Homeಕರ್ನಾಟಕಎದಿ ಬ್ಯಾನಿಯ ಹಾಡಿ ತೋರಿದ ಚೆನ್ನಣ್ಣ ವಾಲೀಕಾರರ ಸ್ಮರಣೆ - ಭಗತರಾಜ ನಿಜಾಮಕಾರಿ

ಎದಿ ಬ್ಯಾನಿಯ ಹಾಡಿ ತೋರಿದ ಚೆನ್ನಣ್ಣ ವಾಲೀಕಾರರ ಸ್ಮರಣೆ – ಭಗತರಾಜ ನಿಜಾಮಕಾರಿ

- Advertisement -
- Advertisement -

ಮರದ ಮೇಲಿನ ಗಾಳಿಗೆ ಹಕ್ಕಿಯೊಂದು ರೆಕ್ಕೆ ಬಿಚ್ಚಿ `ಕರಿತೆಲೆ ಮಾನವನ ಜೀಪದ’ ಹಾಡು ಹಾಡುತ್ತಿತ್ತು. `ಬಂಡೆದ್ದ ದಲಿತರ ಬೀದಿಹಾಡುಗಳು’, `ಪ್ಯಾಂಥರ್ಸ್ ಪದ್ಯಗಳು’, `ಧಿಕ್ಕಾರದ ಹಾಡುಗಳು’, `ಡಪ್ಪಿನಾಟ’ಗಳೊಂದಿಗೆ ಆ ಭೀಮಕಾಯ `ಬೆಳ್ಯ’ ಕುಣಿಯುತ್ತಲಿದ್ದ. ದಣಿವರಿವು ಅವನಿಗೆ ಗೊತ್ತಿಲ್ಲ. ಊಟಕ್ಕೆ ಕರೆದರೆ ಶತಮಾನದ ಸೇಡು ತೀರಿಸಿಕೊಳ್ಳುತಿದ್ದ. ರಾಯಚೂರಿನ ಕಡುಬಿಸಿಲಲ್ಲಿ ಬರೆಯಲು ಕುಳಿತರೆ, ಬರಿಮೈ, ಸುರಿವ ಬೆವರು, ಬಣ್ಣಬಣ್ಣದ ಹೂವುಗಳ ಲುಂಗಿ, ಬೆರಳಲ್ಲಿ ಪೆನ್ನು, ಸರಸರನೆ ಬಿಳಿಹಾಳೆಯ ತುಂಬ ಹಾವಿನಂತೆ ಹರಿದಾಡುತ್ತಿತ್ತು. ಹೆಪ್ಪುಗಟ್ಟಿದ ಸಮುದ್ರ, ಬೋಧಿವೃಕ್ಷದ ಹೂವು ಅರಳುತ್ತಿದ್ದವು.

ಇಂತಪ್ಪ ನಮ್ಮ ಚೆನ್ನಣ್ಣ ವಾಲೀಕಾರರು ಮೂಲತಃ ಜಾನಪದ ಲೋಕದ ಮನುಷ್ಯ. ಜಾನಪದದಲ್ಲಿಯೇ ಸಂಶೋಧನೆ ಮಾಡುತ್ತಿದ್ದರೆ ಅವರಿಗೆ ದೊಡ್ಡ ಪ್ರಶಸ್ತಿ ತಪ್ಪದೇ ಬರುತ್ತಿತ್ತು. ಆದರೆ ಅವರಿಗೆ ಪ್ರಶಸ್ತಿ, ಬಿರುದು-ಬಾವಲಿಗಳಿಗಿಂತ ತನ್ನ ಜನರ ನೋವಿಗೆ ಮಿಡಿಯುವ ಪ್ರಾಣಮಿತ್ರನಾಗುವುದು ಮುಖ್ಯವಾಗಿತ್ತು. “ಯಾವ ಅP್ಷÀರದಿಂದ ಬರೆದು ತೋರಿಸಲಯ್ಯ ನನ್ನ ಜನಗಳಿಗಾದ ಎದೆಯ ಬ್ಯಾನಿ” ಎಂದು ಕೈಯಲ್ಲಿ ಡಪ್ಪು ಹಿಡಿದು, ಸಾರ್ವಜನಿಕ ವೇದಿಕೆಗಳ ಮೇಲೆ ಧ್ವನಿ ಎತ್ತಿ ಹಾಡುತ್ತಿದ್ದ ಚೆನ್ನಣ್ಣ, ಹೈದ್ರಾಬಾದ ಕರ್ನಾಟಕ ಪ್ರದೇಶದ ದಲಿತರ ದನಿಯಾಗಿ ಹಗಲಿರುಳು ಶೋಷಿತರ ಬಗ್ಗೆ ಚಿಂತಿಸುತ್ತಿದ್ದರು. ಅವರ ಬಗ್ಗೆ ಹಲವಾರು ಕವನ, ಕಾವ್ಯ, ಕಥೆ, ಕಾದಂಬರಿ, ನಾಟಕ, ಪ್ರವಾಸಕಥನ ಬರೆದುದಲ್ಲದೆ ಅವರೊಂದಿಗೆ ಪ್ರಾಮಾಣಿಕವಾಗಿ ಬದುಕಿದರು. ದೇಶದಲ್ಲಿರುವ ಅಸಹಿಷ್ಣುತೆ, ಜಾತೀಯತೆ, ಶೋಷಕರ ಬಲ, ಅವನತಿಗೆ ಜಾರುತ್ತಿರುವ ಮನುಕುಲದ ಮೌಲ್ಯಗಳನ್ನು ತಮ್ಮ ಸಾಹಿತ್ಯ ಬೋಧನೆಗಳಲ್ಲಿ ತರುತ್ತಿದ್ದರು.

ಧರ್ಮಸ್ಥಳದಲ್ಲಿ ಜರುಗುತ್ತಿದ್ದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ (1979) ದಲಿತರಿಗಾಗಿ ಒಂದು ಗೋಷ್ಠಿ ಏರ್ಪಡಿಸಲು ವಿನಂತಿಸಿಕೊಂಡರೆ, ಅಂದಿನ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು `ಸಾಹಿತ್ಯದಲ್ಲಿ ದಲಿತ-ಬಲಿತ-ಕಲಿತ ಎನ್ನುವುದಿಲ್ಲ’ ಎಂದು ಹೀಯಾಳಿಸಿದರು. ಆಗ ಜಂಬಣ್ಣ ಅಮರಚಿಂತ, ಬೋಳಬಂಡೆಪ್ಪ ಮತ್ತು ವಾಲೀಕಾರ ಧಿಕ್ಕಾರದ ಕೂಗು ಪತ್ರಿಕೆಯಲ್ಲಿ ಬಂದಿತು. ಸಾರಸ್ವತ ಲೋಕದಲ್ಲಿ ಅಲ್ಲೋಲ ಕಲ್ಲೋಲ ಎದ್ದಿತು. ಅದುವೇ ಬಂಡಾಯ ಸಾಹಿತ್ಯ ಚಳವಳಿಯ ಹುಟ್ಟಿಗೆ ಪ್ರೇರಣೆಯಾಯಿತು. ಈ ಚಳವಳಿಯ ಹುಟ್ಟಿಗೆ ಕಾರಣರಾದ ರಾಯಚೂರಿನ ಮೂವರು ಸಾಹಿತಿಗಳಲ್ಲಿ ಮೊದಲಿಬ್ಬರು ಬಾರದ ಲೋಕಕ್ಕೆ ಹೋಗಿಯಾಗಿದೆ.

ಈಗ ಮೂರನೆಯವರಾದ ಚೆನ್ನಣ್ಣ 24-11-2019 ರಂದು ರಾತ್ರಿ ಅವರನ್ನು ಕೂಡಿಕೊಂಡರು. ಕಲಬುರ್ಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಶಂಕರವಾಡಿ ಗ್ರಾಮದ ತಳವಾರ ಜನಾಂಗದ ಸಾಬಮ್ಮ-ಧೂಳಪ್ಪನ ಮಗನಾಗಿ (1943) ಚೆನ್ನಣ್ಣ ಜನಿಸಿದರು. ರಾಯಚೂರಿನ ಹಮದರ್ದ್ ಶಾಲೆಗೆ ಕನ್ನಡ ಮಾಸ್ತರರಾಗಿ ಬಂದು ಸೇರಿದರು. ಬಳಿಕ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪಡೆದು, ರಾಯಚೂರಿನ ಎಲ್.ವಿ.ಡಿ. ಕಾಲೇಜಿನಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದರು. ಬಳಿಕ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರರಾಗಿ ನಿವೃತ್ತರಾದರು. ಅವರು ತಮ್ಮ ಸೃಜನಶೀಲ ಬರವಣಿಗೆ ಮತ್ತು ಪ್ರಗತಿಪರ ಚಿಂತನೆಗಳಿಂದಾಗಿ ನಾಡಿನ ಎಲ್ಲ ಭಾಗದ ಲೇಖಕರಿಗೂ ಸಾಹಿತ್ಯಾಭಿಮಾನಿಗಳಿಗೂ ಚಿರಪರಿಚಿತರು. ಕನ್ನಡ ಸಾಹಿತ್ಯದಲ್ಲಿ ದಲಿತ ಪ್ರಜ್ಞೆ ಮತ್ತು ಬಂಡಾಯ ಚಿಂತನೆಗೆ ಅಡಿಪಾಯ ಹಾಕಿದವರು. ಈ ಭಾಗದ ಜನಪದ ಸಾಹಿತ್ಯಕ್ಕೆ ಜೀವ ತುಂಬಲು, ಹಗಲಿರುಳು ಎನ್ನದೆ ತಿರುಗಾಡಿ ಗ್ರಾಮದೇವತೆಗಳ ಬಗ್ಗೆ ಅಧ್ಯಯನ ಮಾಡಿ ಪಿಹೆಚ್.ಡಿ., ಪಡೆದವರು. ದೇವದಾಸಿಯವರ, ಆದಿವಾಸಿಗಳ, ಜೋಗತಿಯವರ ಜೀವನವನ್ನು ಅಭ್ಯಸಿಸಿ, ಕೆಳಜನರ ನೋವು ಕುಂಡುಂಡ, ಹಿಂದುಳಿದ ವರ್ಗಗಳ ದಲಿತ ಸಾಹಿತಿಯೆಂದು ಗುರುತಿಸಿಕೊಂಡವರು. ಎಂ.ಎಲ್.ಸಿ.ಯಾಗಿಯೊ, ವಿಶ್ವವಿದ್ಯಾಲಯವೊಂದರ ಉಪ-ಕುಲಪತಿಯಾಗಿ ನೇಮಕವಾಗುವ ಅವಕಾಶ ಅವರಿಗಿತ್ತು. ರಾಯಚೂರಿನಲ್ಲಿ ನಡೆದ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗುವ ಅವಕಾಶವಿತ್ತು. ಇದರಿಂದ ವಂಚಿತರಾದರು. ಯಾವುದನ್ನೂ ಬಯಸದೆ ಇದ್ದಂತೆ ಇರಲಿ ಬಂದಂತೆ ಬರಲಿ ಎಂದು ಬದುಕಿದರು.

ಚೆನ್ನಣ್ಣ `ಮರದ ಮೇಲಿನ ಗಾಳಿ’ ಕವನ ಸಂಕಲನದಿಂದ ಸಾಹಿತ್ಯ ರಚನೆ ಪ್ರಾರಂಭಿಸಿ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿ ಸಾಹಿತ್ಯ ಕೃಷಿ ಮಾಡಿದರು. ಕಾವ್ಯ ಸಣ್ಣಕಥೆ, ವಚನ, ಕಾದಂಬರಿ, ನಾಟಕ, ಡಪ್ಪಿನ ಹಾಡು, ಮೊಹರಂ ಪದಗಳು, ಪ್ರವಾಸ ಕಥನಗಳು, ಸಂಶೋಧನೆ ಮುಂತಾದ ಪ್ರಕಾರಗಳಲ್ಲಿ 66 ಕೃತಿಗಳನ್ನು ಪ್ರಕಟಿಸಿದರು. ಇವರ `ಕರಿತಲಿ ಮಾನವನ ಜೀಪದ’ (ಕಾವ್ಯ) `ಬೆಳ್ಯ’ (ಕಾದಂಬರಿ) ಅಪರೂಪದ ಕೃತಿಗಳು. ಸಾವಿರ ಪುಟಗಳ `ವೋಮಾ-ವೋಮ’ವು, ಎಲ್ಲೂ ಅರ್ಧವಿರಾಮ ಪೂರ್ಣವಿರಾಮವಿಲ್ಲದೆ, ಯಾವುದೇ ಅಧ್ಯಾಯಗಳಿಲ್ಲದೆ ಸಾಗುವ ಮಹಾಕಾವ್ಯ. ಚೆನ್ನಣ್ಣ ಇತ್ತೀಚೆಗೆ ಬುದ್ಧನ ತತ್ವಗಳಿಗೆ ಮಾರುಹೋಗಿದ್ದರು. ಧರ್ಮ ಎಂದರೆ ಮನುಷ್ಯ. ಮನುಷ್ಯನೆಂದರೆ ಸಹಿಷ್ಣುತೆಯ ತೋಟ ಎನ್ನುತ್ತಿದ್ದರು. ಜೀವನದ ಕೊನೆಯ ದಿನಗಳಲ್ಲಿ ಬುದ್ಧನ ಕುರಿತು ಕೃತಿ ರಚನೆಯಲ್ಲಿ ತೊಡಗಿಸಿಕೊಂಡಿದ್ದರು.

ಚೆನ್ನಣ್ಣ ಈ ಭಾಗದ ಸೃಜನಶೀಲ ದೈತ್ಯ ಲೇಖಕರು. ಆದರೆ ಅವರ ಸಾಹಿತ್ಯವನ್ನು ಓದುವ ವ್ಯವಧಾನ ಕಳೆದುಕೊಂಡಿರುವ ಪ್ರಸಿದ್ಧ ಲೇಖಕರು ಅವರ ಬಗ್ಗೆ ಉದಾಸೀನ ತಾಳಿದರು. ಕೆಲವು ಮಹನೀಯರು ಅವರ `ಮ್ಯೋಮಾ-ಮ್ಯೋಮ’ವನ್ನು ತಲೆದಿಂಬಿಗೆ ಹೋಲಿಸಿದರು. ಚೆನ್ನಣ್ಣ ಓದಲು ಕಳುಹಿಸಿದ ಕೃತಿಯನ್ನು ಕೆಲವರು ತಾವು ಓದದೆ ತಮ್ಮ ವಿದ್ಯಾರ್ಥಿನಿಯರಿಗೆ ಕೊಟ್ಟು ಹೀಯಾಳಿಸುತ್ತಿದ್ದರು. ಹೈದ್ರಾಬಾದ್-ಕರ್ನಾಟಕ ಪ್ರದೇಶದ ಪ್ರಸಿದ್ಧ ಲೇಖಕರು ಚೆನ್ನಣ್ಣನವರ ಕೃತಿಯ ಬಗ್ಗೆ ಮಾತಾಡದೆ ಅವರ ವ್ಯಕ್ತಿಗತ ಸಂಗತಿಗಳನ್ನೇ ಹೇಳುತ್ತಿದ್ದರು. ಆದರೂ ಚನ್ನಣ್ಣ ನಗುನಗುತ್ತಲೆ ಕೊನೆಯ ಉಸಿರು ಇರುವ ಶುದ್ಧಮನಸ್ಸಿನ ಬದ್ಧ ಲೇಖಕರಾಗಿ ಉಳಿದರು.

ಥಟ್ ಅಂತ ನೋಡಿದ ಕ್ಷಣ
ಬಯಲಾಟದ ಭೀಮನು
ದೊಡ್ಡಾಟದ ಬಕಾಸುರನು
ನಾಟಕದ ಖಳನಾಯಕನು
ಸ್ವಲ್ಪ ಸಮೀಪ ಹೋದರೆ-
ಗೆಳೆಯರೆ ಮಾವಂದಿರರು
ಮಕ್ಕಳಿಗೆ ಚಂದಮಾಮಾ ಇವನು

ಇನ್ನೂ ಹತ್ತಿರ ಹೋಗಿ ಇಣುಕಿದರೆ-
ಜನಪದ ಲೋಕವೇ ತೆರೆದುಕೊಳ್ಳುತ್ತದೆ
ಕಲ್ಲು ದೇವ-ದೇವತೆಯರಿಗೆ ಮಾತು ಬರುತ್ತದೆ
ಕಳಸ ಹೊತ್ತ ಗುಡಿಗಳು ಏಳುತ್ತವೆ
ನಮ್ಮ-ನಿಮ್ಮ ನಡುವೆ ಇರುವ ಇವನು
ಜೀವಂತ-ಜೀವಸೆಲೆ ಹುಡುಕುತ್ತಿರುವ ಜಲಗಾರನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...