Homeಕರ್ನಾಟಕಸಿಎಂ ಭಾಗವಹಿಸುವ ಸಮಾರಂಭಕ್ಕೆ ಪಿಎಸ್‌ಐ ಹಗರಣ ಆರೋಪಿಯ ಚಿತ್ರವಿರುವ ಸ್ವಾಗತ ಕಮಾನು!

ಸಿಎಂ ಭಾಗವಹಿಸುವ ಸಮಾರಂಭಕ್ಕೆ ಪಿಎಸ್‌ಐ ಹಗರಣ ಆರೋಪಿಯ ಚಿತ್ರವಿರುವ ಸ್ವಾಗತ ಕಮಾನು!

ಬಿಜೆಪಿ ಟಿಕೆಟ್ ನೀಡುವುದು ಖಚಿತ ಎಂದು ವ್ಯಂಗ್ಯವಾಡಿದ ಕಾಂಗ್ರೆಸ್

- Advertisement -
- Advertisement -

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸುವ ಕಾರ್ಯಕ್ರಮಕ್ಕೆ ಸ್ವಾಗತಕೋರಿ ಹಾಕಲಾಗಿದ್ದ ಕಮಾನಿನಲ್ಲಿ ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ರುದ್ರಗೌಡ ಪಾಟಿಲ ಅಲಿಯಾಸ್ ಆರ್‌‌.ಡಿ. ಪಾಟಿಲ ಅವರ ಚಿತ್ರ ಕಾಣಿಸಿಕೊಂಡಿದೆ. ಸ್ವಾಗತ ಕಮಾನಿನ ಚಿತ್ರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಕಲಬುರಗಿ ಜಿಲ್ಲೆಯ ದೇವಲ ಗಾಣಗಾಪುರದಲ್ಲಿ ಕೋಲಿ ಸಮಾಜದ ನಾಯಕ ದಿವಂಗತ ವಿಠ್ಠಲ ಹೇರೂರ ಅವರ ಕಂಚಿನ ಮೂರ್ತಿ ಅನಾವರಣ ಕಾರ್ಯಕ್ರಮ ಮಂಗಳವಾರ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಭಾಗವಹಿಸಿದ್ದಾರೆ. ಕಾರ್ಯಕ್ರಮದ ಪ್ರಯುಕ್ತ ಸ್ವಾಗತಕೋರಿ ಆರ್‌.ಡಿ.ಪಾಟೀಲ ಚಿತ್ರವಿರುವ ಸ್ವಾಗತ ಕಮಾನು ಕಾಣಿಸಿಕೊಂಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸ್ವಾಗತ ಕಮಾನಿನಲ್ಲಿ ಪಿಎಸ್‌ಐ ಆರೋಪಿ ಆರ್‌.ಡಿ. ಪಾಟಿಲ ಮತ್ತು ಅವರ ಸಹೋದರ ಮಹಾಂತೇಶ ಪಾಟೀಲ ಅವರ ಚಿತ್ರಗಳನ್ನು ಹಾಕಲಾಗಿದೆ. ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಜಿಸುತ್ತಿರುವುದಾಗಿ ತಮ್ಮ ಫೇಸ್‌ಬುಕ್‌ನಲ್ಲಿ ಶನಿವಾರ ಘೋಷಿಸಿಕೊಂಡಿದ್ದರು.

ಘಟನೆ ಬಗ್ಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, “PSI ಹಗರಣದ ಆರೋಪಿ ಆರ್.ಡಿ ಪಾಟೀಲ್ ಸಿಎಂ ಸ್ವಾಗತಿಸುವ ಫ್ಲೆಕ್ಸ್ ಹಾಕಿದ್ದಾನೆ. ಈ ಮೂಲಕ ಆತನಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರ ಶ್ರೀರಕ್ಷೆ ಇದೆ ಎನ್ನುವುದು ಸ್ಪಷ್ಟವಾಗಿದೆ. ಚುನಾವಣೆಗೂ ಸ್ಪರ್ದಿಸುತ್ತಾನಂತೆ, ಬಿಜೆಪಿ ಟಿಕೆಟ್ ನೀಡುವುದು ಖಚಿತವಿರಬಹುದು! ಆತ ಬಿಜೆಪಿಗರ ಹೆಸರು ಬಾಯಿ ಬಿಡದಿರುವುದಕ್ಕೆ ‘ಟಿಕೆಟ್’ ಉಡುಗೊರೆಯೇ” ಎಂದು ಪ್ರಶ್ನಿಸಿದೆ.

ಪತ್ರಿಕೆಗಳಲ್ಲಿ ಘಟನೆಯ ಬಗ್ಗೆ ಸುದ್ದಿಯಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸ್ವಾಗತ ಕಮಾನನ್ನು ಅಲ್ಲಿಂದ ತೆರವುಗೊಳಿಸಲಾಗಿದೆ ಎಂದು ನಾನುಗೌರಿ.ಕಾಂಗೆ ಮೂಲಗಳು ತಿಳಿಸಿವೆ.

ಪಿಎಸ್‌ಐ ಹಗರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದ ಆರ್‌‌.ಡಿ. ಪಾಟೀಲ ಅವರನ್ನು ಮತ್ತೆ ಬಂಧಿಸಲು ಗುರುವಾರ ಕಲಬುರಗಿಯಲ್ಲಿರುವ ಅವರ ನಿವಾಸಕ್ಕೆ ತೆರಳಿದ್ದ ಕರ್ನಾಟಕ ಅಪರಾಧ ತನಿಖಾ ಇಲಾಖೆ (ಸಿಐಡಿ) ಅಧಿಕಾರಿಗಳಿಂದ ಅವರು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎಂದು ಕಲಬುರಗಿ ಪೊಲೀಸರು ತಿಳಿಸಿದ್ದರು.

ಸ್ಥಳದಿಂದ ಪರಾರಿಯಾಗುವ ವೇಳೆ ಆರ್‌‌.ಡಿ.ಪಾಟೀಲ ಅವರನ್ನು ವಶಕ್ಕೆ ತೆಗೆದುಕೊಳ್ಳಲು ಯತ್ನಿಸಿದ ಸಿಐಡಿ ಅಧಿಕಾರಿಗಳನ್ನು ತಳ್ಳಿದ್ದರು ಎಂದು ವರದಿಯಾಗಿದೆ. ಈ ಘಟನೆ ನಡೆದ ನಂತರ ಆರ್‌‌.ಡಿ.ಪಾಟೀಲ ಫೇಸ್‌ಬುಕ್‌ನಲ್ಲಿ ವೀಡಿಯೊ ಬಿಡುಗಡೆ ಮಾಡಿದ್ದರು.

ಇದರ ನಂತರ ಆರೋಪಿ ಆರ್‌‌.ಡಿ.ಪಾಟೀಲ ಸೋಮವಾರ ಸಂಜೆ ನ್ಯಾಯಾಲಯದ ಎದುರು ಹಾಜರಾಗಿದ್ದರು. ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆರ್.ಡಿ ಪಾಟೀಲ್‌ಗೆ ಸಿಐಡಿ ಅಧಿಕಾರಿಗಳು ಹಲವು ಬಾರಿ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಆದರೂ, ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ, ಸೋಮವಾರ ಬೆಳಗ್ಗೆ ಮತ್ತೊಂದು ನೋಟಿಸ್‌ ನೀಡಿದ್ದ ಅಧಿಕಾರಿಗಳು ಸಂಜೆಯೊಳಗೆ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿದ್ದರು.

ಕೊನೆಗೂ ಸೋಮವಾರ ಸಂಜೆ ಕಲಬುರಗಿಯ 5ನೇ ಜೆಎಂಎಫ್‌ಸಿ ನ್ಯಾಯಲಯದ ಮುಂದೆ ಹಾಜರಾದ್ದರು. ನ್ಯಾಯಾಲಯವು ಅವರಿಗೆ ಫೆಬ್ರವರಿ 6 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಆರ್‌‌.ಡಿ.ಪಾಟೀಲ  ಅವರನ್ನು ಈ ಹಿಂದೆ 2022ರ ಏಪ್ರಿಲ್‌ನಲ್ಲಿ ಬಂಧಿಸಲಾಗಿತ್ತು. ನಂತರ ಅವರನ್ನು ಡಿಸೆಂಬರ್‌ನಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಆದರೆ ಜಾಮೀನು ಷರತ್ತುಗಳನ್ನು ಅನುಸರಿಸಲು ವಿಫಲವಾದ ಕಾರಣ, ಸಿಐಡಿ ಅಧಿಕಾರಿಗಳು ಗುರುವಾರ ಸಂಜೆ 5.30 ರ ಸುಮಾರಿಗೆ ಬಂಧನ ವಾರಂಟ್‌ನೊಂದಿಗೆ ಅವರ ಮನೆಗೆ ತಲುಪಿದ್ದರು. ಅದೇ ದಿನ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡವೂ ಪಾಟೀಲ್ ಅವರ ನಿವಾಸದಲ್ಲಿ ವಿಚಾರಣೆ ನಡೆಸಿತ್ತು.

ಕರ್ನಾಟಕ ಸಿಐಡಿ ಪೊಲೀಸರು ಆರ್‌‌.ಡಿ.ಪಾಟೀಲ  ವಿರುದ್ಧ ಕಲಬುರಗಿಯ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. “ಆರೋಪಿಯನ್ನು ವಶಕ್ಕೆ ಪಡೆಯಲು ನಿವಾಸಕ್ಕೆ ತೆರಳಿದಾಗ ನಮ್ಮನ್ನು ತಳ್ಳಿ ಪರಾರಿಯಾಗಿದ್ದಾರೆ” ಎಂದು ಸಿಐಡಿ ಅಧಿಕಾರಿಗಳು ಹೇಳಿದ್ದರು.

ಇದನ್ನೂ ಓದಿ: ಮುಂದಿನ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ ಪಿಎಸ್‌ಐ ಹಗರಣದ ಆರೋಪಿ ರುದ್ರಗೌಡ ಪಾಟಿಲ ಅಲಿಯಾಸ್ ಆರ್‌.ಡಿ. ಪಾಟೀಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...