Homeಕರ್ನಾಟಕಎದಿ ಬ್ಯಾನಿಯ ಹಾಡಿ ತೋರಿದ ಚೆನ್ನಣ್ಣ ವಾಲೀಕಾರರ ಸ್ಮರಣೆ - ಭಗತರಾಜ ನಿಜಾಮಕಾರಿ

ಎದಿ ಬ್ಯಾನಿಯ ಹಾಡಿ ತೋರಿದ ಚೆನ್ನಣ್ಣ ವಾಲೀಕಾರರ ಸ್ಮರಣೆ – ಭಗತರಾಜ ನಿಜಾಮಕಾರಿ

- Advertisement -
- Advertisement -

ಮರದ ಮೇಲಿನ ಗಾಳಿಗೆ ಹಕ್ಕಿಯೊಂದು ರೆಕ್ಕೆ ಬಿಚ್ಚಿ `ಕರಿತೆಲೆ ಮಾನವನ ಜೀಪದ’ ಹಾಡು ಹಾಡುತ್ತಿತ್ತು. `ಬಂಡೆದ್ದ ದಲಿತರ ಬೀದಿಹಾಡುಗಳು’, `ಪ್ಯಾಂಥರ್ಸ್ ಪದ್ಯಗಳು’, `ಧಿಕ್ಕಾರದ ಹಾಡುಗಳು’, `ಡಪ್ಪಿನಾಟ’ಗಳೊಂದಿಗೆ ಆ ಭೀಮಕಾಯ `ಬೆಳ್ಯ’ ಕುಣಿಯುತ್ತಲಿದ್ದ. ದಣಿವರಿವು ಅವನಿಗೆ ಗೊತ್ತಿಲ್ಲ. ಊಟಕ್ಕೆ ಕರೆದರೆ ಶತಮಾನದ ಸೇಡು ತೀರಿಸಿಕೊಳ್ಳುತಿದ್ದ. ರಾಯಚೂರಿನ ಕಡುಬಿಸಿಲಲ್ಲಿ ಬರೆಯಲು ಕುಳಿತರೆ, ಬರಿಮೈ, ಸುರಿವ ಬೆವರು, ಬಣ್ಣಬಣ್ಣದ ಹೂವುಗಳ ಲುಂಗಿ, ಬೆರಳಲ್ಲಿ ಪೆನ್ನು, ಸರಸರನೆ ಬಿಳಿಹಾಳೆಯ ತುಂಬ ಹಾವಿನಂತೆ ಹರಿದಾಡುತ್ತಿತ್ತು. ಹೆಪ್ಪುಗಟ್ಟಿದ ಸಮುದ್ರ, ಬೋಧಿವೃಕ್ಷದ ಹೂವು ಅರಳುತ್ತಿದ್ದವು.

ಇಂತಪ್ಪ ನಮ್ಮ ಚೆನ್ನಣ್ಣ ವಾಲೀಕಾರರು ಮೂಲತಃ ಜಾನಪದ ಲೋಕದ ಮನುಷ್ಯ. ಜಾನಪದದಲ್ಲಿಯೇ ಸಂಶೋಧನೆ ಮಾಡುತ್ತಿದ್ದರೆ ಅವರಿಗೆ ದೊಡ್ಡ ಪ್ರಶಸ್ತಿ ತಪ್ಪದೇ ಬರುತ್ತಿತ್ತು. ಆದರೆ ಅವರಿಗೆ ಪ್ರಶಸ್ತಿ, ಬಿರುದು-ಬಾವಲಿಗಳಿಗಿಂತ ತನ್ನ ಜನರ ನೋವಿಗೆ ಮಿಡಿಯುವ ಪ್ರಾಣಮಿತ್ರನಾಗುವುದು ಮುಖ್ಯವಾಗಿತ್ತು. “ಯಾವ ಅP್ಷÀರದಿಂದ ಬರೆದು ತೋರಿಸಲಯ್ಯ ನನ್ನ ಜನಗಳಿಗಾದ ಎದೆಯ ಬ್ಯಾನಿ” ಎಂದು ಕೈಯಲ್ಲಿ ಡಪ್ಪು ಹಿಡಿದು, ಸಾರ್ವಜನಿಕ ವೇದಿಕೆಗಳ ಮೇಲೆ ಧ್ವನಿ ಎತ್ತಿ ಹಾಡುತ್ತಿದ್ದ ಚೆನ್ನಣ್ಣ, ಹೈದ್ರಾಬಾದ ಕರ್ನಾಟಕ ಪ್ರದೇಶದ ದಲಿತರ ದನಿಯಾಗಿ ಹಗಲಿರುಳು ಶೋಷಿತರ ಬಗ್ಗೆ ಚಿಂತಿಸುತ್ತಿದ್ದರು. ಅವರ ಬಗ್ಗೆ ಹಲವಾರು ಕವನ, ಕಾವ್ಯ, ಕಥೆ, ಕಾದಂಬರಿ, ನಾಟಕ, ಪ್ರವಾಸಕಥನ ಬರೆದುದಲ್ಲದೆ ಅವರೊಂದಿಗೆ ಪ್ರಾಮಾಣಿಕವಾಗಿ ಬದುಕಿದರು. ದೇಶದಲ್ಲಿರುವ ಅಸಹಿಷ್ಣುತೆ, ಜಾತೀಯತೆ, ಶೋಷಕರ ಬಲ, ಅವನತಿಗೆ ಜಾರುತ್ತಿರುವ ಮನುಕುಲದ ಮೌಲ್ಯಗಳನ್ನು ತಮ್ಮ ಸಾಹಿತ್ಯ ಬೋಧನೆಗಳಲ್ಲಿ ತರುತ್ತಿದ್ದರು.

ಧರ್ಮಸ್ಥಳದಲ್ಲಿ ಜರುಗುತ್ತಿದ್ದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ (1979) ದಲಿತರಿಗಾಗಿ ಒಂದು ಗೋಷ್ಠಿ ಏರ್ಪಡಿಸಲು ವಿನಂತಿಸಿಕೊಂಡರೆ, ಅಂದಿನ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು `ಸಾಹಿತ್ಯದಲ್ಲಿ ದಲಿತ-ಬಲಿತ-ಕಲಿತ ಎನ್ನುವುದಿಲ್ಲ’ ಎಂದು ಹೀಯಾಳಿಸಿದರು. ಆಗ ಜಂಬಣ್ಣ ಅಮರಚಿಂತ, ಬೋಳಬಂಡೆಪ್ಪ ಮತ್ತು ವಾಲೀಕಾರ ಧಿಕ್ಕಾರದ ಕೂಗು ಪತ್ರಿಕೆಯಲ್ಲಿ ಬಂದಿತು. ಸಾರಸ್ವತ ಲೋಕದಲ್ಲಿ ಅಲ್ಲೋಲ ಕಲ್ಲೋಲ ಎದ್ದಿತು. ಅದುವೇ ಬಂಡಾಯ ಸಾಹಿತ್ಯ ಚಳವಳಿಯ ಹುಟ್ಟಿಗೆ ಪ್ರೇರಣೆಯಾಯಿತು. ಈ ಚಳವಳಿಯ ಹುಟ್ಟಿಗೆ ಕಾರಣರಾದ ರಾಯಚೂರಿನ ಮೂವರು ಸಾಹಿತಿಗಳಲ್ಲಿ ಮೊದಲಿಬ್ಬರು ಬಾರದ ಲೋಕಕ್ಕೆ ಹೋಗಿಯಾಗಿದೆ.

ಈಗ ಮೂರನೆಯವರಾದ ಚೆನ್ನಣ್ಣ 24-11-2019 ರಂದು ರಾತ್ರಿ ಅವರನ್ನು ಕೂಡಿಕೊಂಡರು. ಕಲಬುರ್ಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಶಂಕರವಾಡಿ ಗ್ರಾಮದ ತಳವಾರ ಜನಾಂಗದ ಸಾಬಮ್ಮ-ಧೂಳಪ್ಪನ ಮಗನಾಗಿ (1943) ಚೆನ್ನಣ್ಣ ಜನಿಸಿದರು. ರಾಯಚೂರಿನ ಹಮದರ್ದ್ ಶಾಲೆಗೆ ಕನ್ನಡ ಮಾಸ್ತರರಾಗಿ ಬಂದು ಸೇರಿದರು. ಬಳಿಕ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪಡೆದು, ರಾಯಚೂರಿನ ಎಲ್.ವಿ.ಡಿ. ಕಾಲೇಜಿನಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದರು. ಬಳಿಕ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರರಾಗಿ ನಿವೃತ್ತರಾದರು. ಅವರು ತಮ್ಮ ಸೃಜನಶೀಲ ಬರವಣಿಗೆ ಮತ್ತು ಪ್ರಗತಿಪರ ಚಿಂತನೆಗಳಿಂದಾಗಿ ನಾಡಿನ ಎಲ್ಲ ಭಾಗದ ಲೇಖಕರಿಗೂ ಸಾಹಿತ್ಯಾಭಿಮಾನಿಗಳಿಗೂ ಚಿರಪರಿಚಿತರು. ಕನ್ನಡ ಸಾಹಿತ್ಯದಲ್ಲಿ ದಲಿತ ಪ್ರಜ್ಞೆ ಮತ್ತು ಬಂಡಾಯ ಚಿಂತನೆಗೆ ಅಡಿಪಾಯ ಹಾಕಿದವರು. ಈ ಭಾಗದ ಜನಪದ ಸಾಹಿತ್ಯಕ್ಕೆ ಜೀವ ತುಂಬಲು, ಹಗಲಿರುಳು ಎನ್ನದೆ ತಿರುಗಾಡಿ ಗ್ರಾಮದೇವತೆಗಳ ಬಗ್ಗೆ ಅಧ್ಯಯನ ಮಾಡಿ ಪಿಹೆಚ್.ಡಿ., ಪಡೆದವರು. ದೇವದಾಸಿಯವರ, ಆದಿವಾಸಿಗಳ, ಜೋಗತಿಯವರ ಜೀವನವನ್ನು ಅಭ್ಯಸಿಸಿ, ಕೆಳಜನರ ನೋವು ಕುಂಡುಂಡ, ಹಿಂದುಳಿದ ವರ್ಗಗಳ ದಲಿತ ಸಾಹಿತಿಯೆಂದು ಗುರುತಿಸಿಕೊಂಡವರು. ಎಂ.ಎಲ್.ಸಿ.ಯಾಗಿಯೊ, ವಿಶ್ವವಿದ್ಯಾಲಯವೊಂದರ ಉಪ-ಕುಲಪತಿಯಾಗಿ ನೇಮಕವಾಗುವ ಅವಕಾಶ ಅವರಿಗಿತ್ತು. ರಾಯಚೂರಿನಲ್ಲಿ ನಡೆದ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗುವ ಅವಕಾಶವಿತ್ತು. ಇದರಿಂದ ವಂಚಿತರಾದರು. ಯಾವುದನ್ನೂ ಬಯಸದೆ ಇದ್ದಂತೆ ಇರಲಿ ಬಂದಂತೆ ಬರಲಿ ಎಂದು ಬದುಕಿದರು.

ಚೆನ್ನಣ್ಣ `ಮರದ ಮೇಲಿನ ಗಾಳಿ’ ಕವನ ಸಂಕಲನದಿಂದ ಸಾಹಿತ್ಯ ರಚನೆ ಪ್ರಾರಂಭಿಸಿ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿ ಸಾಹಿತ್ಯ ಕೃಷಿ ಮಾಡಿದರು. ಕಾವ್ಯ ಸಣ್ಣಕಥೆ, ವಚನ, ಕಾದಂಬರಿ, ನಾಟಕ, ಡಪ್ಪಿನ ಹಾಡು, ಮೊಹರಂ ಪದಗಳು, ಪ್ರವಾಸ ಕಥನಗಳು, ಸಂಶೋಧನೆ ಮುಂತಾದ ಪ್ರಕಾರಗಳಲ್ಲಿ 66 ಕೃತಿಗಳನ್ನು ಪ್ರಕಟಿಸಿದರು. ಇವರ `ಕರಿತಲಿ ಮಾನವನ ಜೀಪದ’ (ಕಾವ್ಯ) `ಬೆಳ್ಯ’ (ಕಾದಂಬರಿ) ಅಪರೂಪದ ಕೃತಿಗಳು. ಸಾವಿರ ಪುಟಗಳ `ವೋಮಾ-ವೋಮ’ವು, ಎಲ್ಲೂ ಅರ್ಧವಿರಾಮ ಪೂರ್ಣವಿರಾಮವಿಲ್ಲದೆ, ಯಾವುದೇ ಅಧ್ಯಾಯಗಳಿಲ್ಲದೆ ಸಾಗುವ ಮಹಾಕಾವ್ಯ. ಚೆನ್ನಣ್ಣ ಇತ್ತೀಚೆಗೆ ಬುದ್ಧನ ತತ್ವಗಳಿಗೆ ಮಾರುಹೋಗಿದ್ದರು. ಧರ್ಮ ಎಂದರೆ ಮನುಷ್ಯ. ಮನುಷ್ಯನೆಂದರೆ ಸಹಿಷ್ಣುತೆಯ ತೋಟ ಎನ್ನುತ್ತಿದ್ದರು. ಜೀವನದ ಕೊನೆಯ ದಿನಗಳಲ್ಲಿ ಬುದ್ಧನ ಕುರಿತು ಕೃತಿ ರಚನೆಯಲ್ಲಿ ತೊಡಗಿಸಿಕೊಂಡಿದ್ದರು.

ಚೆನ್ನಣ್ಣ ಈ ಭಾಗದ ಸೃಜನಶೀಲ ದೈತ್ಯ ಲೇಖಕರು. ಆದರೆ ಅವರ ಸಾಹಿತ್ಯವನ್ನು ಓದುವ ವ್ಯವಧಾನ ಕಳೆದುಕೊಂಡಿರುವ ಪ್ರಸಿದ್ಧ ಲೇಖಕರು ಅವರ ಬಗ್ಗೆ ಉದಾಸೀನ ತಾಳಿದರು. ಕೆಲವು ಮಹನೀಯರು ಅವರ `ಮ್ಯೋಮಾ-ಮ್ಯೋಮ’ವನ್ನು ತಲೆದಿಂಬಿಗೆ ಹೋಲಿಸಿದರು. ಚೆನ್ನಣ್ಣ ಓದಲು ಕಳುಹಿಸಿದ ಕೃತಿಯನ್ನು ಕೆಲವರು ತಾವು ಓದದೆ ತಮ್ಮ ವಿದ್ಯಾರ್ಥಿನಿಯರಿಗೆ ಕೊಟ್ಟು ಹೀಯಾಳಿಸುತ್ತಿದ್ದರು. ಹೈದ್ರಾಬಾದ್-ಕರ್ನಾಟಕ ಪ್ರದೇಶದ ಪ್ರಸಿದ್ಧ ಲೇಖಕರು ಚೆನ್ನಣ್ಣನವರ ಕೃತಿಯ ಬಗ್ಗೆ ಮಾತಾಡದೆ ಅವರ ವ್ಯಕ್ತಿಗತ ಸಂಗತಿಗಳನ್ನೇ ಹೇಳುತ್ತಿದ್ದರು. ಆದರೂ ಚನ್ನಣ್ಣ ನಗುನಗುತ್ತಲೆ ಕೊನೆಯ ಉಸಿರು ಇರುವ ಶುದ್ಧಮನಸ್ಸಿನ ಬದ್ಧ ಲೇಖಕರಾಗಿ ಉಳಿದರು.

ಥಟ್ ಅಂತ ನೋಡಿದ ಕ್ಷಣ
ಬಯಲಾಟದ ಭೀಮನು
ದೊಡ್ಡಾಟದ ಬಕಾಸುರನು
ನಾಟಕದ ಖಳನಾಯಕನು
ಸ್ವಲ್ಪ ಸಮೀಪ ಹೋದರೆ-
ಗೆಳೆಯರೆ ಮಾವಂದಿರರು
ಮಕ್ಕಳಿಗೆ ಚಂದಮಾಮಾ ಇವನು

ಇನ್ನೂ ಹತ್ತಿರ ಹೋಗಿ ಇಣುಕಿದರೆ-
ಜನಪದ ಲೋಕವೇ ತೆರೆದುಕೊಳ್ಳುತ್ತದೆ
ಕಲ್ಲು ದೇವ-ದೇವತೆಯರಿಗೆ ಮಾತು ಬರುತ್ತದೆ
ಕಳಸ ಹೊತ್ತ ಗುಡಿಗಳು ಏಳುತ್ತವೆ
ನಮ್ಮ-ನಿಮ್ಮ ನಡುವೆ ಇರುವ ಇವನು
ಜೀವಂತ-ಜೀವಸೆಲೆ ಹುಡುಕುತ್ತಿರುವ ಜಲಗಾರನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...