Homeಮುಖಪುಟಪ್ರಶಾಂತ್ ಭೂಷಣ್ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಡಲು ವೆಲ್ಫೇರ್ ಪಾರ್ಟಿ ಆಗ್ರಹ

ಪ್ರಶಾಂತ್ ಭೂಷಣ್ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಡಲು ವೆಲ್ಫೇರ್ ಪಾರ್ಟಿ ಆಗ್ರಹ

ಸುಪ್ರೀಂ ಕೋರ್ಟ್‍ನ ಮುಖ್ಯನ್ಯಾಯಮೂರ್ತಿಗಳ ಮೇಲೆ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಮಾಡಿರುವ ಟ್ವೀಟ್‍ಗಳು ವಿಮರ್ಶೆಗಳೇ ಹೊರತು ನಿಂದನೆಗಳಲ್ಲ. ಪ್ರಜಾತಾಂತ್ರಿಕ ವ್ಯವಸ್ಥೆಯಲ್ಲಿ ರಚನಾತ್ಮಕ ವಿಮರ್ಶೆಗಳಿಂದ ನ್ಯಾಯಾಂಗ ವ್ಯವಸ್ಥೆಗೆ ಯಾವುದೇ ಪೆಟ್ಟಾಗುವುದಿಲ್ಲ.

- Advertisement -
- Advertisement -

ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಡಲು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಡ್ವೋಕೇಟ್ ತಾಹಿರ್ ಹುಸೇನ್ ಆಗ್ರಹಿಸಿದ್ದಾರೆ.

ಸುಪ್ರೀಂ ಕೋರ್ಟ್‍ನ ಮುಖ್ಯನ್ಯಾಯಮೂರ್ತಿಗಳ ಮೇಲೆ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಮಾಡಿರುವ ಟ್ವೀಟ್‍ಗಳು ವಿಮರ್ಶೆಗಳೇ ಹೊರತು ನಿಂದನೆಗಳಲ್ಲ. ಪ್ರಜಾತಾಂತ್ರಿಕ ವ್ಯವಸ್ಥೆಯಲ್ಲಿ ರಚನಾತ್ಮಕ ವಿಮರ್ಶೆಗಳಿಂದ ನ್ಯಾಯಾಂಗ ವ್ಯವಸ್ಥೆಗೆ ಯಾವುದೇ ಪೆಟ್ಟಾಗುವುದಿಲ್ಲ. ಬದಲಾಗಿ ಗಟ್ಟಿಯಾಗುತ್ತದೆ ಎಂಬುದನ್ನು ಪರಿಗಣಿಸಿ ಪ್ರಶಾಂತ್ ಭೂಷಣ್ ಅವರಿಗೆ ಶಿಕ್ಷೆ ವಿಧಿಸದೇ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಡಬೇಕೆಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಶಾಂತ್ ಭೂಷಣ್ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಡಲು ವೆಲ್ಫೇರ್ ಪಾರ್ಟಿ ಆಗ್ರಹ
ತಾಹಿರ್ ಹುಸೇನ್

ತುರ್ತು ಪರಿಸ್ಥಿತಿ ಸೇರಿದಂತೆ ಹಲವು ಸಂದರ್ಭಗಳಲ್ಲಿ ಪ್ರಶಾಂತ್ ಭೂಷಣ್ ಅವರು ಸ್ವತಂತ್ರ ನ್ಯಾಯಾಂಗ ವ್ಯವಸ್ಥೆಯ ಪರಂಪರೆಯ ರಕ್ಷಣೆಗಾಗಿ ಹೋರಾಟ ನಡೆಸಿದವರು. ಅಣ್ಣಾ ಹಜಾರೆ ಜತೆಗೆ ಭ್ರಷ್ಟಾಚಾರ ವಿರೋಧಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದವರು. ತಮ್ಮ ವಕೀಲ ವೃತ್ತಿ ಜೀವನದ ಐದು ದಶಕಗಳ ಉದ್ದಕ್ಕೂ ಜನರ ಹಕ್ಕುಗಳ ರಕ್ಷಣೆಗಾಗಿ ಯಾವ ಪಕ್ಷದ ಸರಕಾರ ಅಧಿಕಾರದಲ್ಲಿದ್ದರೂ ಪ್ರಶ್ನಿಸುತ್ತಾ ಬಂದವರು. ನ್ಯಾಯಾಂಗದಲ್ಲಿ, ನ್ಯಾಯಾಧೀಶರಿಂದ ಲೋಪಗಳಾದಾಗಲೂ ಪ್ರಶ್ನಿಸಿದ್ದಾರೆ. ಇದು ಅವರು ಈ ದೇಶದ ಜನತೆ ಮತ್ತು ಪ್ರಜಾತಾಂತ್ರಿಕ-ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸಲು ಮಾಡಿದ ಸೇವೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಹಿಂದೆ 8 ಮುಖ್ಯ ನ್ಯಾಯಾಧೀಶರ ಮೇಲೆ ಮಾಡಿದ ಟೀಕೆ ಮತ್ತು ಈಗ ಮುಖ್ಯ ನ್ಯಾಯಾಧೀಶರನ್ನೊಳಗೊಂಡು ಮಾಡಿರುವ ವಿಮರ್ಶೆಗಳು ಸಾಕ್ಷ್ಯಾಧಾರ ಸಮೇತವಾಗಿವೆ ಎಂಬುದು ಮೇಲ್ನೋಟಕ್ಕೆ ಸ್ಪಷ್ಟವಾಗಿವೆ. ಹಾಗಾಗಿ ಪ್ರಶಾಂತ್ ಭೂಷಣ್ ಅವರು ಎತ್ತಿರುವ ಪ್ರಶ್ನೆಗಳನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಿಸಿದವರನ್ನು ವಿಚಾರಣೆಗೆ ಒಳಪಡಿಸದೇ, ತಪ್ಪನ್ನು ಪ್ರಶ್ನಿಸಿದ ಪ್ರಶಾಂತ್ ಭೂಷಣ್ ಅವರನ್ನೇ ಶಿಕ್ಷೆಗೆ ಒಳಪಡಿಸಿರುವ ಸವೋಚ್ಚ ನ್ಯಾಯಾಲಯದ ಕ್ರಮ ದೇಶದ ಜನರಲ್ಲಿ ಆಶ್ಚರ್ಯ ಮೂಡಿಸಿದೆ. ಮತ್ತು ಇದು ನ್ಯಾಯಾಲಯದ ಮೇಲಿನ ವಿಶ್ವಾಸ ಕ್ಷೀಣಿಸುವಂತೆ ಮಾಡಿದೆ ಎಂದಿದ್ದಾರೆ.

ನ್ಯಾಯಾಲಯದ ಈ ಕ್ರಮ ಮತ್ತು ಪ್ರಕರಣದ ವಿಚಾರಣೆಯಲ್ಲಿ ಪ್ರತಿವಾದಿಗೆ ನೇರವಾಗಿ ವಾದ ಮಂಡಿಸಲು ಅವಕಾಶ ನೀಡದೇ ಇರುವ ವಿಧಾನವನ್ನು ದೇಶದಾದ್ಯಂತ ಸಾವಿರಾರು ವಕೀಲರು, ನಿವೃತ್ತ ನ್ಯಾಯಾಧೀಶರು ಮತ್ತು ಕಾನೂನು ಪಂಡಿತರು ತೀವ್ರವಾಗಿ ಟೀಕಿಸಿದ್ದಾರೆ. ಹಾಗಾಗಿ, ಮೇಲಿನ ಎಲ್ಲ ಅಂಶಗಳನ್ನು ಸಮಗ್ರವಾಗಿ ಪರಿಗಣಿಸಿ ದೇಶದ ಸರ್ವೋಚ್ಚ ನ್ಯಾಯಾಲಯವು ಪ್ರಶಾಂತ್ ಭೂಷಣ್‍ರ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೈಬಿಟ್ಟು ನಿಜವಾದ ನ್ಯಾಯವನ್ನು ಎತ್ತಿಹಿಡಿಯಬೇಕು. ಆ ಮೂಲಕ ದೇಶದ ನಾಗರಿಕರಲ್ಲಿ ಸರ್ವೋಚ್ಚ ನ್ಯಾಯಾಲಯದ ಮೇಲಿನ ನಂಬಿಕೆಯನ್ನು ಗಟ್ಟಿಗೊಳಿಸಬೇಕು ಎಂದು ತಾಹಿರ್ ಹುಸೇನ್ ಹೇಳಿದ್ದಾರೆ.


ಇದನ್ನೂ ಓದಿ: ಭೂಷಣ್ ಪ್ರಕರಣ: ರಚನಾತ್ಮಕ ಟೀಕೆಯೊಂದನ್ನು ಸಹಿಸಲಾಗದಷ್ಟು ಸಂಕುಚಿತವೇ ಸುಪ್ರೀಮ್ ಭುಜಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...