Homeಕರ್ನಾಟಕವೀಕೆಂಡ್ ಕರ್ಫ್ಯೂ: ಶನಿವಾರ ಮತ್ತು ಭಾನುವಾರ ಏನಿರುತ್ತೆ, ಏನಿರಲ್ಲ? ಇಲ್ಲಿದೆ ಮಾಹಿತಿ

ವೀಕೆಂಡ್ ಕರ್ಫ್ಯೂ: ಶನಿವಾರ ಮತ್ತು ಭಾನುವಾರ ಏನಿರುತ್ತೆ, ಏನಿರಲ್ಲ? ಇಲ್ಲಿದೆ ಮಾಹಿತಿ

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ನೈಟ್ ಕರ್ಫ್ಯೂ ಸೇರಿದಂತೆ ವೀಕೆಂಡ್ ಕರ್ಫ್ಯೂ ಕೂಡ ಜಾರಿ ಮಾಡಿದೆ. ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಿರಲಿದೆ ಎನ್ನಲಾಗಿತ್ತು.  ಆದರೆ ಶುಕ್ರವಾರ ಸಂಜೆ  6 ಗಂಟೆಯಿಂದಲೇ ಕರ್ಫ್ಯೂ ಜಾರಿ ಮಾಡಲಾಗಿದೆ.

ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಫ್ಯೂ ಜೊತೆಗೆ ಈಗಾಗಲೇ ರಾಜ್ಯ ಸರ್ಕಾರವು ಮೇ 4ರವರೆಗೆ ಬಹುತೇಕ ಎಲ್ಲಾ ಚಟುವಟಕೆಗಳ ಮೇಲೆ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ. ಹಾಗಾಗಿ ಶನಿವಾರ ಮತ್ತು ಭಾನುವಾರ ಏನಿರುತ್ತೆ, ಏನಿರಲ್ಲ ಎಂಬುದರ ಮಾಹಿತಿ ಇಲ್ಲಿದೆ.

ಕಂದಾಯ ಸಚಿವ ಆರ್‌.ಅಶೋಕ್ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ವೀಕೆಂಡ್ ಕರ್ಫ್ಯೂನಲ್ಲಿ ಯಾರು ಓಡಾಡಬಹುದು, ಯಾರು ಓಡಾಡಬಾರದು ಎಂಬುದನ್ನು ಕಂದಾಯ ಇಲಾಖೆ ವಿಪತ್ತು ನಿರ್ವಹಣಾ ಸಮಿತಿಯಿಂದ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಅಗತ್ಯ ಸೇವೆ ಬಿಟ್ಟು ಎಲ್ಲಾ ಬಂದ್: ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

ಅಗತ್ಯ ಸೇವೆ ಒದಗಿಸುವ ಎಲ್ಲಾ ಸರ್ಕಾರಿ ಇಲಾಖೆ, ಕಾರ್ಪೋರೇಷನ್ ಗಳ ಓಡಾಟಕ್ಕೆ ನಿರ್ಬಂಧವಿಲ್ಲ. ತುರ್ತುಸೇವೆ ಒದಗಿಸುವ ಕಾರ್ಖಾನೆ, ಸಂಸ್ಥೆಯ ಸಿಬ್ಬಂದಿ, ಟೆಲಿಕಾಂ ಕಂಪನಿ ಉದ್ಯೋಗಿಗಳು ಐಡಿ ಕಾರ್ಡ್ ತೋರಿಸಿ ಓಡಾಡಬಹುದು ಎಂದು ಹೇಳಿದ್ದಾರೆ.

ರೋಗಿಗಳು ಅವರ ಸಹಾಯಕರು, ವ್ಯಾಕ್ಸಿನ್ ಪಡೆದುಕೊಳ್ಳುವ ನಾಗರಿಕರು ಓಡಾಡಬಹುದು. ದಿನಸಿ ಅಂಗಡಿ, ಹಣ್ಣು ತರಕಾರಿ ಹಾಲು ಮಾಂಸದ ಅಂಗಡಿ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ತೆಗೆದಿರಲು ಅವಕಾಶವಿದೆ. ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್​ಗೆ ಮಾತ್ರ ಅವಕಾಶ ಇರುತ್ತದೆ. ಮದುವೆ ಕಾರ್ಯಕ್ರಮಕ್ಕೆ 50 ಜನರಿಗೆ ಮಾತ್ರ ಅನುಮತಿ.

ದೂರ ಪ್ರಯಾಣಕ್ಕಾಗಿ ಹೋಗುವವರು, ಬಸ್ ನಿಲ್ದಾಣ, ರೈಲ್ವೆ ವಿಮಾನ ನಿಲ್ದಾಣಕ್ಕೆ ಹೋಗುವವರು ಸಾರ್ವಜನಿಕ ಸಾರಿಗೆ ಬಳಸಬಹುದು. ಆದರೆ ಪ್ರಯಾಣಿಕರು ಕಡ್ಡಾಯವಾಗಿ ಟಿಕೆಟ್ ತೋರಿಸಬೇಕು ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಚುನಾಯಿತ ಸರ್ಕಾರವೋ? ಹುಚ್ಚರ ಸಂತೆಯೋ?: ಅಘೋಷಿತ ಲಾಕ್‌ಡೌನ್‌‌ಗೆ ಸಿದ್ದರಾಮಯ್ಯ ಕಿಡಿ

ಸಿನಿಮಾ, ಬಾರ್, ಪಬ್, ಮಾಲ್ ಎಲ್ಲವೂ ಬಂದ್. ಧಾರ್ಮಿಕ, ರಾಜಕೀಯ ಗುಂಪು ಸೇರುವಿಕೆ ನಿಷೇಧ ಇದೆ. . ಧಾರ್ಮಿಕ ಕೇಂದ್ರಗಳಲ್ಲಿ ಪೂಜಾರಿಗಳು, ಮೌಲ್ವಿಗಳಿಗೆ ಮಾತ್ರ ಅವಕಾಶ. ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ಎರಡು ದಿನ ಮಾತ್ರ ಕಟ್ಟಡ ನಿರ್ಮಾಣ ಕೆಲಸಕ್ಕೆ ನಿಷೇಧ ವಿಧಿಸಲಾಗಿದೆ. ಮಾಧ್ಯಮದವರು, ವೈದ್ಯರು, ನರ್ಸಿಂಗ್ ಸ್ಟಾಫ್ ಕೂಡ ಓಡಾಡಬಹುದು.

ವೀಕೆಂಡ್ ಕರ್ಫ್ಯೂ ಹಿನ್ನಲೆ, ನಮ್ಮ ಮೆಟ್ರೋ ಸೇವೆ ಶುಕ್ರವಾರ ಸಂಜೆ 7.30 ಕ್ಕೆ ಸ್ಥಗಿತಗೊಳ್ಳಲಿದೆ. ಬಳಿಕ ಸೋಮವಾರ ಬೆಳಗ್ಗೆ 7 ಗಂಟೆಗೆ ಮೆಟ್ರೋ ಸೇವೆ ಆರಂಭವಾಗಲಿದೆ. ಶನಿವಾರ ಹಾಗೂ ಭಾನುವಾರ ಮೆಟ್ರೋ ಸಂಚಾರ ಇರುವುದಿಲ್ಲ ಎಂದು ಬಿಎಂಆರ್‌ಸಿಎಲ್ ಪ್ರಕಟಣೆ ಹೊರಡಿಸಿದೆ.

ಜನಸಂಚಾರಕ್ಕೆ ನಿರ್ಬಂಧ ಹೇರಲಾಗಿದ್ದರೂ ಬಿಎಂಟಿಸಿ ಬಸ್‍ಗಳು ಎಂದಿನಂತೆ ರಸ್ತೆಗಿಳಿಯಲಿವೆ. ಬಿಎಂಟಿಸಿಯಿಂದ ಕೇವಲ ತುರ್ತುಸೇವೆ ಮಾತ್ರ ಅವಕಾಶ ನೀಡಲಾಗಿದ್ದು, ಕೇವಲ 500 ಬಸ್‍ಗಳು ಮಾತ್ರ ಸಂಚರಿಸಲಿವೆ.


ಇದನ್ನೂ ಓದಿ: ಆಕ್ಸಿಜನ್, ಐಸಿಯು ಕೊರತೆಯಿಂದ ಉಂಟಾಗುವ ಸಾವುಗಳಿಗೆ ಕೇಂದ್ರವೇ ಹೊಣೆ- ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...