Homeಕರೋನಾ ತಲ್ಲಣರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ: ಏನೇನು ಇರಲಿದೆ?

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ: ಏನೇನು ಇರಲಿದೆ?

- Advertisement -
- Advertisement -

ಕೊರೊನಾ ತೀವ್ರವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮಂಗಳವಾರದಂದು ನಡೆದ ಸರ್ವಪಕ್ಷಗಳ ಸಭೆಯ ನಂತರ ರಾಜ್ಯದಾದ್ಯಂತ ವೀಕೆಂಡ್ ಕರ್ಫ್ಯೂ ಹೇರುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಜೊತೆಗೆ ಮುಂದಿನ 14 ದಿನಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಕೂಡಾ ಸರ್ಕಾರ ಬಿಡುಗಡೆ ಮಾಡಿದೆ.

ಕೊರೊನಾ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಹೊಸದಾಗಿ ಬಿಡುಗಡೆ ಮಾಡಿರುವ ಮಾರ್ಗಸೂಚಿಯ ಪ್ರಮುಖ ಅಂಶಗಳು ಹೀಗಿವೆ.

  • ರಾಜ್ಯದ ಪ್ರತಿ ಜಿಲ್ಲೆಯಲ್ಲಿ ರಾತ್ರಿ 9 ರಿಂದ ಬೆಳಗ್ಗೆ 6 ವರೆಗೆ (ಏಪ್ರಿಲ್​ 21 ರಿಂದ ಮೇ 4 ರವರೆಗೆ) ನೈಟ್​ ಕರ್ಫ್ಯೂ ಜಾರಿಯಲ್ಲಿರಲಿದೆ.
  • ಆದರೆ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಕರ್ಪ್ಯು ಜಾರಿಯಲ್ಲಿರಲಿದೆ.
  • ಶಾಲೆ, ಕಾಲೇಜುಗಳು ಸಂಪೂರ್ಣವಾಗಿ ಬಂದ್ ಆಗಲಿದ್ದು, ಆನ್​ಲೈನ್​ ತರಗತಿಗೆ ಮಾತ್ರವೇ ಅವಕಾಶ ನೀಡಲಾಗಿದೆ.

ಇದನ್ನು ಓದಿ: ಆಕ್ಸಿಜನ್‌ಗಾಗಿ ರೋಗಿಗಳು ಕಾಯಬೇಕೆಂದು ಹೇಳುತ್ತೀರಾ?: ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

  • ಸಿನಿಮಾ ಹಾಲ್​ಗಳು, ಶಾಪಿಂಗ್​ ಮಾಲ್​ಗಳು, ಜಿಮ್​, ಯೋಗಾ ಸೆಂಟರ್​, ಸ್ವಿಮ್ಮಿಂಗ್​ ಪೂಲ್​, ಸ್ಪೋರ್ಟ್ಸ್​ ಕಾಂಪ್ಲೆಕ್ಸ್​, ಸ್ಪಾ, ಬಾರ್​, ಆಡಿಟೋರಿಯಂನಂತಹ ಸ್ಥಳಗಳು ಮುಚ್ಚಲಾಗುವುದು. ಆದರೆ, ಸ್ವಿಮ್ಮಿಂಗ್​ ಫೆಡರೇಷನ್​ ಆಫ್​ ಇಂಡಿಯಾದಿಂದ ಅನುಮತಿ ಪಡೆದ ಸ್ವಿಮ್ಮಿಂಗ್​ ಫೂಲ್​ಗಳನ್ನು ಮಾತ್ರ ತೆರೆಯಲು ಅನುಮತಿ ನೀಡಲಾಗಿದೆ.
  • ಸಾರ್ವಜನಿಕ, ರಾಜಕೀಯ ಸೇರಿ ಎಲ್ಲ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗಿದ್ದು, ಎಲ್ಲಾ ಧಾರ್ಮಿಕ ಸ್ಥಳಗಳನ್ನು ಮುಚ್ಚಲಾಗುವುದು.
  • ಹೋಟೆಲ್​ ಮತ್ತು ರೆಸ್ಟೋರೆಂಟ್​ಗಳಲ್ಲಿ ಪಾರ್ಸೆಲ್​ ಮಾತ್ರಕ್ಕೆ ಅವಕಾಶ ನೀಡಲಾಗಿದೆ.
  • ಕಟ್ಟಡ ನಿರ್ಮಾಣ ಕಾಮಗಾರಿ, ಕಾರ್ಖಾನೆಗಳಲ್ಲಿ ಕೆಲಸ ನಡೆಸಲು ಅನುಮತಿ ನೀಡಲಾಗಿದೆ.
  • ಅಗತ್ಯ ಆಹಾರ ವಸ್ತುಗಳಾದ ದಿನಸಿ, ಹಣ್ಣು, ತರಕಾರಿ ಅಂಗಡಿಗಳು, ಹಾಲಿನ ಡೈರಿ, ಮೀನು ಮತ್ತು ಮಾಂಸದ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.
  • ಲಾಡ್ಜ್​ಗಳನ್ನು ತೆರೆದಿಡಲು ಅನುಮತಿ ನೀಡಲಾಗಿದೆ.

ಇದನ್ನು ಓದಿ: ಪ್ರಧಾನಿ ‘ಕೊರೊನಾ ವಾರಿಯರ್‌’ ಇದ್ದಂತೆ, ಸೋಂಕಿನ ವಿರುದ್ದ ಹೋರಾಡಲು 24×7 ಸಭೆ ನಡೆಸುತ್ತಾರೆ: ಕೇಂದ್ರ

  • ಮದ್ಯದ ಅಂಗಡಿಗಳಲ್ಲಿ ಪಾರ್ಸಲ್​ ನೀಡಲು ಮಾತ್ರ ಅವಕಾಶ ನೀಡಲಾಗಿದೆ.
  • ಬ್ಯಾಂಕ್​, ಇನ್ಶೂರೆನ್ಸ್​, ಮಾಧ್ಯಮ ಸಂಸ್ಥೆಗಳಿಗೆ ಅನುಮತಿ.
  • ಇ ಕಾಮರ್ಸ್​ ವೇದಿಕೆಯಲ್ಲಿ ಡೆಲಿವರಿ ಮಾಡಲು ಅನುಮತಿ.
  • ಐಟಿ ಸಂಸ್ಥೆಗಳ ಅಗತ್ಯ ಸಿಬ್ಬಂದಿ ಹೊರತುಪಡಿಸಿ ಬೇರೆಲ್ಲ ಸಿಬ್ಬಂದಿಗೆ ಮನೆಯಲ್ಲೇ ಕೆಲಸ ಮಾಡಲು ನಿರ್ದೇಶನ.
  • ಖಾಸಗಿ ಸಂಸ್ಥೆಗಳಲ್ಲಿ ಕಡಿಮೆ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅವಕಾಶ.
  • ಸರ್ಕಾರಿ ಕಚೇರಿಗಳಲ್ಲಿ 50% ಸಿಬ್ಬಂದಿಗಳೊಂದಿಗೆ ಕೆಲಸಕ್ಕೆ ಅನುಮತಿ.
  • ಜಿಲ್ಲೆ ಹಾಗೂ ರಾಜ್ಯಗಳ ನಡುವೆ ಸಂಚಾರಕ್ಕೆ ಯಾವುದೇ ನಿರ್ಬಂಧವಿಲ್ಲ.
  • ಮೆಟ್ರೋ, ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿ ಎಲ್ಲ ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳಿಗೆ ಅನುಮತಿ
  • ಮದುವೆಗಳಲ್ಲಿ ಕೇವಲ 50 ಜನರಿಗೆ ಹಾಗೂ ಅಂತ್ಯಕ್ರಿಯೆಗಳಲ್ಲಿ ಕೇವಲ 20 ಜನರಿಗೆ ಮಾತ್ರ ಅವಕಾಶ.

ಇದನ್ನು ಓದಿ: ‘ತಗಡು ಯೋಗಿ – ಯುಪಿ ಮುಖ್ಯಮಂತ್ರಿಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್‌!

ವಿಡಿಯೊ ನೋಡಿ: ವಿದ್ಯಾರ್ಥಿಗಳಿಬ್ಬರ ನೃತ್ಯಕ್ಕೆ ಕೋಮು ಬಣ್ಣ ಹಚ್ಚಿದ ಬಲಪಂಥೀಯರಿಗೆ ಕೇರಳ ಪ್ರತಿರೋಧಿಸಿದ್ದು ಹೇಗೆ ಗೊತ್ತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...