Homeಮುಖಪುಟಸಿಬಿಐಗೆ ಸುಸ್ವಾಗತ: ಸಿಸೋಡಿಯಾ ಮನೆ ದಾಳಿ ಕುರಿತು ಆಪ್ ಶಾಸಕ ರಾಘವ್ ಚಡ್ಡಾ

ಸಿಬಿಐಗೆ ಸುಸ್ವಾಗತ: ಸಿಸೋಡಿಯಾ ಮನೆ ದಾಳಿ ಕುರಿತು ಆಪ್ ಶಾಸಕ ರಾಘವ್ ಚಡ್ಡಾ

- Advertisement -
- Advertisement -

ದೆಹಲಿ ಉಪಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಮನೆ ಮೇಲಿನ ಸಿಬಿಐ ದಾಳಿ ಕುರಿತು ಪ್ರತಿಕ್ರಿಯಿಸಿರುವ ಆಪ್ ಶಾಸಕ ರಾಘವ್ ಚಡ್ಡಾ ಸಿಬಿಐಗೆ ಸುಸ್ವಾಗತ, ನಮ್ಮ ನಾಯಕನ ಮನೆಯಲ್ಲಿ ನಿಮಗೇನೂ ಸಿಗದು, ಪೆನ್ಸಿಲ್ ಮತ್ತು ಜ್ಯಾಮಿತಿ ಬಾಕ್ಸ್ ಸಿಗಬಹುದು ಅಷ್ಟೇ ಎಂದಿದ್ದಾರೆ.

ದೆಹಲಿಯ ಶಿಕ್ಷಣ ವ್ಯವಸ್ಥೆಯ ಹೀರೋ ಮನೀಶ್ ಸಿಸೋಡಿಯಾ ಎಂದು ಕರೆದಿರುವ ಅವರು, 8 ವರ್ಷಗಳಿಂದ ಹಲವಾರು ಬಾರಿ ದಾಳಿಗಳಾಗಿವೆ. ಆದರೆ ಅವರಿಗೆ ಏನೂ ಸಿಕ್ಕಿಲ್ಲ. ಈಗಲೂ ಅದೇ ಮುಂದುವರೆಯಲಿದ್ದು ಸಿಬಿಐ ವಿಚಾರಣೆಗೆ ಪಕ್ಷದ ಕಾರ್ಯಕರ್ತರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ನಡೆದ ಶಿಕ್ಷಣ ಕ್ರಾಂತಿಯ ಬಗ್ಗೆ ಅಮೆರಿಕದ ಪತ್ರಿಕೆ ನ್ಯೂಯಾರ್ಕ್‌ ಟೈಮ್ಸ್‌‌ ಮುಖಪುಟದ ಸುದ್ದಿಯನ್ನು ಮಾಡಿದ್ದು ಉಪಮುಖ್ಯಮಂತ್ರಿ ಸಿಸೋಡಿಯಾ ಅವರ ಚಿತ್ರವನ್ನು ಅದರಲ್ಲಿ ಪ್ರಕಟಿಸಿದೆ. ಅದೇ ದಿನ ಬಿಜೆಪಿಯು ಸಿಸೊಡಿಯಾ ಮನೆಯ ಮೇಲೆ ಸಿಬಿಐ ದಾಳಿ ಮಾಡಿಸಿದೆ ಎಂದು ರಾಘವ್ ಚಡ್ಡಾ ಆರೋಪಿಸಿದ್ದಾರೆ.

“ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ದೆಹಲಿ ಸರ್ಕಾರ ಮಾಡಿದ ಅತ್ಯುತ್ತಮ ಕೆಲಸದಿಂದ ಒಕ್ಕೂಟ ಸರ್ಕಾರಕ್ಕೆ ತೊಂದರೆಯಾಗಿದೆ. ಅದಕ್ಕಾಗಿಯೇ ಎರಡೂ ಇಲಾಖೆಗಳ ಮಂತ್ರಿಗಳನ್ನು ಗುರಿಯಾಗಿಸಲಾಗಿದೆ” ಎಂದು ಸಿಸೋಡಿಯಾ ಹೇಳಿದ್ದಾರೆ. ಇದೇ ರೀತಿಯ ದಾಳಿಗೊಳಗಾಗಿದ್ದ ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಮೇ ತಿಂಗಳಿನಿಂದ ಜೈಲಿನಲ್ಲಿದ್ದಾರೆ.

ದೆಹಲಿ ಮದ್ಯ ನೀತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಗಳ ಮೇಲೆ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮೇಲೆ ಸಿಬಿಐ ಶುಕ್ರವಾರ ದಾಳಿ ನಡೆಸಿತು. ಆದರೆ ಈ ಆರೋಪಗಳನ್ನು ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರವು ತೀವ್ರವಾಗಿ ನಿರಾಕರಿಸಿದೆ. ದೆಹಲಿಯಲ್ಲಿರುವ ಮನೀಶ್ ಸಿಸೋಡಿಯಾ ಅವರ ಮನೆ ಅಲ್ಲದೆ, ಏಳು ರಾಜ್ಯಗಳ 20 ಸ್ಥಳಗಳಲ್ಲಿ ಸಿಬಿಐ ಶೋಧ ನಡೆಸಿದೆ. ದೆಹಲಿಯ ಮಾಜಿ ಅಬಕಾರಿ ಕಮಿಷನರ್ ಎ.ಗೋಪಿಕೃಷ್ಣ ಅವರ ದಮನ್ ಮತ್ತು ದಿಯುವಿನ ಮನೆಯಲ್ಲೂ ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವೆಂಬರ್‌ನಲ್ಲಿ ಎಎಪಿ ಸರ್ಕಾರವು ಪ್ರಾರಂಭಿಸಿದ ಹೊಸ ದೆಹಲಿ ಅಬಕಾರಿ ನೀತಿಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಹೊಸ ನೀತಿಯ ಅಡಿಯಲ್ಲಿ ಮದ್ಯದ ಅಂಗಡಿ ಪರವಾನಗಿಗಳನ್ನು ಖಾಸಗಿಯವರಿಗೆ ಹಸ್ತಾಂತರಿಸಲಾಗಿದೆ ಎಂದು ಆರೋಪಿಸಿರುವ ತನಿಖಾ ಸಂಸ್ಥೆಯು ಎಫ್‌ಐಆರ್ ದಾಖಲಿಸಿದ್ದು ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ಅಪ್ರಾಪ್ತ ಬಾಲಕಿಯ ಕೊಲೆ ಭೇದಿಸಲು ‘ಬಾಬಾ’ ಬಳಿ ತೆರಳಿದ ಪೊಲೀಸ್‌ ಅಧಿಕಾರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...