Homeಕರ್ನಾಟಕ‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ

‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ

ನಗರದಿಂದ ಬಂದು ಭೂಮಿ ಕೊಳ್ಳುವವರು ಕೃಷಿಗಾಗಿ ಭೂಮಿ ಕೊಳ್ಳುವುದಿಲ್ಲ. ಬದಲಿಗೆ ಅಲ್ಲಿ ಬೇರೆ ಬೇರೆ ಉದ್ಯಮಗಳನ್ನು ತೆರೆಯುತ್ತಾರೆ. ಜೊತೆಗೆ ಕಪ್ಪಹಣ ಹೊಂದಿರುವವರು ಅದನ್ನು ಭೂಮಿ ಅಥವಾ ಬಂಗಾರದ ರೂಪದಲ್ಲಿಡಲು ಬಯಸುತ್ತಾರೆ. ಅಂಥವರಿಗೆ ಈ ಕಾನೂನು ವರದಾನವಾಗಿದೆ.

- Advertisement -
- Advertisement -

ಹಳ್ಳಿ ಬಿಟ್ಟು, ನಗರದಲ್ಲಿ ಸಾಫ್ಟ್ ವೇರ್ ಅಥವಾ ಟೆಕ್ಕಿಯಾಗಿ ಕೆಲಸ ಮಾಡಿದವರಿಗೆ, ಎಷ್ಟೋ ವರ್ಷಗಳಾದ ಮೇಲೆ ತನ್ನ ಹಳ್ಳಿಗೆ ಮರಳಿ ಭೂಮಿ ಕೊಂಡು ಅಲ್ಲಿಯೇ ಕೃಷಿ ಮಾಡಲು ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಅನುಕೂಲವಾಗಿದೆ ಎಂದು ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಹೇಳಿದ್ದಾರೆ.

ಬೆಂಗಳೂರು ವಿವಿಯ ಕಾನೂನು ಕಾಲೇಜು ಮತ್ತು ಕಾನೂನು ಅಧ್ಯಯನ ವಿಭಾಗದ ವತಿಯಿಂದ “ಕರ್ನಾಟಕ ಭೂಸುಧಾರಣೆ (ತಿದ್ದುಪಡಿ) ಆಧ್ಯಾದೇಶ-2020 ಕ್ಕೆ ಸಂಬಂಧಿಸಿದಂತೆ ಅದರ ಸಾಧಕ ಮತ್ತು ಬಾಧಕಗಳ” ಕುರಿತ ವೆಬಿನಾರ್‌ನಲ್ಲಿ ತಮ್ಮ ಸರ್ಕಾರದ ತಿದ್ದುಪಡಿಯನ್ನು ಸಮರ್ಥಿಸಿಕೊಂಡಿದ್ದಾರೆ.

ಉಳುವವನೇ ಭೂಮಿಯ ಒಡೆಯ ಎನ್ನುವ ಕಾಯ್ದೆ ಕಾಲಕ್ಕೆ ತಕ್ಕಂತೆ ಬದಲಾಗಬೇಕಾಗುತ್ತದೆ. ಈಗ ಆಗಿರುವುದೂ ಕೂಡ ಅದೇ. ಈ ತಿದ್ದುಪಡಿಯ ಅನ್ವಯ ಭೂಮಿ ಹೊಂದುವ ಹಕ್ಕನ್ನು 40 ಯೂನಿಟ್‌ವರೆಗೆ ಹೆಚ್ಚಿಸಲಾಗಿದೆ. ಯಾರು ಬೇಕಾದರೂ ಭೂಮಿ ಕೊಳ್ಳಬಹುದು. ರೈತ ಯಾರಿಗೆ ಬೇಕಾದರೂ ಭೂಮಿಯನ್ನು ಮಾರಬಹುದು. ಭೂಬೆಲೆಯ ಮೇಲೆ ಯಾವುದೇ ನಿಯಂತ್ರಣವಿರುವುದಿಲ್ಲ. ಇದರಿಂದ ರೈತನಿಗೆ ಲಾಭವೇ ಹೆಚ್ಚು ಎಂದು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಕೋಆಪರೇಟೀಕರಣದತ್ತ ಹೊರಳಬೇಕಿದ್ದ ಕೃಷಿ ಕಾರ್ಪೋರೇಟೀಕರಣದತ್ತ: ಈ ವಿನಾಶದ ಪರಿಣಾಮಗಳೇನು?


ನಗರದಿಂದ ವಾಪಾಸಾದವರು ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಭೂಮಿ ಖರೀದಿಸಿ ಅಲ್ಲಿಯೇ ನೆಲೆನಿಂತರು. ಯಾಕೆಂದರೆ ಅಲ್ಲಿ ಇದಕ್ಕೆ ಅವಕಾಶವಿದೆ. ಹಾಗಾಗಿಯೇ ಈ ತಿದ್ದುಪಡಿಯು ಹೆಚ್ಚು ಮಹತ್ವಪೂರ್ಣವಾದದ್ದು. ಅಷ್ಟಕ್ಕೂ ಈಗ ಇದನ್ನು ಟೀಕಿಸುತ್ತಿರುವ ಕಾಂಗ್ರೆಸ್‌ ಸರ್ಕಾರ 2015ರಲ್ಲಿ ಮಾಡಿದ ತಿದ್ದುಪಡಿಯ ಮುಂದುವರೆದ ಭಾಗವೇ ಈ ಕಾಯ್ದೆಯಾಗಿದೆ ಎಂದಿದ್ದಾರೆ.

ಭೂಮಿಯನ್ನು ಮಾರುವ ಮತ್ತು ಕೊಳ್ಳುವವರ ರಕ್ಷಣೆಗಾಗಿ ಈ ಕಾಯ್ದೆ ತರಲಾಗಿದೆ. ಭೂಮಿ ಮಾರಾಟ ಪ್ರಕ್ರಿಯೆಯಲ್ಲಿ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಿ ರೈತರಿಗೆ ಹೆಚ್ಚಿನ ಬೆಲೆಗೆ ಭೂಮಿಯನ್ನು ಮಾರಲು ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದರು.

ನಂತರ ಮಾತನಾಡಿದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್‌ ಮುಖಂಡ ಎಚ್.ಕೆ ಪಾಟೀಲ್ “ಮಾಧುಸ್ವಾಮಿಯವರು ಕೇವಲ ನಮ್ಮ ಟೀಕೆಗಳಿಗೆ ಉತ್ತರಿಸಿದರೇ ವಿನಃ ರೈತರ ಕಷ್ಟ ಕಾರ್ಪಣ್ಯಗಳ ಕುರಿತು ಚರ್ಚಿಸಿಲ್ಲ. 1974 ರಲ್ಲಿ ಬಂದ ಉಳುವವನೇ ಭೂಮಿಯ ಒಡೆಯ ಎಂಬ ಮಹತ್ವದ ಮತ್ತು ಸಾಮಾಜಿಕ ನ್ಯಾಯದ ಕಾನೂನನ್ನು ಬಿಜೆಪಿ ಸರ್ಕಾರ ಮಣ್ಣುಪಾಲು ಮಾಡುತ್ತಿದೆ” ಎಂದು ಆರೋಪಿಸಿದರು.

ಈಗಾಗಲೇ ಬರಗಾಲ, ಬೆಲೆನಿಗದಿ, ಮಧ್ಯವರ್ತಿಗಳ ಹಾವಳಿ, ಬಿತ್ತನೆ ಬೀಜ, ರಸಗೊಬ್ಬರಗಳ ರಾಜಕೀಯ, ಆರ್ಥಿಕ ಕುಸಿತ, ಕೊರೊನಾ ಮುಂತಾದ ಸಮಸ್ಯೆಗಳಲ್ಲಿ ಬಳಲುತ್ತಿರುವ ರೈತರಿಗೆ ಈ ತಿದ್ದುಪಡಿಯು ಗಾಯದ ಮೇಲೆ ಎಳೆದ ಬರೆಯಾಗಿದೆ ಎಂದು ಅಭಿಪ್ರಾಯಪಟ್ಟರು.


ಇದನ್ನೂ ಓದಿ: ಭೂ ಸುಧಾರಣಾ ಕಾನೂನಿನ ತಿದ್ದುಪಡಿ ಮತ್ತು ಅದರ ಪರಿಣಾಮಗಳು – ಡಾ.ಎ.ಆರ್ ವಾಸವಿ


ಉಳುವವನೇ ಭೂಮಿಯ ಒಡೆಯ ಎನ್ನುವ ಊರುಗೋಲನ್ನೇ ಕಿತ್ತು ಕಾರ್ಪೋರೇಟ್ ಕುಳಗಳ ಕೈಗೆ ಕೊಡಲಾಗುತ್ತಿದೆ. ನಗರದ ಶ್ರೀಮಂತರು, ಟೆಕ್ಕಿಗಳು ಬಂದು ಒಕ್ಕಲುತನ ಮಾಡುವುದಕ್ಕೆ ಅವಕಾಶ ಎಂಬ ಸಮರ್ಥನೆ ಮಾಡಿಕೊಳ್ಳಬೇಡಿ. ಬದಲಾಗಿ ಸಂಕಷ್ಟದಲ್ಲಿ ಸಿಲುಕಿರುವ ರೈತರಿಗೆ ಏನಾದರೂ ಪರಹಾರ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಸರ್ಕಾರವನ್ನು ಒತ್ತಾಯಿಸಿದರು.

ನಗರದಿಂದ ಬಂದು ಭೂಮಿ ಕೊಳ್ಳುವವರು ಕೃಷಿಗಾಗಿ ಭೂಮಿ ಕೊಳ್ಳುವುದಿಲ್ಲ. ಬದಲಿಗೆ ಅಲ್ಲಿ ಬೇರೆ ಬೇರೆ ಉದ್ಯಮಗಳನ್ನು ತೆರೆಯುತ್ತಾರೆ. ಜೊತೆಗೆ ಕಪ್ಪಹಣ ಹೊಂದಿರುವವರು ಅದನ್ನು ಭೂಮಿ ಅಥವಾ ಬಂಗಾರದ ರೂಪದಲ್ಲಿಡಲು ಬಯಸುತ್ತಾರೆ. ಅಂಥವರಿಗೆ ಈ ಕಾನೂನು ವರದಾನವಾಗಿದೆ ಎಂದು ಆರೋಪಿಸಿದರು.

ಹಿರಿಯ ವಕೀಲರಾದ ಪ್ರೊ. ರವಿವರ್ಮಕುಮಾರ್ ಮಾತನಾಡಿ, ಈ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ ತರುವಂತಹ ಅಗತ್ಯವಿತ್ತೇ? ಸದನ ಸೇರಲು ಸಾಧ್ಯವಾಗದಿದ್ದಾಗ, ಕೊರೊನಾ ತುರ್ತು ಸಂದರ್ಭದಲ್ಲಿ ಈ ಸುಗ್ರೀವಾಜ್ಞೆಯನ್ನು ತರಲಾಗಿದೆ. ಆದರೆ ಈಗ ಇರುವ ತುರ್ತು ಕೊರೊನಾ ರೋಗವೇ ಹೊರತು ಈ ಭೂಸುಧಾರಣಾ ಕಾಯ್ದೆಯಲ್ಲ ಎಂದರು.

ಸಚಿವ ಮಾಧುಸ್ವಾಮಿ ಹೇಳಿದಂತೆ ಈಗಾಗಲೇ ಸುಮಾರು 80 ಸಾವಿರ ಮೊಕದ್ದಮೆಗಳು ಈ ಭೂ ವಿವಾದಕ್ಕೆ ಸಂಬಂಧಿಸಿದಂತೆ ಇವೆ. ಅದರಲ್ಲಿ ಸುಮಾರು 50 ಸಾವಿರ ಪ್ರಕರಣಗಳು ಭೂಮಿ ತೆಗೆದುಕೊಂಡವರ ಪರವಾಗಿ ಆಗಿದೆ. 15 ಸಾವಿರ ಪ್ರಕರಣಗಳು ಸರ್ಕಾರದ ಪರ ಆಗಿವೆ. ಉಳಿದ 15 ಸಾವಿರ ಪ್ರಕರಣಗಳು ಹಾಗೆಯೇ ಉಳಿದಿವೆ ಎಂದರು.


ಇದನ್ನೂ ಓದಿ: ಸುತ್ತಿಗೆಯಿಂದ ಕ್ರೂರವಾಗಿ ಥಳಿಸಿದ ಗೋರಕ್ಷಕರು: ಕೈಕಟ್ಟಿ ನೋಡುತ್ತಿದ್ದ ಪೊಲೀಸರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...