Homeಅಂತರಾಷ್ಟ್ರೀಯಭಾರಿ ಸೋಲಿನತ್ತ ಡೊನಾಲ್ಡ್‌ ಟ್ರಂಪ್; ನಾವು ಗೆಲ್ಲಲಿದ್ದೇವೆ ಎಂದ ಬೈಡೆನ್!

ಭಾರಿ ಸೋಲಿನತ್ತ ಡೊನಾಲ್ಡ್‌ ಟ್ರಂಪ್; ನಾವು ಗೆಲ್ಲಲಿದ್ದೇವೆ ಎಂದ ಬೈಡೆನ್!

- Advertisement -
- Advertisement -

ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ಕಳೆದ ಕೆಲವು ದಿನದಿಂದ ನಡೆಯುತ್ತಿದ್ದು, ಆರಂಭದಲ್ಲಿ ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುನ್ನಡೆಯಲ್ಲಿದ್ದರೂ, ನಂತರದ ಬೆಳವಣೆಗೆಯಲ್ಲಿ ಅವರ ಪ್ರತಿಸ್ಪರ್ಧಿ ಡೆಮಾಕ್ರೆಟಿಕ್ ಪಕ್ಷದ ಜೋ ಬೈಡೆನ್ ಮುನ್ನಡೆ ಸಾಧಿಸಿದ್ದು, ಈ ಭಾರಿ ಅವರೆ ಅಮೆರಿಕದ ಅಧ್ಯಕ್ಷರಾಗುವುದು ನಿಶ್ಚಿತವಾಗುತ್ತಿದೆ.

ಆದರೆ ಎಣಿಕೆ ಇನ್ನೂ ನಡೆಯುತ್ತೇ ಇರುವುದರಿಂದ ಅಧೀಕೃತ ಪ್ರಕಟಣೆ ಹೊರ ಬಿದ್ದಿಲ್ಲ. ಫಲಿತಾಂಶವು ತನ್ನ ಪರವಾಗಿಲ್ಲ ಎಂದು ತಿಳಿಯುತ್ತಿದ್ದಂತೆ ಡೊನಾಲ್ಡ್ ಟ್ರಂಪ್ ಮತದಾನದಲ್ಲಿ ವಂಚನೆ ನಡೆದಿದೆ ಎಂದು ಆರೋಪಿಸಿದ್ದು, ಎಣಿಕೆಯನ್ನು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: Explainer: ಅಮೆರಿಕಾ ಚುನಾವಣಾ ಪದ್ದತಿ, ಅಧ್ಯಕ್ಷರ ಆಯ್ಕೆ ಮತ್ತು ಸಮಸ್ಯೆಗಳು

ಮತದಾನದಲ್ಲಿ ವಂಚನೆ ನಡೆದಿದೆ ಎಂದು ನಿರಂತರವಾಗಿ ಆರೋಪಿಸುತ್ತಿರುವ ಟ್ರಂಪ್ ಸರಣಿ ಟ್ವೀಟ್‌ಗಳನ್ನು ಮಾಡುತ್ತಿದ್ದಾರೆ.

ಅಧ್ಯಕ್ಷೀಯ ಚುನಾವಣೆಯನ್ನು ಗೆಲ್ಲಲು 270 ಸ್ಥಾನಗಳ ಅಗತ್ಯವಿದ್ದು, ಟ್ರಂಪ್ 214 ಸ್ಥಾನಗಳಲ್ಲಿ ಗೆದ್ದು 15 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದಾರೆ. ಜೋ ಬೈಡೆನ್ 264 ಸ್ಥಾನಗಳನ್ನು ಗೆದ್ದಿದ್ದು, ಅವರಿಗೆ ಗೆಲ್ಲಲು ಕೇವಲ 6 ಸ್ಥಾನಗಳ ಅಗತ್ಯವಿದೆಯಾದರೂ 42 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

 

ಮುನ್ನಡೆ ಕಾಯ್ದುಕೊಂಡಿರುವ ಎಲ್ಲಾ ಸ್ಥಾನಗಲ್ಲಿ ಬೈಡನ್ ಗೆದ್ದರೆ 270 ಕ್ಕಿಂತ ಹಚ್ಚಿನ ಸ್ಥಾನ ಪಡೆಯಲಿದ್ದು, ಟ್ರಂಪ್ ಹೀನಾಯ ಸೋಲು ಅನುಭವಿಸಲಿದ್ದಾರೆ. ಈಗಾಗಲೇ ಜೋ ಬೈಡನ್ ಅಮೆರಿಕಾದ ಇತಿಹಾಸದಲ್ಲೇ ಅತೀ ಹೆಚ್ಚು ಅಧ್ಯಕ್ಷೀಯ ಮತ ಪಡೆದ ಅಭ್ಯರ್ಥಿಯಾಗಿ ದಾಖಲಾಗಿದ್ದಾರೆ. ಈ ಹಿಂದೆ ಈ ದಾಖಲೆ ಬರಾಕ್ ಒಬಾಮ ಅವರ ಪಾಲಿಗಿತ್ತು.

ಇದನ್ನೂ ಓದಿ: ’ಉಸಿರು ಬಿಗಿ ಹಿಡಿದ ಅಮೆರಿಕಾ’ – ವಿಶ್ವದ ಪ್ರಮುಖ ಪತ್ರಿಕೆಗಳ ಕಣ್ಣಲ್ಲಿ ಅಮೆರಿಕಾ ಚುನಾವಣಾ ಫಲಿತಾಂಶ!

ಮತ ಎಣಿಕೆಯ ಪ್ರಾರಂಭದಲ್ಲಿ ಜೋ ಬೈಡೆನ್ ಹಿನ್ನಡೆ ಅನುಭವಿಸಿದ್ದರು, ಆದರೆ ಅವರು ಭಾವೋಧ್ವೇಗಕ್ಕೆ ಒಳಗಾಗದೆ “ನಾವು ಗಲ್ಲಲಿದ್ದೇವೆ, ವಿಶ್ವಾಸ ಇಡಿ” ಎಂದು ತಮ್ಮ ಅಭಿಮಾನಿಗಳಿಗೆ ಧೈರ್ಯ ತುಂಬಿದ್ದರು.

ಸ್ವಿಂಗ್ ರಾಜ್ಯಗಳಾದ ನೆವಾಡ, ಜಾರ್ಜಿಯ, ನಾರ್ಥ್ ಕೆರೊಲಿನಾ ಮತ್ತು ಪೆನ್ಸಿಲ್ವೇನಿ ರಾಜ್ಯಗಳಲ್ಲಿ ಇನ್ನು ಎಣಿಕೆ ನಡೆಯುತ್ತಿದ್ದು, ನಾರ್ಥ್ ಕೆರೊಲಿನಾದಲ್ಲಷ್ಟೇ ಟ್ರಂಪ್ ಮುನ್ನಡೆಯಲ್ಲಿದ್ದಾರೆ. ಉಳಿದ ಕಡೆ ಜೋ ಬೈಡೆನ್ ಮುನ್ನಡೆಯಲ್ಲಿದ್ದು “ನಾವು ಚುನಾವಣೆಯಲ್ಲಿ ಗೆಲ್ಲಲಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಹೊಸ ಭರವಸೆಯಿತ್ತ ನಾಲ್ವರು ಪ್ರಗತಿಪರ ಮಹಿಳೆಯರ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...