೆ ತಕ್ಕಂತೆ ಬದಲಾಗಬೇಕಾಗುತ್ತದೆ. ಈಗ ಆಗಿರುವುದೂ ಕೂಡ ಅದೇ. ಈ ತಿದ್ದುಪಡಿಯ ಅನ್ವಯ ಭೂಮಿ ಹೊಂದುವ ಹಕ್ಕನ್ನು 40 ಯೂನಿಟ್‌ವರೆಗೆ ಹೆಚ್ಚಿಸಲಾಗಿದೆ. ಯಾರು ಬೇಕಾದರೂ ಭೂಮಿ ಕೊಳ್ಳಬಹುದು. ರೈತ ಯಾರಿಗೆ ಬೇಕಾದರೂ ಭೂಮಿಯನ್ನು ಮಾರಬಹುದು. ಭೂಬೆಲೆಯ ಮೇಲೆ ಯಾವುದೇ ನಿಯಂತ್ರಣವಿರುವುದಿಲ್ಲ. ಇದರಿಂದ ರೈತನಿಗೆ ಲಾಭವೇ ಹೆಚ್ಚು ಎಂದು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಕೋಆಪರೇಟೀಕರಣದತ್ತ ಹೊರಳಬೇಕಿದ್ದ ಕೃಷಿ ಕಾರ್ಪೋರೇಟೀಕರಣದತ್ತ: ಈ ವಿನಾಶದ ಪರಿಣಾಮಗಳೇನು?


ನಗರದಿಂದ ವಾಪಾಸಾದವರು ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಭೂಮಿ ಖರೀದಿಸಿ ಅಲ್ಲಿಯೇ ನೆಲೆನಿಂತರು. ಯಾಕೆಂದರೆ ಅಲ್ಲಿ ಇದಕ್ಕೆ ಅವಕಾಶವಿದೆ. ಹಾಗಾಗಿಯೇ ಈ ತಿದ್ದುಪಡಿಯು ಹೆಚ್ಚು ಮಹತ್ವಪೂರ್ಣವಾದದ್ದು. ಅಷ್ಟಕ್ಕೂ ಈಗ ಇದನ್ನು ಟೀಕಿಸುತ್ತಿರುವ ಕಾಂಗ್ರೆಸ್‌ ಸರ್ಕಾರ 2015ರಲ್ಲಿ ಮಾಡಿದ ತಿದ್ದುಪಡಿಯ ಮುಂದುವರೆದ ಭಾಗವೇ ಈ ಕಾಯ್ದೆಯಾಗಿದೆ ಎಂದಿದ್ದಾರೆ.

ಭೂಮಿಯನ್ನು ಮಾರುವ ಮತ್ತು ಕೊಳ್ಳುವವರ ರಕ್ಷಣೆಗಾಗಿ ಈ ಕಾಯ್ದೆ ತರಲಾಗಿದೆ. ಭೂಮಿ ಮಾರಾಟ ಪ್ರಕ್ರಿಯೆಯಲ್ಲಿ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಿ ರೈತರಿಗೆ ಹೆಚ್ಚಿನ ಬೆಲೆಗೆ ಭೂಮಿಯನ್ನು ಮಾರಲು ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದರು.

ನಂತರ ಮಾತನಾಡಿದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್‌ ಮುಖಂಡ ಎಚ್.ಕೆ ಪಾಟೀಲ್ “ಮಾಧುಸ್ವಾಮಿಯವರು ಕೇವಲ ನಮ್ಮ ಟೀಕೆಗಳಿಗೆ ಉತ್ತರಿಸಿದರೇ ವಿನಃ ರೈತರ ಕಷ್ಟ ಕಾರ್ಪಣ್ಯಗಳ ಕುರಿತು ಚರ್ಚಿಸಿಲ್ಲ. 1974 ರಲ್ಲಿ ಬಂದ ಉಳುವವನೇ ಭೂಮಿಯ ಒಡೆಯ ಎಂಬ ಮಹತ್ವದ ಮತ್ತು ಸಾಮಾಜಿಕ ನ್ಯಾಯದ ಕಾನೂನನ್ನು ಬಿಜೆಪಿ ಸರ್ಕಾರ ಮಣ್ಣುಪಾಲು ಮಾಡುತ್ತಿದೆ” ಎಂದು ಆರೋಪಿಸಿದರು.

ಈಗಾಗಲೇ ಬರಗಾಲ, ಬೆಲೆನಿಗದಿ, ಮಧ್ಯವರ್ತಿಗಳ ಹಾವಳಿ, ಬಿತ್ತನೆ ಬೀಜ, ರಸಗೊಬ್ಬರಗಳ ರಾಜಕೀಯ, ಆರ್ಥಿಕ ಕುಸಿತ, ಕೊರೊನಾ ಮುಂತಾದ ಸಮಸ್ಯೆಗಳಲ್ಲಿ ಬಳಲುತ್ತಿರುವ ರೈತರಿಗೆ ಈ ತಿದ್ದುಪಡಿಯು ಗಾಯದ ಮೇಲೆ ಎಳೆದ ಬರೆಯಾಗಿದೆ ಎಂದು ಅಭಿಪ್ರಾಯಪಟ್ಟರು.


ಇದನ್ನೂ ಓದಿ: ಭೂ ಸುಧಾರಣಾ ಕಾನೂನಿನ ತಿದ್ದುಪಡಿ ಮತ್ತು ಅದರ ಪರಿಣಾಮಗಳು – ಡಾ.ಎ.ಆರ್ ವಾಸವಿ


ಉಳುವವನೇ ಭೂಮಿಯ ಒಡೆಯ ಎನ್ನುವ ಊರುಗೋಲನ್ನೇ ಕಿತ್ತು ಕಾರ್ಪೋರೇಟ್ ಕುಳಗಳ ಕೈಗೆ ಕೊಡಲಾಗುತ್ತಿದೆ. ನಗರದ ಶ್ರೀಮಂತರು, ಟೆಕ್ಕಿಗಳು ಬಂದು ಒಕ್ಕಲುತನ ಮಾಡುವುದಕ್ಕೆ ಅವಕಾಶ ಎಂಬ ಸಮರ್ಥನೆ ಮಾಡಿಕೊಳ್ಳಬೇಡಿ. ಬದಲಾಗಿ ಸಂಕಷ್ಟದಲ್ಲಿ ಸಿಲುಕಿರುವ ರೈತರಿಗೆ ಏನಾದರೂ ಪರಹಾರ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಸರ್ಕಾರವನ್ನು ಒತ್ತಾಯಿಸಿದರು.

ನಗರದಿಂದ ಬಂದು ಭೂಮಿ ಕೊಳ್ಳುವವರು ಕೃಷಿಗಾಗಿ ಭೂಮಿ ಕೊಳ್ಳುವುದಿಲ್ಲ. ಬದಲಿಗೆ ಅಲ್ಲಿ ಬೇರೆ ಬೇರೆ ಉದ್ಯಮಗಳನ್ನು ತೆರೆಯುತ್ತಾರೆ. ಜೊತೆಗೆ ಕಪ್ಪಹಣ ಹೊಂದಿರುವವರು ಅದನ್ನು ಭೂಮಿ ಅಥವಾ ಬಂಗಾರದ ರೂಪದಲ್ಲಿಡಲು ಬಯಸುತ್ತಾರೆ. ಅಂಥವರಿಗೆ ಈ ಕಾನೂನು ವರದಾನವಾಗಿದೆ ಎಂದು ಆರೋಪಿಸಿದರು.

ಹಿರಿಯ ವಕೀಲರಾದ ಪ್ರೊ. ರವಿವರ್ಮಕುಮಾರ್ ಮಾತನಾಡಿ, ಈ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ ತರುವಂತಹ ಅಗತ್ಯವಿತ್ತೇ? ಸದನ ಸೇರಲು ಸಾಧ್ಯವಾಗದಿದ್ದಾಗ, ಕೊರೊನಾ ತುರ್ತು ಸಂದರ್ಭದಲ್ಲಿ ಈ ಸುಗ್ರೀವಾಜ್ಞೆಯನ್ನು ತರಲಾಗಿದೆ. ಆದರೆ ಈಗ ಇರುವ ತುರ್ತು ಕೊರೊನಾ ರೋಗವೇ ಹೊರತು ಈ ಭೂಸುಧಾರಣಾ ಕಾಯ್ದೆಯಲ್ಲ ಎಂದರು.

ಸಚಿವ ಮಾಧುಸ್ವಾಮಿ ಹೇಳಿದಂತೆ ಈಗಾಗಲೇ ಸುಮಾರು 80 ಸಾವಿರ ಮೊಕದ್ದಮೆಗಳು ಈ ಭೂ ವಿವಾದಕ್ಕೆ ಸಂಬಂಧಿಸಿದಂತೆ ಇವೆ. ಅದರಲ್ಲಿ ಸುಮಾರು 50 ಸಾವಿರ ಪ್ರಕರಣಗಳು ಭೂಮಿ ತೆಗೆದುಕೊಂಡವರ ಪರವಾಗಿ ಆಗಿದೆ. 15 ಸಾವಿರ ಪ್ರಕರಣಗಳು ಸರ್ಕಾರದ ಪರ ಆಗಿವೆ. ಉಳಿದ 15 ಸಾವಿರ ಪ್ರಕರಣಗಳು ಹಾಗೆಯೇ ಉಳಿದಿವೆ ಎಂದರು.


ಇದನ್ನೂ ಓದಿ: ಸುತ್ತಿಗೆಯಿಂದ ಕ್ರೂರವಾಗಿ ಥಳಿಸಿದ ಗೋರಕ್ಷಕರು: ಕೈಕಟ್ಟಿ ನೋಡುತ್ತಿದ್ದ ಪೊಲೀಸರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...