Homeಕರ್ನಾಟಕಎದಿ ಬ್ಯಾನಿಯ ಹಾಡಿ ತೋರಿದ ಚೆನ್ನಣ್ಣ ವಾಲೀಕಾರರ ಸ್ಮರಣೆ - ಭಗತರಾಜ ನಿಜಾಮಕಾರಿ

ಎದಿ ಬ್ಯಾನಿಯ ಹಾಡಿ ತೋರಿದ ಚೆನ್ನಣ್ಣ ವಾಲೀಕಾರರ ಸ್ಮರಣೆ – ಭಗತರಾಜ ನಿಜಾಮಕಾರಿ

- Advertisement -
- Advertisement -

ಮರದ ಮೇಲಿನ ಗಾಳಿಗೆ ಹಕ್ಕಿಯೊಂದು ರೆಕ್ಕೆ ಬಿಚ್ಚಿ `ಕರಿತೆಲೆ ಮಾನವನ ಜೀಪದ’ ಹಾಡು ಹಾಡುತ್ತಿತ್ತು. `ಬಂಡೆದ್ದ ದಲಿತರ ಬೀದಿಹಾಡುಗಳು’, `ಪ್ಯಾಂಥರ್ಸ್ ಪದ್ಯಗಳು’, `ಧಿಕ್ಕಾರದ ಹಾಡುಗಳು’, `ಡಪ್ಪಿನಾಟ’ಗಳೊಂದಿಗೆ ಆ ಭೀಮಕಾಯ `ಬೆಳ್ಯ’ ಕುಣಿಯುತ್ತಲಿದ್ದ. ದಣಿವರಿವು ಅವನಿಗೆ ಗೊತ್ತಿಲ್ಲ. ಊಟಕ್ಕೆ ಕರೆದರೆ ಶತಮಾನದ ಸೇಡು ತೀರಿಸಿಕೊಳ್ಳುತಿದ್ದ. ರಾಯಚೂರಿನ ಕಡುಬಿಸಿಲಲ್ಲಿ ಬರೆಯಲು ಕುಳಿತರೆ, ಬರಿಮೈ, ಸುರಿವ ಬೆವರು, ಬಣ್ಣಬಣ್ಣದ ಹೂವುಗಳ ಲುಂಗಿ, ಬೆರಳಲ್ಲಿ ಪೆನ್ನು, ಸರಸರನೆ ಬಿಳಿಹಾಳೆಯ ತುಂಬ ಹಾವಿನಂತೆ ಹರಿದಾಡುತ್ತಿತ್ತು. ಹೆಪ್ಪುಗಟ್ಟಿದ ಸಮುದ್ರ, ಬೋಧಿವೃಕ್ಷದ ಹೂವು ಅರಳುತ್ತಿದ್ದವು.

ಇಂತಪ್ಪ ನಮ್ಮ ಚೆನ್ನಣ್ಣ ವಾಲೀಕಾರರು ಮೂಲತಃ ಜಾನಪದ ಲೋಕದ ಮನುಷ್ಯ. ಜಾನಪದದಲ್ಲಿಯೇ ಸಂಶೋಧನೆ ಮಾಡುತ್ತಿದ್ದರೆ ಅವರಿಗೆ ದೊಡ್ಡ ಪ್ರಶಸ್ತಿ ತಪ್ಪದೇ ಬರುತ್ತಿತ್ತು. ಆದರೆ ಅವರಿಗೆ ಪ್ರಶಸ್ತಿ, ಬಿರುದು-ಬಾವಲಿಗಳಿಗಿಂತ ತನ್ನ ಜನರ ನೋವಿಗೆ ಮಿಡಿಯುವ ಪ್ರಾಣಮಿತ್ರನಾಗುವುದು ಮುಖ್ಯವಾಗಿತ್ತು. “ಯಾವ ಅP್ಷÀರದಿಂದ ಬರೆದು ತೋರಿಸಲಯ್ಯ ನನ್ನ ಜನಗಳಿಗಾದ ಎದೆಯ ಬ್ಯಾನಿ” ಎಂದು ಕೈಯಲ್ಲಿ ಡಪ್ಪು ಹಿಡಿದು, ಸಾರ್ವಜನಿಕ ವೇದಿಕೆಗಳ ಮೇಲೆ ಧ್ವನಿ ಎತ್ತಿ ಹಾಡುತ್ತಿದ್ದ ಚೆನ್ನಣ್ಣ, ಹೈದ್ರಾಬಾದ ಕರ್ನಾಟಕ ಪ್ರದೇಶದ ದಲಿತರ ದನಿಯಾಗಿ ಹಗಲಿರುಳು ಶೋಷಿತರ ಬಗ್ಗೆ ಚಿಂತಿಸುತ್ತಿದ್ದರು. ಅವರ ಬಗ್ಗೆ ಹಲವಾರು ಕವನ, ಕಾವ್ಯ, ಕಥೆ, ಕಾದಂಬರಿ, ನಾಟಕ, ಪ್ರವಾಸಕಥನ ಬರೆದುದಲ್ಲದೆ ಅವರೊಂದಿಗೆ ಪ್ರಾಮಾಣಿಕವಾಗಿ ಬದುಕಿದರು. ದೇಶದಲ್ಲಿರುವ ಅಸಹಿಷ್ಣುತೆ, ಜಾತೀಯತೆ, ಶೋಷಕರ ಬಲ, ಅವನತಿಗೆ ಜಾರುತ್ತಿರುವ ಮನುಕುಲದ ಮೌಲ್ಯಗಳನ್ನು ತಮ್ಮ ಸಾಹಿತ್ಯ ಬೋಧನೆಗಳಲ್ಲಿ ತರುತ್ತಿದ್ದರು.

ಧರ್ಮಸ್ಥಳದಲ್ಲಿ ಜರುಗುತ್ತಿದ್ದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ (1979) ದಲಿತರಿಗಾಗಿ ಒಂದು ಗೋಷ್ಠಿ ಏರ್ಪಡಿಸಲು ವಿನಂತಿಸಿಕೊಂಡರೆ, ಅಂದಿನ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು `ಸಾಹಿತ್ಯದಲ್ಲಿ ದಲಿತ-ಬಲಿತ-ಕಲಿತ ಎನ್ನುವುದಿಲ್ಲ’ ಎಂದು ಹೀಯಾಳಿಸಿದರು. ಆಗ ಜಂಬಣ್ಣ ಅಮರಚಿಂತ, ಬೋಳಬಂಡೆಪ್ಪ ಮತ್ತು ವಾಲೀಕಾರ ಧಿಕ್ಕಾರದ ಕೂಗು ಪತ್ರಿಕೆಯಲ್ಲಿ ಬಂದಿತು. ಸಾರಸ್ವತ ಲೋಕದಲ್ಲಿ ಅಲ್ಲೋಲ ಕಲ್ಲೋಲ ಎದ್ದಿತು. ಅದುವೇ ಬಂಡಾಯ ಸಾಹಿತ್ಯ ಚಳವಳಿಯ ಹುಟ್ಟಿಗೆ ಪ್ರೇರಣೆಯಾಯಿತು. ಈ ಚಳವಳಿಯ ಹುಟ್ಟಿಗೆ ಕಾರಣರಾದ ರಾಯಚೂರಿನ ಮೂವರು ಸಾಹಿತಿಗಳಲ್ಲಿ ಮೊದಲಿಬ್ಬರು ಬಾರದ ಲೋಕಕ್ಕೆ ಹೋಗಿಯಾಗಿದೆ.

ಈಗ ಮೂರನೆಯವರಾದ ಚೆನ್ನಣ್ಣ 24-11-2019 ರಂದು ರಾತ್ರಿ ಅವರನ್ನು ಕೂಡಿಕೊಂಡರು. ಕಲಬುರ್ಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಶಂಕರವಾಡಿ ಗ್ರಾಮದ ತಳವಾರ ಜನಾಂಗದ ಸಾಬಮ್ಮ-ಧೂಳಪ್ಪನ ಮಗನಾಗಿ (1943) ಚೆನ್ನಣ್ಣ ಜನಿಸಿದರು. ರಾಯಚೂರಿನ ಹಮದರ್ದ್ ಶಾಲೆಗೆ ಕನ್ನಡ ಮಾಸ್ತರರಾಗಿ ಬಂದು ಸೇರಿದರು. ಬಳಿಕ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪಡೆದು, ರಾಯಚೂರಿನ ಎಲ್.ವಿ.ಡಿ. ಕಾಲೇಜಿನಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದರು. ಬಳಿಕ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರರಾಗಿ ನಿವೃತ್ತರಾದರು. ಅವರು ತಮ್ಮ ಸೃಜನಶೀಲ ಬರವಣಿಗೆ ಮತ್ತು ಪ್ರಗತಿಪರ ಚಿಂತನೆಗಳಿಂದಾಗಿ ನಾಡಿನ ಎಲ್ಲ ಭಾಗದ ಲೇಖಕರಿಗೂ ಸಾಹಿತ್ಯಾಭಿಮಾನಿಗಳಿಗೂ ಚಿರಪರಿಚಿತರು. ಕನ್ನಡ ಸಾಹಿತ್ಯದಲ್ಲಿ ದಲಿತ ಪ್ರಜ್ಞೆ ಮತ್ತು ಬಂಡಾಯ ಚಿಂತನೆಗೆ ಅಡಿಪಾಯ ಹಾಕಿದವರು. ಈ ಭಾಗದ ಜನಪದ ಸಾಹಿತ್ಯಕ್ಕೆ ಜೀವ ತುಂಬಲು, ಹಗಲಿರುಳು ಎನ್ನದೆ ತಿರುಗಾಡಿ ಗ್ರಾಮದೇವತೆಗಳ ಬಗ್ಗೆ ಅಧ್ಯಯನ ಮಾಡಿ ಪಿಹೆಚ್.ಡಿ., ಪಡೆದವರು. ದೇವದಾಸಿಯವರ, ಆದಿವಾಸಿಗಳ, ಜೋಗತಿಯವರ ಜೀವನವನ್ನು ಅಭ್ಯಸಿಸಿ, ಕೆಳಜನರ ನೋವು ಕುಂಡುಂಡ, ಹಿಂದುಳಿದ ವರ್ಗಗಳ ದಲಿತ ಸಾಹಿತಿಯೆಂದು ಗುರುತಿಸಿಕೊಂಡವರು. ಎಂ.ಎಲ್.ಸಿ.ಯಾಗಿಯೊ, ವಿಶ್ವವಿದ್ಯಾಲಯವೊಂದರ ಉಪ-ಕುಲಪತಿಯಾಗಿ ನೇಮಕವಾಗುವ ಅವಕಾಶ ಅವರಿಗಿತ್ತು. ರಾಯಚೂರಿನಲ್ಲಿ ನಡೆದ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗುವ ಅವಕಾಶವಿತ್ತು. ಇದರಿಂದ ವಂಚಿತರಾದರು. ಯಾವುದನ್ನೂ ಬಯಸದೆ ಇದ್ದಂತೆ ಇರಲಿ ಬಂದಂತೆ ಬರಲಿ ಎಂದು ಬದುಕಿದರು.

ಚೆನ್ನಣ್ಣ `ಮರದ ಮೇಲಿನ ಗಾಳಿ’ ಕವನ ಸಂಕಲನದಿಂದ ಸಾಹಿತ್ಯ ರಚನೆ ಪ್ರಾರಂಭಿಸಿ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿ ಸಾಹಿತ್ಯ ಕೃಷಿ ಮಾಡಿದರು. ಕಾವ್ಯ ಸಣ್ಣಕಥೆ, ವಚನ, ಕಾದಂಬರಿ, ನಾಟಕ, ಡಪ್ಪಿನ ಹಾಡು, ಮೊಹರಂ ಪದಗಳು, ಪ್ರವಾಸ ಕಥನಗಳು, ಸಂಶೋಧನೆ ಮುಂತಾದ ಪ್ರಕಾರಗಳಲ್ಲಿ 66 ಕೃತಿಗಳನ್ನು ಪ್ರಕಟಿಸಿದರು. ಇವರ `ಕರಿತಲಿ ಮಾನವನ ಜೀಪದ’ (ಕಾವ್ಯ) `ಬೆಳ್ಯ’ (ಕಾದಂಬರಿ) ಅಪರೂಪದ ಕೃತಿಗಳು. ಸಾವಿರ ಪುಟಗಳ `ವೋಮಾ-ವೋಮ’ವು, ಎಲ್ಲೂ ಅರ್ಧವಿರಾಮ ಪೂರ್ಣವಿರಾಮವಿಲ್ಲದೆ, ಯಾವುದೇ ಅಧ್ಯಾಯಗಳಿಲ್ಲದೆ ಸಾಗುವ ಮಹಾಕಾವ್ಯ. ಚೆನ್ನಣ್ಣ ಇತ್ತೀಚೆಗೆ ಬುದ್ಧನ ತತ್ವಗಳಿಗೆ ಮಾರುಹೋಗಿದ್ದರು. ಧರ್ಮ ಎಂದರೆ ಮನುಷ್ಯ. ಮನುಷ್ಯನೆಂದರೆ ಸಹಿಷ್ಣುತೆಯ ತೋಟ ಎನ್ನುತ್ತಿದ್ದರು. ಜೀವನದ ಕೊನೆಯ ದಿನಗಳಲ್ಲಿ ಬುದ್ಧನ ಕುರಿತು ಕೃತಿ ರಚನೆಯಲ್ಲಿ ತೊಡಗಿಸಿಕೊಂಡಿದ್ದರು.

ಚೆನ್ನಣ್ಣ ಈ ಭಾಗದ ಸೃಜನಶೀಲ ದೈತ್ಯ ಲೇಖಕರು. ಆದರೆ ಅವರ ಸಾಹಿತ್ಯವನ್ನು ಓದುವ ವ್ಯವಧಾನ ಕಳೆದುಕೊಂಡಿರುವ ಪ್ರಸಿದ್ಧ ಲೇಖಕರು ಅವರ ಬಗ್ಗೆ ಉದಾಸೀನ ತಾಳಿದರು. ಕೆಲವು ಮಹನೀಯರು ಅವರ `ಮ್ಯೋಮಾ-ಮ್ಯೋಮ’ವನ್ನು ತಲೆದಿಂಬಿಗೆ ಹೋಲಿಸಿದರು. ಚೆನ್ನಣ್ಣ ಓದಲು ಕಳುಹಿಸಿದ ಕೃತಿಯನ್ನು ಕೆಲವರು ತಾವು ಓದದೆ ತಮ್ಮ ವಿದ್ಯಾರ್ಥಿನಿಯರಿಗೆ ಕೊಟ್ಟು ಹೀಯಾಳಿಸುತ್ತಿದ್ದರು. ಹೈದ್ರಾಬಾದ್-ಕರ್ನಾಟಕ ಪ್ರದೇಶದ ಪ್ರಸಿದ್ಧ ಲೇಖಕರು ಚೆನ್ನಣ್ಣನವರ ಕೃತಿಯ ಬಗ್ಗೆ ಮಾತಾಡದೆ ಅವರ ವ್ಯಕ್ತಿಗತ ಸಂಗತಿಗಳನ್ನೇ ಹೇಳುತ್ತಿದ್ದರು. ಆದರೂ ಚನ್ನಣ್ಣ ನಗುನಗುತ್ತಲೆ ಕೊನೆಯ ಉಸಿರು ಇರುವ ಶುದ್ಧಮನಸ್ಸಿನ ಬದ್ಧ ಲೇಖಕರಾಗಿ ಉಳಿದರು.

ಥಟ್ ಅಂತ ನೋಡಿದ ಕ್ಷಣ
ಬಯಲಾಟದ ಭೀಮನು
ದೊಡ್ಡಾಟದ ಬಕಾಸುರನು
ನಾಟಕದ ಖಳನಾಯಕನು
ಸ್ವಲ್ಪ ಸಮೀಪ ಹೋದರೆ-
ಗೆಳೆಯರೆ ಮಾವಂದಿರರು
ಮಕ್ಕಳಿಗೆ ಚಂದಮಾಮಾ ಇವನು

ಇನ್ನೂ ಹತ್ತಿರ ಹೋಗಿ ಇಣುಕಿದರೆ-
ಜನಪದ ಲೋಕವೇ ತೆರೆದುಕೊಳ್ಳುತ್ತದೆ
ಕಲ್ಲು ದೇವ-ದೇವತೆಯರಿಗೆ ಮಾತು ಬರುತ್ತದೆ
ಕಳಸ ಹೊತ್ತ ಗುಡಿಗಳು ಏಳುತ್ತವೆ
ನಮ್ಮ-ನಿಮ್ಮ ನಡುವೆ ಇರುವ ಇವನು
ಜೀವಂತ-ಜೀವಸೆಲೆ ಹುಡುಕುತ್ತಿರುವ ಜಲಗಾರನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...