Homeಕರ್ನಾಟಕಸಿಎಂ ಭಾಗವಹಿಸುವ ಸಮಾರಂಭಕ್ಕೆ ಪಿಎಸ್‌ಐ ಹಗರಣ ಆರೋಪಿಯ ಚಿತ್ರವಿರುವ ಸ್ವಾಗತ ಕಮಾನು!

ಸಿಎಂ ಭಾಗವಹಿಸುವ ಸಮಾರಂಭಕ್ಕೆ ಪಿಎಸ್‌ಐ ಹಗರಣ ಆರೋಪಿಯ ಚಿತ್ರವಿರುವ ಸ್ವಾಗತ ಕಮಾನು!

ಬಿಜೆಪಿ ಟಿಕೆಟ್ ನೀಡುವುದು ಖಚಿತ ಎಂದು ವ್ಯಂಗ್ಯವಾಡಿದ ಕಾಂಗ್ರೆಸ್

- Advertisement -
- Advertisement -

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸುವ ಕಾರ್ಯಕ್ರಮಕ್ಕೆ ಸ್ವಾಗತಕೋರಿ ಹಾಕಲಾಗಿದ್ದ ಕಮಾನಿನಲ್ಲಿ ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ರುದ್ರಗೌಡ ಪಾಟಿಲ ಅಲಿಯಾಸ್ ಆರ್‌‌.ಡಿ. ಪಾಟಿಲ ಅವರ ಚಿತ್ರ ಕಾಣಿಸಿಕೊಂಡಿದೆ. ಸ್ವಾಗತ ಕಮಾನಿನ ಚಿತ್ರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಕಲಬುರಗಿ ಜಿಲ್ಲೆಯ ದೇವಲ ಗಾಣಗಾಪುರದಲ್ಲಿ ಕೋಲಿ ಸಮಾಜದ ನಾಯಕ ದಿವಂಗತ ವಿಠ್ಠಲ ಹೇರೂರ ಅವರ ಕಂಚಿನ ಮೂರ್ತಿ ಅನಾವರಣ ಕಾರ್ಯಕ್ರಮ ಮಂಗಳವಾರ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಭಾಗವಹಿಸಿದ್ದಾರೆ. ಕಾರ್ಯಕ್ರಮದ ಪ್ರಯುಕ್ತ ಸ್ವಾಗತಕೋರಿ ಆರ್‌.ಡಿ.ಪಾಟೀಲ ಚಿತ್ರವಿರುವ ಸ್ವಾಗತ ಕಮಾನು ಕಾಣಿಸಿಕೊಂಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸ್ವಾಗತ ಕಮಾನಿನಲ್ಲಿ ಪಿಎಸ್‌ಐ ಆರೋಪಿ ಆರ್‌.ಡಿ. ಪಾಟಿಲ ಮತ್ತು ಅವರ ಸಹೋದರ ಮಹಾಂತೇಶ ಪಾಟೀಲ ಅವರ ಚಿತ್ರಗಳನ್ನು ಹಾಕಲಾಗಿದೆ. ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಜಿಸುತ್ತಿರುವುದಾಗಿ ತಮ್ಮ ಫೇಸ್‌ಬುಕ್‌ನಲ್ಲಿ ಶನಿವಾರ ಘೋಷಿಸಿಕೊಂಡಿದ್ದರು.

ಘಟನೆ ಬಗ್ಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, “PSI ಹಗರಣದ ಆರೋಪಿ ಆರ್.ಡಿ ಪಾಟೀಲ್ ಸಿಎಂ ಸ್ವಾಗತಿಸುವ ಫ್ಲೆಕ್ಸ್ ಹಾಕಿದ್ದಾನೆ. ಈ ಮೂಲಕ ಆತನಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರ ಶ್ರೀರಕ್ಷೆ ಇದೆ ಎನ್ನುವುದು ಸ್ಪಷ್ಟವಾಗಿದೆ. ಚುನಾವಣೆಗೂ ಸ್ಪರ್ದಿಸುತ್ತಾನಂತೆ, ಬಿಜೆಪಿ ಟಿಕೆಟ್ ನೀಡುವುದು ಖಚಿತವಿರಬಹುದು! ಆತ ಬಿಜೆಪಿಗರ ಹೆಸರು ಬಾಯಿ ಬಿಡದಿರುವುದಕ್ಕೆ ‘ಟಿಕೆಟ್’ ಉಡುಗೊರೆಯೇ” ಎಂದು ಪ್ರಶ್ನಿಸಿದೆ.

ಪತ್ರಿಕೆಗಳಲ್ಲಿ ಘಟನೆಯ ಬಗ್ಗೆ ಸುದ್ದಿಯಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸ್ವಾಗತ ಕಮಾನನ್ನು ಅಲ್ಲಿಂದ ತೆರವುಗೊಳಿಸಲಾಗಿದೆ ಎಂದು ನಾನುಗೌರಿ.ಕಾಂಗೆ ಮೂಲಗಳು ತಿಳಿಸಿವೆ.

ಪಿಎಸ್‌ಐ ಹಗರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದ ಆರ್‌‌.ಡಿ. ಪಾಟೀಲ ಅವರನ್ನು ಮತ್ತೆ ಬಂಧಿಸಲು ಗುರುವಾರ ಕಲಬುರಗಿಯಲ್ಲಿರುವ ಅವರ ನಿವಾಸಕ್ಕೆ ತೆರಳಿದ್ದ ಕರ್ನಾಟಕ ಅಪರಾಧ ತನಿಖಾ ಇಲಾಖೆ (ಸಿಐಡಿ) ಅಧಿಕಾರಿಗಳಿಂದ ಅವರು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎಂದು ಕಲಬುರಗಿ ಪೊಲೀಸರು ತಿಳಿಸಿದ್ದರು.

ಸ್ಥಳದಿಂದ ಪರಾರಿಯಾಗುವ ವೇಳೆ ಆರ್‌‌.ಡಿ.ಪಾಟೀಲ ಅವರನ್ನು ವಶಕ್ಕೆ ತೆಗೆದುಕೊಳ್ಳಲು ಯತ್ನಿಸಿದ ಸಿಐಡಿ ಅಧಿಕಾರಿಗಳನ್ನು ತಳ್ಳಿದ್ದರು ಎಂದು ವರದಿಯಾಗಿದೆ. ಈ ಘಟನೆ ನಡೆದ ನಂತರ ಆರ್‌‌.ಡಿ.ಪಾಟೀಲ ಫೇಸ್‌ಬುಕ್‌ನಲ್ಲಿ ವೀಡಿಯೊ ಬಿಡುಗಡೆ ಮಾಡಿದ್ದರು.

ಇದರ ನಂತರ ಆರೋಪಿ ಆರ್‌‌.ಡಿ.ಪಾಟೀಲ ಸೋಮವಾರ ಸಂಜೆ ನ್ಯಾಯಾಲಯದ ಎದುರು ಹಾಜರಾಗಿದ್ದರು. ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆರ್.ಡಿ ಪಾಟೀಲ್‌ಗೆ ಸಿಐಡಿ ಅಧಿಕಾರಿಗಳು ಹಲವು ಬಾರಿ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಆದರೂ, ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ, ಸೋಮವಾರ ಬೆಳಗ್ಗೆ ಮತ್ತೊಂದು ನೋಟಿಸ್‌ ನೀಡಿದ್ದ ಅಧಿಕಾರಿಗಳು ಸಂಜೆಯೊಳಗೆ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿದ್ದರು.

ಕೊನೆಗೂ ಸೋಮವಾರ ಸಂಜೆ ಕಲಬುರಗಿಯ 5ನೇ ಜೆಎಂಎಫ್‌ಸಿ ನ್ಯಾಯಲಯದ ಮುಂದೆ ಹಾಜರಾದ್ದರು. ನ್ಯಾಯಾಲಯವು ಅವರಿಗೆ ಫೆಬ್ರವರಿ 6 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಆರ್‌‌.ಡಿ.ಪಾಟೀಲ  ಅವರನ್ನು ಈ ಹಿಂದೆ 2022ರ ಏಪ್ರಿಲ್‌ನಲ್ಲಿ ಬಂಧಿಸಲಾಗಿತ್ತು. ನಂತರ ಅವರನ್ನು ಡಿಸೆಂಬರ್‌ನಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಆದರೆ ಜಾಮೀನು ಷರತ್ತುಗಳನ್ನು ಅನುಸರಿಸಲು ವಿಫಲವಾದ ಕಾರಣ, ಸಿಐಡಿ ಅಧಿಕಾರಿಗಳು ಗುರುವಾರ ಸಂಜೆ 5.30 ರ ಸುಮಾರಿಗೆ ಬಂಧನ ವಾರಂಟ್‌ನೊಂದಿಗೆ ಅವರ ಮನೆಗೆ ತಲುಪಿದ್ದರು. ಅದೇ ದಿನ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡವೂ ಪಾಟೀಲ್ ಅವರ ನಿವಾಸದಲ್ಲಿ ವಿಚಾರಣೆ ನಡೆಸಿತ್ತು.

ಕರ್ನಾಟಕ ಸಿಐಡಿ ಪೊಲೀಸರು ಆರ್‌‌.ಡಿ.ಪಾಟೀಲ  ವಿರುದ್ಧ ಕಲಬುರಗಿಯ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. “ಆರೋಪಿಯನ್ನು ವಶಕ್ಕೆ ಪಡೆಯಲು ನಿವಾಸಕ್ಕೆ ತೆರಳಿದಾಗ ನಮ್ಮನ್ನು ತಳ್ಳಿ ಪರಾರಿಯಾಗಿದ್ದಾರೆ” ಎಂದು ಸಿಐಡಿ ಅಧಿಕಾರಿಗಳು ಹೇಳಿದ್ದರು.

ಇದನ್ನೂ ಓದಿ: ಮುಂದಿನ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ ಪಿಎಸ್‌ಐ ಹಗರಣದ ಆರೋಪಿ ರುದ್ರಗೌಡ ಪಾಟಿಲ ಅಲಿಯಾಸ್ ಆರ್‌.ಡಿ. ಪಾಟೀಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...