Homeಅಂತರಾಷ್ಟ್ರೀಯಭಾರಿ ಸೋಲಿನತ್ತ ಡೊನಾಲ್ಡ್‌ ಟ್ರಂಪ್; ನಾವು ಗೆಲ್ಲಲಿದ್ದೇವೆ ಎಂದ ಬೈಡೆನ್!

ಭಾರಿ ಸೋಲಿನತ್ತ ಡೊನಾಲ್ಡ್‌ ಟ್ರಂಪ್; ನಾವು ಗೆಲ್ಲಲಿದ್ದೇವೆ ಎಂದ ಬೈಡೆನ್!

- Advertisement -
- Advertisement -

ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ಕಳೆದ ಕೆಲವು ದಿನದಿಂದ ನಡೆಯುತ್ತಿದ್ದು, ಆರಂಭದಲ್ಲಿ ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುನ್ನಡೆಯಲ್ಲಿದ್ದರೂ, ನಂತರದ ಬೆಳವಣೆಗೆಯಲ್ಲಿ ಅವರ ಪ್ರತಿಸ್ಪರ್ಧಿ ಡೆಮಾಕ್ರೆಟಿಕ್ ಪಕ್ಷದ ಜೋ ಬೈಡೆನ್ ಮುನ್ನಡೆ ಸಾಧಿಸಿದ್ದು, ಈ ಭಾರಿ ಅವರೆ ಅಮೆರಿಕದ ಅಧ್ಯಕ್ಷರಾಗುವುದು ನಿಶ್ಚಿತವಾಗುತ್ತಿದೆ.

ಆದರೆ ಎಣಿಕೆ ಇನ್ನೂ ನಡೆಯುತ್ತೇ ಇರುವುದರಿಂದ ಅಧೀಕೃತ ಪ್ರಕಟಣೆ ಹೊರ ಬಿದ್ದಿಲ್ಲ. ಫಲಿತಾಂಶವು ತನ್ನ ಪರವಾಗಿಲ್ಲ ಎಂದು ತಿಳಿಯುತ್ತಿದ್ದಂತೆ ಡೊನಾಲ್ಡ್ ಟ್ರಂಪ್ ಮತದಾನದಲ್ಲಿ ವಂಚನೆ ನಡೆದಿದೆ ಎಂದು ಆರೋಪಿಸಿದ್ದು, ಎಣಿಕೆಯನ್ನು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: Explainer: ಅಮೆರಿಕಾ ಚುನಾವಣಾ ಪದ್ದತಿ, ಅಧ್ಯಕ್ಷರ ಆಯ್ಕೆ ಮತ್ತು ಸಮಸ್ಯೆಗಳು

ಮತದಾನದಲ್ಲಿ ವಂಚನೆ ನಡೆದಿದೆ ಎಂದು ನಿರಂತರವಾಗಿ ಆರೋಪಿಸುತ್ತಿರುವ ಟ್ರಂಪ್ ಸರಣಿ ಟ್ವೀಟ್‌ಗಳನ್ನು ಮಾಡುತ್ತಿದ್ದಾರೆ.

ಅಧ್ಯಕ್ಷೀಯ ಚುನಾವಣೆಯನ್ನು ಗೆಲ್ಲಲು 270 ಸ್ಥಾನಗಳ ಅಗತ್ಯವಿದ್ದು, ಟ್ರಂಪ್ 214 ಸ್ಥಾನಗಳಲ್ಲಿ ಗೆದ್ದು 15 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದಾರೆ. ಜೋ ಬೈಡೆನ್ 264 ಸ್ಥಾನಗಳನ್ನು ಗೆದ್ದಿದ್ದು, ಅವರಿಗೆ ಗೆಲ್ಲಲು ಕೇವಲ 6 ಸ್ಥಾನಗಳ ಅಗತ್ಯವಿದೆಯಾದರೂ 42 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

 

ಮುನ್ನಡೆ ಕಾಯ್ದುಕೊಂಡಿರುವ ಎಲ್ಲಾ ಸ್ಥಾನಗಲ್ಲಿ ಬೈಡನ್ ಗೆದ್ದರೆ 270 ಕ್ಕಿಂತ ಹಚ್ಚಿನ ಸ್ಥಾನ ಪಡೆಯಲಿದ್ದು, ಟ್ರಂಪ್ ಹೀನಾಯ ಸೋಲು ಅನುಭವಿಸಲಿದ್ದಾರೆ. ಈಗಾಗಲೇ ಜೋ ಬೈಡನ್ ಅಮೆರಿಕಾದ ಇತಿಹಾಸದಲ್ಲೇ ಅತೀ ಹೆಚ್ಚು ಅಧ್ಯಕ್ಷೀಯ ಮತ ಪಡೆದ ಅಭ್ಯರ್ಥಿಯಾಗಿ ದಾಖಲಾಗಿದ್ದಾರೆ. ಈ ಹಿಂದೆ ಈ ದಾಖಲೆ ಬರಾಕ್ ಒಬಾಮ ಅವರ ಪಾಲಿಗಿತ್ತು.

ಇದನ್ನೂ ಓದಿ: ’ಉಸಿರು ಬಿಗಿ ಹಿಡಿದ ಅಮೆರಿಕಾ’ – ವಿಶ್ವದ ಪ್ರಮುಖ ಪತ್ರಿಕೆಗಳ ಕಣ್ಣಲ್ಲಿ ಅಮೆರಿಕಾ ಚುನಾವಣಾ ಫಲಿತಾಂಶ!

ಮತ ಎಣಿಕೆಯ ಪ್ರಾರಂಭದಲ್ಲಿ ಜೋ ಬೈಡೆನ್ ಹಿನ್ನಡೆ ಅನುಭವಿಸಿದ್ದರು, ಆದರೆ ಅವರು ಭಾವೋಧ್ವೇಗಕ್ಕೆ ಒಳಗಾಗದೆ “ನಾವು ಗಲ್ಲಲಿದ್ದೇವೆ, ವಿಶ್ವಾಸ ಇಡಿ” ಎಂದು ತಮ್ಮ ಅಭಿಮಾನಿಗಳಿಗೆ ಧೈರ್ಯ ತುಂಬಿದ್ದರು.

ಸ್ವಿಂಗ್ ರಾಜ್ಯಗಳಾದ ನೆವಾಡ, ಜಾರ್ಜಿಯ, ನಾರ್ಥ್ ಕೆರೊಲಿನಾ ಮತ್ತು ಪೆನ್ಸಿಲ್ವೇನಿ ರಾಜ್ಯಗಳಲ್ಲಿ ಇನ್ನು ಎಣಿಕೆ ನಡೆಯುತ್ತಿದ್ದು, ನಾರ್ಥ್ ಕೆರೊಲಿನಾದಲ್ಲಷ್ಟೇ ಟ್ರಂಪ್ ಮುನ್ನಡೆಯಲ್ಲಿದ್ದಾರೆ. ಉಳಿದ ಕಡೆ ಜೋ ಬೈಡೆನ್ ಮುನ್ನಡೆಯಲ್ಲಿದ್ದು “ನಾವು ಚುನಾವಣೆಯಲ್ಲಿ ಗೆಲ್ಲಲಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಹೊಸ ಭರವಸೆಯಿತ್ತ ನಾಲ್ವರು ಪ್ರಗತಿಪರ ಮಹಿಳೆಯರ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...