Homeಕರ್ನಾಟಕಎದಿ ಬ್ಯಾನಿಯ ಹಾಡಿ ತೋರಿದ ಚೆನ್ನಣ್ಣ ವಾಲೀಕಾರರ ಸ್ಮರಣೆ - ಭಗತರಾಜ ನಿಜಾಮಕಾರಿ

ಎದಿ ಬ್ಯಾನಿಯ ಹಾಡಿ ತೋರಿದ ಚೆನ್ನಣ್ಣ ವಾಲೀಕಾರರ ಸ್ಮರಣೆ – ಭಗತರಾಜ ನಿಜಾಮಕಾರಿ

- Advertisement -
- Advertisement -

ಮರದ ಮೇಲಿನ ಗಾಳಿಗೆ ಹಕ್ಕಿಯೊಂದು ರೆಕ್ಕೆ ಬಿಚ್ಚಿ `ಕರಿತೆಲೆ ಮಾನವನ ಜೀಪದ’ ಹಾಡು ಹಾಡುತ್ತಿತ್ತು. `ಬಂಡೆದ್ದ ದಲಿತರ ಬೀದಿಹಾಡುಗಳು’, `ಪ್ಯಾಂಥರ್ಸ್ ಪದ್ಯಗಳು’, `ಧಿಕ್ಕಾರದ ಹಾಡುಗಳು’, `ಡಪ್ಪಿನಾಟ’ಗಳೊಂದಿಗೆ ಆ ಭೀಮಕಾಯ `ಬೆಳ್ಯ’ ಕುಣಿಯುತ್ತಲಿದ್ದ. ದಣಿವರಿವು ಅವನಿಗೆ ಗೊತ್ತಿಲ್ಲ. ಊಟಕ್ಕೆ ಕರೆದರೆ ಶತಮಾನದ ಸೇಡು ತೀರಿಸಿಕೊಳ್ಳುತಿದ್ದ. ರಾಯಚೂರಿನ ಕಡುಬಿಸಿಲಲ್ಲಿ ಬರೆಯಲು ಕುಳಿತರೆ, ಬರಿಮೈ, ಸುರಿವ ಬೆವರು, ಬಣ್ಣಬಣ್ಣದ ಹೂವುಗಳ ಲುಂಗಿ, ಬೆರಳಲ್ಲಿ ಪೆನ್ನು, ಸರಸರನೆ ಬಿಳಿಹಾಳೆಯ ತುಂಬ ಹಾವಿನಂತೆ ಹರಿದಾಡುತ್ತಿತ್ತು. ಹೆಪ್ಪುಗಟ್ಟಿದ ಸಮುದ್ರ, ಬೋಧಿವೃಕ್ಷದ ಹೂವು ಅರಳುತ್ತಿದ್ದವು.

ಇಂತಪ್ಪ ನಮ್ಮ ಚೆನ್ನಣ್ಣ ವಾಲೀಕಾರರು ಮೂಲತಃ ಜಾನಪದ ಲೋಕದ ಮನುಷ್ಯ. ಜಾನಪದದಲ್ಲಿಯೇ ಸಂಶೋಧನೆ ಮಾಡುತ್ತಿದ್ದರೆ ಅವರಿಗೆ ದೊಡ್ಡ ಪ್ರಶಸ್ತಿ ತಪ್ಪದೇ ಬರುತ್ತಿತ್ತು. ಆದರೆ ಅವರಿಗೆ ಪ್ರಶಸ್ತಿ, ಬಿರುದು-ಬಾವಲಿಗಳಿಗಿಂತ ತನ್ನ ಜನರ ನೋವಿಗೆ ಮಿಡಿಯುವ ಪ್ರಾಣಮಿತ್ರನಾಗುವುದು ಮುಖ್ಯವಾಗಿತ್ತು. “ಯಾವ ಅP್ಷÀರದಿಂದ ಬರೆದು ತೋರಿಸಲಯ್ಯ ನನ್ನ ಜನಗಳಿಗಾದ ಎದೆಯ ಬ್ಯಾನಿ” ಎಂದು ಕೈಯಲ್ಲಿ ಡಪ್ಪು ಹಿಡಿದು, ಸಾರ್ವಜನಿಕ ವೇದಿಕೆಗಳ ಮೇಲೆ ಧ್ವನಿ ಎತ್ತಿ ಹಾಡುತ್ತಿದ್ದ ಚೆನ್ನಣ್ಣ, ಹೈದ್ರಾಬಾದ ಕರ್ನಾಟಕ ಪ್ರದೇಶದ ದಲಿತರ ದನಿಯಾಗಿ ಹಗಲಿರುಳು ಶೋಷಿತರ ಬಗ್ಗೆ ಚಿಂತಿಸುತ್ತಿದ್ದರು. ಅವರ ಬಗ್ಗೆ ಹಲವಾರು ಕವನ, ಕಾವ್ಯ, ಕಥೆ, ಕಾದಂಬರಿ, ನಾಟಕ, ಪ್ರವಾಸಕಥನ ಬರೆದುದಲ್ಲದೆ ಅವರೊಂದಿಗೆ ಪ್ರಾಮಾಣಿಕವಾಗಿ ಬದುಕಿದರು. ದೇಶದಲ್ಲಿರುವ ಅಸಹಿಷ್ಣುತೆ, ಜಾತೀಯತೆ, ಶೋಷಕರ ಬಲ, ಅವನತಿಗೆ ಜಾರುತ್ತಿರುವ ಮನುಕುಲದ ಮೌಲ್ಯಗಳನ್ನು ತಮ್ಮ ಸಾಹಿತ್ಯ ಬೋಧನೆಗಳಲ್ಲಿ ತರುತ್ತಿದ್ದರು.

ಧರ್ಮಸ್ಥಳದಲ್ಲಿ ಜರುಗುತ್ತಿದ್ದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ (1979) ದಲಿತರಿಗಾಗಿ ಒಂದು ಗೋಷ್ಠಿ ಏರ್ಪಡಿಸಲು ವಿನಂತಿಸಿಕೊಂಡರೆ, ಅಂದಿನ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು `ಸಾಹಿತ್ಯದಲ್ಲಿ ದಲಿತ-ಬಲಿತ-ಕಲಿತ ಎನ್ನುವುದಿಲ್ಲ’ ಎಂದು ಹೀಯಾಳಿಸಿದರು. ಆಗ ಜಂಬಣ್ಣ ಅಮರಚಿಂತ, ಬೋಳಬಂಡೆಪ್ಪ ಮತ್ತು ವಾಲೀಕಾರ ಧಿಕ್ಕಾರದ ಕೂಗು ಪತ್ರಿಕೆಯಲ್ಲಿ ಬಂದಿತು. ಸಾರಸ್ವತ ಲೋಕದಲ್ಲಿ ಅಲ್ಲೋಲ ಕಲ್ಲೋಲ ಎದ್ದಿತು. ಅದುವೇ ಬಂಡಾಯ ಸಾಹಿತ್ಯ ಚಳವಳಿಯ ಹುಟ್ಟಿಗೆ ಪ್ರೇರಣೆಯಾಯಿತು. ಈ ಚಳವಳಿಯ ಹುಟ್ಟಿಗೆ ಕಾರಣರಾದ ರಾಯಚೂರಿನ ಮೂವರು ಸಾಹಿತಿಗಳಲ್ಲಿ ಮೊದಲಿಬ್ಬರು ಬಾರದ ಲೋಕಕ್ಕೆ ಹೋಗಿಯಾಗಿದೆ.

ಈಗ ಮೂರನೆಯವರಾದ ಚೆನ್ನಣ್ಣ 24-11-2019 ರಂದು ರಾತ್ರಿ ಅವರನ್ನು ಕೂಡಿಕೊಂಡರು. ಕಲಬುರ್ಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಶಂಕರವಾಡಿ ಗ್ರಾಮದ ತಳವಾರ ಜನಾಂಗದ ಸಾಬಮ್ಮ-ಧೂಳಪ್ಪನ ಮಗನಾಗಿ (1943) ಚೆನ್ನಣ್ಣ ಜನಿಸಿದರು. ರಾಯಚೂರಿನ ಹಮದರ್ದ್ ಶಾಲೆಗೆ ಕನ್ನಡ ಮಾಸ್ತರರಾಗಿ ಬಂದು ಸೇರಿದರು. ಬಳಿಕ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪಡೆದು, ರಾಯಚೂರಿನ ಎಲ್.ವಿ.ಡಿ. ಕಾಲೇಜಿನಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದರು. ಬಳಿಕ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರರಾಗಿ ನಿವೃತ್ತರಾದರು. ಅವರು ತಮ್ಮ ಸೃಜನಶೀಲ ಬರವಣಿಗೆ ಮತ್ತು ಪ್ರಗತಿಪರ ಚಿಂತನೆಗಳಿಂದಾಗಿ ನಾಡಿನ ಎಲ್ಲ ಭಾಗದ ಲೇಖಕರಿಗೂ ಸಾಹಿತ್ಯಾಭಿಮಾನಿಗಳಿಗೂ ಚಿರಪರಿಚಿತರು. ಕನ್ನಡ ಸಾಹಿತ್ಯದಲ್ಲಿ ದಲಿತ ಪ್ರಜ್ಞೆ ಮತ್ತು ಬಂಡಾಯ ಚಿಂತನೆಗೆ ಅಡಿಪಾಯ ಹಾಕಿದವರು. ಈ ಭಾಗದ ಜನಪದ ಸಾಹಿತ್ಯಕ್ಕೆ ಜೀವ ತುಂಬಲು, ಹಗಲಿರುಳು ಎನ್ನದೆ ತಿರುಗಾಡಿ ಗ್ರಾಮದೇವತೆಗಳ ಬಗ್ಗೆ ಅಧ್ಯಯನ ಮಾಡಿ ಪಿಹೆಚ್.ಡಿ., ಪಡೆದವರು. ದೇವದಾಸಿಯವರ, ಆದಿವಾಸಿಗಳ, ಜೋಗತಿಯವರ ಜೀವನವನ್ನು ಅಭ್ಯಸಿಸಿ, ಕೆಳಜನರ ನೋವು ಕುಂಡುಂಡ, ಹಿಂದುಳಿದ ವರ್ಗಗಳ ದಲಿತ ಸಾಹಿತಿಯೆಂದು ಗುರುತಿಸಿಕೊಂಡವರು. ಎಂ.ಎಲ್.ಸಿ.ಯಾಗಿಯೊ, ವಿಶ್ವವಿದ್ಯಾಲಯವೊಂದರ ಉಪ-ಕುಲಪತಿಯಾಗಿ ನೇಮಕವಾಗುವ ಅವಕಾಶ ಅವರಿಗಿತ್ತು. ರಾಯಚೂರಿನಲ್ಲಿ ನಡೆದ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗುವ ಅವಕಾಶವಿತ್ತು. ಇದರಿಂದ ವಂಚಿತರಾದರು. ಯಾವುದನ್ನೂ ಬಯಸದೆ ಇದ್ದಂತೆ ಇರಲಿ ಬಂದಂತೆ ಬರಲಿ ಎಂದು ಬದುಕಿದರು.

ಚೆನ್ನಣ್ಣ `ಮರದ ಮೇಲಿನ ಗಾಳಿ’ ಕವನ ಸಂಕಲನದಿಂದ ಸಾಹಿತ್ಯ ರಚನೆ ಪ್ರಾರಂಭಿಸಿ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿ ಸಾಹಿತ್ಯ ಕೃಷಿ ಮಾಡಿದರು. ಕಾವ್ಯ ಸಣ್ಣಕಥೆ, ವಚನ, ಕಾದಂಬರಿ, ನಾಟಕ, ಡಪ್ಪಿನ ಹಾಡು, ಮೊಹರಂ ಪದಗಳು, ಪ್ರವಾಸ ಕಥನಗಳು, ಸಂಶೋಧನೆ ಮುಂತಾದ ಪ್ರಕಾರಗಳಲ್ಲಿ 66 ಕೃತಿಗಳನ್ನು ಪ್ರಕಟಿಸಿದರು. ಇವರ `ಕರಿತಲಿ ಮಾನವನ ಜೀಪದ’ (ಕಾವ್ಯ) `ಬೆಳ್ಯ’ (ಕಾದಂಬರಿ) ಅಪರೂಪದ ಕೃತಿಗಳು. ಸಾವಿರ ಪುಟಗಳ `ವೋಮಾ-ವೋಮ’ವು, ಎಲ್ಲೂ ಅರ್ಧವಿರಾಮ ಪೂರ್ಣವಿರಾಮವಿಲ್ಲದೆ, ಯಾವುದೇ ಅಧ್ಯಾಯಗಳಿಲ್ಲದೆ ಸಾಗುವ ಮಹಾಕಾವ್ಯ. ಚೆನ್ನಣ್ಣ ಇತ್ತೀಚೆಗೆ ಬುದ್ಧನ ತತ್ವಗಳಿಗೆ ಮಾರುಹೋಗಿದ್ದರು. ಧರ್ಮ ಎಂದರೆ ಮನುಷ್ಯ. ಮನುಷ್ಯನೆಂದರೆ ಸಹಿಷ್ಣುತೆಯ ತೋಟ ಎನ್ನುತ್ತಿದ್ದರು. ಜೀವನದ ಕೊನೆಯ ದಿನಗಳಲ್ಲಿ ಬುದ್ಧನ ಕುರಿತು ಕೃತಿ ರಚನೆಯಲ್ಲಿ ತೊಡಗಿಸಿಕೊಂಡಿದ್ದರು.

ಚೆನ್ನಣ್ಣ ಈ ಭಾಗದ ಸೃಜನಶೀಲ ದೈತ್ಯ ಲೇಖಕರು. ಆದರೆ ಅವರ ಸಾಹಿತ್ಯವನ್ನು ಓದುವ ವ್ಯವಧಾನ ಕಳೆದುಕೊಂಡಿರುವ ಪ್ರಸಿದ್ಧ ಲೇಖಕರು ಅವರ ಬಗ್ಗೆ ಉದಾಸೀನ ತಾಳಿದರು. ಕೆಲವು ಮಹನೀಯರು ಅವರ `ಮ್ಯೋಮಾ-ಮ್ಯೋಮ’ವನ್ನು ತಲೆದಿಂಬಿಗೆ ಹೋಲಿಸಿದರು. ಚೆನ್ನಣ್ಣ ಓದಲು ಕಳುಹಿಸಿದ ಕೃತಿಯನ್ನು ಕೆಲವರು ತಾವು ಓದದೆ ತಮ್ಮ ವಿದ್ಯಾರ್ಥಿನಿಯರಿಗೆ ಕೊಟ್ಟು ಹೀಯಾಳಿಸುತ್ತಿದ್ದರು. ಹೈದ್ರಾಬಾದ್-ಕರ್ನಾಟಕ ಪ್ರದೇಶದ ಪ್ರಸಿದ್ಧ ಲೇಖಕರು ಚೆನ್ನಣ್ಣನವರ ಕೃತಿಯ ಬಗ್ಗೆ ಮಾತಾಡದೆ ಅವರ ವ್ಯಕ್ತಿಗತ ಸಂಗತಿಗಳನ್ನೇ ಹೇಳುತ್ತಿದ್ದರು. ಆದರೂ ಚನ್ನಣ್ಣ ನಗುನಗುತ್ತಲೆ ಕೊನೆಯ ಉಸಿರು ಇರುವ ಶುದ್ಧಮನಸ್ಸಿನ ಬದ್ಧ ಲೇಖಕರಾಗಿ ಉಳಿದರು.

ಥಟ್ ಅಂತ ನೋಡಿದ ಕ್ಷಣ
ಬಯಲಾಟದ ಭೀಮನು
ದೊಡ್ಡಾಟದ ಬಕಾಸುರನು
ನಾಟಕದ ಖಳನಾಯಕನು
ಸ್ವಲ್ಪ ಸಮೀಪ ಹೋದರೆ-
ಗೆಳೆಯರೆ ಮಾವಂದಿರರು
ಮಕ್ಕಳಿಗೆ ಚಂದಮಾಮಾ ಇವನು

ಇನ್ನೂ ಹತ್ತಿರ ಹೋಗಿ ಇಣುಕಿದರೆ-
ಜನಪದ ಲೋಕವೇ ತೆರೆದುಕೊಳ್ಳುತ್ತದೆ
ಕಲ್ಲು ದೇವ-ದೇವತೆಯರಿಗೆ ಮಾತು ಬರುತ್ತದೆ
ಕಳಸ ಹೊತ್ತ ಗುಡಿಗಳು ಏಳುತ್ತವೆ
ನಮ್ಮ-ನಿಮ್ಮ ನಡುವೆ ಇರುವ ಇವನು
ಜೀವಂತ-ಜೀವಸೆಲೆ ಹುಡುಕುತ್ತಿರುವ ಜಲಗಾರನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...