Homeಕರೋನಾ ತಲ್ಲಣದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ ಹೇರಿಕೆ: ಶವಸಂಸ್ಕಾರವೂ ಸಾಧ್ಯವಾಗದ ಒತ್ತಡ

ದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ ಹೇರಿಕೆ: ಶವಸಂಸ್ಕಾರವೂ ಸಾಧ್ಯವಾಗದ ಒತ್ತಡ

"ಇನ್ನೂ 90 ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಇಲ್ಲಿ ಸ್ಥಳಾವಕಾಶವಿದೆ. ಪರಿಸ್ಥಿತಿ ಮುಂದುವರಿದರೆ ಮುಂದಿನ 10 ದಿನಗಳಲ್ಲಿ ಇಲ್ಲಿ ಯಾವುದೇ ಅಂತ್ಯಸಂಸ್ಕಾರಕ್ಕೆ ಸ್ಥಳಾವಕಾಶವಿಲ್ಲ"

- Advertisement -
- Advertisement -

ದೆಹಲಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕೊರೊನಾ ಸಂಬಂಧಿತ ಸಾವುಗಳು ಹೆಚ್ಚುತ್ತಲೇ ಇದೆ. ಈ ಹಿನ್ನೆಲೆ ದೆಹಲಿಯ ಅತಿದೊಡ್ಡ ಶವಾಗಾರವಾದ ನಿಗಂಬೋಧ್ ಘಾಟ್‌ನಲ್ಲಿ ಪ್ರತಿದಿನ ಶವಸಂಸ್ಕಾರಗಳ ಸಂಖ್ಯೆ 15 ರಿಂದ 30 ಕ್ಕೆ ಏರಿಕೆಯಾಗುತ್ತಿದೆ. ಜೊತೆಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಅಗತ್ಯ ವಸ್ತುಗಳಿಗೆ ಮಾತ್ರ ಅವಕಾಶ ನೀಡಿ, ವಾರಾಂತ್ಯ ಕರ್ಫ್ಯೂ ಘೋಷಿಸಿ ಆದೇಶಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕದಿಂದ ದೆಹಲಿಯಲ್ಲಿ ಬುಧವಾರ 104 ಸಾವುಗಳು ದಾಖಲಾಗಿವೆ. ನವೆಂಬರ್ 20 ರಿಂದ ಇತ್ತಿಚೆಗೆ ದಾಖಲಾದ ಅತಿ ಹೆಚ್ಚಿನ ಕೊರೊನಾ ಸಾವುಗಳ ಸಂಖ್ಯೆಯಾಗಿದೆ.

ಮಂಗಳವಾರ ರಾತ್ರಿ ಕೊರೊನಾ ಸೋಂಕಿಗೆ ಬಲಿಯಾಗಿದ್ದ ತನ್ನ ಅಜ್ಜನ ಮೃತದೇಹವನ್ನು ಅಂತ್ಯಸಂಸ್ಕಾರಕ್ಕೆ ತಂದಿದ್ದ ಗೌತಮ್ (27) ಬುಧವಾರ ಬೆಳಿಗ್ಗೆ 8:30 ಕ್ಕೆ ನಿಗಂಬೋಧ್ ಘಾಟ್‌ಗೆ ತಲುಪಿದ್ದರು. ಶವಸಂಸ್ಕಾರ ಕೇಂದ್ರದಲ್ಲಿ ಸ್ಥಳಾವಕಾಶವಿಲ್ಲದ ಕಾರಣ ಅಂತ್ಯಕ್ರಿಯೆ ನಡೆಸಲು ಸುಮಾರು ಐದು ಗಂಟೆಗಳಿಗಿಂತಲು ಹೆಚ್ಚು ಕಾಲ ಕಾಯಬೇಕಾಗಿತ್ತು.

ಇದನ್ನೂ ಓದಿ: ಪೂಜಾ ಸ್ಥಳಗಳ ಕಾಯ್ದೆ ರದ್ದು ಮಾಡುವ ಹುನ್ನಾರ; ಸೆಕ್ಯುಲರಿಸಂನ ಶವಸಂಸ್ಕಾರ

“ನಾವು ಬೆಳಿಗ್ಗೆ 8: 30 ಕ್ಕೆ ನಿಗಂಬೋಧ್ ಘಾಟ್‌ಗೆ ಬಂದಿದ್ದೇವೆ. ಐದು ಗಂಟೆಗಳು ಕಳೆದರು ನಮ್ಮ ಸರದಿ ಇನ್ನೂ ಬಂದಿರಲಿಲ್ಲ. ಇಲ್ಲಿನ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ. ಪ್ರತಿ ಆಂಬ್ಯುಲೆನ್ಸ್‌ನಲ್ಲಿ ಎರಡು ಮೂರು ಮೃತ ದೇಹಗಳನ್ನು ತರಲಾಗುತ್ತಿದೆ” ಎಂದು ಗೌತಮ್ ಹೇಳಿದ್ದಾರೆ.

ಸ್ಮಶಾನದ ಉಸ್ತುವಾರಿಯಾಗಿರುವ ಮೊಹಮ್ಮದ್ ಶಮೀಮ್, “ಅಂತ್ಯಸಂಸ್ಕಾರಕ್ಕೆ ದಿನಕ್ಕೆ ಒಂದು ಅಥವಾ ಎರಡು ಮೃತ ದೇಹಗಳು ಬರುತ್ತಿದ್ದವು. ಕಳೆದ ಐದು ದಿನಗಳಲ್ಲಿ ಸ್ಥಿತಿ ಹದಗೆಟ್ಟಿದ್ದು, ಪ್ರತಿದಿನ 17 ಮೃತದೇಹಗಳು ಬರುತ್ತಿದೆ. ನಮಗೆ ಇನ್ನೂ 90 ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಸ್ಥಳಾವಕಾಶವಿದೆ. ಪರಿಸ್ಥಿತಿ ಮುಂದುವರಿದರೆ ಇದು ಮುಂದಿನ 10 ದಿನಗಳಲ್ಲಿ ಇಲ್ಲಿ ಯಾವುದೇ ಸ್ಥಳಾವಕಾಶವಿಲ್ಲ” ಎಂದಿದ್ದಾರೆ.

ಇತ್ತ ದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಈಗಾಗಲೇ ತಯಾರಿ ಮಾಡಿಕೊಂಡಿರುವ ವಿವಾಹಗಳಂತಹ ಅಗತ್ಯ ಚಟುವಟಿಕೆಗಳನ್ನು ಕರ್ಫ್ಯೂ ಪಾಸ್ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಸಭಾಂಗಣಗಳು, ಮಾಲ್‌ಗಳು, ಜಿಮ್‌ಗಳು ಮತ್ತು ಸ್ಪಾಗಳನ್ನು ಮುಚ್ಚಲಾಗುತ್ತದೆ. ವಾರದ ದಿನಗಳಲ್ಲಿ ಮೂರನೇ ಒಂದು ಭಾಗದಷ್ಟು ಸಾಮರ್ಥ್ಯದೊಂದಿಗೆ ಚಿತ್ರಮಂದಿರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಹೊರಗಡೆ ಊಟ ಮಾಡುವುದನ್ನು ನಿಷೇಧಿಸಿ, ಪಾರ್ಸಲ್ ವ್ಯವಸ್ಥೆಗೆ ಮಾತ್ರ ಒಪ್ಪಿಗೆ ನೀಡಲಾಗಿದೆ.

“ಈ ನಿರ್ಬಂಧಗಳು ನಿಮ್ಮ ಸಲುವಾಗಿ, ನಿಮಗಾಗಿ ಮತ್ತು ನಿಮ್ಮ ಕುಟುಂಬಗಳಿಗೆ. ಇದು ಅನಾನುಕೂಲವಾಗುತ್ತದೆ ನಿಜ ಆದರೆ, ಕೊರೊನಾ ಹರಡುವುದನ್ನು ತಡೆಯಲು ಇದು ಅವಶ್ಯಕ” ಎಂದು ಅರವಿಂದ್ ಕೇಜ್ರಿವಾಲ್ ವಿಡಿಯೋ ಭಾಷಣದಲ್ಲಿ ತಿಳಿಸಿದ್ದಾರೆ. ಜೊತೆಗೆ ಎಲ್ಲಾ ಅಗತ್ಯ ಸೇವೆಗಳು ವಾರಾಂತ್ಯದಲ್ಲಿ ಲಭ್ಯವಿರುತ್ತವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ: ಮೃತದೇಹವನ್ನು ಕಸದ ವಾಹನದಲ್ಲಿ ಸಾಗಾಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...