Homeಕರೋನಾ ತಲ್ಲಣದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ ಹೇರಿಕೆ: ಶವಸಂಸ್ಕಾರವೂ ಸಾಧ್ಯವಾಗದ ಒತ್ತಡ

ದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ ಹೇರಿಕೆ: ಶವಸಂಸ್ಕಾರವೂ ಸಾಧ್ಯವಾಗದ ಒತ್ತಡ

"ಇನ್ನೂ 90 ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಇಲ್ಲಿ ಸ್ಥಳಾವಕಾಶವಿದೆ. ಪರಿಸ್ಥಿತಿ ಮುಂದುವರಿದರೆ ಮುಂದಿನ 10 ದಿನಗಳಲ್ಲಿ ಇಲ್ಲಿ ಯಾವುದೇ ಅಂತ್ಯಸಂಸ್ಕಾರಕ್ಕೆ ಸ್ಥಳಾವಕಾಶವಿಲ್ಲ"

- Advertisement -
- Advertisement -

ದೆಹಲಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕೊರೊನಾ ಸಂಬಂಧಿತ ಸಾವುಗಳು ಹೆಚ್ಚುತ್ತಲೇ ಇದೆ. ಈ ಹಿನ್ನೆಲೆ ದೆಹಲಿಯ ಅತಿದೊಡ್ಡ ಶವಾಗಾರವಾದ ನಿಗಂಬೋಧ್ ಘಾಟ್‌ನಲ್ಲಿ ಪ್ರತಿದಿನ ಶವಸಂಸ್ಕಾರಗಳ ಸಂಖ್ಯೆ 15 ರಿಂದ 30 ಕ್ಕೆ ಏರಿಕೆಯಾಗುತ್ತಿದೆ. ಜೊತೆಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಅಗತ್ಯ ವಸ್ತುಗಳಿಗೆ ಮಾತ್ರ ಅವಕಾಶ ನೀಡಿ, ವಾರಾಂತ್ಯ ಕರ್ಫ್ಯೂ ಘೋಷಿಸಿ ಆದೇಶಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕದಿಂದ ದೆಹಲಿಯಲ್ಲಿ ಬುಧವಾರ 104 ಸಾವುಗಳು ದಾಖಲಾಗಿವೆ. ನವೆಂಬರ್ 20 ರಿಂದ ಇತ್ತಿಚೆಗೆ ದಾಖಲಾದ ಅತಿ ಹೆಚ್ಚಿನ ಕೊರೊನಾ ಸಾವುಗಳ ಸಂಖ್ಯೆಯಾಗಿದೆ.

ಮಂಗಳವಾರ ರಾತ್ರಿ ಕೊರೊನಾ ಸೋಂಕಿಗೆ ಬಲಿಯಾಗಿದ್ದ ತನ್ನ ಅಜ್ಜನ ಮೃತದೇಹವನ್ನು ಅಂತ್ಯಸಂಸ್ಕಾರಕ್ಕೆ ತಂದಿದ್ದ ಗೌತಮ್ (27) ಬುಧವಾರ ಬೆಳಿಗ್ಗೆ 8:30 ಕ್ಕೆ ನಿಗಂಬೋಧ್ ಘಾಟ್‌ಗೆ ತಲುಪಿದ್ದರು. ಶವಸಂಸ್ಕಾರ ಕೇಂದ್ರದಲ್ಲಿ ಸ್ಥಳಾವಕಾಶವಿಲ್ಲದ ಕಾರಣ ಅಂತ್ಯಕ್ರಿಯೆ ನಡೆಸಲು ಸುಮಾರು ಐದು ಗಂಟೆಗಳಿಗಿಂತಲು ಹೆಚ್ಚು ಕಾಲ ಕಾಯಬೇಕಾಗಿತ್ತು.

ಇದನ್ನೂ ಓದಿ: ಪೂಜಾ ಸ್ಥಳಗಳ ಕಾಯ್ದೆ ರದ್ದು ಮಾಡುವ ಹುನ್ನಾರ; ಸೆಕ್ಯುಲರಿಸಂನ ಶವಸಂಸ್ಕಾರ

“ನಾವು ಬೆಳಿಗ್ಗೆ 8: 30 ಕ್ಕೆ ನಿಗಂಬೋಧ್ ಘಾಟ್‌ಗೆ ಬಂದಿದ್ದೇವೆ. ಐದು ಗಂಟೆಗಳು ಕಳೆದರು ನಮ್ಮ ಸರದಿ ಇನ್ನೂ ಬಂದಿರಲಿಲ್ಲ. ಇಲ್ಲಿನ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ. ಪ್ರತಿ ಆಂಬ್ಯುಲೆನ್ಸ್‌ನಲ್ಲಿ ಎರಡು ಮೂರು ಮೃತ ದೇಹಗಳನ್ನು ತರಲಾಗುತ್ತಿದೆ” ಎಂದು ಗೌತಮ್ ಹೇಳಿದ್ದಾರೆ.

ಸ್ಮಶಾನದ ಉಸ್ತುವಾರಿಯಾಗಿರುವ ಮೊಹಮ್ಮದ್ ಶಮೀಮ್, “ಅಂತ್ಯಸಂಸ್ಕಾರಕ್ಕೆ ದಿನಕ್ಕೆ ಒಂದು ಅಥವಾ ಎರಡು ಮೃತ ದೇಹಗಳು ಬರುತ್ತಿದ್ದವು. ಕಳೆದ ಐದು ದಿನಗಳಲ್ಲಿ ಸ್ಥಿತಿ ಹದಗೆಟ್ಟಿದ್ದು, ಪ್ರತಿದಿನ 17 ಮೃತದೇಹಗಳು ಬರುತ್ತಿದೆ. ನಮಗೆ ಇನ್ನೂ 90 ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಸ್ಥಳಾವಕಾಶವಿದೆ. ಪರಿಸ್ಥಿತಿ ಮುಂದುವರಿದರೆ ಇದು ಮುಂದಿನ 10 ದಿನಗಳಲ್ಲಿ ಇಲ್ಲಿ ಯಾವುದೇ ಸ್ಥಳಾವಕಾಶವಿಲ್ಲ” ಎಂದಿದ್ದಾರೆ.

ಇತ್ತ ದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಈಗಾಗಲೇ ತಯಾರಿ ಮಾಡಿಕೊಂಡಿರುವ ವಿವಾಹಗಳಂತಹ ಅಗತ್ಯ ಚಟುವಟಿಕೆಗಳನ್ನು ಕರ್ಫ್ಯೂ ಪಾಸ್ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಸಭಾಂಗಣಗಳು, ಮಾಲ್‌ಗಳು, ಜಿಮ್‌ಗಳು ಮತ್ತು ಸ್ಪಾಗಳನ್ನು ಮುಚ್ಚಲಾಗುತ್ತದೆ. ವಾರದ ದಿನಗಳಲ್ಲಿ ಮೂರನೇ ಒಂದು ಭಾಗದಷ್ಟು ಸಾಮರ್ಥ್ಯದೊಂದಿಗೆ ಚಿತ್ರಮಂದಿರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಹೊರಗಡೆ ಊಟ ಮಾಡುವುದನ್ನು ನಿಷೇಧಿಸಿ, ಪಾರ್ಸಲ್ ವ್ಯವಸ್ಥೆಗೆ ಮಾತ್ರ ಒಪ್ಪಿಗೆ ನೀಡಲಾಗಿದೆ.

“ಈ ನಿರ್ಬಂಧಗಳು ನಿಮ್ಮ ಸಲುವಾಗಿ, ನಿಮಗಾಗಿ ಮತ್ತು ನಿಮ್ಮ ಕುಟುಂಬಗಳಿಗೆ. ಇದು ಅನಾನುಕೂಲವಾಗುತ್ತದೆ ನಿಜ ಆದರೆ, ಕೊರೊನಾ ಹರಡುವುದನ್ನು ತಡೆಯಲು ಇದು ಅವಶ್ಯಕ” ಎಂದು ಅರವಿಂದ್ ಕೇಜ್ರಿವಾಲ್ ವಿಡಿಯೋ ಭಾಷಣದಲ್ಲಿ ತಿಳಿಸಿದ್ದಾರೆ. ಜೊತೆಗೆ ಎಲ್ಲಾ ಅಗತ್ಯ ಸೇವೆಗಳು ವಾರಾಂತ್ಯದಲ್ಲಿ ಲಭ್ಯವಿರುತ್ತವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ: ಮೃತದೇಹವನ್ನು ಕಸದ ವಾಹನದಲ್ಲಿ ಸಾಗಾಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...