Homeಕರೋನಾ ತಲ್ಲಣವೀಕೆಂಡ್‌ ಕರ್ಫ್ಯೂ: ಹೊಸ ಕೊರೊನಾ ಮಾರ್ಗಸೂಚಿಯಲ್ಲಿ ಏನೇನಿದೆ?

ವೀಕೆಂಡ್‌ ಕರ್ಫ್ಯೂ: ಹೊಸ ಕೊರೊನಾ ಮಾರ್ಗಸೂಚಿಯಲ್ಲಿ ಏನೇನಿದೆ?

- Advertisement -
- Advertisement -

ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ವಾರಾಂತ್ಯದ ಕರ್ಫ್ಯೂ ವಿಧಿಸಲು ಮಂಗಳವಾರ ನಿರ್ಧರಿಸಿದೆ. ಜೊತೆಗೆ ಈಗಾಗಲೇ ಜಾರಿಯಲ್ಲಿರುವ ನೈಟ್‌ ಕರ್ಫ್ಯೂ‌ ಅನ್ನು ಜನವರಿ 19 ರವರೆಗೆ ವಿಸ್ತರಿಸಲು ನಿರ್ಧರಿಸಿದೆ. ರಾಜ್ಯಾದ್ಯಂತ ಕರ್ಫ್ಯೂ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಜಾರಿಯಲ್ಲಿರುತ್ತದೆ.

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹಠಾತ್ ಏರಿಕೆಯಾಗಿರುವುದರಿಂದ ಮಂಗಳವಾರ ಸಂಜೆ ಸಭೆ ನಡೆಸಲಾಗಿತ್ತು. ಮಂಗಳವಾರದಂದು 2,479 ಪ್ರಕರಣಗಳು ದಾಖಲಾಗಿದ್ದು, ನಾಲ್ಕು ಸಾವುಗಳು ಸಂಭವಿಸಿವೆ ಎಂದು ವರದಿಯಾಗಿದೆ. ಜನವರಿ 1 ರಿಂದ ಬೆಂಗಳೂರಿನಲ್ಲಿ ಪ್ರತಿದಿನ 1,000 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ.

ಇದನ್ನೂ ಓದಿ:ಕೊರೊನಾ ಪ್ರಕರಣದಲ್ಲಿ ಹೆಚ್ಚಳ: ಆಸ್ಪತ್ರೆಗಳು, ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲು ರಾಜ್ಯಗಳಿಗೆ ಒಕ್ಕೂಟ ಸರ್ಕಾರ ನಿರ್ದೇಶನ

ಹೊಸ ನಿಯಮಗಳು ಹೇಗಿದೆ? ಯಾವುದಕ್ಕೆ ನಿರ್ಬಂಧ?

  • ಹೊಸ ಮಾರ್ಗಸೂಚಿ ಜನವರಿ 5 ರ ರಾತ್ರಿ 10 ಗಂಟೆಯಂದ 19 ರ ಬೆಳಿಗ್ಗೆ 5 ಗಂಟೆವರೆಗೆ ಇರಲಿದೆ.
  • ವೀಕೆಂಡ್‌ ಕರ್ಫ್ಯೂ‌ ಶುಕ್ರವಾರ ರಾತ್ರಿ 10 ಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಇರಲಿದೆ.
  • ರಾತ್ರಿ 10 ಗಂಟೆಯಿಂದ ಬೆಳಗ್ಗಿನ ಜಾವ 5 ಗಂಟೆವರೆಗೆ ನೈಟ್‌ ಕರ್ಫ್ಯೂ. ಇದು ಜನವರಿ 19ರ ವರೆಗೆ ಮುಂದುವರೆಯಲಿದೆ.
  • ಎಲ್ಲಾ ಕಚೇರಿಗಳು ಸೋಮವಾರದಿಂದ ಶುಕ್ರವಾರದವರೆಗೆ 5 ದಿನಗಳ ಕಾಲವಷ್ಟೇ ಕಾರ್ಯನಿರ್ವಹಣೆ.
  • ಸರ್ಕಾರಿ ಕಚೇರಿಗಳಲ್ಲಿ 50% ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಣೆ.
  • ವೀಕೆಂಡ್ ಕರ್ಫ್ಯೂ ಇದ್ದರೂ ಅಗತ್ಯಕ್ಕೆ ತಕ್ಕಂತೆ ಸಾರಿಗೆಗಳು ಕಾರ್ಯ ನಿರ್ವಹಣೆ.
  • ಬೆಂಗಳೂರು ನಗರದಲ್ಲಿ ಮಾತ್ರ ಜನವರಿ 6 ರಿಂದ ನರ್ಸಿಂಗ್, ವೈದ್ಯಕೀಯ, ಪ್ಯಾರಾ‌ಮೆಡಿಕಲ್, 10, 11, 12 ನೇ ತರಗತಿಗಳನ್ನು ಹೊರತುಪಡಿಸಿ ಶಾಲಾ-ಕಾಲೇಜುಗಳು ಬಂದ್‌.
  • ಉಳಿದ ತರಗತಿಗಳು ಜನವರಿ 6 ರಿಂದಲೇ ಆನ್ಲೈನ್ ಮೂಲಕ ನಡೆಸಲು ಅನುಮತಿ.
  • ಪಬ್, ಕ್ಲಬ್ ಹೊಟೇಲ್ ಗಳು, ಚಿತ್ರಮಂದಿರ, ರಂಗಮಂದಿರ, ಆಡಿಟೋರಿಯಂಗಳಿಗೆ 50% ಮಾತ್ರ ಅವಕಾಶ. ಈ ಹಿಂದಿನ ನಿಯಮದಂತೆ ಡಬಲ್ ಡೋಸ್ ಪಡೆದವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿ.
  • ಹೊರಾಂಗಣ ಮದುವೆಗಳಿಗೆ 200 ಜನ ಮತ್ತು ಒಳಾಂಗಣ ಮದುವೆಗಳಿಗೆ 100 ಜನರಿಗಷ್ಟೇ ಅನುಮತಿ.
  • ಧಾರ್ಮಿಕ ಕೇಂದ್ರಗಳಲ್ಲಿ ದರ್ಶನಕ್ಕೆ ಮಾತ್ರ ಅವಕಾಶ. ಇತರೆ ಯಾವುದೆ ಸೇವೆಗಳಿಗೆ ಅವಕಾಶ ಇಲ್ಲ.
  • ವ್ಯಾಕ್ಸಿನ್‌ ಹಾಕಿಸಿಕೊಂಡ ವ್ಯಕ್ತಿಗಳಿಗೆ ಮಾತ್ರ ಧಾರ್ಮಿಕ ಕೇಂದ್ರಗಳಲ್ಲಿ ಅವಕಾಶವಿದ್ದು, ಅದು ಕೂಡಾ ಒಮ್ಮೆಗೆ 50 ಭಕ್ತರಿಗೆ ಮಾತ್ರ ಅವಕಾಶ.
  • ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಮಾಲ್, ಷಾಪಿಂಗ್ ಕಾಂಪ್ಲೆಕ್ಸ್, ಅಂಗಡಿ ಮುಂಗಟ್ಟುಗಳಿಗೆ ಅನುಮತಿ.
  • ಈಜುಕೊಳ, ಜಿಮ್‌ಗಳಲ್ಲಿ 50% ಸಾಮರ್ಥ್ಯದೊಂದಿಗೆ ಅನುಮತಿ ಇದ್ದು, ಎರಡು ಡೋಸ್ ಲಸಿಕೆ ಕಡ್ಡಾಯ ಪಡೆದಿರಬೇಕು.
  • ಯಾವುದೇ ರ್‍ಯಾಲಿ, ಪ್ರತಿಭಟನೆಗಳಿಗೆ ಅನುಮತಿಯಿಲ್ಲ.
  • ಸಭೆ, ಸಮಾರಂಭಗಳನ್ನು 50 ಜನರೊಂದಿಗೆ ಮಾತ್ರ ನಡೆಸಲು ಅನುಮತಿ.

ಇದನ್ನೂ ಓದಿ:ಎಲ್ಲೆಡೆ ಕೊರೊನಾ ನಿರ್ಬಂಧ ಹೇರಲು ಸಾಧ್ಯವಿಲ್ಲ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಈ ಮಧ್ಯೆ, ರಾಜ್ಯ ಸರ್ಕಾರವು ಕೇರಳ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಗಡಿಯಲ್ಲಿ ತೀವ್ರ ನಿಗಾ ಇಡಬೇಕು ಎಂದು ನಿರ್ದೇಶಿಸಿದೆ.

ರಾಜ್ಯ ಕಂದಾಯ ಸಚಿವ ಆರ್ ಅಶೋಕ ಮಾತನಾಡಿ, “ಹೊಸ ವರ್ಷದ ನಂತರ ಗೋವಾದಿಂದ ಹಿಂದಿರುಗಿದ ಅನೇಕ ಜನರಿಗೆ ಕೊರೊನಾ ಪಾಸಿಟಿವ್‌ ಆಗಿದೆ. ಜನವರಿ 1ರ ನಂತರ ಗೋವಾದಿಂದ ಹಿಂದಿರುಗಿದ ಪ್ರತಿಯೊಬ್ಬರನ್ನು ಪತ್ತೆಹಚ್ಚಲು ನಾವು ನೋಡುತ್ತಿದ್ದೇವೆ. ಅವರನ್ನು ಪರೀಕ್ಷಿಸಲಾಗುವುದು. ಹೆಚ್ಚಿನ ಅಪಾಯವಿರುವ ದೇಶಗಳ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ, RT-PCR ಪರೀಕ್ಷೆಯನ್ನು ಮಾಡಲಾಗುತ್ತದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ದೆಹಲಿಯಲ್ಲಿ ಕೊರೊನಾ ಏರಿಕೆ: ಯೆಲ್ಲೋ ಅಲರ್ಟ್ ಘೋಷಿಸಿದ ಸಿಎಂ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...