Homeಮುಖಪುಟಪ್ರಶಾಂತ್ ಭೂಷಣ್ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಡಲು ವೆಲ್ಫೇರ್ ಪಾರ್ಟಿ ಆಗ್ರಹ

ಪ್ರಶಾಂತ್ ಭೂಷಣ್ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಡಲು ವೆಲ್ಫೇರ್ ಪಾರ್ಟಿ ಆಗ್ರಹ

ಸುಪ್ರೀಂ ಕೋರ್ಟ್‍ನ ಮುಖ್ಯನ್ಯಾಯಮೂರ್ತಿಗಳ ಮೇಲೆ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಮಾಡಿರುವ ಟ್ವೀಟ್‍ಗಳು ವಿಮರ್ಶೆಗಳೇ ಹೊರತು ನಿಂದನೆಗಳಲ್ಲ. ಪ್ರಜಾತಾಂತ್ರಿಕ ವ್ಯವಸ್ಥೆಯಲ್ಲಿ ರಚನಾತ್ಮಕ ವಿಮರ್ಶೆಗಳಿಂದ ನ್ಯಾಯಾಂಗ ವ್ಯವಸ್ಥೆಗೆ ಯಾವುದೇ ಪೆಟ್ಟಾಗುವುದಿಲ್ಲ.

- Advertisement -
- Advertisement -

ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಡಲು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಡ್ವೋಕೇಟ್ ತಾಹಿರ್ ಹುಸೇನ್ ಆಗ್ರಹಿಸಿದ್ದಾರೆ.

ಸುಪ್ರೀಂ ಕೋರ್ಟ್‍ನ ಮುಖ್ಯನ್ಯಾಯಮೂರ್ತಿಗಳ ಮೇಲೆ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಮಾಡಿರುವ ಟ್ವೀಟ್‍ಗಳು ವಿಮರ್ಶೆಗಳೇ ಹೊರತು ನಿಂದನೆಗಳಲ್ಲ. ಪ್ರಜಾತಾಂತ್ರಿಕ ವ್ಯವಸ್ಥೆಯಲ್ಲಿ ರಚನಾತ್ಮಕ ವಿಮರ್ಶೆಗಳಿಂದ ನ್ಯಾಯಾಂಗ ವ್ಯವಸ್ಥೆಗೆ ಯಾವುದೇ ಪೆಟ್ಟಾಗುವುದಿಲ್ಲ. ಬದಲಾಗಿ ಗಟ್ಟಿಯಾಗುತ್ತದೆ ಎಂಬುದನ್ನು ಪರಿಗಣಿಸಿ ಪ್ರಶಾಂತ್ ಭೂಷಣ್ ಅವರಿಗೆ ಶಿಕ್ಷೆ ವಿಧಿಸದೇ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಡಬೇಕೆಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಶಾಂತ್ ಭೂಷಣ್ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಡಲು ವೆಲ್ಫೇರ್ ಪಾರ್ಟಿ ಆಗ್ರಹ
ತಾಹಿರ್ ಹುಸೇನ್

ತುರ್ತು ಪರಿಸ್ಥಿತಿ ಸೇರಿದಂತೆ ಹಲವು ಸಂದರ್ಭಗಳಲ್ಲಿ ಪ್ರಶಾಂತ್ ಭೂಷಣ್ ಅವರು ಸ್ವತಂತ್ರ ನ್ಯಾಯಾಂಗ ವ್ಯವಸ್ಥೆಯ ಪರಂಪರೆಯ ರಕ್ಷಣೆಗಾಗಿ ಹೋರಾಟ ನಡೆಸಿದವರು. ಅಣ್ಣಾ ಹಜಾರೆ ಜತೆಗೆ ಭ್ರಷ್ಟಾಚಾರ ವಿರೋಧಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದವರು. ತಮ್ಮ ವಕೀಲ ವೃತ್ತಿ ಜೀವನದ ಐದು ದಶಕಗಳ ಉದ್ದಕ್ಕೂ ಜನರ ಹಕ್ಕುಗಳ ರಕ್ಷಣೆಗಾಗಿ ಯಾವ ಪಕ್ಷದ ಸರಕಾರ ಅಧಿಕಾರದಲ್ಲಿದ್ದರೂ ಪ್ರಶ್ನಿಸುತ್ತಾ ಬಂದವರು. ನ್ಯಾಯಾಂಗದಲ್ಲಿ, ನ್ಯಾಯಾಧೀಶರಿಂದ ಲೋಪಗಳಾದಾಗಲೂ ಪ್ರಶ್ನಿಸಿದ್ದಾರೆ. ಇದು ಅವರು ಈ ದೇಶದ ಜನತೆ ಮತ್ತು ಪ್ರಜಾತಾಂತ್ರಿಕ-ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸಲು ಮಾಡಿದ ಸೇವೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಹಿಂದೆ 8 ಮುಖ್ಯ ನ್ಯಾಯಾಧೀಶರ ಮೇಲೆ ಮಾಡಿದ ಟೀಕೆ ಮತ್ತು ಈಗ ಮುಖ್ಯ ನ್ಯಾಯಾಧೀಶರನ್ನೊಳಗೊಂಡು ಮಾಡಿರುವ ವಿಮರ್ಶೆಗಳು ಸಾಕ್ಷ್ಯಾಧಾರ ಸಮೇತವಾಗಿವೆ ಎಂಬುದು ಮೇಲ್ನೋಟಕ್ಕೆ ಸ್ಪಷ್ಟವಾಗಿವೆ. ಹಾಗಾಗಿ ಪ್ರಶಾಂತ್ ಭೂಷಣ್ ಅವರು ಎತ್ತಿರುವ ಪ್ರಶ್ನೆಗಳನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಿಸಿದವರನ್ನು ವಿಚಾರಣೆಗೆ ಒಳಪಡಿಸದೇ, ತಪ್ಪನ್ನು ಪ್ರಶ್ನಿಸಿದ ಪ್ರಶಾಂತ್ ಭೂಷಣ್ ಅವರನ್ನೇ ಶಿಕ್ಷೆಗೆ ಒಳಪಡಿಸಿರುವ ಸವೋಚ್ಚ ನ್ಯಾಯಾಲಯದ ಕ್ರಮ ದೇಶದ ಜನರಲ್ಲಿ ಆಶ್ಚರ್ಯ ಮೂಡಿಸಿದೆ. ಮತ್ತು ಇದು ನ್ಯಾಯಾಲಯದ ಮೇಲಿನ ವಿಶ್ವಾಸ ಕ್ಷೀಣಿಸುವಂತೆ ಮಾಡಿದೆ ಎಂದಿದ್ದಾರೆ.

ನ್ಯಾಯಾಲಯದ ಈ ಕ್ರಮ ಮತ್ತು ಪ್ರಕರಣದ ವಿಚಾರಣೆಯಲ್ಲಿ ಪ್ರತಿವಾದಿಗೆ ನೇರವಾಗಿ ವಾದ ಮಂಡಿಸಲು ಅವಕಾಶ ನೀಡದೇ ಇರುವ ವಿಧಾನವನ್ನು ದೇಶದಾದ್ಯಂತ ಸಾವಿರಾರು ವಕೀಲರು, ನಿವೃತ್ತ ನ್ಯಾಯಾಧೀಶರು ಮತ್ತು ಕಾನೂನು ಪಂಡಿತರು ತೀವ್ರವಾಗಿ ಟೀಕಿಸಿದ್ದಾರೆ. ಹಾಗಾಗಿ, ಮೇಲಿನ ಎಲ್ಲ ಅಂಶಗಳನ್ನು ಸಮಗ್ರವಾಗಿ ಪರಿಗಣಿಸಿ ದೇಶದ ಸರ್ವೋಚ್ಚ ನ್ಯಾಯಾಲಯವು ಪ್ರಶಾಂತ್ ಭೂಷಣ್‍ರ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೈಬಿಟ್ಟು ನಿಜವಾದ ನ್ಯಾಯವನ್ನು ಎತ್ತಿಹಿಡಿಯಬೇಕು. ಆ ಮೂಲಕ ದೇಶದ ನಾಗರಿಕರಲ್ಲಿ ಸರ್ವೋಚ್ಚ ನ್ಯಾಯಾಲಯದ ಮೇಲಿನ ನಂಬಿಕೆಯನ್ನು ಗಟ್ಟಿಗೊಳಿಸಬೇಕು ಎಂದು ತಾಹಿರ್ ಹುಸೇನ್ ಹೇಳಿದ್ದಾರೆ.


ಇದನ್ನೂ ಓದಿ: ಭೂಷಣ್ ಪ್ರಕರಣ: ರಚನಾತ್ಮಕ ಟೀಕೆಯೊಂದನ್ನು ಸಹಿಸಲಾಗದಷ್ಟು ಸಂಕುಚಿತವೇ ಸುಪ್ರೀಮ್ ಭುಜಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...