Homeಮುಖಪುಟಸಿಬಿಐಗೆ ಸುಸ್ವಾಗತ: ಸಿಸೋಡಿಯಾ ಮನೆ ದಾಳಿ ಕುರಿತು ಆಪ್ ಶಾಸಕ ರಾಘವ್ ಚಡ್ಡಾ

ಸಿಬಿಐಗೆ ಸುಸ್ವಾಗತ: ಸಿಸೋಡಿಯಾ ಮನೆ ದಾಳಿ ಕುರಿತು ಆಪ್ ಶಾಸಕ ರಾಘವ್ ಚಡ್ಡಾ

- Advertisement -
- Advertisement -

ದೆಹಲಿ ಉಪಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಮನೆ ಮೇಲಿನ ಸಿಬಿಐ ದಾಳಿ ಕುರಿತು ಪ್ರತಿಕ್ರಿಯಿಸಿರುವ ಆಪ್ ಶಾಸಕ ರಾಘವ್ ಚಡ್ಡಾ ಸಿಬಿಐಗೆ ಸುಸ್ವಾಗತ, ನಮ್ಮ ನಾಯಕನ ಮನೆಯಲ್ಲಿ ನಿಮಗೇನೂ ಸಿಗದು, ಪೆನ್ಸಿಲ್ ಮತ್ತು ಜ್ಯಾಮಿತಿ ಬಾಕ್ಸ್ ಸಿಗಬಹುದು ಅಷ್ಟೇ ಎಂದಿದ್ದಾರೆ.

ದೆಹಲಿಯ ಶಿಕ್ಷಣ ವ್ಯವಸ್ಥೆಯ ಹೀರೋ ಮನೀಶ್ ಸಿಸೋಡಿಯಾ ಎಂದು ಕರೆದಿರುವ ಅವರು, 8 ವರ್ಷಗಳಿಂದ ಹಲವಾರು ಬಾರಿ ದಾಳಿಗಳಾಗಿವೆ. ಆದರೆ ಅವರಿಗೆ ಏನೂ ಸಿಕ್ಕಿಲ್ಲ. ಈಗಲೂ ಅದೇ ಮುಂದುವರೆಯಲಿದ್ದು ಸಿಬಿಐ ವಿಚಾರಣೆಗೆ ಪಕ್ಷದ ಕಾರ್ಯಕರ್ತರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ನಡೆದ ಶಿಕ್ಷಣ ಕ್ರಾಂತಿಯ ಬಗ್ಗೆ ಅಮೆರಿಕದ ಪತ್ರಿಕೆ ನ್ಯೂಯಾರ್ಕ್‌ ಟೈಮ್ಸ್‌‌ ಮುಖಪುಟದ ಸುದ್ದಿಯನ್ನು ಮಾಡಿದ್ದು ಉಪಮುಖ್ಯಮಂತ್ರಿ ಸಿಸೋಡಿಯಾ ಅವರ ಚಿತ್ರವನ್ನು ಅದರಲ್ಲಿ ಪ್ರಕಟಿಸಿದೆ. ಅದೇ ದಿನ ಬಿಜೆಪಿಯು ಸಿಸೊಡಿಯಾ ಮನೆಯ ಮೇಲೆ ಸಿಬಿಐ ದಾಳಿ ಮಾಡಿಸಿದೆ ಎಂದು ರಾಘವ್ ಚಡ್ಡಾ ಆರೋಪಿಸಿದ್ದಾರೆ.

“ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ದೆಹಲಿ ಸರ್ಕಾರ ಮಾಡಿದ ಅತ್ಯುತ್ತಮ ಕೆಲಸದಿಂದ ಒಕ್ಕೂಟ ಸರ್ಕಾರಕ್ಕೆ ತೊಂದರೆಯಾಗಿದೆ. ಅದಕ್ಕಾಗಿಯೇ ಎರಡೂ ಇಲಾಖೆಗಳ ಮಂತ್ರಿಗಳನ್ನು ಗುರಿಯಾಗಿಸಲಾಗಿದೆ” ಎಂದು ಸಿಸೋಡಿಯಾ ಹೇಳಿದ್ದಾರೆ. ಇದೇ ರೀತಿಯ ದಾಳಿಗೊಳಗಾಗಿದ್ದ ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಮೇ ತಿಂಗಳಿನಿಂದ ಜೈಲಿನಲ್ಲಿದ್ದಾರೆ.

ದೆಹಲಿ ಮದ್ಯ ನೀತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಗಳ ಮೇಲೆ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮೇಲೆ ಸಿಬಿಐ ಶುಕ್ರವಾರ ದಾಳಿ ನಡೆಸಿತು. ಆದರೆ ಈ ಆರೋಪಗಳನ್ನು ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರವು ತೀವ್ರವಾಗಿ ನಿರಾಕರಿಸಿದೆ. ದೆಹಲಿಯಲ್ಲಿರುವ ಮನೀಶ್ ಸಿಸೋಡಿಯಾ ಅವರ ಮನೆ ಅಲ್ಲದೆ, ಏಳು ರಾಜ್ಯಗಳ 20 ಸ್ಥಳಗಳಲ್ಲಿ ಸಿಬಿಐ ಶೋಧ ನಡೆಸಿದೆ. ದೆಹಲಿಯ ಮಾಜಿ ಅಬಕಾರಿ ಕಮಿಷನರ್ ಎ.ಗೋಪಿಕೃಷ್ಣ ಅವರ ದಮನ್ ಮತ್ತು ದಿಯುವಿನ ಮನೆಯಲ್ಲೂ ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವೆಂಬರ್‌ನಲ್ಲಿ ಎಎಪಿ ಸರ್ಕಾರವು ಪ್ರಾರಂಭಿಸಿದ ಹೊಸ ದೆಹಲಿ ಅಬಕಾರಿ ನೀತಿಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಹೊಸ ನೀತಿಯ ಅಡಿಯಲ್ಲಿ ಮದ್ಯದ ಅಂಗಡಿ ಪರವಾನಗಿಗಳನ್ನು ಖಾಸಗಿಯವರಿಗೆ ಹಸ್ತಾಂತರಿಸಲಾಗಿದೆ ಎಂದು ಆರೋಪಿಸಿರುವ ತನಿಖಾ ಸಂಸ್ಥೆಯು ಎಫ್‌ಐಆರ್ ದಾಖಲಿಸಿದ್ದು ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ಅಪ್ರಾಪ್ತ ಬಾಲಕಿಯ ಕೊಲೆ ಭೇದಿಸಲು ‘ಬಾಬಾ’ ಬಳಿ ತೆರಳಿದ ಪೊಲೀಸ್‌ ಅಧಿಕಾರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...