Homeಕರೋನಾ ತಲ್ಲಣರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ: ಏನೇನು ಇರಲಿದೆ?

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ: ಏನೇನು ಇರಲಿದೆ?

- Advertisement -
- Advertisement -

ಕೊರೊನಾ ತೀವ್ರವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮಂಗಳವಾರದಂದು ನಡೆದ ಸರ್ವಪಕ್ಷಗಳ ಸಭೆಯ ನಂತರ ರಾಜ್ಯದಾದ್ಯಂತ ವೀಕೆಂಡ್ ಕರ್ಫ್ಯೂ ಹೇರುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಜೊತೆಗೆ ಮುಂದಿನ 14 ದಿನಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಕೂಡಾ ಸರ್ಕಾರ ಬಿಡುಗಡೆ ಮಾಡಿದೆ.

ಕೊರೊನಾ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಹೊಸದಾಗಿ ಬಿಡುಗಡೆ ಮಾಡಿರುವ ಮಾರ್ಗಸೂಚಿಯ ಪ್ರಮುಖ ಅಂಶಗಳು ಹೀಗಿವೆ.

  • ರಾಜ್ಯದ ಪ್ರತಿ ಜಿಲ್ಲೆಯಲ್ಲಿ ರಾತ್ರಿ 9 ರಿಂದ ಬೆಳಗ್ಗೆ 6 ವರೆಗೆ (ಏಪ್ರಿಲ್​ 21 ರಿಂದ ಮೇ 4 ರವರೆಗೆ) ನೈಟ್​ ಕರ್ಫ್ಯೂ ಜಾರಿಯಲ್ಲಿರಲಿದೆ.
  • ಆದರೆ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಕರ್ಪ್ಯು ಜಾರಿಯಲ್ಲಿರಲಿದೆ.
  • ಶಾಲೆ, ಕಾಲೇಜುಗಳು ಸಂಪೂರ್ಣವಾಗಿ ಬಂದ್ ಆಗಲಿದ್ದು, ಆನ್​ಲೈನ್​ ತರಗತಿಗೆ ಮಾತ್ರವೇ ಅವಕಾಶ ನೀಡಲಾಗಿದೆ.

ಇದನ್ನು ಓದಿ: ಆಕ್ಸಿಜನ್‌ಗಾಗಿ ರೋಗಿಗಳು ಕಾಯಬೇಕೆಂದು ಹೇಳುತ್ತೀರಾ?: ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

  • ಸಿನಿಮಾ ಹಾಲ್​ಗಳು, ಶಾಪಿಂಗ್​ ಮಾಲ್​ಗಳು, ಜಿಮ್​, ಯೋಗಾ ಸೆಂಟರ್​, ಸ್ವಿಮ್ಮಿಂಗ್​ ಪೂಲ್​, ಸ್ಪೋರ್ಟ್ಸ್​ ಕಾಂಪ್ಲೆಕ್ಸ್​, ಸ್ಪಾ, ಬಾರ್​, ಆಡಿಟೋರಿಯಂನಂತಹ ಸ್ಥಳಗಳು ಮುಚ್ಚಲಾಗುವುದು. ಆದರೆ, ಸ್ವಿಮ್ಮಿಂಗ್​ ಫೆಡರೇಷನ್​ ಆಫ್​ ಇಂಡಿಯಾದಿಂದ ಅನುಮತಿ ಪಡೆದ ಸ್ವಿಮ್ಮಿಂಗ್​ ಫೂಲ್​ಗಳನ್ನು ಮಾತ್ರ ತೆರೆಯಲು ಅನುಮತಿ ನೀಡಲಾಗಿದೆ.
  • ಸಾರ್ವಜನಿಕ, ರಾಜಕೀಯ ಸೇರಿ ಎಲ್ಲ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗಿದ್ದು, ಎಲ್ಲಾ ಧಾರ್ಮಿಕ ಸ್ಥಳಗಳನ್ನು ಮುಚ್ಚಲಾಗುವುದು.
  • ಹೋಟೆಲ್​ ಮತ್ತು ರೆಸ್ಟೋರೆಂಟ್​ಗಳಲ್ಲಿ ಪಾರ್ಸೆಲ್​ ಮಾತ್ರಕ್ಕೆ ಅವಕಾಶ ನೀಡಲಾಗಿದೆ.
  • ಕಟ್ಟಡ ನಿರ್ಮಾಣ ಕಾಮಗಾರಿ, ಕಾರ್ಖಾನೆಗಳಲ್ಲಿ ಕೆಲಸ ನಡೆಸಲು ಅನುಮತಿ ನೀಡಲಾಗಿದೆ.
  • ಅಗತ್ಯ ಆಹಾರ ವಸ್ತುಗಳಾದ ದಿನಸಿ, ಹಣ್ಣು, ತರಕಾರಿ ಅಂಗಡಿಗಳು, ಹಾಲಿನ ಡೈರಿ, ಮೀನು ಮತ್ತು ಮಾಂಸದ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.
  • ಲಾಡ್ಜ್​ಗಳನ್ನು ತೆರೆದಿಡಲು ಅನುಮತಿ ನೀಡಲಾಗಿದೆ.

ಇದನ್ನು ಓದಿ: ಪ್ರಧಾನಿ ‘ಕೊರೊನಾ ವಾರಿಯರ್‌’ ಇದ್ದಂತೆ, ಸೋಂಕಿನ ವಿರುದ್ದ ಹೋರಾಡಲು 24×7 ಸಭೆ ನಡೆಸುತ್ತಾರೆ: ಕೇಂದ್ರ

  • ಮದ್ಯದ ಅಂಗಡಿಗಳಲ್ಲಿ ಪಾರ್ಸಲ್​ ನೀಡಲು ಮಾತ್ರ ಅವಕಾಶ ನೀಡಲಾಗಿದೆ.
  • ಬ್ಯಾಂಕ್​, ಇನ್ಶೂರೆನ್ಸ್​, ಮಾಧ್ಯಮ ಸಂಸ್ಥೆಗಳಿಗೆ ಅನುಮತಿ.
  • ಇ ಕಾಮರ್ಸ್​ ವೇದಿಕೆಯಲ್ಲಿ ಡೆಲಿವರಿ ಮಾಡಲು ಅನುಮತಿ.
  • ಐಟಿ ಸಂಸ್ಥೆಗಳ ಅಗತ್ಯ ಸಿಬ್ಬಂದಿ ಹೊರತುಪಡಿಸಿ ಬೇರೆಲ್ಲ ಸಿಬ್ಬಂದಿಗೆ ಮನೆಯಲ್ಲೇ ಕೆಲಸ ಮಾಡಲು ನಿರ್ದೇಶನ.
  • ಖಾಸಗಿ ಸಂಸ್ಥೆಗಳಲ್ಲಿ ಕಡಿಮೆ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅವಕಾಶ.
  • ಸರ್ಕಾರಿ ಕಚೇರಿಗಳಲ್ಲಿ 50% ಸಿಬ್ಬಂದಿಗಳೊಂದಿಗೆ ಕೆಲಸಕ್ಕೆ ಅನುಮತಿ.
  • ಜಿಲ್ಲೆ ಹಾಗೂ ರಾಜ್ಯಗಳ ನಡುವೆ ಸಂಚಾರಕ್ಕೆ ಯಾವುದೇ ನಿರ್ಬಂಧವಿಲ್ಲ.
  • ಮೆಟ್ರೋ, ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿ ಎಲ್ಲ ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳಿಗೆ ಅನುಮತಿ
  • ಮದುವೆಗಳಲ್ಲಿ ಕೇವಲ 50 ಜನರಿಗೆ ಹಾಗೂ ಅಂತ್ಯಕ್ರಿಯೆಗಳಲ್ಲಿ ಕೇವಲ 20 ಜನರಿಗೆ ಮಾತ್ರ ಅವಕಾಶ.

ಇದನ್ನು ಓದಿ: ‘ತಗಡು ಯೋಗಿ – ಯುಪಿ ಮುಖ್ಯಮಂತ್ರಿಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್‌!

ವಿಡಿಯೊ ನೋಡಿ: ವಿದ್ಯಾರ್ಥಿಗಳಿಬ್ಬರ ನೃತ್ಯಕ್ಕೆ ಕೋಮು ಬಣ್ಣ ಹಚ್ಚಿದ ಬಲಪಂಥೀಯರಿಗೆ ಕೇರಳ ಪ್ರತಿರೋಧಿಸಿದ್ದು ಹೇಗೆ ಗೊತ್ತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...