Homeಕರ್ನಾಟಕ‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ

‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ

ನಗರದಿಂದ ಬಂದು ಭೂಮಿ ಕೊಳ್ಳುವವರು ಕೃಷಿಗಾಗಿ ಭೂಮಿ ಕೊಳ್ಳುವುದಿಲ್ಲ. ಬದಲಿಗೆ ಅಲ್ಲಿ ಬೇರೆ ಬೇರೆ ಉದ್ಯಮಗಳನ್ನು ತೆರೆಯುತ್ತಾರೆ. ಜೊತೆಗೆ ಕಪ್ಪಹಣ ಹೊಂದಿರುವವರು ಅದನ್ನು ಭೂಮಿ ಅಥವಾ ಬಂಗಾರದ ರೂಪದಲ್ಲಿಡಲು ಬಯಸುತ್ತಾರೆ. ಅಂಥವರಿಗೆ ಈ ಕಾನೂನು ವರದಾನವಾಗಿದೆ.

- Advertisement -
- Advertisement -

ಹಳ್ಳಿ ಬಿಟ್ಟು, ನಗರದಲ್ಲಿ ಸಾಫ್ಟ್ ವೇರ್ ಅಥವಾ ಟೆಕ್ಕಿಯಾಗಿ ಕೆಲಸ ಮಾಡಿದವರಿಗೆ, ಎಷ್ಟೋ ವರ್ಷಗಳಾದ ಮೇಲೆ ತನ್ನ ಹಳ್ಳಿಗೆ ಮರಳಿ ಭೂಮಿ ಕೊಂಡು ಅಲ್ಲಿಯೇ ಕೃಷಿ ಮಾಡಲು ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಅನುಕೂಲವಾಗಿದೆ ಎಂದು ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಹೇಳಿದ್ದಾರೆ.

ಬೆಂಗಳೂರು ವಿವಿಯ ಕಾನೂನು ಕಾಲೇಜು ಮತ್ತು ಕಾನೂನು ಅಧ್ಯಯನ ವಿಭಾಗದ ವತಿಯಿಂದ “ಕರ್ನಾಟಕ ಭೂಸುಧಾರಣೆ (ತಿದ್ದುಪಡಿ) ಆಧ್ಯಾದೇಶ-2020 ಕ್ಕೆ ಸಂಬಂಧಿಸಿದಂತೆ ಅದರ ಸಾಧಕ ಮತ್ತು ಬಾಧಕಗಳ” ಕುರಿತ ವೆಬಿನಾರ್‌ನಲ್ಲಿ ತಮ್ಮ ಸರ್ಕಾರದ ತಿದ್ದುಪಡಿಯನ್ನು ಸಮರ್ಥಿಸಿಕೊಂಡಿದ್ದಾರೆ.

ಉಳುವವನೇ ಭೂಮಿಯ ಒಡೆಯ ಎನ್ನುವ ಕಾಯ್ದೆ ಕಾಲಕ್ಕೆ ತಕ್ಕಂತೆ ಬದಲಾಗಬೇಕಾಗುತ್ತದೆ. ಈಗ ಆಗಿರುವುದೂ ಕೂಡ ಅದೇ. ಈ ತಿದ್ದುಪಡಿಯ ಅನ್ವಯ ಭೂಮಿ ಹೊಂದುವ ಹಕ್ಕನ್ನು 40 ಯೂನಿಟ್‌ವರೆಗೆ ಹೆಚ್ಚಿಸಲಾಗಿದೆ. ಯಾರು ಬೇಕಾದರೂ ಭೂಮಿ ಕೊಳ್ಳಬಹುದು. ರೈತ ಯಾರಿಗೆ ಬೇಕಾದರೂ ಭೂಮಿಯನ್ನು ಮಾರಬಹುದು. ಭೂಬೆಲೆಯ ಮೇಲೆ ಯಾವುದೇ ನಿಯಂತ್ರಣವಿರುವುದಿಲ್ಲ. ಇದರಿಂದ ರೈತನಿಗೆ ಲಾಭವೇ ಹೆಚ್ಚು ಎಂದು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಕೋಆಪರೇಟೀಕರಣದತ್ತ ಹೊರಳಬೇಕಿದ್ದ ಕೃಷಿ ಕಾರ್ಪೋರೇಟೀಕರಣದತ್ತ: ಈ ವಿನಾಶದ ಪರಿಣಾಮಗಳೇನು?


ನಗರದಿಂದ ವಾಪಾಸಾದವರು ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಭೂಮಿ ಖರೀದಿಸಿ ಅಲ್ಲಿಯೇ ನೆಲೆನಿಂತರು. ಯಾಕೆಂದರೆ ಅಲ್ಲಿ ಇದಕ್ಕೆ ಅವಕಾಶವಿದೆ. ಹಾಗಾಗಿಯೇ ಈ ತಿದ್ದುಪಡಿಯು ಹೆಚ್ಚು ಮಹತ್ವಪೂರ್ಣವಾದದ್ದು. ಅಷ್ಟಕ್ಕೂ ಈಗ ಇದನ್ನು ಟೀಕಿಸುತ್ತಿರುವ ಕಾಂಗ್ರೆಸ್‌ ಸರ್ಕಾರ 2015ರಲ್ಲಿ ಮಾಡಿದ ತಿದ್ದುಪಡಿಯ ಮುಂದುವರೆದ ಭಾಗವೇ ಈ ಕಾಯ್ದೆಯಾಗಿದೆ ಎಂದಿದ್ದಾರೆ.

ಭೂಮಿಯನ್ನು ಮಾರುವ ಮತ್ತು ಕೊಳ್ಳುವವರ ರಕ್ಷಣೆಗಾಗಿ ಈ ಕಾಯ್ದೆ ತರಲಾಗಿದೆ. ಭೂಮಿ ಮಾರಾಟ ಪ್ರಕ್ರಿಯೆಯಲ್ಲಿ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಿ ರೈತರಿಗೆ ಹೆಚ್ಚಿನ ಬೆಲೆಗೆ ಭೂಮಿಯನ್ನು ಮಾರಲು ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದರು.

ನಂತರ ಮಾತನಾಡಿದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್‌ ಮುಖಂಡ ಎಚ್.ಕೆ ಪಾಟೀಲ್ “ಮಾಧುಸ್ವಾಮಿಯವರು ಕೇವಲ ನಮ್ಮ ಟೀಕೆಗಳಿಗೆ ಉತ್ತರಿಸಿದರೇ ವಿನಃ ರೈತರ ಕಷ್ಟ ಕಾರ್ಪಣ್ಯಗಳ ಕುರಿತು ಚರ್ಚಿಸಿಲ್ಲ. 1974 ರಲ್ಲಿ ಬಂದ ಉಳುವವನೇ ಭೂಮಿಯ ಒಡೆಯ ಎಂಬ ಮಹತ್ವದ ಮತ್ತು ಸಾಮಾಜಿಕ ನ್ಯಾಯದ ಕಾನೂನನ್ನು ಬಿಜೆಪಿ ಸರ್ಕಾರ ಮಣ್ಣುಪಾಲು ಮಾಡುತ್ತಿದೆ” ಎಂದು ಆರೋಪಿಸಿದರು.

ಈಗಾಗಲೇ ಬರಗಾಲ, ಬೆಲೆನಿಗದಿ, ಮಧ್ಯವರ್ತಿಗಳ ಹಾವಳಿ, ಬಿತ್ತನೆ ಬೀಜ, ರಸಗೊಬ್ಬರಗಳ ರಾಜಕೀಯ, ಆರ್ಥಿಕ ಕುಸಿತ, ಕೊರೊನಾ ಮುಂತಾದ ಸಮಸ್ಯೆಗಳಲ್ಲಿ ಬಳಲುತ್ತಿರುವ ರೈತರಿಗೆ ಈ ತಿದ್ದುಪಡಿಯು ಗಾಯದ ಮೇಲೆ ಎಳೆದ ಬರೆಯಾಗಿದೆ ಎಂದು ಅಭಿಪ್ರಾಯಪಟ್ಟರು.


ಇದನ್ನೂ ಓದಿ: ಭೂ ಸುಧಾರಣಾ ಕಾನೂನಿನ ತಿದ್ದುಪಡಿ ಮತ್ತು ಅದರ ಪರಿಣಾಮಗಳು – ಡಾ.ಎ.ಆರ್ ವಾಸವಿ


ಉಳುವವನೇ ಭೂಮಿಯ ಒಡೆಯ ಎನ್ನುವ ಊರುಗೋಲನ್ನೇ ಕಿತ್ತು ಕಾರ್ಪೋರೇಟ್ ಕುಳಗಳ ಕೈಗೆ ಕೊಡಲಾಗುತ್ತಿದೆ. ನಗರದ ಶ್ರೀಮಂತರು, ಟೆಕ್ಕಿಗಳು ಬಂದು ಒಕ್ಕಲುತನ ಮಾಡುವುದಕ್ಕೆ ಅವಕಾಶ ಎಂಬ ಸಮರ್ಥನೆ ಮಾಡಿಕೊಳ್ಳಬೇಡಿ. ಬದಲಾಗಿ ಸಂಕಷ್ಟದಲ್ಲಿ ಸಿಲುಕಿರುವ ರೈತರಿಗೆ ಏನಾದರೂ ಪರಹಾರ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಸರ್ಕಾರವನ್ನು ಒತ್ತಾಯಿಸಿದರು.

ನಗರದಿಂದ ಬಂದು ಭೂಮಿ ಕೊಳ್ಳುವವರು ಕೃಷಿಗಾಗಿ ಭೂಮಿ ಕೊಳ್ಳುವುದಿಲ್ಲ. ಬದಲಿಗೆ ಅಲ್ಲಿ ಬೇರೆ ಬೇರೆ ಉದ್ಯಮಗಳನ್ನು ತೆರೆಯುತ್ತಾರೆ. ಜೊತೆಗೆ ಕಪ್ಪಹಣ ಹೊಂದಿರುವವರು ಅದನ್ನು ಭೂಮಿ ಅಥವಾ ಬಂಗಾರದ ರೂಪದಲ್ಲಿಡಲು ಬಯಸುತ್ತಾರೆ. ಅಂಥವರಿಗೆ ಈ ಕಾನೂನು ವರದಾನವಾಗಿದೆ ಎಂದು ಆರೋಪಿಸಿದರು.

ಹಿರಿಯ ವಕೀಲರಾದ ಪ್ರೊ. ರವಿವರ್ಮಕುಮಾರ್ ಮಾತನಾಡಿ, ಈ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ ತರುವಂತಹ ಅಗತ್ಯವಿತ್ತೇ? ಸದನ ಸೇರಲು ಸಾಧ್ಯವಾಗದಿದ್ದಾಗ, ಕೊರೊನಾ ತುರ್ತು ಸಂದರ್ಭದಲ್ಲಿ ಈ ಸುಗ್ರೀವಾಜ್ಞೆಯನ್ನು ತರಲಾಗಿದೆ. ಆದರೆ ಈಗ ಇರುವ ತುರ್ತು ಕೊರೊನಾ ರೋಗವೇ ಹೊರತು ಈ ಭೂಸುಧಾರಣಾ ಕಾಯ್ದೆಯಲ್ಲ ಎಂದರು.

ಸಚಿವ ಮಾಧುಸ್ವಾಮಿ ಹೇಳಿದಂತೆ ಈಗಾಗಲೇ ಸುಮಾರು 80 ಸಾವಿರ ಮೊಕದ್ದಮೆಗಳು ಈ ಭೂ ವಿವಾದಕ್ಕೆ ಸಂಬಂಧಿಸಿದಂತೆ ಇವೆ. ಅದರಲ್ಲಿ ಸುಮಾರು 50 ಸಾವಿರ ಪ್ರಕರಣಗಳು ಭೂಮಿ ತೆಗೆದುಕೊಂಡವರ ಪರವಾಗಿ ಆಗಿದೆ. 15 ಸಾವಿರ ಪ್ರಕರಣಗಳು ಸರ್ಕಾರದ ಪರ ಆಗಿವೆ. ಉಳಿದ 15 ಸಾವಿರ ಪ್ರಕರಣಗಳು ಹಾಗೆಯೇ ಉಳಿದಿವೆ ಎಂದರು.


ಇದನ್ನೂ ಓದಿ: ಸುತ್ತಿಗೆಯಿಂದ ಕ್ರೂರವಾಗಿ ಥಳಿಸಿದ ಗೋರಕ್ಷಕರು: ಕೈಕಟ್ಟಿ ನೋಡುತ್ತಿದ್ದ ಪೊಲೀಸರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...