Homeಮುಖಪುಟಪ್ರಶಾಂತ್ ಭೂಷಣ್ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಡಲು ವೆಲ್ಫೇರ್ ಪಾರ್ಟಿ ಆಗ್ರಹ

ಪ್ರಶಾಂತ್ ಭೂಷಣ್ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಡಲು ವೆಲ್ಫೇರ್ ಪಾರ್ಟಿ ಆಗ್ರಹ

ಸುಪ್ರೀಂ ಕೋರ್ಟ್‍ನ ಮುಖ್ಯನ್ಯಾಯಮೂರ್ತಿಗಳ ಮೇಲೆ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಮಾಡಿರುವ ಟ್ವೀಟ್‍ಗಳು ವಿಮರ್ಶೆಗಳೇ ಹೊರತು ನಿಂದನೆಗಳಲ್ಲ. ಪ್ರಜಾತಾಂತ್ರಿಕ ವ್ಯವಸ್ಥೆಯಲ್ಲಿ ರಚನಾತ್ಮಕ ವಿಮರ್ಶೆಗಳಿಂದ ನ್ಯಾಯಾಂಗ ವ್ಯವಸ್ಥೆಗೆ ಯಾವುದೇ ಪೆಟ್ಟಾಗುವುದಿಲ್ಲ.

- Advertisement -
- Advertisement -

ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಡಲು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಡ್ವೋಕೇಟ್ ತಾಹಿರ್ ಹುಸೇನ್ ಆಗ್ರಹಿಸಿದ್ದಾರೆ.

ಸುಪ್ರೀಂ ಕೋರ್ಟ್‍ನ ಮುಖ್ಯನ್ಯಾಯಮೂರ್ತಿಗಳ ಮೇಲೆ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಮಾಡಿರುವ ಟ್ವೀಟ್‍ಗಳು ವಿಮರ್ಶೆಗಳೇ ಹೊರತು ನಿಂದನೆಗಳಲ್ಲ. ಪ್ರಜಾತಾಂತ್ರಿಕ ವ್ಯವಸ್ಥೆಯಲ್ಲಿ ರಚನಾತ್ಮಕ ವಿಮರ್ಶೆಗಳಿಂದ ನ್ಯಾಯಾಂಗ ವ್ಯವಸ್ಥೆಗೆ ಯಾವುದೇ ಪೆಟ್ಟಾಗುವುದಿಲ್ಲ. ಬದಲಾಗಿ ಗಟ್ಟಿಯಾಗುತ್ತದೆ ಎಂಬುದನ್ನು ಪರಿಗಣಿಸಿ ಪ್ರಶಾಂತ್ ಭೂಷಣ್ ಅವರಿಗೆ ಶಿಕ್ಷೆ ವಿಧಿಸದೇ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಡಬೇಕೆಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಶಾಂತ್ ಭೂಷಣ್ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಡಲು ವೆಲ್ಫೇರ್ ಪಾರ್ಟಿ ಆಗ್ರಹ
ತಾಹಿರ್ ಹುಸೇನ್

ತುರ್ತು ಪರಿಸ್ಥಿತಿ ಸೇರಿದಂತೆ ಹಲವು ಸಂದರ್ಭಗಳಲ್ಲಿ ಪ್ರಶಾಂತ್ ಭೂಷಣ್ ಅವರು ಸ್ವತಂತ್ರ ನ್ಯಾಯಾಂಗ ವ್ಯವಸ್ಥೆಯ ಪರಂಪರೆಯ ರಕ್ಷಣೆಗಾಗಿ ಹೋರಾಟ ನಡೆಸಿದವರು. ಅಣ್ಣಾ ಹಜಾರೆ ಜತೆಗೆ ಭ್ರಷ್ಟಾಚಾರ ವಿರೋಧಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದವರು. ತಮ್ಮ ವಕೀಲ ವೃತ್ತಿ ಜೀವನದ ಐದು ದಶಕಗಳ ಉದ್ದಕ್ಕೂ ಜನರ ಹಕ್ಕುಗಳ ರಕ್ಷಣೆಗಾಗಿ ಯಾವ ಪಕ್ಷದ ಸರಕಾರ ಅಧಿಕಾರದಲ್ಲಿದ್ದರೂ ಪ್ರಶ್ನಿಸುತ್ತಾ ಬಂದವರು. ನ್ಯಾಯಾಂಗದಲ್ಲಿ, ನ್ಯಾಯಾಧೀಶರಿಂದ ಲೋಪಗಳಾದಾಗಲೂ ಪ್ರಶ್ನಿಸಿದ್ದಾರೆ. ಇದು ಅವರು ಈ ದೇಶದ ಜನತೆ ಮತ್ತು ಪ್ರಜಾತಾಂತ್ರಿಕ-ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸಲು ಮಾಡಿದ ಸೇವೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಹಿಂದೆ 8 ಮುಖ್ಯ ನ್ಯಾಯಾಧೀಶರ ಮೇಲೆ ಮಾಡಿದ ಟೀಕೆ ಮತ್ತು ಈಗ ಮುಖ್ಯ ನ್ಯಾಯಾಧೀಶರನ್ನೊಳಗೊಂಡು ಮಾಡಿರುವ ವಿಮರ್ಶೆಗಳು ಸಾಕ್ಷ್ಯಾಧಾರ ಸಮೇತವಾಗಿವೆ ಎಂಬುದು ಮೇಲ್ನೋಟಕ್ಕೆ ಸ್ಪಷ್ಟವಾಗಿವೆ. ಹಾಗಾಗಿ ಪ್ರಶಾಂತ್ ಭೂಷಣ್ ಅವರು ಎತ್ತಿರುವ ಪ್ರಶ್ನೆಗಳನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಿಸಿದವರನ್ನು ವಿಚಾರಣೆಗೆ ಒಳಪಡಿಸದೇ, ತಪ್ಪನ್ನು ಪ್ರಶ್ನಿಸಿದ ಪ್ರಶಾಂತ್ ಭೂಷಣ್ ಅವರನ್ನೇ ಶಿಕ್ಷೆಗೆ ಒಳಪಡಿಸಿರುವ ಸವೋಚ್ಚ ನ್ಯಾಯಾಲಯದ ಕ್ರಮ ದೇಶದ ಜನರಲ್ಲಿ ಆಶ್ಚರ್ಯ ಮೂಡಿಸಿದೆ. ಮತ್ತು ಇದು ನ್ಯಾಯಾಲಯದ ಮೇಲಿನ ವಿಶ್ವಾಸ ಕ್ಷೀಣಿಸುವಂತೆ ಮಾಡಿದೆ ಎಂದಿದ್ದಾರೆ.

ನ್ಯಾಯಾಲಯದ ಈ ಕ್ರಮ ಮತ್ತು ಪ್ರಕರಣದ ವಿಚಾರಣೆಯಲ್ಲಿ ಪ್ರತಿವಾದಿಗೆ ನೇರವಾಗಿ ವಾದ ಮಂಡಿಸಲು ಅವಕಾಶ ನೀಡದೇ ಇರುವ ವಿಧಾನವನ್ನು ದೇಶದಾದ್ಯಂತ ಸಾವಿರಾರು ವಕೀಲರು, ನಿವೃತ್ತ ನ್ಯಾಯಾಧೀಶರು ಮತ್ತು ಕಾನೂನು ಪಂಡಿತರು ತೀವ್ರವಾಗಿ ಟೀಕಿಸಿದ್ದಾರೆ. ಹಾಗಾಗಿ, ಮೇಲಿನ ಎಲ್ಲ ಅಂಶಗಳನ್ನು ಸಮಗ್ರವಾಗಿ ಪರಿಗಣಿಸಿ ದೇಶದ ಸರ್ವೋಚ್ಚ ನ್ಯಾಯಾಲಯವು ಪ್ರಶಾಂತ್ ಭೂಷಣ್‍ರ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೈಬಿಟ್ಟು ನಿಜವಾದ ನ್ಯಾಯವನ್ನು ಎತ್ತಿಹಿಡಿಯಬೇಕು. ಆ ಮೂಲಕ ದೇಶದ ನಾಗರಿಕರಲ್ಲಿ ಸರ್ವೋಚ್ಚ ನ್ಯಾಯಾಲಯದ ಮೇಲಿನ ನಂಬಿಕೆಯನ್ನು ಗಟ್ಟಿಗೊಳಿಸಬೇಕು ಎಂದು ತಾಹಿರ್ ಹುಸೇನ್ ಹೇಳಿದ್ದಾರೆ.


ಇದನ್ನೂ ಓದಿ: ಭೂಷಣ್ ಪ್ರಕರಣ: ರಚನಾತ್ಮಕ ಟೀಕೆಯೊಂದನ್ನು ಸಹಿಸಲಾಗದಷ್ಟು ಸಂಕುಚಿತವೇ ಸುಪ್ರೀಮ್ ಭುಜಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...