Homeಕರ್ನಾಟಕ‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ

‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ

ನಗರದಿಂದ ಬಂದು ಭೂಮಿ ಕೊಳ್ಳುವವರು ಕೃಷಿಗಾಗಿ ಭೂಮಿ ಕೊಳ್ಳುವುದಿಲ್ಲ. ಬದಲಿಗೆ ಅಲ್ಲಿ ಬೇರೆ ಬೇರೆ ಉದ್ಯಮಗಳನ್ನು ತೆರೆಯುತ್ತಾರೆ. ಜೊತೆಗೆ ಕಪ್ಪಹಣ ಹೊಂದಿರುವವರು ಅದನ್ನು ಭೂಮಿ ಅಥವಾ ಬಂಗಾರದ ರೂಪದಲ್ಲಿಡಲು ಬಯಸುತ್ತಾರೆ. ಅಂಥವರಿಗೆ ಈ ಕಾನೂನು ವರದಾನವಾಗಿದೆ.

- Advertisement -
- Advertisement -

ಹಳ್ಳಿ ಬಿಟ್ಟು, ನಗರದಲ್ಲಿ ಸಾಫ್ಟ್ ವೇರ್ ಅಥವಾ ಟೆಕ್ಕಿಯಾಗಿ ಕೆಲಸ ಮಾಡಿದವರಿಗೆ, ಎಷ್ಟೋ ವರ್ಷಗಳಾದ ಮೇಲೆ ತನ್ನ ಹಳ್ಳಿಗೆ ಮರಳಿ ಭೂಮಿ ಕೊಂಡು ಅಲ್ಲಿಯೇ ಕೃಷಿ ಮಾಡಲು ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಅನುಕೂಲವಾಗಿದೆ ಎಂದು ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಹೇಳಿದ್ದಾರೆ.

ಬೆಂಗಳೂರು ವಿವಿಯ ಕಾನೂನು ಕಾಲೇಜು ಮತ್ತು ಕಾನೂನು ಅಧ್ಯಯನ ವಿಭಾಗದ ವತಿಯಿಂದ “ಕರ್ನಾಟಕ ಭೂಸುಧಾರಣೆ (ತಿದ್ದುಪಡಿ) ಆಧ್ಯಾದೇಶ-2020 ಕ್ಕೆ ಸಂಬಂಧಿಸಿದಂತೆ ಅದರ ಸಾಧಕ ಮತ್ತು ಬಾಧಕಗಳ” ಕುರಿತ ವೆಬಿನಾರ್‌ನಲ್ಲಿ ತಮ್ಮ ಸರ್ಕಾರದ ತಿದ್ದುಪಡಿಯನ್ನು ಸಮರ್ಥಿಸಿಕೊಂಡಿದ್ದಾರೆ.

ಉಳುವವನೇ ಭೂಮಿಯ ಒಡೆಯ ಎನ್ನುವ ಕಾಯ್ದೆ ಕಾಲಕ್ಕೆ ತಕ್ಕಂತೆ ಬದಲಾಗಬೇಕಾಗುತ್ತದೆ. ಈಗ ಆಗಿರುವುದೂ ಕೂಡ ಅದೇ. ಈ ತಿದ್ದುಪಡಿಯ ಅನ್ವಯ ಭೂಮಿ ಹೊಂದುವ ಹಕ್ಕನ್ನು 40 ಯೂನಿಟ್‌ವರೆಗೆ ಹೆಚ್ಚಿಸಲಾಗಿದೆ. ಯಾರು ಬೇಕಾದರೂ ಭೂಮಿ ಕೊಳ್ಳಬಹುದು. ರೈತ ಯಾರಿಗೆ ಬೇಕಾದರೂ ಭೂಮಿಯನ್ನು ಮಾರಬಹುದು. ಭೂಬೆಲೆಯ ಮೇಲೆ ಯಾವುದೇ ನಿಯಂತ್ರಣವಿರುವುದಿಲ್ಲ. ಇದರಿಂದ ರೈತನಿಗೆ ಲಾಭವೇ ಹೆಚ್ಚು ಎಂದು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಕೋಆಪರೇಟೀಕರಣದತ್ತ ಹೊರಳಬೇಕಿದ್ದ ಕೃಷಿ ಕಾರ್ಪೋರೇಟೀಕರಣದತ್ತ: ಈ ವಿನಾಶದ ಪರಿಣಾಮಗಳೇನು?


ನಗರದಿಂದ ವಾಪಾಸಾದವರು ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಭೂಮಿ ಖರೀದಿಸಿ ಅಲ್ಲಿಯೇ ನೆಲೆನಿಂತರು. ಯಾಕೆಂದರೆ ಅಲ್ಲಿ ಇದಕ್ಕೆ ಅವಕಾಶವಿದೆ. ಹಾಗಾಗಿಯೇ ಈ ತಿದ್ದುಪಡಿಯು ಹೆಚ್ಚು ಮಹತ್ವಪೂರ್ಣವಾದದ್ದು. ಅಷ್ಟಕ್ಕೂ ಈಗ ಇದನ್ನು ಟೀಕಿಸುತ್ತಿರುವ ಕಾಂಗ್ರೆಸ್‌ ಸರ್ಕಾರ 2015ರಲ್ಲಿ ಮಾಡಿದ ತಿದ್ದುಪಡಿಯ ಮುಂದುವರೆದ ಭಾಗವೇ ಈ ಕಾಯ್ದೆಯಾಗಿದೆ ಎಂದಿದ್ದಾರೆ.

ಭೂಮಿಯನ್ನು ಮಾರುವ ಮತ್ತು ಕೊಳ್ಳುವವರ ರಕ್ಷಣೆಗಾಗಿ ಈ ಕಾಯ್ದೆ ತರಲಾಗಿದೆ. ಭೂಮಿ ಮಾರಾಟ ಪ್ರಕ್ರಿಯೆಯಲ್ಲಿ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಿ ರೈತರಿಗೆ ಹೆಚ್ಚಿನ ಬೆಲೆಗೆ ಭೂಮಿಯನ್ನು ಮಾರಲು ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದರು.

ನಂತರ ಮಾತನಾಡಿದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್‌ ಮುಖಂಡ ಎಚ್.ಕೆ ಪಾಟೀಲ್ “ಮಾಧುಸ್ವಾಮಿಯವರು ಕೇವಲ ನಮ್ಮ ಟೀಕೆಗಳಿಗೆ ಉತ್ತರಿಸಿದರೇ ವಿನಃ ರೈತರ ಕಷ್ಟ ಕಾರ್ಪಣ್ಯಗಳ ಕುರಿತು ಚರ್ಚಿಸಿಲ್ಲ. 1974 ರಲ್ಲಿ ಬಂದ ಉಳುವವನೇ ಭೂಮಿಯ ಒಡೆಯ ಎಂಬ ಮಹತ್ವದ ಮತ್ತು ಸಾಮಾಜಿಕ ನ್ಯಾಯದ ಕಾನೂನನ್ನು ಬಿಜೆಪಿ ಸರ್ಕಾರ ಮಣ್ಣುಪಾಲು ಮಾಡುತ್ತಿದೆ” ಎಂದು ಆರೋಪಿಸಿದರು.

ಈಗಾಗಲೇ ಬರಗಾಲ, ಬೆಲೆನಿಗದಿ, ಮಧ್ಯವರ್ತಿಗಳ ಹಾವಳಿ, ಬಿತ್ತನೆ ಬೀಜ, ರಸಗೊಬ್ಬರಗಳ ರಾಜಕೀಯ, ಆರ್ಥಿಕ ಕುಸಿತ, ಕೊರೊನಾ ಮುಂತಾದ ಸಮಸ್ಯೆಗಳಲ್ಲಿ ಬಳಲುತ್ತಿರುವ ರೈತರಿಗೆ ಈ ತಿದ್ದುಪಡಿಯು ಗಾಯದ ಮೇಲೆ ಎಳೆದ ಬರೆಯಾಗಿದೆ ಎಂದು ಅಭಿಪ್ರಾಯಪಟ್ಟರು.


ಇದನ್ನೂ ಓದಿ: ಭೂ ಸುಧಾರಣಾ ಕಾನೂನಿನ ತಿದ್ದುಪಡಿ ಮತ್ತು ಅದರ ಪರಿಣಾಮಗಳು – ಡಾ.ಎ.ಆರ್ ವಾಸವಿ


ಉಳುವವನೇ ಭೂಮಿಯ ಒಡೆಯ ಎನ್ನುವ ಊರುಗೋಲನ್ನೇ ಕಿತ್ತು ಕಾರ್ಪೋರೇಟ್ ಕುಳಗಳ ಕೈಗೆ ಕೊಡಲಾಗುತ್ತಿದೆ. ನಗರದ ಶ್ರೀಮಂತರು, ಟೆಕ್ಕಿಗಳು ಬಂದು ಒಕ್ಕಲುತನ ಮಾಡುವುದಕ್ಕೆ ಅವಕಾಶ ಎಂಬ ಸಮರ್ಥನೆ ಮಾಡಿಕೊಳ್ಳಬೇಡಿ. ಬದಲಾಗಿ ಸಂಕಷ್ಟದಲ್ಲಿ ಸಿಲುಕಿರುವ ರೈತರಿಗೆ ಏನಾದರೂ ಪರಹಾರ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಸರ್ಕಾರವನ್ನು ಒತ್ತಾಯಿಸಿದರು.

ನಗರದಿಂದ ಬಂದು ಭೂಮಿ ಕೊಳ್ಳುವವರು ಕೃಷಿಗಾಗಿ ಭೂಮಿ ಕೊಳ್ಳುವುದಿಲ್ಲ. ಬದಲಿಗೆ ಅಲ್ಲಿ ಬೇರೆ ಬೇರೆ ಉದ್ಯಮಗಳನ್ನು ತೆರೆಯುತ್ತಾರೆ. ಜೊತೆಗೆ ಕಪ್ಪಹಣ ಹೊಂದಿರುವವರು ಅದನ್ನು ಭೂಮಿ ಅಥವಾ ಬಂಗಾರದ ರೂಪದಲ್ಲಿಡಲು ಬಯಸುತ್ತಾರೆ. ಅಂಥವರಿಗೆ ಈ ಕಾನೂನು ವರದಾನವಾಗಿದೆ ಎಂದು ಆರೋಪಿಸಿದರು.

ಹಿರಿಯ ವಕೀಲರಾದ ಪ್ರೊ. ರವಿವರ್ಮಕುಮಾರ್ ಮಾತನಾಡಿ, ಈ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ ತರುವಂತಹ ಅಗತ್ಯವಿತ್ತೇ? ಸದನ ಸೇರಲು ಸಾಧ್ಯವಾಗದಿದ್ದಾಗ, ಕೊರೊನಾ ತುರ್ತು ಸಂದರ್ಭದಲ್ಲಿ ಈ ಸುಗ್ರೀವಾಜ್ಞೆಯನ್ನು ತರಲಾಗಿದೆ. ಆದರೆ ಈಗ ಇರುವ ತುರ್ತು ಕೊರೊನಾ ರೋಗವೇ ಹೊರತು ಈ ಭೂಸುಧಾರಣಾ ಕಾಯ್ದೆಯಲ್ಲ ಎಂದರು.

ಸಚಿವ ಮಾಧುಸ್ವಾಮಿ ಹೇಳಿದಂತೆ ಈಗಾಗಲೇ ಸುಮಾರು 80 ಸಾವಿರ ಮೊಕದ್ದಮೆಗಳು ಈ ಭೂ ವಿವಾದಕ್ಕೆ ಸಂಬಂಧಿಸಿದಂತೆ ಇವೆ. ಅದರಲ್ಲಿ ಸುಮಾರು 50 ಸಾವಿರ ಪ್ರಕರಣಗಳು ಭೂಮಿ ತೆಗೆದುಕೊಂಡವರ ಪರವಾಗಿ ಆಗಿದೆ. 15 ಸಾವಿರ ಪ್ರಕರಣಗಳು ಸರ್ಕಾರದ ಪರ ಆಗಿವೆ. ಉಳಿದ 15 ಸಾವಿರ ಪ್ರಕರಣಗಳು ಹಾಗೆಯೇ ಉಳಿದಿವೆ ಎಂದರು.


ಇದನ್ನೂ ಓದಿ: ಸುತ್ತಿಗೆಯಿಂದ ಕ್ರೂರವಾಗಿ ಥಳಿಸಿದ ಗೋರಕ್ಷಕರು: ಕೈಕಟ್ಟಿ ನೋಡುತ್ತಿದ್ದ ಪೊಲೀಸರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...