Homeಕರೋನಾ ತಲ್ಲಣದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ ಹೇರಿಕೆ: ಶವಸಂಸ್ಕಾರವೂ ಸಾಧ್ಯವಾಗದ ಒತ್ತಡ

ದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ ಹೇರಿಕೆ: ಶವಸಂಸ್ಕಾರವೂ ಸಾಧ್ಯವಾಗದ ಒತ್ತಡ

"ಇನ್ನೂ 90 ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಇಲ್ಲಿ ಸ್ಥಳಾವಕಾಶವಿದೆ. ಪರಿಸ್ಥಿತಿ ಮುಂದುವರಿದರೆ ಮುಂದಿನ 10 ದಿನಗಳಲ್ಲಿ ಇಲ್ಲಿ ಯಾವುದೇ ಅಂತ್ಯಸಂಸ್ಕಾರಕ್ಕೆ ಸ್ಥಳಾವಕಾಶವಿಲ್ಲ"

- Advertisement -
- Advertisement -

ದೆಹಲಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕೊರೊನಾ ಸಂಬಂಧಿತ ಸಾವುಗಳು ಹೆಚ್ಚುತ್ತಲೇ ಇದೆ. ಈ ಹಿನ್ನೆಲೆ ದೆಹಲಿಯ ಅತಿದೊಡ್ಡ ಶವಾಗಾರವಾದ ನಿಗಂಬೋಧ್ ಘಾಟ್‌ನಲ್ಲಿ ಪ್ರತಿದಿನ ಶವಸಂಸ್ಕಾರಗಳ ಸಂಖ್ಯೆ 15 ರಿಂದ 30 ಕ್ಕೆ ಏರಿಕೆಯಾಗುತ್ತಿದೆ. ಜೊತೆಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಅಗತ್ಯ ವಸ್ತುಗಳಿಗೆ ಮಾತ್ರ ಅವಕಾಶ ನೀಡಿ, ವಾರಾಂತ್ಯ ಕರ್ಫ್ಯೂ ಘೋಷಿಸಿ ಆದೇಶಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕದಿಂದ ದೆಹಲಿಯಲ್ಲಿ ಬುಧವಾರ 104 ಸಾವುಗಳು ದಾಖಲಾಗಿವೆ. ನವೆಂಬರ್ 20 ರಿಂದ ಇತ್ತಿಚೆಗೆ ದಾಖಲಾದ ಅತಿ ಹೆಚ್ಚಿನ ಕೊರೊನಾ ಸಾವುಗಳ ಸಂಖ್ಯೆಯಾಗಿದೆ.

ಮಂಗಳವಾರ ರಾತ್ರಿ ಕೊರೊನಾ ಸೋಂಕಿಗೆ ಬಲಿಯಾಗಿದ್ದ ತನ್ನ ಅಜ್ಜನ ಮೃತದೇಹವನ್ನು ಅಂತ್ಯಸಂಸ್ಕಾರಕ್ಕೆ ತಂದಿದ್ದ ಗೌತಮ್ (27) ಬುಧವಾರ ಬೆಳಿಗ್ಗೆ 8:30 ಕ್ಕೆ ನಿಗಂಬೋಧ್ ಘಾಟ್‌ಗೆ ತಲುಪಿದ್ದರು. ಶವಸಂಸ್ಕಾರ ಕೇಂದ್ರದಲ್ಲಿ ಸ್ಥಳಾವಕಾಶವಿಲ್ಲದ ಕಾರಣ ಅಂತ್ಯಕ್ರಿಯೆ ನಡೆಸಲು ಸುಮಾರು ಐದು ಗಂಟೆಗಳಿಗಿಂತಲು ಹೆಚ್ಚು ಕಾಲ ಕಾಯಬೇಕಾಗಿತ್ತು.

ಇದನ್ನೂ ಓದಿ: ಪೂಜಾ ಸ್ಥಳಗಳ ಕಾಯ್ದೆ ರದ್ದು ಮಾಡುವ ಹುನ್ನಾರ; ಸೆಕ್ಯುಲರಿಸಂನ ಶವಸಂಸ್ಕಾರ

“ನಾವು ಬೆಳಿಗ್ಗೆ 8: 30 ಕ್ಕೆ ನಿಗಂಬೋಧ್ ಘಾಟ್‌ಗೆ ಬಂದಿದ್ದೇವೆ. ಐದು ಗಂಟೆಗಳು ಕಳೆದರು ನಮ್ಮ ಸರದಿ ಇನ್ನೂ ಬಂದಿರಲಿಲ್ಲ. ಇಲ್ಲಿನ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ. ಪ್ರತಿ ಆಂಬ್ಯುಲೆನ್ಸ್‌ನಲ್ಲಿ ಎರಡು ಮೂರು ಮೃತ ದೇಹಗಳನ್ನು ತರಲಾಗುತ್ತಿದೆ” ಎಂದು ಗೌತಮ್ ಹೇಳಿದ್ದಾರೆ.

ಸ್ಮಶಾನದ ಉಸ್ತುವಾರಿಯಾಗಿರುವ ಮೊಹಮ್ಮದ್ ಶಮೀಮ್, “ಅಂತ್ಯಸಂಸ್ಕಾರಕ್ಕೆ ದಿನಕ್ಕೆ ಒಂದು ಅಥವಾ ಎರಡು ಮೃತ ದೇಹಗಳು ಬರುತ್ತಿದ್ದವು. ಕಳೆದ ಐದು ದಿನಗಳಲ್ಲಿ ಸ್ಥಿತಿ ಹದಗೆಟ್ಟಿದ್ದು, ಪ್ರತಿದಿನ 17 ಮೃತದೇಹಗಳು ಬರುತ್ತಿದೆ. ನಮಗೆ ಇನ್ನೂ 90 ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಸ್ಥಳಾವಕಾಶವಿದೆ. ಪರಿಸ್ಥಿತಿ ಮುಂದುವರಿದರೆ ಇದು ಮುಂದಿನ 10 ದಿನಗಳಲ್ಲಿ ಇಲ್ಲಿ ಯಾವುದೇ ಸ್ಥಳಾವಕಾಶವಿಲ್ಲ” ಎಂದಿದ್ದಾರೆ.

ಇತ್ತ ದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಈಗಾಗಲೇ ತಯಾರಿ ಮಾಡಿಕೊಂಡಿರುವ ವಿವಾಹಗಳಂತಹ ಅಗತ್ಯ ಚಟುವಟಿಕೆಗಳನ್ನು ಕರ್ಫ್ಯೂ ಪಾಸ್ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಸಭಾಂಗಣಗಳು, ಮಾಲ್‌ಗಳು, ಜಿಮ್‌ಗಳು ಮತ್ತು ಸ್ಪಾಗಳನ್ನು ಮುಚ್ಚಲಾಗುತ್ತದೆ. ವಾರದ ದಿನಗಳಲ್ಲಿ ಮೂರನೇ ಒಂದು ಭಾಗದಷ್ಟು ಸಾಮರ್ಥ್ಯದೊಂದಿಗೆ ಚಿತ್ರಮಂದಿರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಹೊರಗಡೆ ಊಟ ಮಾಡುವುದನ್ನು ನಿಷೇಧಿಸಿ, ಪಾರ್ಸಲ್ ವ್ಯವಸ್ಥೆಗೆ ಮಾತ್ರ ಒಪ್ಪಿಗೆ ನೀಡಲಾಗಿದೆ.

“ಈ ನಿರ್ಬಂಧಗಳು ನಿಮ್ಮ ಸಲುವಾಗಿ, ನಿಮಗಾಗಿ ಮತ್ತು ನಿಮ್ಮ ಕುಟುಂಬಗಳಿಗೆ. ಇದು ಅನಾನುಕೂಲವಾಗುತ್ತದೆ ನಿಜ ಆದರೆ, ಕೊರೊನಾ ಹರಡುವುದನ್ನು ತಡೆಯಲು ಇದು ಅವಶ್ಯಕ” ಎಂದು ಅರವಿಂದ್ ಕೇಜ್ರಿವಾಲ್ ವಿಡಿಯೋ ಭಾಷಣದಲ್ಲಿ ತಿಳಿಸಿದ್ದಾರೆ. ಜೊತೆಗೆ ಎಲ್ಲಾ ಅಗತ್ಯ ಸೇವೆಗಳು ವಾರಾಂತ್ಯದಲ್ಲಿ ಲಭ್ಯವಿರುತ್ತವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ: ಮೃತದೇಹವನ್ನು ಕಸದ ವಾಹನದಲ್ಲಿ ಸಾಗಾಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...