Homeಮುಖಪುಟದಲಿತನೆಂಬ ಕಾರಣಕ್ಕೆ ಮಧುಮಗನನ್ನು ಕುದುರೆಯಿಂದ ಕೆಳಗಿಳಿಸಿ ಹಲ್ಲೆ!

ದಲಿತನೆಂಬ ಕಾರಣಕ್ಕೆ ಮಧುಮಗನನ್ನು ಕುದುರೆಯಿಂದ ಕೆಳಗಿಳಿಸಿ ಹಲ್ಲೆ!

ಮೇಲ್ಜಾತಿಯ ಜನರು ಶಿವಪುರ ಗ್ರಾಮದಲ್ಲಿ ದಲಿತ ವರನನ್ನು ಕುದುರೆಯಿಂದ ಕೆಳಗಿಳಿಯುವಂತೆ ಒತ್ತಾಯಿಸಿ, ಮದುವೆ ಮೆರವಣಿಗೆಯಲ್ಲಿ ಭಾಗವಹಿಸಿದ್ದವರನ್ನು ಥಳಿಸಿದ್ದಾರೆ ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -
- Advertisement -

ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ಬುಧವಾರ ಜಾತಿ ದೌರ್ಜನ್ಯದ ಅಮಾನವೀಯ ಘಟನೆಯೊಂದು ವರದಿಯಾಗಿದ್ದು, ಕರೇರಾದ ಶಿವಪುರ ಗ್ರಾಮದಲ್ಲಿ ದಲಿತ ಸಮುದಾಯಕ್ಕೆ ಸೇರಿದ ‘ಮಧುಮಗ’ ಕುದುರೆ ಹತ್ತಿದ್ದಕ್ಕೆ ಸಹಿಸದ ಮೇಲ್ಜಾತಿಯವರು ಹಲ್ಲೆ ಮಾಡಿದ್ದಾರೆ. ಮದುವೆಯ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಜನರರನ್ನು ಥಳಿಸಿ, ವರನನ್ನು ಕುದುರೆಯಿಂದ ಕೆಳಗಿಳಿಯುವಂತೆ ಒತ್ತಾಯಿಸಿದ್ದಾರೆ.

“ಮೇಲ್ಜಾತಿಯ ಜನರು ಶಿವಪುರ ಗ್ರಾಮದಲ್ಲಿ ದಲಿತ ವರನನ್ನು ಕುದುರೆಯಿಂದ ಕೆಳಗಿಳಿಯುವಂತೆ ಒತ್ತಾಯಿಸಿ, ಮದುವೆ ಮೆರವಣಿಗೆಯಲ್ಲಿ ಭಾಗವಹಿಸಿದ್ದವರನ್ನು ಥಳಿಸಿದ್ದಾರೆ ಎಂದು ನಮಗೆ ಇಂದು ಮಾಹಿತಿ ಬಂದಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದೇವೆ. ತನಿಖೆ ನಡೆಸಲಾಗುತ್ತಿದೆ” ಎಂದು ಕರೇರಾ ಪೊಲೀಸ್ ಠಾಣೆಯ ಉಸ್ತುವಾರಿ ಜಗದೀಶ್ ಪ್ರಸಾದ್ ಹೇಳಿದ್ದಾರೆ.

ಇದನ್ನೂ ಓದಿ: ಒಂದೇ ಊರಲ್ಲಿ ಪದೇ ಪದೇ ನಡೆಯುತ್ತಿರುವ ದಲಿತರ ಮೇಲಿನ ಅತ್ಯಾಚಾರ ಮತ್ತು ಜಾತಿ ದೌರ್ಜನ್ಯಗಳು

ದಲಿತರು ಕುದುರೆ ಸವಾರಿ ಮಾಡಬಾರದು ಎಂದು ಮೇಲ್ಜಾತಿಯವರು ಒತ್ತಾಯಪೂರ್ವಕವಾಗಿ ಹೇರಿರುವ ನಿಯಮವನ್ನು ಧಿಕ್ಕರಿಸಿದ ದಲಿತರ ಮೇಲೆ ಹಲ್ಲೆ ಮಾಡಿರುವ ನೂರಾರು ಪ್ರಕರಣಗಳು ಕಳೆದ ಕೆಲವು ವರ್ಷಗಳಿಂದ ದಾಖಲಾಗುತ್ತಿವೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

2019 ರ ಮೇ ತಿಂಗಳಲ್ಲಿ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಲೋರ್ ಗ್ರಾಮದಲ್ಲಿ ದಲಿತರ ಕುದುರೆ ಸವಾರಿಯೊಟ್ಟಿಗೆ ವಿವಾಹ ಮೆರವಣಿಗೆಯನ್ನು ಮಾಡಿದ್ದಕ್ಕೆ ಆ ಸಮುದಾಯಕ್ಕೆ ಮತ್ತು ಕುಟುಂಬಕ್ಕೆ ಬಹಿಷ್ಕಾರ ಹಾಕಲಾಗಿದೆ.

ಇದನ್ನೂ ಓದಿ: ’ಜಾತ್ಯಾತೀತರು’ ಎಂದ ದಲಿತ ಕುಟುಂಬಕ್ಕೆ ಜಾತಿ ಪ್ರಮಾಣಪತ್ರ ನಿರಾಕರಣೆ!

ಈ ವರ್ಷದ ಫೆಬ್ರವರಿಯಲ್ಲಿ, ಗುಜರಾತ್‌ನ ಬನಸ್ಕಂತ ಜಿಲ್ಲೆಯಲ್ಲಿ ದಲಿತ ವ್ಯಕ್ತಿಯ ವಿವಾಹ ಮೆರವಣಿಗೆಯನ್ನು ಪೊಲೀಸ್ ರಕ್ಷಣೆಯಲ್ಲಿ ನಡೆಸಲಾಗಿತ್ತು.

ಹೀಗೆ ನೂರಾರು ಜಾತಿ ದೌರ್ಜನ್ಯದ ಘಟನೆಗಳು ನಮ್ಮೆದುರಿಗೆ ಇವೆ. ಆದರೂ ಸೋ ಕಾಲ್ಡ್‌ ದೇಶಪ್ರೇಮಿಗಳು ಈಗ ಜಾತಿ ಪದ್ದತಿ ದೇಶದಲ್ಲಿ ಇಲ್ಲ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ.


ಇದನ್ನೂ ಓದಿ: ಇದು ಎಲ್ಲಾ ಮೇಲ್ಜಾತಿ ಜನರೂ ಪ್ರತಿಕ್ರಿಯಿಸಲೇಬೇಕಾದ ಸಮಯ, ಮಾಧ್ಯಮಗಳಲ್ಲಿರುವ ಮೇಲ್ಜಾತಿಯವರನ್ನೂ ಒಳಗೊಂಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...