Homeಅಂತರಾಷ್ಟ್ರೀಯ"ನಾವೆಲ್ಲರೂ ನಿಮ್ಮ ಬಗ್ಗೆ ಯೋಚಿಸುತ್ತಿದ್ದೇವೆ": ನ್ಯೂಯಾರ್ಕ್‌ನ ನೂತನ ಮೇಯರ್ ಝೊಹ್ರಾನ್ ಮಮ್ದಾನಿಯಿಂದ ಉಮರ್ ಖಾಲಿದ್‌ಗೆ ಪತ್ರ

“ನಾವೆಲ್ಲರೂ ನಿಮ್ಮ ಬಗ್ಗೆ ಯೋಚಿಸುತ್ತಿದ್ದೇವೆ”: ನ್ಯೂಯಾರ್ಕ್‌ನ ನೂತನ ಮೇಯರ್ ಝೊಹ್ರಾನ್ ಮಮ್ದಾನಿಯಿಂದ ಉಮರ್ ಖಾಲಿದ್‌ಗೆ ಪತ್ರ

- Advertisement -
- Advertisement -

ಜೈಲಿನಲ್ಲಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರಿಗೆ ನ್ಯೂಯಾರ್ಕ್‌ ನಗರದ ನೂತನ ಮೇಯರ್ ಝೊಹ್ರಾನ್ ಮಮ್ದಾನಿ ಅವರು ಕೈಬರಹದ ಪತ್ರವೊಂದನ್ನು ಬರೆದಿದ್ದಾರೆ ಎಂದು, ಖಾಲಿದ್ ಸ್ನೇಹಿತೆ ಬನೋಜ್ಯೋತ್ಸ್ನಾ ಲಹಿರಿ ಗುರುವಾರ (ಜ.1) ತಿಳಿಸಿದ್ದಾರೆ.

2025ರ ಡಿಸೆಂಬರ್‌ನಲ್ಲಿ ಉಮರ್ ಖಾಲಿದ್ ಪೋಷಕರು ಅಮೆರಿಕಕ್ಕೆ ಭೇಟಿ ನೀಡಿದ್ದ ವೇಳೆ ಮಮ್ದಾನಿ ಪತ್ರ ಕೊಟ್ಟಿದ್ದಾರೆ ಎಂದು ವರದಿಯಾಗಿದೆ.

“ಪ್ರಿಯ ಉಮರ್, ಕಹಿಯ ಬಗ್ಗೆ ನಿಮ್ಮ ಮಾತುಗಳನ್ನು ನಾನು ಆಗಾಗ್ಗೆ ನೆನಪಿಸಿಕೊಳ್ಳುತ್ತೇನೆ. ಅದು ಒಬ್ಬರ ಆತ್ಮವನ್ನು ಆವರಿಸದಂತೆ ನೋಡಿಕೊಳ್ಳಬೇಕೆಂಬ ನಿಮ್ಮ ಮಾತುಗಳು ನನಗೆ ಆಗಾಗ್ಗೆ ನೆನಪಾಗುತ್ತವೆ. ನಿಮ್ಮ ಪೋಷಕರನ್ನು ಭೇಟಿಯಾದುದು ಸಂತೋಷವಾಯಿತು” ಎಂದು ಮಮ್ದಾನಿ ಪತ್ರದಲ್ಲಿ ಬರೆದಿದ್ದಾರೆ.

ಅಂದರೆ, ಉಮರ್ ಖಾಲಿದ್ ಅವರು ಜೈಲಿನಲ್ಲಿರುವಾಗ ಬರೆದ ಪತ್ರಗಳಲ್ಲಿ, “ಕಹಿಯಿಂದ (ಕೋಪ, ಸಿಟ್ಟು, ಬೇಸರ) ಹೃದಯವನ್ನು ತುಂಬಿಕೊಳ್ಳಬಾರದು. ಅದು ನಮ್ಮನ್ನು ಪೂರ್ತಿಯಾಗಿ ನಾಶಮಾಡಬಹುದು. ಅದನ್ನು ನಿಯಂತ್ರಣದಲ್ಲಿಟ್ಟುಕೊಂಡು, ಧೈರ್ಯವಾಗಿ ಮುಂದುವರೆಯಬೇಕು ಎಂದು ಬರೆದಿದ್ದರು. ಮಮ್ದಾನಿ ಆ ಬರಹ ತನ್ನ ಮೇಲೆ ತುಂಬಾ ಪ್ರಭಾವ ಬೀರಿವೆ ಎಂದು ಮಮ್ದಾನಿ ಹೇಳಿದ್ದಾರೆ. ಉಮರ್ ಅವರಿಗೆ ಬೆಂಬಲ ಸೂಚಿಸಿದ್ದಾರೆ.

2023ರಲ್ಲಿ, ನ್ಯೂಯಾರ್ಕ್‌ನಲ್ಲಿ ನಡೆದ ಒಂದು ಕಾರ್ಯಕ್ರಮದಲ್ಲಿ (ಹೌಡಿ ಡೆಮಾಕ್ರಸಿ?! ಎಂಬ ಕಾರ್ಯಕ್ರಮ) ಮಮ್ದಾನಿ ಅವರು ಉಮರ್ ಖಾಲಿದ್ ಜೈಲಿನಿಂದ ಬರೆದ ಪತ್ರದ ಕೆಲವು ಭಾಗಗಳನ್ನು ಜೋರಾಗಿ ಓದಿದ್ದರು.

ಮಮ್ದಾನಿ ಬರೆದ ಪತ್ರವನ್ನು ಅವರು ನ್ಯೂಯಾರ್ಕ್ ಮೇಯರ್ ಆಗಿ ಪ್ರಮಾಣವಚನ ಸ್ವೀಕರಿಸಿದ ದಿನದಂದೇ (ಜ.1) ಬನೋಜ್ಯೋತ್ಸ್ನಾ ಲಹಿರಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಖಾಲಿದ್ ಅವರ ಪೋಷಕರಾದ ಸಾಹಿಬಾ ಖಾನಮ್ ಮತ್ತು ಸೈಯದ್ ಖಾಸಿಮ್ ರಸೂಲ್ ಇಲ್ಯಾಸ್, ಕುಟುಂಬದ ವಿವಾಹಕ್ಕೆ ಮುಂಚಿತವಾಗಿ ತಮ್ಮ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಭೇಟಿ ಮಾಡಲು ಅಮೆರಿಕಕ್ಕೆ ತೆರಳಿದ್ದರು. ಈ ವೇಳೆ ಅವರು ಮಮ್ದಾನಿ ಮತ್ತು ಇತರ ಕೆಲವರನ್ನು ಭೇಟಿಯಾಗಿದ್ದರು ಎಂದು ಲಹಿರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...