Homeಕರ್ನಾಟಕಸಿಎಂ ಭಾಗವಹಿಸುವ ಸಮಾರಂಭಕ್ಕೆ ಪಿಎಸ್‌ಐ ಹಗರಣ ಆರೋಪಿಯ ಚಿತ್ರವಿರುವ ಸ್ವಾಗತ ಕಮಾನು!

ಸಿಎಂ ಭಾಗವಹಿಸುವ ಸಮಾರಂಭಕ್ಕೆ ಪಿಎಸ್‌ಐ ಹಗರಣ ಆರೋಪಿಯ ಚಿತ್ರವಿರುವ ಸ್ವಾಗತ ಕಮಾನು!

ಬಿಜೆಪಿ ಟಿಕೆಟ್ ನೀಡುವುದು ಖಚಿತ ಎಂದು ವ್ಯಂಗ್ಯವಾಡಿದ ಕಾಂಗ್ರೆಸ್

- Advertisement -
- Advertisement -

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸುವ ಕಾರ್ಯಕ್ರಮಕ್ಕೆ ಸ್ವಾಗತಕೋರಿ ಹಾಕಲಾಗಿದ್ದ ಕಮಾನಿನಲ್ಲಿ ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ರುದ್ರಗೌಡ ಪಾಟಿಲ ಅಲಿಯಾಸ್ ಆರ್‌‌.ಡಿ. ಪಾಟಿಲ ಅವರ ಚಿತ್ರ ಕಾಣಿಸಿಕೊಂಡಿದೆ. ಸ್ವಾಗತ ಕಮಾನಿನ ಚಿತ್ರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಕಲಬುರಗಿ ಜಿಲ್ಲೆಯ ದೇವಲ ಗಾಣಗಾಪುರದಲ್ಲಿ ಕೋಲಿ ಸಮಾಜದ ನಾಯಕ ದಿವಂಗತ ವಿಠ್ಠಲ ಹೇರೂರ ಅವರ ಕಂಚಿನ ಮೂರ್ತಿ ಅನಾವರಣ ಕಾರ್ಯಕ್ರಮ ಮಂಗಳವಾರ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಭಾಗವಹಿಸಿದ್ದಾರೆ. ಕಾರ್ಯಕ್ರಮದ ಪ್ರಯುಕ್ತ ಸ್ವಾಗತಕೋರಿ ಆರ್‌.ಡಿ.ಪಾಟೀಲ ಚಿತ್ರವಿರುವ ಸ್ವಾಗತ ಕಮಾನು ಕಾಣಿಸಿಕೊಂಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸ್ವಾಗತ ಕಮಾನಿನಲ್ಲಿ ಪಿಎಸ್‌ಐ ಆರೋಪಿ ಆರ್‌.ಡಿ. ಪಾಟಿಲ ಮತ್ತು ಅವರ ಸಹೋದರ ಮಹಾಂತೇಶ ಪಾಟೀಲ ಅವರ ಚಿತ್ರಗಳನ್ನು ಹಾಕಲಾಗಿದೆ. ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಜಿಸುತ್ತಿರುವುದಾಗಿ ತಮ್ಮ ಫೇಸ್‌ಬುಕ್‌ನಲ್ಲಿ ಶನಿವಾರ ಘೋಷಿಸಿಕೊಂಡಿದ್ದರು.

ಘಟನೆ ಬಗ್ಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, “PSI ಹಗರಣದ ಆರೋಪಿ ಆರ್.ಡಿ ಪಾಟೀಲ್ ಸಿಎಂ ಸ್ವಾಗತಿಸುವ ಫ್ಲೆಕ್ಸ್ ಹಾಕಿದ್ದಾನೆ. ಈ ಮೂಲಕ ಆತನಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರ ಶ್ರೀರಕ್ಷೆ ಇದೆ ಎನ್ನುವುದು ಸ್ಪಷ್ಟವಾಗಿದೆ. ಚುನಾವಣೆಗೂ ಸ್ಪರ್ದಿಸುತ್ತಾನಂತೆ, ಬಿಜೆಪಿ ಟಿಕೆಟ್ ನೀಡುವುದು ಖಚಿತವಿರಬಹುದು! ಆತ ಬಿಜೆಪಿಗರ ಹೆಸರು ಬಾಯಿ ಬಿಡದಿರುವುದಕ್ಕೆ ‘ಟಿಕೆಟ್’ ಉಡುಗೊರೆಯೇ” ಎಂದು ಪ್ರಶ್ನಿಸಿದೆ.

ಪತ್ರಿಕೆಗಳಲ್ಲಿ ಘಟನೆಯ ಬಗ್ಗೆ ಸುದ್ದಿಯಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸ್ವಾಗತ ಕಮಾನನ್ನು ಅಲ್ಲಿಂದ ತೆರವುಗೊಳಿಸಲಾಗಿದೆ ಎಂದು ನಾನುಗೌರಿ.ಕಾಂಗೆ ಮೂಲಗಳು ತಿಳಿಸಿವೆ.

ಪಿಎಸ್‌ಐ ಹಗರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದ ಆರ್‌‌.ಡಿ. ಪಾಟೀಲ ಅವರನ್ನು ಮತ್ತೆ ಬಂಧಿಸಲು ಗುರುವಾರ ಕಲಬುರಗಿಯಲ್ಲಿರುವ ಅವರ ನಿವಾಸಕ್ಕೆ ತೆರಳಿದ್ದ ಕರ್ನಾಟಕ ಅಪರಾಧ ತನಿಖಾ ಇಲಾಖೆ (ಸಿಐಡಿ) ಅಧಿಕಾರಿಗಳಿಂದ ಅವರು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎಂದು ಕಲಬುರಗಿ ಪೊಲೀಸರು ತಿಳಿಸಿದ್ದರು.

ಸ್ಥಳದಿಂದ ಪರಾರಿಯಾಗುವ ವೇಳೆ ಆರ್‌‌.ಡಿ.ಪಾಟೀಲ ಅವರನ್ನು ವಶಕ್ಕೆ ತೆಗೆದುಕೊಳ್ಳಲು ಯತ್ನಿಸಿದ ಸಿಐಡಿ ಅಧಿಕಾರಿಗಳನ್ನು ತಳ್ಳಿದ್ದರು ಎಂದು ವರದಿಯಾಗಿದೆ. ಈ ಘಟನೆ ನಡೆದ ನಂತರ ಆರ್‌‌.ಡಿ.ಪಾಟೀಲ ಫೇಸ್‌ಬುಕ್‌ನಲ್ಲಿ ವೀಡಿಯೊ ಬಿಡುಗಡೆ ಮಾಡಿದ್ದರು.

ಇದರ ನಂತರ ಆರೋಪಿ ಆರ್‌‌.ಡಿ.ಪಾಟೀಲ ಸೋಮವಾರ ಸಂಜೆ ನ್ಯಾಯಾಲಯದ ಎದುರು ಹಾಜರಾಗಿದ್ದರು. ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆರ್.ಡಿ ಪಾಟೀಲ್‌ಗೆ ಸಿಐಡಿ ಅಧಿಕಾರಿಗಳು ಹಲವು ಬಾರಿ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಆದರೂ, ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ, ಸೋಮವಾರ ಬೆಳಗ್ಗೆ ಮತ್ತೊಂದು ನೋಟಿಸ್‌ ನೀಡಿದ್ದ ಅಧಿಕಾರಿಗಳು ಸಂಜೆಯೊಳಗೆ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿದ್ದರು.

ಕೊನೆಗೂ ಸೋಮವಾರ ಸಂಜೆ ಕಲಬುರಗಿಯ 5ನೇ ಜೆಎಂಎಫ್‌ಸಿ ನ್ಯಾಯಲಯದ ಮುಂದೆ ಹಾಜರಾದ್ದರು. ನ್ಯಾಯಾಲಯವು ಅವರಿಗೆ ಫೆಬ್ರವರಿ 6 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಆರ್‌‌.ಡಿ.ಪಾಟೀಲ  ಅವರನ್ನು ಈ ಹಿಂದೆ 2022ರ ಏಪ್ರಿಲ್‌ನಲ್ಲಿ ಬಂಧಿಸಲಾಗಿತ್ತು. ನಂತರ ಅವರನ್ನು ಡಿಸೆಂಬರ್‌ನಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಆದರೆ ಜಾಮೀನು ಷರತ್ತುಗಳನ್ನು ಅನುಸರಿಸಲು ವಿಫಲವಾದ ಕಾರಣ, ಸಿಐಡಿ ಅಧಿಕಾರಿಗಳು ಗುರುವಾರ ಸಂಜೆ 5.30 ರ ಸುಮಾರಿಗೆ ಬಂಧನ ವಾರಂಟ್‌ನೊಂದಿಗೆ ಅವರ ಮನೆಗೆ ತಲುಪಿದ್ದರು. ಅದೇ ದಿನ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡವೂ ಪಾಟೀಲ್ ಅವರ ನಿವಾಸದಲ್ಲಿ ವಿಚಾರಣೆ ನಡೆಸಿತ್ತು.

ಕರ್ನಾಟಕ ಸಿಐಡಿ ಪೊಲೀಸರು ಆರ್‌‌.ಡಿ.ಪಾಟೀಲ  ವಿರುದ್ಧ ಕಲಬುರಗಿಯ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. “ಆರೋಪಿಯನ್ನು ವಶಕ್ಕೆ ಪಡೆಯಲು ನಿವಾಸಕ್ಕೆ ತೆರಳಿದಾಗ ನಮ್ಮನ್ನು ತಳ್ಳಿ ಪರಾರಿಯಾಗಿದ್ದಾರೆ” ಎಂದು ಸಿಐಡಿ ಅಧಿಕಾರಿಗಳು ಹೇಳಿದ್ದರು.

ಇದನ್ನೂ ಓದಿ: ಮುಂದಿನ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ ಪಿಎಸ್‌ಐ ಹಗರಣದ ಆರೋಪಿ ರುದ್ರಗೌಡ ಪಾಟಿಲ ಅಲಿಯಾಸ್ ಆರ್‌.ಡಿ. ಪಾಟೀಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...