Homeಅಂತರಾಷ್ಟ್ರೀಯ"ನಾವೆಲ್ಲರೂ ನಿಮ್ಮ ಬಗ್ಗೆ ಯೋಚಿಸುತ್ತಿದ್ದೇವೆ": ನ್ಯೂಯಾರ್ಕ್‌ನ ನೂತನ ಮೇಯರ್ ಝೊಹ್ರಾನ್ ಮಮ್ದಾನಿಯಿಂದ ಉಮರ್ ಖಾಲಿದ್‌ಗೆ ಪತ್ರ

“ನಾವೆಲ್ಲರೂ ನಿಮ್ಮ ಬಗ್ಗೆ ಯೋಚಿಸುತ್ತಿದ್ದೇವೆ”: ನ್ಯೂಯಾರ್ಕ್‌ನ ನೂತನ ಮೇಯರ್ ಝೊಹ್ರಾನ್ ಮಮ್ದಾನಿಯಿಂದ ಉಮರ್ ಖಾಲಿದ್‌ಗೆ ಪತ್ರ

- Advertisement -
- Advertisement -

ಜೈಲಿನಲ್ಲಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರಿಗೆ ನ್ಯೂಯಾರ್ಕ್‌ ನಗರದ ನೂತನ ಮೇಯರ್ ಝೊಹ್ರಾನ್ ಮಮ್ದಾನಿ ಅವರು ಕೈಬರಹದ ಪತ್ರವೊಂದನ್ನು ಬರೆದಿದ್ದಾರೆ ಎಂದು, ಖಾಲಿದ್ ಸ್ನೇಹಿತೆ ಬನೋಜ್ಯೋತ್ಸ್ನಾ ಲಹಿರಿ ಗುರುವಾರ (ಜ.1) ತಿಳಿಸಿದ್ದಾರೆ.

2025ರ ಡಿಸೆಂಬರ್‌ನಲ್ಲಿ ಉಮರ್ ಖಾಲಿದ್ ಪೋಷಕರು ಅಮೆರಿಕಕ್ಕೆ ಭೇಟಿ ನೀಡಿದ್ದ ವೇಳೆ ಮಮ್ದಾನಿ ಪತ್ರ ಕೊಟ್ಟಿದ್ದಾರೆ ಎಂದು ವರದಿಯಾಗಿದೆ.

“ಪ್ರಿಯ ಉಮರ್, ಕಹಿಯ ಬಗ್ಗೆ ನಿಮ್ಮ ಮಾತುಗಳನ್ನು ನಾನು ಆಗಾಗ್ಗೆ ನೆನಪಿಸಿಕೊಳ್ಳುತ್ತೇನೆ. ಅದು ಒಬ್ಬರ ಆತ್ಮವನ್ನು ಆವರಿಸದಂತೆ ನೋಡಿಕೊಳ್ಳಬೇಕೆಂಬ ನಿಮ್ಮ ಮಾತುಗಳು ನನಗೆ ಆಗಾಗ್ಗೆ ನೆನಪಾಗುತ್ತವೆ. ನಿಮ್ಮ ಪೋಷಕರನ್ನು ಭೇಟಿಯಾದುದು ಸಂತೋಷವಾಯಿತು” ಎಂದು ಮಮ್ದಾನಿ ಪತ್ರದಲ್ಲಿ ಬರೆದಿದ್ದಾರೆ.

ಅಂದರೆ, ಉಮರ್ ಖಾಲಿದ್ ಅವರು ಜೈಲಿನಲ್ಲಿರುವಾಗ ಬರೆದ ಪತ್ರಗಳಲ್ಲಿ, “ಕಹಿಯಿಂದ (ಕೋಪ, ಸಿಟ್ಟು, ಬೇಸರ) ಹೃದಯವನ್ನು ತುಂಬಿಕೊಳ್ಳಬಾರದು. ಅದು ನಮ್ಮನ್ನು ಪೂರ್ತಿಯಾಗಿ ನಾಶಮಾಡಬಹುದು. ಅದನ್ನು ನಿಯಂತ್ರಣದಲ್ಲಿಟ್ಟುಕೊಂಡು, ಧೈರ್ಯವಾಗಿ ಮುಂದುವರೆಯಬೇಕು ಎಂದು ಬರೆದಿದ್ದರು. ಮಮ್ದಾನಿ ಆ ಬರಹ ತನ್ನ ಮೇಲೆ ತುಂಬಾ ಪ್ರಭಾವ ಬೀರಿವೆ ಎಂದು ಮಮ್ದಾನಿ ಹೇಳಿದ್ದಾರೆ. ಉಮರ್ ಅವರಿಗೆ ಬೆಂಬಲ ಸೂಚಿಸಿದ್ದಾರೆ.

2023ರಲ್ಲಿ, ನ್ಯೂಯಾರ್ಕ್‌ನಲ್ಲಿ ನಡೆದ ಒಂದು ಕಾರ್ಯಕ್ರಮದಲ್ಲಿ (ಹೌಡಿ ಡೆಮಾಕ್ರಸಿ?! ಎಂಬ ಕಾರ್ಯಕ್ರಮ) ಮಮ್ದಾನಿ ಅವರು ಉಮರ್ ಖಾಲಿದ್ ಜೈಲಿನಿಂದ ಬರೆದ ಪತ್ರದ ಕೆಲವು ಭಾಗಗಳನ್ನು ಜೋರಾಗಿ ಓದಿದ್ದರು.

ಮಮ್ದಾನಿ ಬರೆದ ಪತ್ರವನ್ನು ಅವರು ನ್ಯೂಯಾರ್ಕ್ ಮೇಯರ್ ಆಗಿ ಪ್ರಮಾಣವಚನ ಸ್ವೀಕರಿಸಿದ ದಿನದಂದೇ (ಜ.1) ಬನೋಜ್ಯೋತ್ಸ್ನಾ ಲಹಿರಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಖಾಲಿದ್ ಅವರ ಪೋಷಕರಾದ ಸಾಹಿಬಾ ಖಾನಮ್ ಮತ್ತು ಸೈಯದ್ ಖಾಸಿಮ್ ರಸೂಲ್ ಇಲ್ಯಾಸ್, ಕುಟುಂಬದ ವಿವಾಹಕ್ಕೆ ಮುಂಚಿತವಾಗಿ ತಮ್ಮ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಭೇಟಿ ಮಾಡಲು ಅಮೆರಿಕಕ್ಕೆ ತೆರಳಿದ್ದರು. ಈ ವೇಳೆ ಅವರು ಮಮ್ದಾನಿ ಮತ್ತು ಇತರ ಕೆಲವರನ್ನು ಭೇಟಿಯಾಗಿದ್ದರು ಎಂದು ಲಹಿರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಂ ಲೀಗ್‌ ಚಂದ್ರಿಕಾದ ಸಂಪಾದಕೀಯ ಪ್ರಕಟಿಸಿದ ಜನ್ಮಭೂಮಿ ಪತ್ರಿಕೆ : ಮುಜುಗರಕ್ಕೊಳಗಾದ ಬಿಜೆಪಿಯ ಮುಖವಾಣಿ

ವರ್ಷದ ಆರಂಭದಲ್ಲಿ ಅಚ್ಚರಿ ಎಂಬಂತೆ, ಕೇರಳ ಬಿಜೆಪಿಯ ಮುಖವಾಣಿಯಾದ ಮಲಯಾಳಂ ದಿನಪತ್ರಿಕೆ 'ಜನ್ಮಭೂಮಿ', ಪ್ರತಿಸ್ಪರ್ಧಿ ಪತ್ರಿಕೆಯಾದ ಇಂಡಿಯನ್‌ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್‌) ಪಕ್ಷದ ಮುಖವಾಣಿ 'ಚಂದ್ರಿಕಾ'ದ ಸಂಪಾದಕೀಯ ಪ್ರಕಟಿಸಿ ಮುಜುಗರಕ್ಕೀಡಾಗಿದೆ. 'ಜನ್ಮಭೂಮಿ' ಪತ್ರಿಕೆಯ...

ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಖರೀದಿ; ಶಾರುಖ್ ಖಾನ್ ಅವರನ್ನು ‘ದೇಶದ್ರೋಹಿ’ ಎಂದ ರಾಮಭದ್ರಾಚಾರ್ಯ

ಇಂಡಿಯನ್ ಪ್ರೀಮಿಯರ್ ಲೀಗ್ 2026 ರ ಸೀಸನ್‌ಗಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ಬಾಂಗ್ಲಾದೇಶದ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಅವರನ್ನು ಖರೀದಿ ಮಾಡಿದ್ದಕ್ಕಾಗಿ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಹಿಂದೂ ಆಧ್ಯಾತ್ಮಿಕ ನಾಯಕ...

ಮಧ್ಯಪ್ರದೇಶ| ಹಸು ಮೇಯಿಸುವ ವಿಚಾರಕ್ಕೆ ಜಗಳ; ದಲಿತ ಕುಟುಂಬದ ಮೇಲೆ ಗುಂಡು ಹಾರಿಸಿದ ಗುಂಪು

ದಲಿತ ಕುಟುಂಬವೊಂದರ ಹೊಲದಲ್ಲಿ ಪ್ರಬಲ ಜಾತಿ ಜನರ ಹಸುಗಳು ಮೇಯಿಸುವುದನ್ನು ವಿರೋಧಿಸದ್ದಕ್ಕೆ ದಲಿತ ಕುಟುಂಬದ ಮೇಲೆ ಗುಂಡು ಹಾರಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ದಾಳಿಕೋರರು ಮನಬಂದಂತೆ ಗುಂಡು ಹಾರಿಸಿ ನಂತರ ದಲಿತ...

ಬಳ್ಳಾರಿ | ರೆಡ್ಡಿ ಬಣಗಳ ನಡುವೆ ಘರ್ಷಣೆ : ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ

ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಗುರುವಾರ (ಜ.1) ರಾತ್ರಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ರೆಡ್ಡಿ ಬಣಗಳ ನಡುವೆ ಘರ್ಷಣೆ ಉಂಟಾಗಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನೋರ್ವ ಗುಂಡು ತಗುಲಿ ಮೃತಪಟ್ಟ...

ಮರ್ಯಾದೆಗೇಡು ಹತ್ಯೆ | ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆಗೆ ಚಿಂತನೆ : ಸಚಿವ ಹೆಚ್‌.ಸಿ ಮಹದೇವಪ್ಪ

ಮರ್ಯಾದೆಗೇಡು ಹತ್ಯೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ತರುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಹೆಚ್‌.ಸಿ ಮಹದೇವಪ್ಪ ಹೇಳಿದರು. ಮರ್ಯಾದೆಗೇಡು ಹತ್ಯೆ ನಡೆದ ಹುಬ್ಬಳ್ಳಿಯ ಇನಾಂ ವೀರಾಪುರ ಗ್ರಾಮಕ್ಕೆ...

ತಮಿಳುನಾಡು: ಪ್ರತಿಭಟನಾ ನಿರತ ಶಿಕ್ಷಕರು, ನೈರ್ಮಲ್ಯ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ ಪ್ರೇಮಲತಾ ವಿಜಯಕಾಂತ್

ತಮಿಳುನಾಡು ಸರ್ಕಾರವು ಪ್ರತಿಭಟನಾ ನಿರತ ಮಾಧ್ಯಮಿಕ ದರ್ಜೆಯ ಶಿಕ್ಷಕರು ಮತ್ತು ನೈರ್ಮಲ್ಯ ಕಾರ್ಮಿಕರ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ತುರ್ತಾಗಿ ಪರಿಹರಿಸಬೇಕು ಎಂದು ಡಿಎಂಡಿಕೆ ಪ್ರಧಾನ ಕಾರ್ಯದರ್ಶಿ ಪ್ರೇಮಲತಾ ವಿಜಯಕಾಂತ್ ಗುರುವಾರ ಹೇಳಿದ್ದಾರೆ.  ತಮ್ಮ...

ಸ್ವಿಟ್ಜರ್‌ಲ್ಯಾಂಡ್‌ನ ಸ್ಕೀ ರೆಸಾರ್ಟ್‌ನಲ್ಲಿ ಬೆಂಕಿ ಅವಘಡ: ಕನಿಷ್ಠ 40 ಮಂದಿ ಸಾವನ್ನಪ್ಪಿರುವ ಶಂಕೆ, ಹಲವರಿಗೆ ಗಾಯ

ನೈಋತ್ಯ ಸ್ವಿಟ್ಜರ್‌ಲ್ಯಾಂಡ್‌ನ ಕ್ರಾನ್ಸ್-ಮೊಂಟಾನಾದ ಸ್ಕೀ ರೆಸಾರ್ಟ್‌ನಲ್ಲಿರುವ "ಲೆ ಕಾನ್ಸ್ಟೆಲೇಷನ್" ಎಂಬ ಬಾರ್‌ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಹಲವಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಇತರರು ಗಾಯಗೊಂಡಿದ್ದಾರೆ ಎಂದು ಸ್ವಿಸ್ ಪೊಲೀಸರು ಗುರುವಾರ ತಿಳಿಸಿರುವುದಾಗಿ...

ಭಾರತದ ನಾಲ್ವರು ಸೇರಿ 2025ರಲ್ಲಿ ಜಾಗತಿಕವಾಗಿ 128 ಪತ್ರಕರ್ತರ ಹತ್ಯೆ : ವರದಿ

ಜಾಗತಿಕವಾಗಿ 2025ರಲ್ಲಿ ನೂರಾ ಇಪ್ಪತ್ತೆಂಟು ಪತ್ರಕರ್ತರು ಕೊಲ್ಲಲ್ಪಟ್ಟಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ಒಕ್ಕೂಟ ಬುಧವಾರ (ಡಿ.31) ತಿಳಿಸಿದೆ. ಪತ್ರಕರ್ತರ ಹತ್ಯೆಗಳಲ್ಲಿ ಅರ್ಧಕ್ಕಿಂತ ಹೆಚ್ಚು (74) ಪಶ್ಚಿಮ ಏಷ್ಯಾದಲ್ಲಿ ಸಂಭವಿಸಿವೆ ಎಂದು ಬೆಲ್ಜಿಯಂ ಮೂಲದ ಒಕ್ಕೂಟ...

ಸನಾತನ ರಾಷ್ಟ್ರ ಮಹೋತ್ಸವ : ಕೇಂದ್ರ ಸಂಸ್ಕೃತಿ ಸಚಿವಾಲಯ, ದೆಹಲಿ ಸರ್ಕಾರದ ಪ್ರಾಯೋಜಕತ್ವದಲ್ಲಿ ನಡೆದ ಇಸ್ಲಾಮೋಫೋಬಿಯಾ ಕಾರ್ಯಕ್ರಮ

ಹಿಂದುತ್ವ ಗುಂಪುಗಳು ಹಿಂದೂ ರಾಷ್ಟ್ರ ರಚನೆಗೆ ಕರೆ ನೀಡುವ ಮತ್ತು ಅಲ್ಪಸಂಖ್ಯಾತರಿಗೆ ನೇರ ಅಥವಾ ಪರೋಕ್ಷ ಬೆದರಿಕೆಗಳನ್ನು ಹಾಕುವ ಕಾರ್ಯಕ್ರಮಗಳನ್ನು ಆಯೋಜಿಸುವುದು ಭಾರತದಲ್ಲಿ ಸಾಮಾನ್ಯವಾಗಿದೆ. ಆದರೆ, ದೆಹಲಿಯ ಭಾರತ್ ಮಂಟಪದಲ್ಲಿ ಆಯೋಜಿಸಲಾಗಿದ್ದ 'ಸನಾತನ...

ಜಮ್ಮು-ಕಾಶ್ಮೀರ| 17 ಹಳ್ಳಿಗಳ 150 ಜನರಿಗೆ ‘ರಕ್ಷಣಾ ತರಬೇತಿ’ ನೀಡುತ್ತಿರುವ ಸೇನಾ ಪಡೆ

ಜಮ್ಮು ಕಾಶ್ಮೀರದ ದೋಡಾ ಜಿಲ್ಲೆಯ ಚೆನಾಬ್ ಕಣಿವೆಯ ಎತ್ತರದ ಪ್ರದೇಶಗಳಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳ ಭಾಗವಾಗಿ, ಗ್ರಾಮ ಮಟ್ಟದ ಭದ್ರತೆಯನ್ನು ಬಲಪಡಿಸಲು ಸೇನೆಯು ತನ್ನ ಪ್ರಯತ್ನಗಳನ್ನು ಹೆಚ್ಚಿಸಿದೆ. ದೋಡಾ-ಚಂಬಾ ಗಡಿಯುದ್ದಕ್ಕೂ 17...