Homeಕರ್ನಾಟಕ‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ

‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ

ನಗರದಿಂದ ಬಂದು ಭೂಮಿ ಕೊಳ್ಳುವವರು ಕೃಷಿಗಾಗಿ ಭೂಮಿ ಕೊಳ್ಳುವುದಿಲ್ಲ. ಬದಲಿಗೆ ಅಲ್ಲಿ ಬೇರೆ ಬೇರೆ ಉದ್ಯಮಗಳನ್ನು ತೆರೆಯುತ್ತಾರೆ. ಜೊತೆಗೆ ಕಪ್ಪಹಣ ಹೊಂದಿರುವವರು ಅದನ್ನು ಭೂಮಿ ಅಥವಾ ಬಂಗಾರದ ರೂಪದಲ್ಲಿಡಲು ಬಯಸುತ್ತಾರೆ. ಅಂಥವರಿಗೆ ಈ ಕಾನೂನು ವರದಾನವಾಗಿದೆ.

- Advertisement -
- Advertisement -

ಹಳ್ಳಿ ಬಿಟ್ಟು, ನಗರದಲ್ಲಿ ಸಾಫ್ಟ್ ವೇರ್ ಅಥವಾ ಟೆಕ್ಕಿಯಾಗಿ ಕೆಲಸ ಮಾಡಿದವರಿಗೆ, ಎಷ್ಟೋ ವರ್ಷಗಳಾದ ಮೇಲೆ ತನ್ನ ಹಳ್ಳಿಗೆ ಮರಳಿ ಭೂಮಿ ಕೊಂಡು ಅಲ್ಲಿಯೇ ಕೃಷಿ ಮಾಡಲು ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಅನುಕೂಲವಾಗಿದೆ ಎಂದು ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಹೇಳಿದ್ದಾರೆ.

ಬೆಂಗಳೂರು ವಿವಿಯ ಕಾನೂನು ಕಾಲೇಜು ಮತ್ತು ಕಾನೂನು ಅಧ್ಯಯನ ವಿಭಾಗದ ವತಿಯಿಂದ “ಕರ್ನಾಟಕ ಭೂಸುಧಾರಣೆ (ತಿದ್ದುಪಡಿ) ಆಧ್ಯಾದೇಶ-2020 ಕ್ಕೆ ಸಂಬಂಧಿಸಿದಂತೆ ಅದರ ಸಾಧಕ ಮತ್ತು ಬಾಧಕಗಳ” ಕುರಿತ ವೆಬಿನಾರ್‌ನಲ್ಲಿ ತಮ್ಮ ಸರ್ಕಾರದ ತಿದ್ದುಪಡಿಯನ್ನು ಸಮರ್ಥಿಸಿಕೊಂಡಿದ್ದಾರೆ.

ಉಳುವವನೇ ಭೂಮಿಯ ಒಡೆಯ ಎನ್ನುವ ಕಾಯ್ದೆ ಕಾಲಕ್ಕೆ ತಕ್ಕಂತೆ ಬದಲಾಗಬೇಕಾಗುತ್ತದೆ. ಈಗ ಆಗಿರುವುದೂ ಕೂಡ ಅದೇ. ಈ ತಿದ್ದುಪಡಿಯ ಅನ್ವಯ ಭೂಮಿ ಹೊಂದುವ ಹಕ್ಕನ್ನು 40 ಯೂನಿಟ್‌ವರೆಗೆ ಹೆಚ್ಚಿಸಲಾಗಿದೆ. ಯಾರು ಬೇಕಾದರೂ ಭೂಮಿ ಕೊಳ್ಳಬಹುದು. ರೈತ ಯಾರಿಗೆ ಬೇಕಾದರೂ ಭೂಮಿಯನ್ನು ಮಾರಬಹುದು. ಭೂಬೆಲೆಯ ಮೇಲೆ ಯಾವುದೇ ನಿಯಂತ್ರಣವಿರುವುದಿಲ್ಲ. ಇದರಿಂದ ರೈತನಿಗೆ ಲಾಭವೇ ಹೆಚ್ಚು ಎಂದು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಕೋಆಪರೇಟೀಕರಣದತ್ತ ಹೊರಳಬೇಕಿದ್ದ ಕೃಷಿ ಕಾರ್ಪೋರೇಟೀಕರಣದತ್ತ: ಈ ವಿನಾಶದ ಪರಿಣಾಮಗಳೇನು?


ನಗರದಿಂದ ವಾಪಾಸಾದವರು ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಭೂಮಿ ಖರೀದಿಸಿ ಅಲ್ಲಿಯೇ ನೆಲೆನಿಂತರು. ಯಾಕೆಂದರೆ ಅಲ್ಲಿ ಇದಕ್ಕೆ ಅವಕಾಶವಿದೆ. ಹಾಗಾಗಿಯೇ ಈ ತಿದ್ದುಪಡಿಯು ಹೆಚ್ಚು ಮಹತ್ವಪೂರ್ಣವಾದದ್ದು. ಅಷ್ಟಕ್ಕೂ ಈಗ ಇದನ್ನು ಟೀಕಿಸುತ್ತಿರುವ ಕಾಂಗ್ರೆಸ್‌ ಸರ್ಕಾರ 2015ರಲ್ಲಿ ಮಾಡಿದ ತಿದ್ದುಪಡಿಯ ಮುಂದುವರೆದ ಭಾಗವೇ ಈ ಕಾಯ್ದೆಯಾಗಿದೆ ಎಂದಿದ್ದಾರೆ.

ಭೂಮಿಯನ್ನು ಮಾರುವ ಮತ್ತು ಕೊಳ್ಳುವವರ ರಕ್ಷಣೆಗಾಗಿ ಈ ಕಾಯ್ದೆ ತರಲಾಗಿದೆ. ಭೂಮಿ ಮಾರಾಟ ಪ್ರಕ್ರಿಯೆಯಲ್ಲಿ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಿ ರೈತರಿಗೆ ಹೆಚ್ಚಿನ ಬೆಲೆಗೆ ಭೂಮಿಯನ್ನು ಮಾರಲು ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದರು.

ನಂತರ ಮಾತನಾಡಿದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್‌ ಮುಖಂಡ ಎಚ್.ಕೆ ಪಾಟೀಲ್ “ಮಾಧುಸ್ವಾಮಿಯವರು ಕೇವಲ ನಮ್ಮ ಟೀಕೆಗಳಿಗೆ ಉತ್ತರಿಸಿದರೇ ವಿನಃ ರೈತರ ಕಷ್ಟ ಕಾರ್ಪಣ್ಯಗಳ ಕುರಿತು ಚರ್ಚಿಸಿಲ್ಲ. 1974 ರಲ್ಲಿ ಬಂದ ಉಳುವವನೇ ಭೂಮಿಯ ಒಡೆಯ ಎಂಬ ಮಹತ್ವದ ಮತ್ತು ಸಾಮಾಜಿಕ ನ್ಯಾಯದ ಕಾನೂನನ್ನು ಬಿಜೆಪಿ ಸರ್ಕಾರ ಮಣ್ಣುಪಾಲು ಮಾಡುತ್ತಿದೆ” ಎಂದು ಆರೋಪಿಸಿದರು.

ಈಗಾಗಲೇ ಬರಗಾಲ, ಬೆಲೆನಿಗದಿ, ಮಧ್ಯವರ್ತಿಗಳ ಹಾವಳಿ, ಬಿತ್ತನೆ ಬೀಜ, ರಸಗೊಬ್ಬರಗಳ ರಾಜಕೀಯ, ಆರ್ಥಿಕ ಕುಸಿತ, ಕೊರೊನಾ ಮುಂತಾದ ಸಮಸ್ಯೆಗಳಲ್ಲಿ ಬಳಲುತ್ತಿರುವ ರೈತರಿಗೆ ಈ ತಿದ್ದುಪಡಿಯು ಗಾಯದ ಮೇಲೆ ಎಳೆದ ಬರೆಯಾಗಿದೆ ಎಂದು ಅಭಿಪ್ರಾಯಪಟ್ಟರು.


ಇದನ್ನೂ ಓದಿ: ಭೂ ಸುಧಾರಣಾ ಕಾನೂನಿನ ತಿದ್ದುಪಡಿ ಮತ್ತು ಅದರ ಪರಿಣಾಮಗಳು – ಡಾ.ಎ.ಆರ್ ವಾಸವಿ


ಉಳುವವನೇ ಭೂಮಿಯ ಒಡೆಯ ಎನ್ನುವ ಊರುಗೋಲನ್ನೇ ಕಿತ್ತು ಕಾರ್ಪೋರೇಟ್ ಕುಳಗಳ ಕೈಗೆ ಕೊಡಲಾಗುತ್ತಿದೆ. ನಗರದ ಶ್ರೀಮಂತರು, ಟೆಕ್ಕಿಗಳು ಬಂದು ಒಕ್ಕಲುತನ ಮಾಡುವುದಕ್ಕೆ ಅವಕಾಶ ಎಂಬ ಸಮರ್ಥನೆ ಮಾಡಿಕೊಳ್ಳಬೇಡಿ. ಬದಲಾಗಿ ಸಂಕಷ್ಟದಲ್ಲಿ ಸಿಲುಕಿರುವ ರೈತರಿಗೆ ಏನಾದರೂ ಪರಹಾರ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಸರ್ಕಾರವನ್ನು ಒತ್ತಾಯಿಸಿದರು.

ನಗರದಿಂದ ಬಂದು ಭೂಮಿ ಕೊಳ್ಳುವವರು ಕೃಷಿಗಾಗಿ ಭೂಮಿ ಕೊಳ್ಳುವುದಿಲ್ಲ. ಬದಲಿಗೆ ಅಲ್ಲಿ ಬೇರೆ ಬೇರೆ ಉದ್ಯಮಗಳನ್ನು ತೆರೆಯುತ್ತಾರೆ. ಜೊತೆಗೆ ಕಪ್ಪಹಣ ಹೊಂದಿರುವವರು ಅದನ್ನು ಭೂಮಿ ಅಥವಾ ಬಂಗಾರದ ರೂಪದಲ್ಲಿಡಲು ಬಯಸುತ್ತಾರೆ. ಅಂಥವರಿಗೆ ಈ ಕಾನೂನು ವರದಾನವಾಗಿದೆ ಎಂದು ಆರೋಪಿಸಿದರು.

ಹಿರಿಯ ವಕೀಲರಾದ ಪ್ರೊ. ರವಿವರ್ಮಕುಮಾರ್ ಮಾತನಾಡಿ, ಈ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ ತರುವಂತಹ ಅಗತ್ಯವಿತ್ತೇ? ಸದನ ಸೇರಲು ಸಾಧ್ಯವಾಗದಿದ್ದಾಗ, ಕೊರೊನಾ ತುರ್ತು ಸಂದರ್ಭದಲ್ಲಿ ಈ ಸುಗ್ರೀವಾಜ್ಞೆಯನ್ನು ತರಲಾಗಿದೆ. ಆದರೆ ಈಗ ಇರುವ ತುರ್ತು ಕೊರೊನಾ ರೋಗವೇ ಹೊರತು ಈ ಭೂಸುಧಾರಣಾ ಕಾಯ್ದೆಯಲ್ಲ ಎಂದರು.

ಸಚಿವ ಮಾಧುಸ್ವಾಮಿ ಹೇಳಿದಂತೆ ಈಗಾಗಲೇ ಸುಮಾರು 80 ಸಾವಿರ ಮೊಕದ್ದಮೆಗಳು ಈ ಭೂ ವಿವಾದಕ್ಕೆ ಸಂಬಂಧಿಸಿದಂತೆ ಇವೆ. ಅದರಲ್ಲಿ ಸುಮಾರು 50 ಸಾವಿರ ಪ್ರಕರಣಗಳು ಭೂಮಿ ತೆಗೆದುಕೊಂಡವರ ಪರವಾಗಿ ಆಗಿದೆ. 15 ಸಾವಿರ ಪ್ರಕರಣಗಳು ಸರ್ಕಾರದ ಪರ ಆಗಿವೆ. ಉಳಿದ 15 ಸಾವಿರ ಪ್ರಕರಣಗಳು ಹಾಗೆಯೇ ಉಳಿದಿವೆ ಎಂದರು.


ಇದನ್ನೂ ಓದಿ: ಸುತ್ತಿಗೆಯಿಂದ ಕ್ರೂರವಾಗಿ ಥಳಿಸಿದ ಗೋರಕ್ಷಕರು: ಕೈಕಟ್ಟಿ ನೋಡುತ್ತಿದ್ದ ಪೊಲೀಸರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...