Homeಕರ್ನಾಟಕ‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ

‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ

ನಗರದಿಂದ ಬಂದು ಭೂಮಿ ಕೊಳ್ಳುವವರು ಕೃಷಿಗಾಗಿ ಭೂಮಿ ಕೊಳ್ಳುವುದಿಲ್ಲ. ಬದಲಿಗೆ ಅಲ್ಲಿ ಬೇರೆ ಬೇರೆ ಉದ್ಯಮಗಳನ್ನು ತೆರೆಯುತ್ತಾರೆ. ಜೊತೆಗೆ ಕಪ್ಪಹಣ ಹೊಂದಿರುವವರು ಅದನ್ನು ಭೂಮಿ ಅಥವಾ ಬಂಗಾರದ ರೂಪದಲ್ಲಿಡಲು ಬಯಸುತ್ತಾರೆ. ಅಂಥವರಿಗೆ ಈ ಕಾನೂನು ವರದಾನವಾಗಿದೆ.

- Advertisement -
- Advertisement -

ಹಳ್ಳಿ ಬಿಟ್ಟು, ನಗರದಲ್ಲಿ ಸಾಫ್ಟ್ ವೇರ್ ಅಥವಾ ಟೆಕ್ಕಿಯಾಗಿ ಕೆಲಸ ಮಾಡಿದವರಿಗೆ, ಎಷ್ಟೋ ವರ್ಷಗಳಾದ ಮೇಲೆ ತನ್ನ ಹಳ್ಳಿಗೆ ಮರಳಿ ಭೂಮಿ ಕೊಂಡು ಅಲ್ಲಿಯೇ ಕೃಷಿ ಮಾಡಲು ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಅನುಕೂಲವಾಗಿದೆ ಎಂದು ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಹೇಳಿದ್ದಾರೆ.

ಬೆಂಗಳೂರು ವಿವಿಯ ಕಾನೂನು ಕಾಲೇಜು ಮತ್ತು ಕಾನೂನು ಅಧ್ಯಯನ ವಿಭಾಗದ ವತಿಯಿಂದ “ಕರ್ನಾಟಕ ಭೂಸುಧಾರಣೆ (ತಿದ್ದುಪಡಿ) ಆಧ್ಯಾದೇಶ-2020 ಕ್ಕೆ ಸಂಬಂಧಿಸಿದಂತೆ ಅದರ ಸಾಧಕ ಮತ್ತು ಬಾಧಕಗಳ” ಕುರಿತ ವೆಬಿನಾರ್‌ನಲ್ಲಿ ತಮ್ಮ ಸರ್ಕಾರದ ತಿದ್ದುಪಡಿಯನ್ನು ಸಮರ್ಥಿಸಿಕೊಂಡಿದ್ದಾರೆ.

ಉಳುವವನೇ ಭೂಮಿಯ ಒಡೆಯ ಎನ್ನುವ ಕಾಯ್ದೆ ಕಾಲಕ್ಕೆ ತಕ್ಕಂತೆ ಬದಲಾಗಬೇಕಾಗುತ್ತದೆ. ಈಗ ಆಗಿರುವುದೂ ಕೂಡ ಅದೇ. ಈ ತಿದ್ದುಪಡಿಯ ಅನ್ವಯ ಭೂಮಿ ಹೊಂದುವ ಹಕ್ಕನ್ನು 40 ಯೂನಿಟ್‌ವರೆಗೆ ಹೆಚ್ಚಿಸಲಾಗಿದೆ. ಯಾರು ಬೇಕಾದರೂ ಭೂಮಿ ಕೊಳ್ಳಬಹುದು. ರೈತ ಯಾರಿಗೆ ಬೇಕಾದರೂ ಭೂಮಿಯನ್ನು ಮಾರಬಹುದು. ಭೂಬೆಲೆಯ ಮೇಲೆ ಯಾವುದೇ ನಿಯಂತ್ರಣವಿರುವುದಿಲ್ಲ. ಇದರಿಂದ ರೈತನಿಗೆ ಲಾಭವೇ ಹೆಚ್ಚು ಎಂದು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಕೋಆಪರೇಟೀಕರಣದತ್ತ ಹೊರಳಬೇಕಿದ್ದ ಕೃಷಿ ಕಾರ್ಪೋರೇಟೀಕರಣದತ್ತ: ಈ ವಿನಾಶದ ಪರಿಣಾಮಗಳೇನು?


ನಗರದಿಂದ ವಾಪಾಸಾದವರು ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಭೂಮಿ ಖರೀದಿಸಿ ಅಲ್ಲಿಯೇ ನೆಲೆನಿಂತರು. ಯಾಕೆಂದರೆ ಅಲ್ಲಿ ಇದಕ್ಕೆ ಅವಕಾಶವಿದೆ. ಹಾಗಾಗಿಯೇ ಈ ತಿದ್ದುಪಡಿಯು ಹೆಚ್ಚು ಮಹತ್ವಪೂರ್ಣವಾದದ್ದು. ಅಷ್ಟಕ್ಕೂ ಈಗ ಇದನ್ನು ಟೀಕಿಸುತ್ತಿರುವ ಕಾಂಗ್ರೆಸ್‌ ಸರ್ಕಾರ 2015ರಲ್ಲಿ ಮಾಡಿದ ತಿದ್ದುಪಡಿಯ ಮುಂದುವರೆದ ಭಾಗವೇ ಈ ಕಾಯ್ದೆಯಾಗಿದೆ ಎಂದಿದ್ದಾರೆ.

ಭೂಮಿಯನ್ನು ಮಾರುವ ಮತ್ತು ಕೊಳ್ಳುವವರ ರಕ್ಷಣೆಗಾಗಿ ಈ ಕಾಯ್ದೆ ತರಲಾಗಿದೆ. ಭೂಮಿ ಮಾರಾಟ ಪ್ರಕ್ರಿಯೆಯಲ್ಲಿ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಿ ರೈತರಿಗೆ ಹೆಚ್ಚಿನ ಬೆಲೆಗೆ ಭೂಮಿಯನ್ನು ಮಾರಲು ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದರು.

ನಂತರ ಮಾತನಾಡಿದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್‌ ಮುಖಂಡ ಎಚ್.ಕೆ ಪಾಟೀಲ್ “ಮಾಧುಸ್ವಾಮಿಯವರು ಕೇವಲ ನಮ್ಮ ಟೀಕೆಗಳಿಗೆ ಉತ್ತರಿಸಿದರೇ ವಿನಃ ರೈತರ ಕಷ್ಟ ಕಾರ್ಪಣ್ಯಗಳ ಕುರಿತು ಚರ್ಚಿಸಿಲ್ಲ. 1974 ರಲ್ಲಿ ಬಂದ ಉಳುವವನೇ ಭೂಮಿಯ ಒಡೆಯ ಎಂಬ ಮಹತ್ವದ ಮತ್ತು ಸಾಮಾಜಿಕ ನ್ಯಾಯದ ಕಾನೂನನ್ನು ಬಿಜೆಪಿ ಸರ್ಕಾರ ಮಣ್ಣುಪಾಲು ಮಾಡುತ್ತಿದೆ” ಎಂದು ಆರೋಪಿಸಿದರು.

ಈಗಾಗಲೇ ಬರಗಾಲ, ಬೆಲೆನಿಗದಿ, ಮಧ್ಯವರ್ತಿಗಳ ಹಾವಳಿ, ಬಿತ್ತನೆ ಬೀಜ, ರಸಗೊಬ್ಬರಗಳ ರಾಜಕೀಯ, ಆರ್ಥಿಕ ಕುಸಿತ, ಕೊರೊನಾ ಮುಂತಾದ ಸಮಸ್ಯೆಗಳಲ್ಲಿ ಬಳಲುತ್ತಿರುವ ರೈತರಿಗೆ ಈ ತಿದ್ದುಪಡಿಯು ಗಾಯದ ಮೇಲೆ ಎಳೆದ ಬರೆಯಾಗಿದೆ ಎಂದು ಅಭಿಪ್ರಾಯಪಟ್ಟರು.


ಇದನ್ನೂ ಓದಿ: ಭೂ ಸುಧಾರಣಾ ಕಾನೂನಿನ ತಿದ್ದುಪಡಿ ಮತ್ತು ಅದರ ಪರಿಣಾಮಗಳು – ಡಾ.ಎ.ಆರ್ ವಾಸವಿ


ಉಳುವವನೇ ಭೂಮಿಯ ಒಡೆಯ ಎನ್ನುವ ಊರುಗೋಲನ್ನೇ ಕಿತ್ತು ಕಾರ್ಪೋರೇಟ್ ಕುಳಗಳ ಕೈಗೆ ಕೊಡಲಾಗುತ್ತಿದೆ. ನಗರದ ಶ್ರೀಮಂತರು, ಟೆಕ್ಕಿಗಳು ಬಂದು ಒಕ್ಕಲುತನ ಮಾಡುವುದಕ್ಕೆ ಅವಕಾಶ ಎಂಬ ಸಮರ್ಥನೆ ಮಾಡಿಕೊಳ್ಳಬೇಡಿ. ಬದಲಾಗಿ ಸಂಕಷ್ಟದಲ್ಲಿ ಸಿಲುಕಿರುವ ರೈತರಿಗೆ ಏನಾದರೂ ಪರಹಾರ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಸರ್ಕಾರವನ್ನು ಒತ್ತಾಯಿಸಿದರು.

ನಗರದಿಂದ ಬಂದು ಭೂಮಿ ಕೊಳ್ಳುವವರು ಕೃಷಿಗಾಗಿ ಭೂಮಿ ಕೊಳ್ಳುವುದಿಲ್ಲ. ಬದಲಿಗೆ ಅಲ್ಲಿ ಬೇರೆ ಬೇರೆ ಉದ್ಯಮಗಳನ್ನು ತೆರೆಯುತ್ತಾರೆ. ಜೊತೆಗೆ ಕಪ್ಪಹಣ ಹೊಂದಿರುವವರು ಅದನ್ನು ಭೂಮಿ ಅಥವಾ ಬಂಗಾರದ ರೂಪದಲ್ಲಿಡಲು ಬಯಸುತ್ತಾರೆ. ಅಂಥವರಿಗೆ ಈ ಕಾನೂನು ವರದಾನವಾಗಿದೆ ಎಂದು ಆರೋಪಿಸಿದರು.

ಹಿರಿಯ ವಕೀಲರಾದ ಪ್ರೊ. ರವಿವರ್ಮಕುಮಾರ್ ಮಾತನಾಡಿ, ಈ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ ತರುವಂತಹ ಅಗತ್ಯವಿತ್ತೇ? ಸದನ ಸೇರಲು ಸಾಧ್ಯವಾಗದಿದ್ದಾಗ, ಕೊರೊನಾ ತುರ್ತು ಸಂದರ್ಭದಲ್ಲಿ ಈ ಸುಗ್ರೀವಾಜ್ಞೆಯನ್ನು ತರಲಾಗಿದೆ. ಆದರೆ ಈಗ ಇರುವ ತುರ್ತು ಕೊರೊನಾ ರೋಗವೇ ಹೊರತು ಈ ಭೂಸುಧಾರಣಾ ಕಾಯ್ದೆಯಲ್ಲ ಎಂದರು.

ಸಚಿವ ಮಾಧುಸ್ವಾಮಿ ಹೇಳಿದಂತೆ ಈಗಾಗಲೇ ಸುಮಾರು 80 ಸಾವಿರ ಮೊಕದ್ದಮೆಗಳು ಈ ಭೂ ವಿವಾದಕ್ಕೆ ಸಂಬಂಧಿಸಿದಂತೆ ಇವೆ. ಅದರಲ್ಲಿ ಸುಮಾರು 50 ಸಾವಿರ ಪ್ರಕರಣಗಳು ಭೂಮಿ ತೆಗೆದುಕೊಂಡವರ ಪರವಾಗಿ ಆಗಿದೆ. 15 ಸಾವಿರ ಪ್ರಕರಣಗಳು ಸರ್ಕಾರದ ಪರ ಆಗಿವೆ. ಉಳಿದ 15 ಸಾವಿರ ಪ್ರಕರಣಗಳು ಹಾಗೆಯೇ ಉಳಿದಿವೆ ಎಂದರು.


ಇದನ್ನೂ ಓದಿ: ಸುತ್ತಿಗೆಯಿಂದ ಕ್ರೂರವಾಗಿ ಥಳಿಸಿದ ಗೋರಕ್ಷಕರು: ಕೈಕಟ್ಟಿ ನೋಡುತ್ತಿದ್ದ ಪೊಲೀಸರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...