Homeಕರ್ನಾಟಕಎದಿ ಬ್ಯಾನಿಯ ಹಾಡಿ ತೋರಿದ ಚೆನ್ನಣ್ಣ ವಾಲೀಕಾರರ ಸ್ಮರಣೆ - ಭಗತರಾಜ ನಿಜಾಮಕಾರಿ

ಎದಿ ಬ್ಯಾನಿಯ ಹಾಡಿ ತೋರಿದ ಚೆನ್ನಣ್ಣ ವಾಲೀಕಾರರ ಸ್ಮರಣೆ – ಭಗತರಾಜ ನಿಜಾಮಕಾರಿ

- Advertisement -
- Advertisement -

ಮರದ ಮೇಲಿನ ಗಾಳಿಗೆ ಹಕ್ಕಿಯೊಂದು ರೆಕ್ಕೆ ಬಿಚ್ಚಿ `ಕರಿತೆಲೆ ಮಾನವನ ಜೀಪದ’ ಹಾಡು ಹಾಡುತ್ತಿತ್ತು. `ಬಂಡೆದ್ದ ದಲಿತರ ಬೀದಿಹಾಡುಗಳು’, `ಪ್ಯಾಂಥರ್ಸ್ ಪದ್ಯಗಳು’, `ಧಿಕ್ಕಾರದ ಹಾಡುಗಳು’, `ಡಪ್ಪಿನಾಟ’ಗಳೊಂದಿಗೆ ಆ ಭೀಮಕಾಯ `ಬೆಳ್ಯ’ ಕುಣಿಯುತ್ತಲಿದ್ದ. ದಣಿವರಿವು ಅವನಿಗೆ ಗೊತ್ತಿಲ್ಲ. ಊಟಕ್ಕೆ ಕರೆದರೆ ಶತಮಾನದ ಸೇಡು ತೀರಿಸಿಕೊಳ್ಳುತಿದ್ದ. ರಾಯಚೂರಿನ ಕಡುಬಿಸಿಲಲ್ಲಿ ಬರೆಯಲು ಕುಳಿತರೆ, ಬರಿಮೈ, ಸುರಿವ ಬೆವರು, ಬಣ್ಣಬಣ್ಣದ ಹೂವುಗಳ ಲುಂಗಿ, ಬೆರಳಲ್ಲಿ ಪೆನ್ನು, ಸರಸರನೆ ಬಿಳಿಹಾಳೆಯ ತುಂಬ ಹಾವಿನಂತೆ ಹರಿದಾಡುತ್ತಿತ್ತು. ಹೆಪ್ಪುಗಟ್ಟಿದ ಸಮುದ್ರ, ಬೋಧಿವೃಕ್ಷದ ಹೂವು ಅರಳುತ್ತಿದ್ದವು.

ಇಂತಪ್ಪ ನಮ್ಮ ಚೆನ್ನಣ್ಣ ವಾಲೀಕಾರರು ಮೂಲತಃ ಜಾನಪದ ಲೋಕದ ಮನುಷ್ಯ. ಜಾನಪದದಲ್ಲಿಯೇ ಸಂಶೋಧನೆ ಮಾಡುತ್ತಿದ್ದರೆ ಅವರಿಗೆ ದೊಡ್ಡ ಪ್ರಶಸ್ತಿ ತಪ್ಪದೇ ಬರುತ್ತಿತ್ತು. ಆದರೆ ಅವರಿಗೆ ಪ್ರಶಸ್ತಿ, ಬಿರುದು-ಬಾವಲಿಗಳಿಗಿಂತ ತನ್ನ ಜನರ ನೋವಿಗೆ ಮಿಡಿಯುವ ಪ್ರಾಣಮಿತ್ರನಾಗುವುದು ಮುಖ್ಯವಾಗಿತ್ತು. “ಯಾವ ಅP್ಷÀರದಿಂದ ಬರೆದು ತೋರಿಸಲಯ್ಯ ನನ್ನ ಜನಗಳಿಗಾದ ಎದೆಯ ಬ್ಯಾನಿ” ಎಂದು ಕೈಯಲ್ಲಿ ಡಪ್ಪು ಹಿಡಿದು, ಸಾರ್ವಜನಿಕ ವೇದಿಕೆಗಳ ಮೇಲೆ ಧ್ವನಿ ಎತ್ತಿ ಹಾಡುತ್ತಿದ್ದ ಚೆನ್ನಣ್ಣ, ಹೈದ್ರಾಬಾದ ಕರ್ನಾಟಕ ಪ್ರದೇಶದ ದಲಿತರ ದನಿಯಾಗಿ ಹಗಲಿರುಳು ಶೋಷಿತರ ಬಗ್ಗೆ ಚಿಂತಿಸುತ್ತಿದ್ದರು. ಅವರ ಬಗ್ಗೆ ಹಲವಾರು ಕವನ, ಕಾವ್ಯ, ಕಥೆ, ಕಾದಂಬರಿ, ನಾಟಕ, ಪ್ರವಾಸಕಥನ ಬರೆದುದಲ್ಲದೆ ಅವರೊಂದಿಗೆ ಪ್ರಾಮಾಣಿಕವಾಗಿ ಬದುಕಿದರು. ದೇಶದಲ್ಲಿರುವ ಅಸಹಿಷ್ಣುತೆ, ಜಾತೀಯತೆ, ಶೋಷಕರ ಬಲ, ಅವನತಿಗೆ ಜಾರುತ್ತಿರುವ ಮನುಕುಲದ ಮೌಲ್ಯಗಳನ್ನು ತಮ್ಮ ಸಾಹಿತ್ಯ ಬೋಧನೆಗಳಲ್ಲಿ ತರುತ್ತಿದ್ದರು.

ಧರ್ಮಸ್ಥಳದಲ್ಲಿ ಜರುಗುತ್ತಿದ್ದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ (1979) ದಲಿತರಿಗಾಗಿ ಒಂದು ಗೋಷ್ಠಿ ಏರ್ಪಡಿಸಲು ವಿನಂತಿಸಿಕೊಂಡರೆ, ಅಂದಿನ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು `ಸಾಹಿತ್ಯದಲ್ಲಿ ದಲಿತ-ಬಲಿತ-ಕಲಿತ ಎನ್ನುವುದಿಲ್ಲ’ ಎಂದು ಹೀಯಾಳಿಸಿದರು. ಆಗ ಜಂಬಣ್ಣ ಅಮರಚಿಂತ, ಬೋಳಬಂಡೆಪ್ಪ ಮತ್ತು ವಾಲೀಕಾರ ಧಿಕ್ಕಾರದ ಕೂಗು ಪತ್ರಿಕೆಯಲ್ಲಿ ಬಂದಿತು. ಸಾರಸ್ವತ ಲೋಕದಲ್ಲಿ ಅಲ್ಲೋಲ ಕಲ್ಲೋಲ ಎದ್ದಿತು. ಅದುವೇ ಬಂಡಾಯ ಸಾಹಿತ್ಯ ಚಳವಳಿಯ ಹುಟ್ಟಿಗೆ ಪ್ರೇರಣೆಯಾಯಿತು. ಈ ಚಳವಳಿಯ ಹುಟ್ಟಿಗೆ ಕಾರಣರಾದ ರಾಯಚೂರಿನ ಮೂವರು ಸಾಹಿತಿಗಳಲ್ಲಿ ಮೊದಲಿಬ್ಬರು ಬಾರದ ಲೋಕಕ್ಕೆ ಹೋಗಿಯಾಗಿದೆ.

ಈಗ ಮೂರನೆಯವರಾದ ಚೆನ್ನಣ್ಣ 24-11-2019 ರಂದು ರಾತ್ರಿ ಅವರನ್ನು ಕೂಡಿಕೊಂಡರು. ಕಲಬುರ್ಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಶಂಕರವಾಡಿ ಗ್ರಾಮದ ತಳವಾರ ಜನಾಂಗದ ಸಾಬಮ್ಮ-ಧೂಳಪ್ಪನ ಮಗನಾಗಿ (1943) ಚೆನ್ನಣ್ಣ ಜನಿಸಿದರು. ರಾಯಚೂರಿನ ಹಮದರ್ದ್ ಶಾಲೆಗೆ ಕನ್ನಡ ಮಾಸ್ತರರಾಗಿ ಬಂದು ಸೇರಿದರು. ಬಳಿಕ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪಡೆದು, ರಾಯಚೂರಿನ ಎಲ್.ವಿ.ಡಿ. ಕಾಲೇಜಿನಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದರು. ಬಳಿಕ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರರಾಗಿ ನಿವೃತ್ತರಾದರು. ಅವರು ತಮ್ಮ ಸೃಜನಶೀಲ ಬರವಣಿಗೆ ಮತ್ತು ಪ್ರಗತಿಪರ ಚಿಂತನೆಗಳಿಂದಾಗಿ ನಾಡಿನ ಎಲ್ಲ ಭಾಗದ ಲೇಖಕರಿಗೂ ಸಾಹಿತ್ಯಾಭಿಮಾನಿಗಳಿಗೂ ಚಿರಪರಿಚಿತರು. ಕನ್ನಡ ಸಾಹಿತ್ಯದಲ್ಲಿ ದಲಿತ ಪ್ರಜ್ಞೆ ಮತ್ತು ಬಂಡಾಯ ಚಿಂತನೆಗೆ ಅಡಿಪಾಯ ಹಾಕಿದವರು. ಈ ಭಾಗದ ಜನಪದ ಸಾಹಿತ್ಯಕ್ಕೆ ಜೀವ ತುಂಬಲು, ಹಗಲಿರುಳು ಎನ್ನದೆ ತಿರುಗಾಡಿ ಗ್ರಾಮದೇವತೆಗಳ ಬಗ್ಗೆ ಅಧ್ಯಯನ ಮಾಡಿ ಪಿಹೆಚ್.ಡಿ., ಪಡೆದವರು. ದೇವದಾಸಿಯವರ, ಆದಿವಾಸಿಗಳ, ಜೋಗತಿಯವರ ಜೀವನವನ್ನು ಅಭ್ಯಸಿಸಿ, ಕೆಳಜನರ ನೋವು ಕುಂಡುಂಡ, ಹಿಂದುಳಿದ ವರ್ಗಗಳ ದಲಿತ ಸಾಹಿತಿಯೆಂದು ಗುರುತಿಸಿಕೊಂಡವರು. ಎಂ.ಎಲ್.ಸಿ.ಯಾಗಿಯೊ, ವಿಶ್ವವಿದ್ಯಾಲಯವೊಂದರ ಉಪ-ಕುಲಪತಿಯಾಗಿ ನೇಮಕವಾಗುವ ಅವಕಾಶ ಅವರಿಗಿತ್ತು. ರಾಯಚೂರಿನಲ್ಲಿ ನಡೆದ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗುವ ಅವಕಾಶವಿತ್ತು. ಇದರಿಂದ ವಂಚಿತರಾದರು. ಯಾವುದನ್ನೂ ಬಯಸದೆ ಇದ್ದಂತೆ ಇರಲಿ ಬಂದಂತೆ ಬರಲಿ ಎಂದು ಬದುಕಿದರು.

ಚೆನ್ನಣ್ಣ `ಮರದ ಮೇಲಿನ ಗಾಳಿ’ ಕವನ ಸಂಕಲನದಿಂದ ಸಾಹಿತ್ಯ ರಚನೆ ಪ್ರಾರಂಭಿಸಿ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿ ಸಾಹಿತ್ಯ ಕೃಷಿ ಮಾಡಿದರು. ಕಾವ್ಯ ಸಣ್ಣಕಥೆ, ವಚನ, ಕಾದಂಬರಿ, ನಾಟಕ, ಡಪ್ಪಿನ ಹಾಡು, ಮೊಹರಂ ಪದಗಳು, ಪ್ರವಾಸ ಕಥನಗಳು, ಸಂಶೋಧನೆ ಮುಂತಾದ ಪ್ರಕಾರಗಳಲ್ಲಿ 66 ಕೃತಿಗಳನ್ನು ಪ್ರಕಟಿಸಿದರು. ಇವರ `ಕರಿತಲಿ ಮಾನವನ ಜೀಪದ’ (ಕಾವ್ಯ) `ಬೆಳ್ಯ’ (ಕಾದಂಬರಿ) ಅಪರೂಪದ ಕೃತಿಗಳು. ಸಾವಿರ ಪುಟಗಳ `ವೋಮಾ-ವೋಮ’ವು, ಎಲ್ಲೂ ಅರ್ಧವಿರಾಮ ಪೂರ್ಣವಿರಾಮವಿಲ್ಲದೆ, ಯಾವುದೇ ಅಧ್ಯಾಯಗಳಿಲ್ಲದೆ ಸಾಗುವ ಮಹಾಕಾವ್ಯ. ಚೆನ್ನಣ್ಣ ಇತ್ತೀಚೆಗೆ ಬುದ್ಧನ ತತ್ವಗಳಿಗೆ ಮಾರುಹೋಗಿದ್ದರು. ಧರ್ಮ ಎಂದರೆ ಮನುಷ್ಯ. ಮನುಷ್ಯನೆಂದರೆ ಸಹಿಷ್ಣುತೆಯ ತೋಟ ಎನ್ನುತ್ತಿದ್ದರು. ಜೀವನದ ಕೊನೆಯ ದಿನಗಳಲ್ಲಿ ಬುದ್ಧನ ಕುರಿತು ಕೃತಿ ರಚನೆಯಲ್ಲಿ ತೊಡಗಿಸಿಕೊಂಡಿದ್ದರು.

ಚೆನ್ನಣ್ಣ ಈ ಭಾಗದ ಸೃಜನಶೀಲ ದೈತ್ಯ ಲೇಖಕರು. ಆದರೆ ಅವರ ಸಾಹಿತ್ಯವನ್ನು ಓದುವ ವ್ಯವಧಾನ ಕಳೆದುಕೊಂಡಿರುವ ಪ್ರಸಿದ್ಧ ಲೇಖಕರು ಅವರ ಬಗ್ಗೆ ಉದಾಸೀನ ತಾಳಿದರು. ಕೆಲವು ಮಹನೀಯರು ಅವರ `ಮ್ಯೋಮಾ-ಮ್ಯೋಮ’ವನ್ನು ತಲೆದಿಂಬಿಗೆ ಹೋಲಿಸಿದರು. ಚೆನ್ನಣ್ಣ ಓದಲು ಕಳುಹಿಸಿದ ಕೃತಿಯನ್ನು ಕೆಲವರು ತಾವು ಓದದೆ ತಮ್ಮ ವಿದ್ಯಾರ್ಥಿನಿಯರಿಗೆ ಕೊಟ್ಟು ಹೀಯಾಳಿಸುತ್ತಿದ್ದರು. ಹೈದ್ರಾಬಾದ್-ಕರ್ನಾಟಕ ಪ್ರದೇಶದ ಪ್ರಸಿದ್ಧ ಲೇಖಕರು ಚೆನ್ನಣ್ಣನವರ ಕೃತಿಯ ಬಗ್ಗೆ ಮಾತಾಡದೆ ಅವರ ವ್ಯಕ್ತಿಗತ ಸಂಗತಿಗಳನ್ನೇ ಹೇಳುತ್ತಿದ್ದರು. ಆದರೂ ಚನ್ನಣ್ಣ ನಗುನಗುತ್ತಲೆ ಕೊನೆಯ ಉಸಿರು ಇರುವ ಶುದ್ಧಮನಸ್ಸಿನ ಬದ್ಧ ಲೇಖಕರಾಗಿ ಉಳಿದರು.

ಥಟ್ ಅಂತ ನೋಡಿದ ಕ್ಷಣ
ಬಯಲಾಟದ ಭೀಮನು
ದೊಡ್ಡಾಟದ ಬಕಾಸುರನು
ನಾಟಕದ ಖಳನಾಯಕನು
ಸ್ವಲ್ಪ ಸಮೀಪ ಹೋದರೆ-
ಗೆಳೆಯರೆ ಮಾವಂದಿರರು
ಮಕ್ಕಳಿಗೆ ಚಂದಮಾಮಾ ಇವನು

ಇನ್ನೂ ಹತ್ತಿರ ಹೋಗಿ ಇಣುಕಿದರೆ-
ಜನಪದ ಲೋಕವೇ ತೆರೆದುಕೊಳ್ಳುತ್ತದೆ
ಕಲ್ಲು ದೇವ-ದೇವತೆಯರಿಗೆ ಮಾತು ಬರುತ್ತದೆ
ಕಳಸ ಹೊತ್ತ ಗುಡಿಗಳು ಏಳುತ್ತವೆ
ನಮ್ಮ-ನಿಮ್ಮ ನಡುವೆ ಇರುವ ಇವನು
ಜೀವಂತ-ಜೀವಸೆಲೆ ಹುಡುಕುತ್ತಿರುವ ಜಲಗಾರನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....